AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲಂಬೊದಲ್ಲಿ ಧಾರಾಕಾರ ಮಳೆ: ಏಷ್ಯಾಕಪ್ ಫೈನಲ್, ಸೂಪರ್-4 ಪಂದ್ಯಗಳು ಬೇರೆಡೆ ಶಿಫ್ಟ್?

Asia Cup 2023 Final and Super-4 shifted from Colombo: ಕೊಲಂಬೊದಲ್ಲಿ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ಇಲ್ಲಿ ಏಷ್ಯಾಕಪ್ 2023ರ ಸೂಪರ್-4 ಮತ್ತು ಫೈನಲ್ ಪಂದ್ಯವನ್ನು ಆಯೋಜಿಸಲಾಗಿದೆ. ಮಳೆ ಬಿಡುವ ಲಕ್ಷಣಗಳು ಗೋಚರಿಸದ ಕಾರಣ ಎಸಿಸಿ ಪಂದ್ಯವನ್ನು ಕೊಲಂಬೊದಿಂದ ಬೇರೆಡೆ ಶಿಫ್ಟ್ ಮಾಡಲು ಯೋಚಿಸುತ್ತಿದೆ.

Vinay Bhat
|

Updated on: Sep 04, 2023 | 9:38 AM

Share
ಹೈಬ್ರಿಡ್ ಮಾದರಿಯಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023 ಟೂರ್ನಿಗೆ ಮಳೆಯ ಕಾಟ ಎಲ್ಲಿಲ್ಲದ ಕಾಡುತ್ತಿದೆ. ಇಡೀ ವಿಶ್ವವೇ ಕಾದುಕುಳಿತಿದ್ದ, ಭಾರೀ ರೋಚಕತೆ ಸೃಷ್ಟಿಸಿದ್ದ ಭಾರತ ಹಾಗೂ ಪಾಕಿಸ್ತಾನ ಪಂದ್ಯ ಕೂಡ ಮಳೆಯಿಂದಾಗಿ ಪೂರ್ಣಗೊಳ್ಳಲಿದೆ ರದ್ದುಗೊಂಡಿತು.

ಹೈಬ್ರಿಡ್ ಮಾದರಿಯಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023 ಟೂರ್ನಿಗೆ ಮಳೆಯ ಕಾಟ ಎಲ್ಲಿಲ್ಲದ ಕಾಡುತ್ತಿದೆ. ಇಡೀ ವಿಶ್ವವೇ ಕಾದುಕುಳಿತಿದ್ದ, ಭಾರೀ ರೋಚಕತೆ ಸೃಷ್ಟಿಸಿದ್ದ ಭಾರತ ಹಾಗೂ ಪಾಕಿಸ್ತಾನ ಪಂದ್ಯ ಕೂಡ ಮಳೆಯಿಂದಾಗಿ ಪೂರ್ಣಗೊಳ್ಳಲಿದೆ ರದ್ದುಗೊಂಡಿತು.

1 / 8
ಇದೀಗ ಶ್ರೀಲಂಕಾದಲ್ಲಿ ನಡೆಯಲಿರುವ ಮುಂಬರುವ ಪಂದ್ಯಗಳಿಗೂ ಮಳೆಯ ಕಾಟ ಇರಲಿದೆ ಎಂದು ಹೇಳಲಾಗಿದೆ. ಇಂದು ಭಾರತ ಹಾಗೂ ನೇಪಾಳ ತಂಡಗಳು ಏಷ್ಯಾಕಪ್​ನ ಐದನೇ ಪಂದ್ಯದಲ್ಲಿ ಮುಖಾಮುಖಿ ಆಗಲಿದೆ. ಪಲ್ಲಕೆಲೆಯಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ವರುಣ ಅಡ್ಡಿಪಡಿಸಲಿದ್ದಾನಂತೆ.

ಇದೀಗ ಶ್ರೀಲಂಕಾದಲ್ಲಿ ನಡೆಯಲಿರುವ ಮುಂಬರುವ ಪಂದ್ಯಗಳಿಗೂ ಮಳೆಯ ಕಾಟ ಇರಲಿದೆ ಎಂದು ಹೇಳಲಾಗಿದೆ. ಇಂದು ಭಾರತ ಹಾಗೂ ನೇಪಾಳ ತಂಡಗಳು ಏಷ್ಯಾಕಪ್​ನ ಐದನೇ ಪಂದ್ಯದಲ್ಲಿ ಮುಖಾಮುಖಿ ಆಗಲಿದೆ. ಪಲ್ಲಕೆಲೆಯಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ವರುಣ ಅಡ್ಡಿಪಡಿಸಲಿದ್ದಾನಂತೆ.

2 / 8
ಸಾಮಾನ್ಯವಾಗಿ ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲಿ ಶ್ರೀಲಂಕಾದಲ್ಲಿ ಭಾರೀ ಮಳೆಯಾಗುತ್ತದೆ. ಹೀಗಾಗಿ ಲಂಕಾ ಕ್ರಿಕೆಟ್ ಮಂಡಳಿ ಈ ತಿಂಗಳುಗಳಲ್ಲಿ ಯಾವುದೇ ಪಂದ್ಯವನ್ನು ನಿಗದಿಪಡಿಸುವುದಿಲ್ಲ. ಆದರೆ, ಪಾಕಿಸ್ತಾನಕ್ಕೆ ತೆರಳಲು ಭಾರತಕ್ಕೆ ಸರ್ಕಾರದ ಅನುಮತಿ ಇಲ್ಲದ ಕಾರಣ ಶ್ರೀಲಂಕಾಕ್ಕೆ ತನ್ನ ನಾಡಿನಲ್ಲಿ ಏಷ್ಯಾಕಪ್ ಆಯೋಜಿಸುವುದು ಅನಿವಾರ್ಯವಾಗಿದ್ದವು.

ಸಾಮಾನ್ಯವಾಗಿ ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲಿ ಶ್ರೀಲಂಕಾದಲ್ಲಿ ಭಾರೀ ಮಳೆಯಾಗುತ್ತದೆ. ಹೀಗಾಗಿ ಲಂಕಾ ಕ್ರಿಕೆಟ್ ಮಂಡಳಿ ಈ ತಿಂಗಳುಗಳಲ್ಲಿ ಯಾವುದೇ ಪಂದ್ಯವನ್ನು ನಿಗದಿಪಡಿಸುವುದಿಲ್ಲ. ಆದರೆ, ಪಾಕಿಸ್ತಾನಕ್ಕೆ ತೆರಳಲು ಭಾರತಕ್ಕೆ ಸರ್ಕಾರದ ಅನುಮತಿ ಇಲ್ಲದ ಕಾರಣ ಶ್ರೀಲಂಕಾಕ್ಕೆ ತನ್ನ ನಾಡಿನಲ್ಲಿ ಏಷ್ಯಾಕಪ್ ಆಯೋಜಿಸುವುದು ಅನಿವಾರ್ಯವಾಗಿದ್ದವು.

3 / 8
ಈ ಕಾರಣಕ್ಕಾಗಿ ಲಂಕಾದಲ್ಲೇ ಮಳೆಯ ನಡುವೆ ಪಂದ್ಯವನ್ನು ನಡೆಸಲಾಗುತ್ತಿದೆ. ಆದರೀಗ ಕೊಲಂಬೊದಲ್ಲಿ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ಇಲ್ಲಿ ಏಷ್ಯಾಕಪ್ 2023ರ ಸೂಪರ್-4 ಮತ್ತು ಫೈನಲ್ ಪಂದ್ಯವನ್ನು ಆಯೋಜಿಸಲಾಗಿದೆ. ಮಳೆ ಬಿಡುವ ಲಕ್ಷಣಗಳು ಗೋಚರಿಸದ ಕಾರಣ ಎಸಿಸಿ ಪಂದ್ಯವನ್ನು ಕೊಲಂಬೊದಿಂದ ಬೇರೆಡೆ ಶಿಫ್ಟ್ ಮಾಡಲು ಯೋಚಿಸುತ್ತಿದೆ.

ಈ ಕಾರಣಕ್ಕಾಗಿ ಲಂಕಾದಲ್ಲೇ ಮಳೆಯ ನಡುವೆ ಪಂದ್ಯವನ್ನು ನಡೆಸಲಾಗುತ್ತಿದೆ. ಆದರೀಗ ಕೊಲಂಬೊದಲ್ಲಿ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ಇಲ್ಲಿ ಏಷ್ಯಾಕಪ್ 2023ರ ಸೂಪರ್-4 ಮತ್ತು ಫೈನಲ್ ಪಂದ್ಯವನ್ನು ಆಯೋಜಿಸಲಾಗಿದೆ. ಮಳೆ ಬಿಡುವ ಲಕ್ಷಣಗಳು ಗೋಚರಿಸದ ಕಾರಣ ಎಸಿಸಿ ಪಂದ್ಯವನ್ನು ಕೊಲಂಬೊದಿಂದ ಬೇರೆಡೆ ಶಿಫ್ಟ್ ಮಾಡಲು ಯೋಚಿಸುತ್ತಿದೆ.

4 / 8
ಮಾಹಿತಿಯ ಪ್ರಕಾರ, ಮಳೆಯ ಭೀತಿಯಿಂದಾಗಿ ಏಷ್ಯಾಕಪ್ 2023 ರ ಫೈನಲ್ ಮತ್ತು ಸೂಪರ್-4 ಪಂದ್ಯಗಳ ಸ್ಥಳವನ್ನು ಕೊಲಂಬೊದಿಂದ ಪಲ್ಲೆಕೆಲೆಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಎಸಿಸಿ ಪ್ರಸ್ತುತ ಶ್ರೀಲಂಕಾ ಕ್ರಿಕೆಟ್ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಯೊಂದಿಗೆ ಸ್ಥಳ ಬದಲಾವಣೆಯ ಬಗ್ಗೆ ಚರ್ಚೆಯಲ್ಲಿ ತೊಡಗಿದೆ.

ಮಾಹಿತಿಯ ಪ್ರಕಾರ, ಮಳೆಯ ಭೀತಿಯಿಂದಾಗಿ ಏಷ್ಯಾಕಪ್ 2023 ರ ಫೈನಲ್ ಮತ್ತು ಸೂಪರ್-4 ಪಂದ್ಯಗಳ ಸ್ಥಳವನ್ನು ಕೊಲಂಬೊದಿಂದ ಪಲ್ಲೆಕೆಲೆಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಎಸಿಸಿ ಪ್ರಸ್ತುತ ಶ್ರೀಲಂಕಾ ಕ್ರಿಕೆಟ್ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಯೊಂದಿಗೆ ಸ್ಥಳ ಬದಲಾವಣೆಯ ಬಗ್ಗೆ ಚರ್ಚೆಯಲ್ಲಿ ತೊಡಗಿದೆ.

5 / 8
ಪಲ್ಲೆಕೆಲೆ, ದಂಬುಲ್ಲಾ ಮತ್ತು ಹಂಬಂಟೋಟಾ ಮೂರು ಸ್ಥಳಗಳನ್ನು ಪರಿಗಣಿಸಲಾಗುತ್ತಿದೆ ಎಂದು ಶ್ರೀಲಂಕಾ ಕ್ರಿಕೆಟ್ ಹೇಳಿದೆ. ಭಾಗವಹಿಸುವ ಆರು ತಂಡಗಳಿಗೆ ಕೂಡ ಸ್ಥಳದ ಬದಲಾವಣೆಯ ಬಗ್ಗೆ ತಿಳಿಸಲಾಗಿದೆ. ಪಲ್ಲೆಕೆಲೆಯು ಪ್ರಸ್ತುತ ಏಷ್ಯಾಕಪ್ ಲೀಗ್ ಪಂದ್ಯಗಳನ್ನು ಆಯೋಜಿಸುತ್ತಿದೆ. ಡಂಬುಲ್ಲಾ ಸ್ಥಳ ಪಲ್ಲೆಕೆಲೆಯಿಂದ ಸುಮಾರು 70 ಕಿಲೋಮೀಟರ್ ದೂರದಲ್ಲಿದೆ.

ಪಲ್ಲೆಕೆಲೆ, ದಂಬುಲ್ಲಾ ಮತ್ತು ಹಂಬಂಟೋಟಾ ಮೂರು ಸ್ಥಳಗಳನ್ನು ಪರಿಗಣಿಸಲಾಗುತ್ತಿದೆ ಎಂದು ಶ್ರೀಲಂಕಾ ಕ್ರಿಕೆಟ್ ಹೇಳಿದೆ. ಭಾಗವಹಿಸುವ ಆರು ತಂಡಗಳಿಗೆ ಕೂಡ ಸ್ಥಳದ ಬದಲಾವಣೆಯ ಬಗ್ಗೆ ತಿಳಿಸಲಾಗಿದೆ. ಪಲ್ಲೆಕೆಲೆಯು ಪ್ರಸ್ತುತ ಏಷ್ಯಾಕಪ್ ಲೀಗ್ ಪಂದ್ಯಗಳನ್ನು ಆಯೋಜಿಸುತ್ತಿದೆ. ಡಂಬುಲ್ಲಾ ಸ್ಥಳ ಪಲ್ಲೆಕೆಲೆಯಿಂದ ಸುಮಾರು 70 ಕಿಲೋಮೀಟರ್ ದೂರದಲ್ಲಿದೆ.

6 / 8
ಆದಾಗ್ಯೂ, SLC ಅಧಿಕಾರಿಯೊಬ್ಬರು ದಂಬುಲಾದ ರಂಗಿರಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಇಷ್ಟು ಪಂದ್ಯಗಳನ್ನು ಅಲ್ಪಾವಧಿಯಲ್ಲಿ ಆಯೋಜಿಸಲು ಸಿದ್ಧವಾಗಿಲ್ಲ ಎಂದು ಹೇಳಿದ್ದಾರೆ. ಹಂಬಂಟೋಟಾದಲ್ಲಿ ಮಳೆಯ ಯಾವುದೇ ಲಕ್ಷಣವಿಲ್ಲವಂತೆ.

ಆದಾಗ್ಯೂ, SLC ಅಧಿಕಾರಿಯೊಬ್ಬರು ದಂಬುಲಾದ ರಂಗಿರಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಇಷ್ಟು ಪಂದ್ಯಗಳನ್ನು ಅಲ್ಪಾವಧಿಯಲ್ಲಿ ಆಯೋಜಿಸಲು ಸಿದ್ಧವಾಗಿಲ್ಲ ಎಂದು ಹೇಳಿದ್ದಾರೆ. ಹಂಬಂಟೋಟಾದಲ್ಲಿ ಮಳೆಯ ಯಾವುದೇ ಲಕ್ಷಣವಿಲ್ಲವಂತೆ.

7 / 8
ಜೊತೆಗೆ ಮಹಿಂದಾ ರಾಜಪಕ್ಸೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಅನ್ನು ಕೂಡ ಎಸಿಸಿ ಮೌಲ್ಯಮಾಪನ ಮಾಡುತ್ತಿದೆ. ಪಂದ್ಯವನ್ನು ಸ್ಥಳಾಂತರಿಸುವ ಬಗ್ಗೆ ಎಸಿಸಿ ಎರಡು ದಿನಗಳ ಒಳಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಜೊತೆಗೆ ಮಹಿಂದಾ ರಾಜಪಕ್ಸೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಅನ್ನು ಕೂಡ ಎಸಿಸಿ ಮೌಲ್ಯಮಾಪನ ಮಾಡುತ್ತಿದೆ. ಪಂದ್ಯವನ್ನು ಸ್ಥಳಾಂತರಿಸುವ ಬಗ್ಗೆ ಎಸಿಸಿ ಎರಡು ದಿನಗಳ ಒಳಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

8 / 8
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ