AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023 Points Table: 4 ಪಂದ್ಯಗಳ ಬಳಿಕ ಪಾಯಿಂಟ್ ಪಟ್ಟಿಯಲ್ಲಿ ಯಾವ ತಂಡಕ್ಕೆ ಯಾವ ಸ್ಥಾನ?

Asia Cup 2023 Points Table: ಬಾಂಗ್ಲಾದೇಶ ತನ್ನ ಗುಂಪು ಹಂತದ ಎರಡೂ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಒಂದರಲ್ಲಿ ಗೆದ್ದು ಒಂದರಲ್ಲಿ ಸೋತಿದೆ. ಹೀಗಾಗಿ ಸೂಪರ್ 4 ಹಂತಕ್ಕೇರಲು ಈಗ ಶ್ರೀಲಂಕಾ-ಅಫ್ಘಾನಿಸ್ತಾನದ ಫಲಿತಾಂಶವನ್ನು ಅವಲಂಬಿಸಬೇಕಾಗಿದೆ. ಇನ್ನು ನಡೆದಿರುವ ನಾಲ್ಕು ಪಂದ್ಯಗಳ ಬಳಿಕ ಪಾಯಿಂಟ ಪಟ್ಟಿ ಹೇಗಿದೆ ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: Sep 04, 2023 | 8:55 AM

Share
ಏಷ್ಯಾಕಪ್​ನಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು 89 ರನ್‌ಗಳಿಂದ ಸೋಲಿಸಿದ ಬಾಂಗ್ಲಾದೇಶ ಸೂಪರ್ 4 ಹಂತದ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಬಾಂಗ್ಲಾದೇಶದ ಈ ಗೆಲುವಿನಲ್ಲಿ ಮೆಹದಿ ಹಸನ್ ಮಿರಾಜ್ ಅವರ ಆಲ್ ರೌಂಡ್ ಪ್ರದರ್ಶನ, ನಜ್ಮುಲ್ ಹಸನ್ ಶಾಂಟೊ ಅವರ ಬಲಿಷ್ಠ ಶತಕ ಹಾಗೂ ವೇಗಿ ತಸ್ಕಿನ್ ಅಹ್ಮದ್ ಅವರ ಮಾರಕ ಬೌಲಿಂಗ್ ಪ್ರಮುಖ ಪಾತ್ರ ವಹಿಸಿತು.

ಏಷ್ಯಾಕಪ್​ನಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು 89 ರನ್‌ಗಳಿಂದ ಸೋಲಿಸಿದ ಬಾಂಗ್ಲಾದೇಶ ಸೂಪರ್ 4 ಹಂತದ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಬಾಂಗ್ಲಾದೇಶದ ಈ ಗೆಲುವಿನಲ್ಲಿ ಮೆಹದಿ ಹಸನ್ ಮಿರಾಜ್ ಅವರ ಆಲ್ ರೌಂಡ್ ಪ್ರದರ್ಶನ, ನಜ್ಮುಲ್ ಹಸನ್ ಶಾಂಟೊ ಅವರ ಬಲಿಷ್ಠ ಶತಕ ಹಾಗೂ ವೇಗಿ ತಸ್ಕಿನ್ ಅಹ್ಮದ್ ಅವರ ಮಾರಕ ಬೌಲಿಂಗ್ ಪ್ರಮುಖ ಪಾತ್ರ ವಹಿಸಿತು.

1 / 8
ಬಾಂಗ್ಲಾದೇಶ ತನ್ನ ಗುಂಪು ಹಂತದ ಎರಡೂ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಒಂದರಲ್ಲಿ ಗೆದ್ದು ಒಂದರಲ್ಲಿ ಸೋತಿದೆ. ಹೀಗಾಗಿ ಸೂಪರ್ 4 ಹಂತಕ್ಕೇರಲು ಈಗ ಶ್ರೀಲಂಕಾ-ಅಫ್ಘಾನಿಸ್ತಾನದ ಫಲಿತಾಂಶವನ್ನು ಅವಲಂಬಿಸಬೇಕಾಗಿದೆ. ಇನ್ನು ನಡೆದಿರುವ ನಾಲ್ಕು ಪಂದ್ಯಗಳ ಬಳಿಕ ಪಾಯಿಂಟ ಪಟ್ಟಿ ಹೇಗಿದೆ ಎಂಬುದನ್ನು ನೋಡುವುದಾದರೆ..

ಬಾಂಗ್ಲಾದೇಶ ತನ್ನ ಗುಂಪು ಹಂತದ ಎರಡೂ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಒಂದರಲ್ಲಿ ಗೆದ್ದು ಒಂದರಲ್ಲಿ ಸೋತಿದೆ. ಹೀಗಾಗಿ ಸೂಪರ್ 4 ಹಂತಕ್ಕೇರಲು ಈಗ ಶ್ರೀಲಂಕಾ-ಅಫ್ಘಾನಿಸ್ತಾನದ ಫಲಿತಾಂಶವನ್ನು ಅವಲಂಬಿಸಬೇಕಾಗಿದೆ. ಇನ್ನು ನಡೆದಿರುವ ನಾಲ್ಕು ಪಂದ್ಯಗಳ ಬಳಿಕ ಪಾಯಿಂಟ ಪಟ್ಟಿ ಹೇಗಿದೆ ಎಂಬುದನ್ನು ನೋಡುವುದಾದರೆ..

2 / 8
ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದಿರುವ ಪಾಕಿಸ್ತಾನ ಆಡಿರುವ 2 ಪಂದ್ಯಗಳಲ್ಲಿ ಒಂದರಲ್ಲಿ ಗೆಲುವು ಸಾಧಿಸಿದ್ದರೆ, ಇನ್ನೊಂದು ಪಂದ್ಯ ಮಳೆಯಿಂದ ರದ್ದಾಗಿತ್ತು. ಒಟ್ಟು 3 ಅಂಕ ಪಡೆದಿರುವ ಪಾಕಿಸ್ತಾನ ಸೂಪರ್​ 4ಗೆ ಅರ್ಹತೆ ಪಡೆದಿದೆ.

ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದಿರುವ ಪಾಕಿಸ್ತಾನ ಆಡಿರುವ 2 ಪಂದ್ಯಗಳಲ್ಲಿ ಒಂದರಲ್ಲಿ ಗೆಲುವು ಸಾಧಿಸಿದ್ದರೆ, ಇನ್ನೊಂದು ಪಂದ್ಯ ಮಳೆಯಿಂದ ರದ್ದಾಗಿತ್ತು. ಒಟ್ಟು 3 ಅಂಕ ಪಡೆದಿರುವ ಪಾಕಿಸ್ತಾನ ಸೂಪರ್​ 4ಗೆ ಅರ್ಹತೆ ಪಡೆದಿದೆ.

3 / 8
ಹಾಗೆಯೇ ಎ ಗುಂಪಿನಲ್ಲಿ ಟೀಂ ಇಂಡಿಯಾ 2ನೇ ಸ್ಥಾನ ಪಡೆದುಕೊಂಡಿದೆ. ಆಡಿರುವ ಏಕೈಕ ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ ಭಾರತದ ಬಳಿ ಒಂದೇ ಒಂದು ಅಂಕವಿದೆ. ಇದೀಗ ನೇಪಾಳ ವಿರುದ್ಧದ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿಯಂತ್ತಾಗಿದೆ.

ಹಾಗೆಯೇ ಎ ಗುಂಪಿನಲ್ಲಿ ಟೀಂ ಇಂಡಿಯಾ 2ನೇ ಸ್ಥಾನ ಪಡೆದುಕೊಂಡಿದೆ. ಆಡಿರುವ ಏಕೈಕ ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ ಭಾರತದ ಬಳಿ ಒಂದೇ ಒಂದು ಅಂಕವಿದೆ. ಇದೀಗ ನೇಪಾಳ ವಿರುದ್ಧದ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿಯಂತ್ತಾಗಿದೆ.

4 / 8
ಈ ಗುಂಪಿನಲ್ಲಿರು ಮತ್ತೊಂದು ತಂಡವೆಂದರೆ ಅದು ನೇಪಾಳ. ಈ ತಂಡ ಆಡಿರುವ ಒಂದು ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಇದೀಗ ಈ ತಂಡ ಸೂಪರ್ ಫೋರ್ ಹಂತಕ್ಕೆ ತಲುಪಬೇಕೆಂದರೆ ಭಾರತದ ವಿರುದ್ಧ ಗೆಲಲ್ಲೇಬೇಕಿದೆ.

ಈ ಗುಂಪಿನಲ್ಲಿರು ಮತ್ತೊಂದು ತಂಡವೆಂದರೆ ಅದು ನೇಪಾಳ. ಈ ತಂಡ ಆಡಿರುವ ಒಂದು ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಇದೀಗ ಈ ತಂಡ ಸೂಪರ್ ಫೋರ್ ಹಂತಕ್ಕೆ ತಲುಪಬೇಕೆಂದರೆ ಭಾರತದ ವಿರುದ್ಧ ಗೆಲಲ್ಲೇಬೇಕಿದೆ.

5 / 8
ಇನ್ನು ಬಿ ಗುಂಪಿನಲ್ಲಿ ಆತಿಥೇಯ ಶ್ರೀಲಂಕಾ ಮೊದಲ ಸ್ಥಾನದಲ್ಲಿದೆ. ಆಡಿರುವ ಏಕೈಕ ಪಂದ್ಯವನ್ನು ಗೆದ್ದಿರುವ ಲಂಕಾ 2 ಅಂಕ ಕಲೆಹಾಕಿದೆ.

ಇನ್ನು ಬಿ ಗುಂಪಿನಲ್ಲಿ ಆತಿಥೇಯ ಶ್ರೀಲಂಕಾ ಮೊದಲ ಸ್ಥಾನದಲ್ಲಿದೆ. ಆಡಿರುವ ಏಕೈಕ ಪಂದ್ಯವನ್ನು ಗೆದ್ದಿರುವ ಲಂಕಾ 2 ಅಂಕ ಕಲೆಹಾಕಿದೆ.

6 / 8
ಬಿ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದಿರುವ ಬಾಂಗ್ಲಾದೇಶ ಆಡಿರುವ 2 ಪಂದ್ಯಗಳಲ್ಲಿ ಒಂದರಲ್ಲಿ ಸೋತು, ಒಂದರಲ್ಲಿ ಗೆಲುವು ಸಾಧಿಸಿದೆ. ಇದೀಗ ಬಾಂಗ್ಲಾ ಸೂಪರ್ 4 ಹಂತಕ್ಕೇರಬೇಕಂದರೆ ಶ್ರೀಲಂಕಾ-ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ಸೋಲಲೇಬೇಕಿದೆ.

ಬಿ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದಿರುವ ಬಾಂಗ್ಲಾದೇಶ ಆಡಿರುವ 2 ಪಂದ್ಯಗಳಲ್ಲಿ ಒಂದರಲ್ಲಿ ಸೋತು, ಒಂದರಲ್ಲಿ ಗೆಲುವು ಸಾಧಿಸಿದೆ. ಇದೀಗ ಬಾಂಗ್ಲಾ ಸೂಪರ್ 4 ಹಂತಕ್ಕೇರಬೇಕಂದರೆ ಶ್ರೀಲಂಕಾ-ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ಸೋಲಲೇಬೇಕಿದೆ.

7 / 8
ಈ ಗುಂಪಿನಲ್ಲಿ ಕೊನೆಯ ಸ್ಥಾನ ಪಡೆದಿರುವ ಅಫ್ಘಾನಿಸ್ತಾನ ಆಡಿರುವ ಒಂದು ಪಂದ್ಯದಲ್ಲಿ ಸೋಲು ಕಂಡಿದ್ದು, ಸೂಪರ್ ಫೋರ್ ಹಂತಕ್ಕೆ ತಲುಪಲು ಶ್ರೀಲಂಕಾ ವಿರುದ್ಧ ಗೆಲಲ್ಲೇಬೇಕಿದೆ.

ಈ ಗುಂಪಿನಲ್ಲಿ ಕೊನೆಯ ಸ್ಥಾನ ಪಡೆದಿರುವ ಅಫ್ಘಾನಿಸ್ತಾನ ಆಡಿರುವ ಒಂದು ಪಂದ್ಯದಲ್ಲಿ ಸೋಲು ಕಂಡಿದ್ದು, ಸೂಪರ್ ಫೋರ್ ಹಂತಕ್ಕೆ ತಲುಪಲು ಶ್ರೀಲಂಕಾ ವಿರುದ್ಧ ಗೆಲಲ್ಲೇಬೇಕಿದೆ.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ