AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಿಂದ ಶ್ರೇಯಸ್ ಅಯ್ಯರ್​ನನ್ನು ಕೈ ಬಿಡಲು ಕಾರಣಗಳೇ ಇಲ್ಲ..!

Asia Cup 2025: ಬಹುನಿರೀಕ್ಷಿತ ಏಷ್ಯಾಕಪ್ ಟಿ20 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಆ ತಂಡಗಳೆಂದರೆ ಭಾರತ, ಪಾಕಿಸ್ತಾನ್, ಬಾಂಗ್ಲಾದೇಶ್, ಶ್ರೀಲಂಕಾ, ಅಫ್ಘಾನಿಸ್ತಾನ್, ಯುಎಇ, ಹಾಂಗ್​ ಕಾಂಗ್, ಒಮಾನ್.

ಝಾಹಿರ್ ಯೂಸುಫ್
|

Updated on: Aug 17, 2025 | 11:07 AM

Share
ಏಷ್ಯಾಕಪ್​ಗಾಗಿ ಇದೇ ವಾರದಲ್ಲಿ ಭಾರತ ತಂಡವನ್ನು ಪ್ರಕಟಿಸಲಾಗುತ್ತದೆ. ಆದರೆ ಈ ತಂಡದಲ್ಲಿ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳುವ ಬಗ್ಗೆ ಯಾವುದೇ ಖಚಿತತೆ ಇಲ್ಲ. ಏಕೆಂದರೆ ಈ ಬಾರಿ ಯುವ ಪಡೆಯನ್ನು ಕಣಕ್ಕಿಳಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸುತ್ತಿದೆ. ಇದರಿಂದ ಶ್ರೇಯಸ್ ಅಯ್ಯರ್ ಅವಕಾಶ ವಂಚಿತರಾಗಲಿದ್ದಾರೆ ಎಂದು ವರದಿಯಾಗಿದೆ.

ಏಷ್ಯಾಕಪ್​ಗಾಗಿ ಇದೇ ವಾರದಲ್ಲಿ ಭಾರತ ತಂಡವನ್ನು ಪ್ರಕಟಿಸಲಾಗುತ್ತದೆ. ಆದರೆ ಈ ತಂಡದಲ್ಲಿ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳುವ ಬಗ್ಗೆ ಯಾವುದೇ ಖಚಿತತೆ ಇಲ್ಲ. ಏಕೆಂದರೆ ಈ ಬಾರಿ ಯುವ ಪಡೆಯನ್ನು ಕಣಕ್ಕಿಳಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸುತ್ತಿದೆ. ಇದರಿಂದ ಶ್ರೇಯಸ್ ಅಯ್ಯರ್ ಅವಕಾಶ ವಂಚಿತರಾಗಲಿದ್ದಾರೆ ಎಂದು ವರದಿಯಾಗಿದೆ.

1 / 5
ಆದರೆ ಇತ್ತ ಆಯ್ಕೆ ಸಮಿತಿಗೆ ಶ್ರೇಯಸ್ ಅಯ್ಯರ್ ಅವರನ್ನು ಕೈ ಬಿಡಲು ನಿರ್ದಿಷ್ಟ ಕಾರಣಗಳಿಲ್ಲ ಎಂಬುದೇ ಸತ್ಯ. ಏಕೆಂದರೆ ದೇಶೀಯ ಅಂಗಳದಲ್ಲಿನ ಪ್ರದರ್ಶನವನ್ನು ಗಣನೆಗೆ ತೆಗೆದುಕೊಂಡರೆ ಅಯ್ಯರ್ ಅಗ್ರಸ್ಥಾನದಲ್ಲಿದ್ದಾರೆ. ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​​​ನಲ್ಲೂ ಪಂಜಾಬ್ ಕಿಂಗ್ಸ್ ತಂಡದ ನಾಯಕ ಅದ್ಭುತ ಪ್ರದರ್ಶನ ನೀಡಿದ್ದಾರೆ.

ಆದರೆ ಇತ್ತ ಆಯ್ಕೆ ಸಮಿತಿಗೆ ಶ್ರೇಯಸ್ ಅಯ್ಯರ್ ಅವರನ್ನು ಕೈ ಬಿಡಲು ನಿರ್ದಿಷ್ಟ ಕಾರಣಗಳಿಲ್ಲ ಎಂಬುದೇ ಸತ್ಯ. ಏಕೆಂದರೆ ದೇಶೀಯ ಅಂಗಳದಲ್ಲಿನ ಪ್ರದರ್ಶನವನ್ನು ಗಣನೆಗೆ ತೆಗೆದುಕೊಂಡರೆ ಅಯ್ಯರ್ ಅಗ್ರಸ್ಥಾನದಲ್ಲಿದ್ದಾರೆ. ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​​​ನಲ್ಲೂ ಪಂಜಾಬ್ ಕಿಂಗ್ಸ್ ತಂಡದ ನಾಯಕ ಅದ್ಭುತ ಪ್ರದರ್ಶನ ನೀಡಿದ್ದಾರೆ.

2 / 5
ದೇಶೀಯ ಅಂಗಳದ ಟಿ20 ಟೂರ್ನಿ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿನ ಪ್ರದರ್ಶನವನ್ನು ಗಣನೆಗೆ ತೆಗೆದುಕೊಂಡರೆ ಶ್ರೇಯಸ್ ಅಯ್ಯರ್ ಕಳೆದ ಸೀಸನ್​ನಲ್ಲಿ ಅತ್ತುತ್ತಮ ಪ್ರದರ್ಶನ ನೀಡಿದ್ದಾರೆ. 2024ರ ಸೀಸನ್​​ನಲ್ಲಿ 8 ಇನಿಂಗ್ಸ್ ಆಡಿದ್ದ ಅಯ್ಯರ್ ಒಟ್ಟು 345 ರನ್ ಕಲೆಹಾಕಿದ್ದಾರೆ. ಅದು ಕೂಡ 188.52 ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ.

ದೇಶೀಯ ಅಂಗಳದ ಟಿ20 ಟೂರ್ನಿ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿನ ಪ್ರದರ್ಶನವನ್ನು ಗಣನೆಗೆ ತೆಗೆದುಕೊಂಡರೆ ಶ್ರೇಯಸ್ ಅಯ್ಯರ್ ಕಳೆದ ಸೀಸನ್​ನಲ್ಲಿ ಅತ್ತುತ್ತಮ ಪ್ರದರ್ಶನ ನೀಡಿದ್ದಾರೆ. 2024ರ ಸೀಸನ್​​ನಲ್ಲಿ 8 ಇನಿಂಗ್ಸ್ ಆಡಿದ್ದ ಅಯ್ಯರ್ ಒಟ್ಟು 345 ರನ್ ಕಲೆಹಾಕಿದ್ದಾರೆ. ಅದು ಕೂಡ 188.52 ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ.

3 / 5
ಇನ್ನು ಐಪಿಎಲ್​ನಲ್ಲಿನ ಪ್ರದರ್ಶನವನ್ನು ತೆಗೆದುಕೊಂಡರೆ, ಕಳೆದ ಸೀಸನ್​​ನಲ್ಲಿ 17 ಪಂದ್ಯಗಳಿಂದ ಅಯ್ಯರ್ ಕಲೆಹಾಕಿರುವುದು ಬರೋಬ್ಬರಿ 604 ರನ್​​ಗಳು. ಅದು ಸಹ 175.07ರ ಸ್ಟ್ರೈಕ್ ರೇಟ್​​ನಲ್ಲಿ ಅಂದರೆ ದೇಶೀಯ ಟಿ20 ಟೂರ್ನಿ ಹಾಗೂ ಐಪಿಎಲ್​​ನಲ್ಲಿ ಶ್ರೇಯಸ್ ಅಯ್ಯರ್ 175+ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿ ಭರ್ಜರಿ ಪ್ರದರ್ಶನ ನೀಡಿದ್ದಾರೆ.

ಇನ್ನು ಐಪಿಎಲ್​ನಲ್ಲಿನ ಪ್ರದರ್ಶನವನ್ನು ತೆಗೆದುಕೊಂಡರೆ, ಕಳೆದ ಸೀಸನ್​​ನಲ್ಲಿ 17 ಪಂದ್ಯಗಳಿಂದ ಅಯ್ಯರ್ ಕಲೆಹಾಕಿರುವುದು ಬರೋಬ್ಬರಿ 604 ರನ್​​ಗಳು. ಅದು ಸಹ 175.07ರ ಸ್ಟ್ರೈಕ್ ರೇಟ್​​ನಲ್ಲಿ ಅಂದರೆ ದೇಶೀಯ ಟಿ20 ಟೂರ್ನಿ ಹಾಗೂ ಐಪಿಎಲ್​​ನಲ್ಲಿ ಶ್ರೇಯಸ್ ಅಯ್ಯರ್ 175+ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿ ಭರ್ಜರಿ ಪ್ರದರ್ಶನ ನೀಡಿದ್ದಾರೆ.

4 / 5
ಹೀಗಾಗಿಯೇ ಏಷ್ಯಾಕಪ್ ತಂಡದ ಆಯ್ಕೆಗೆ ಶ್ರೇಯಸ್ ಅಯ್ಯರ್ ಅರ್ಹರು. ಇದಾಗ್ಯೂ ಶ್ರೇಯಸ್ ಅಯ್ಯರ್​ಗೆ ಅವಕಾಶ ಸಿಗುವುದಿಲ್ಲ ಎಂಬ ಸುದ್ದಿಗಳು ಹರಿದಾಡುತ್ತಿದೆ. ಈ ಸುದ್ದಿಗಳ ಬಗ್ಗೆ ಸ್ಪಷ್ಟತೆ ಸಿಗಲು ಆಗಸ್ಟ್ 19 ರವರೆಗೆ ಕಾಯಲೇಬೇಕು. ಅಂದರೆ ಮುಂದಿನ ಮಂಗಳವಾರ ಏಷ್ಯಾಕಪ್​ಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗುತ್ತದೆ. ಈ ವೇಳೆ ಶ್ರೇಯಸ್ ಅಯ್ಯರ್ ಹೆಸರು ಕಾಣಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಹೀಗಾಗಿಯೇ ಏಷ್ಯಾಕಪ್ ತಂಡದ ಆಯ್ಕೆಗೆ ಶ್ರೇಯಸ್ ಅಯ್ಯರ್ ಅರ್ಹರು. ಇದಾಗ್ಯೂ ಶ್ರೇಯಸ್ ಅಯ್ಯರ್​ಗೆ ಅವಕಾಶ ಸಿಗುವುದಿಲ್ಲ ಎಂಬ ಸುದ್ದಿಗಳು ಹರಿದಾಡುತ್ತಿದೆ. ಈ ಸುದ್ದಿಗಳ ಬಗ್ಗೆ ಸ್ಪಷ್ಟತೆ ಸಿಗಲು ಆಗಸ್ಟ್ 19 ರವರೆಗೆ ಕಾಯಲೇಬೇಕು. ಅಂದರೆ ಮುಂದಿನ ಮಂಗಳವಾರ ಏಷ್ಯಾಕಪ್​ಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗುತ್ತದೆ. ಈ ವೇಳೆ ಶ್ರೇಯಸ್ ಅಯ್ಯರ್ ಹೆಸರು ಕಾಣಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

5 / 5
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ