AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023 Schedule: ಭಾರತ- ಪಾಕ್ ಪಂದ್ಯದ್ದೇ ಚಿಂತೆ; ಏಷ್ಯಾಕಪ್ ವೇಳಾಪಟ್ಟಿ ವಿಳಂಬವಾಗಲು ಕಾರಣ ಬಹಿರಂಗ

Asia Cup 2023 Schedule: ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್ ಆಯೋಜನೆಗೆ ಎಲ್ಲಾ ತಂಡಗಳೂ ಒಪ್ಪಿಗೆ ಸೂಚಿಸಿವೆ. ಆದರೂ ಏಷ್ಯಾಕಪ್ ವೇಳಾಪಟ್ಟಿಯನ್ನು ಪ್ರಕಟಿಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಹಿಂದೇಟು ಹಾಕುತ್ತಿದೆ.

ಪೃಥ್ವಿಶಂಕರ
|

Updated on: Jul 03, 2023 | 10:48 AM

Share
ಬಹುನಿರೀಕ್ಷಿತ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಎಲ್ಲಿ ನಡೆಯಬೇಕು ಎಂಬ ಗೊಂದಲ ಕೊನೆಗೂ ನಿವಾರಣೆ ಆಗಿ ವಾರಗಳೇ ಕಳೆದಿವೆ. ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್ ಆಯೋಜನೆಗೆ ಎಲ್ಲಾ ತಂಡಗಳೂ ಒಪ್ಪಿಗೆ ಸೂಚಿಸಿವೆ. ಆದರೂ ಏಷ್ಯಾಕಪ್ ವೇಳಾಪಟ್ಟಿಯನ್ನು ಪ್ರಕಟಿಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಹಿಂದೇಟು ಹಾಕುತ್ತಿದೆ.

ಬಹುನಿರೀಕ್ಷಿತ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಎಲ್ಲಿ ನಡೆಯಬೇಕು ಎಂಬ ಗೊಂದಲ ಕೊನೆಗೂ ನಿವಾರಣೆ ಆಗಿ ವಾರಗಳೇ ಕಳೆದಿವೆ. ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್ ಆಯೋಜನೆಗೆ ಎಲ್ಲಾ ತಂಡಗಳೂ ಒಪ್ಪಿಗೆ ಸೂಚಿಸಿವೆ. ಆದರೂ ಏಷ್ಯಾಕಪ್ ವೇಳಾಪಟ್ಟಿಯನ್ನು ಪ್ರಕಟಿಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಹಿಂದೇಟು ಹಾಕುತ್ತಿದೆ.

1 / 6
ಇನ್​ಸೈಡ್​ಸ್ಪೋರ್ಟ್​ ವರದಿ ಪ್ರಕಾರ ಈ ವಾರ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಏಷ್ಯಾಕಪ್ 2023 ರ ವೇಳಾಪಟ್ಟಿಯ ಸಮಯ ಹಾಗೂ ಸ್ಥಳಗಳ ಬಗ್ಗೆಗಿರುವ ಗೊಂದಲದ ಬಗ್ಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಶ್ರೀಲಂಕಾ ಕ್ರಿಕೆಟ್ ಜೊತೆಗೆ ಮಾತುಕತೆ ನಡೆಸುತ್ತಿದೆ ಎಂದು ವರದಿ ಮಾಡಿದೆ.

ಇನ್​ಸೈಡ್​ಸ್ಪೋರ್ಟ್​ ವರದಿ ಪ್ರಕಾರ ಈ ವಾರ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಏಷ್ಯಾಕಪ್ 2023 ರ ವೇಳಾಪಟ್ಟಿಯ ಸಮಯ ಹಾಗೂ ಸ್ಥಳಗಳ ಬಗ್ಗೆಗಿರುವ ಗೊಂದಲದ ಬಗ್ಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಶ್ರೀಲಂಕಾ ಕ್ರಿಕೆಟ್ ಜೊತೆಗೆ ಮಾತುಕತೆ ನಡೆಸುತ್ತಿದೆ ಎಂದು ವರದಿ ಮಾಡಿದೆ.

2 / 6
ಈಗ ಲಭ್ಯವಿರುವ ಮಾಹಿತಿ ಪ್ರಕಾರ ಪಂದ್ಯಗಳನ್ನು ಲಾಹೋರ್ ಮತ್ತು ದಂಬುಲ್ಲಾದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಹಿಂದೆ ಕೊಲಂಬೊದಲ್ಲಿ ಪಂದ್ಯಗಳನ್ನು ಆಯೋಜಿಸಲು ನಿರ್ಧಾರ ಮಾಡಲಾಗಿತ್ತು. ಆದರೆ ಮಾನ್ಸೂನ್ ಕಾರಣದಿಂದಾಗಿ ಸ್ಥಳ ಬದಲಿಸಲು ಚಿಂತಿಸಲಾಗಿದೆ. ಹೀಗಾಗಿ ಈ ಬಗ್ಗೆ ಒಂದು ಅಂತಿಮ ನಿರ್ಧಾರಕ್ಕೆ ಬರುವ ಸಲುವಾಗಿ ವೇಳಾಪಟ್ಟಿ ಘೋಷಣೆ ತಡವಾಗುತ್ತಿದೆ ಎಂದು ವರದಿಯಾಗಿದೆ.

ಈಗ ಲಭ್ಯವಿರುವ ಮಾಹಿತಿ ಪ್ರಕಾರ ಪಂದ್ಯಗಳನ್ನು ಲಾಹೋರ್ ಮತ್ತು ದಂಬುಲ್ಲಾದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಹಿಂದೆ ಕೊಲಂಬೊದಲ್ಲಿ ಪಂದ್ಯಗಳನ್ನು ಆಯೋಜಿಸಲು ನಿರ್ಧಾರ ಮಾಡಲಾಗಿತ್ತು. ಆದರೆ ಮಾನ್ಸೂನ್ ಕಾರಣದಿಂದಾಗಿ ಸ್ಥಳ ಬದಲಿಸಲು ಚಿಂತಿಸಲಾಗಿದೆ. ಹೀಗಾಗಿ ಈ ಬಗ್ಗೆ ಒಂದು ಅಂತಿಮ ನಿರ್ಧಾರಕ್ಕೆ ಬರುವ ಸಲುವಾಗಿ ವೇಳಾಪಟ್ಟಿ ಘೋಷಣೆ ತಡವಾಗುತ್ತಿದೆ ಎಂದು ವರದಿಯಾಗಿದೆ.

3 / 6
ಅಲ್ಲದೆ ಶ್ರೀಲಂಕಾದಲ್ಲಿ ನಡೆಯಲ್ಲಿರುವ ಪಂದ್ಯಗಳ ಸ್ಥಳಗಳ ಕುರಿತು ಈ ವಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಸದಸ್ಯರೊಂದಿಗೆ ಹಂಚಿಕೊಳ್ಳಲಾಗಿದೆ. ಈ ವಾರದೊಳಗೆ ವೇಳಾಪಟ್ಟಿ ಹೊರಬೀಳಲಿದೆ ಎಂದು ಸಿಸಿಐ ಅಧಿಕಾರಿಯೊಬ್ಬರು ಇನ್ಸೈಡ್‌ಸ್ಪೋರ್ಟ್‌ಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ .

ಅಲ್ಲದೆ ಶ್ರೀಲಂಕಾದಲ್ಲಿ ನಡೆಯಲ್ಲಿರುವ ಪಂದ್ಯಗಳ ಸ್ಥಳಗಳ ಕುರಿತು ಈ ವಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಸದಸ್ಯರೊಂದಿಗೆ ಹಂಚಿಕೊಳ್ಳಲಾಗಿದೆ. ಈ ವಾರದೊಳಗೆ ವೇಳಾಪಟ್ಟಿ ಹೊರಬೀಳಲಿದೆ ಎಂದು ಸಿಸಿಐ ಅಧಿಕಾರಿಯೊಬ್ಬರು ಇನ್ಸೈಡ್‌ಸ್ಪೋರ್ಟ್‌ಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ .

4 / 6
ಈ ಹಿಂದೆ ಕೊಲಂಬೊದಲ್ಲಿ  ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಆಯೋಜಿಸಲು ತೀರ್ಮಾನಿಸಲಾಗಿತ್ತು, ಆದರೆ ಉಭಯ ತಂಡಗಳ ಈ ಹೈವೋಲ್ಟೇಜ್ ಕದನಕ್ಕೆ ಮಳೆಯು ಸಮಸ್ಯೆಯಾಗುವ ಸಾಧ್ಯತೆಗಳಿವೆ. ಆದ್ದರಿಂದ ಈ ಪಂದ್ಯವನ್ನು ದಂಬುಲ್ಲಾದಲ್ಲಿ ನಡೆಸುವ ಸಾಧ್ಯತೆಗಳಿವೆ.

ಈ ಹಿಂದೆ ಕೊಲಂಬೊದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಆಯೋಜಿಸಲು ತೀರ್ಮಾನಿಸಲಾಗಿತ್ತು, ಆದರೆ ಉಭಯ ತಂಡಗಳ ಈ ಹೈವೋಲ್ಟೇಜ್ ಕದನಕ್ಕೆ ಮಳೆಯು ಸಮಸ್ಯೆಯಾಗುವ ಸಾಧ್ಯತೆಗಳಿವೆ. ಆದ್ದರಿಂದ ಈ ಪಂದ್ಯವನ್ನು ದಂಬುಲ್ಲಾದಲ್ಲಿ ನಡೆಸುವ ಸಾಧ್ಯತೆಗಳಿವೆ.

5 / 6
ಹೈಬ್ರಿಡ್ ಮಾದರಿಯ ಪ್ರಕಾರ, ಪಾಕಿಸ್ತಾನವು ಮೊದಲ ನಾಲ್ಕು ಪಂದ್ಯಗಳನ್ನು ಆಯೋಜಿಸುತ್ತದೆ. ಪಂದ್ಯಾವಳಿಯ ಮೊದಲು ಎಲ್ಲಾ ಪಂದ್ಯಗಳನ್ನು ಲಾಹೋರ್‌ನಲ್ಲಿ ಆಡಲು ನಿರ್ಧರಿಸಲಾಗಿದೆ. ಆ ಬಳಿಕ ಎಲ್ಲಾ ತಂಡಗಳು ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಲಿವೆ.

ಹೈಬ್ರಿಡ್ ಮಾದರಿಯ ಪ್ರಕಾರ, ಪಾಕಿಸ್ತಾನವು ಮೊದಲ ನಾಲ್ಕು ಪಂದ್ಯಗಳನ್ನು ಆಯೋಜಿಸುತ್ತದೆ. ಪಂದ್ಯಾವಳಿಯ ಮೊದಲು ಎಲ್ಲಾ ಪಂದ್ಯಗಳನ್ನು ಲಾಹೋರ್‌ನಲ್ಲಿ ಆಡಲು ನಿರ್ಧರಿಸಲಾಗಿದೆ. ಆ ಬಳಿಕ ಎಲ್ಲಾ ತಂಡಗಳು ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಲಿವೆ.

6 / 6
Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ