AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia cup 2025: ಮೊದಲ ಎಸೆತದಲ್ಲೇ ವಿಕೆಟ್; ಪಾಕ್ ವಿರುದ್ಧ ಇತಿಹಾಸ ಸೃಷ್ಟಿಸಿದ ಹಾರ್ದಿಕ್ ಪಾಂಡ್ಯ

Hardik Pandya's Historic First-Ball Wicket: 2025ರ ಏಷ್ಯಾಕಪ್‌ನಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಅದ್ಭುತ ಪ್ರದರ್ಶನ ನೀಡಿದೆ. ಪಾಕಿಸ್ತಾನವನ್ನು ಕೇವಲ 127 ರನ್‌ಗಳಿಗೆ ಸೀಮಿತಗೊಳಿಸಿತು. ಹಾರ್ದಿಕ್ ಪಾಂಡ್ಯ ಮೊದಲ ಎಸೆತದಲ್ಲೇ ವಿಕೆಟ್ ಪಡೆದು ಇತಿಹಾಸ ನಿರ್ಮಿಸಿದರು. ಇದು ಪಾಕಿಸ್ತಾನ ವಿರುದ್ಧ ಭಾರತೀಯ ಬೌಲರ್ ಮಾಡಿದ ಅಪರೂಪದ ಸಾಧನೆ.

ಪೃಥ್ವಿಶಂಕರ
|

Updated on: Sep 14, 2025 | 10:18 PM

Share
2025 ರ ಏಷ್ಯಾಕಪ್​ನ ಆರನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವನ್ನು 127 ರನ್​ಗಳಿಗೆ ಕಟ್ಟಿಹಾಕುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಮೊದಲ ಪಂದ್ಯದಂತೆ ಎರಡನೇ ಪಂದ್ಯದಲ್ಲೂ ಟೀಂ ಇಂಡಿಯಾ ಸ್ಪಿನ್ನರ್‌ಗಳು ಎದುರಾಳಿಗಳನ್ನು ಕಾಡಿದರು. ಆದರೆ ಮೊದಲ ಪಂದ್ಯದಲ್ಲಿ ಯಾವುದೇ ವಿಕೆಟ್ ಪಡೆಯದ ಹಾರ್ದಿಕ್ ಪಾಂಡ್ಯ ಈ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ವಿಕೆಟ್ ಪಡೆದರು.

2025 ರ ಏಷ್ಯಾಕಪ್​ನ ಆರನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವನ್ನು 127 ರನ್​ಗಳಿಗೆ ಕಟ್ಟಿಹಾಕುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಮೊದಲ ಪಂದ್ಯದಂತೆ ಎರಡನೇ ಪಂದ್ಯದಲ್ಲೂ ಟೀಂ ಇಂಡಿಯಾ ಸ್ಪಿನ್ನರ್‌ಗಳು ಎದುರಾಳಿಗಳನ್ನು ಕಾಡಿದರು. ಆದರೆ ಮೊದಲ ಪಂದ್ಯದಲ್ಲಿ ಯಾವುದೇ ವಿಕೆಟ್ ಪಡೆಯದ ಹಾರ್ದಿಕ್ ಪಾಂಡ್ಯ ಈ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ವಿಕೆಟ್ ಪಡೆದರು.

1 / 5
ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಪಾಕ್ ಆರಂಭಿಕ ಸೈಮ್ ಆಯೂಬ್ ಅವರನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ ಹಾರ್ದಿಕ್ ಪಾಂಡ್ಯ ಐತಿಹಾಸಿಕ ಸಾಧನೆ ಮಾಡಿದರು. ಈ ಮೂಲಕ ಇದಕ್ಕೂ ಮೊದಲು ಪಾಕಿಸ್ತಾನ ವಿರುದ್ಧ ಯಾವುದೇ ಭಾರತೀಯ ಬೌಲರ್ ಮಾಡಲು ಸಾಧ್ಯವಾಗದ ಸಾಧನೆಯನ್ನು ಹಾರ್ದಿಕ್ ಪಾಂಡ್ಯ ಮಾಡಿದರು.

ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಪಾಕ್ ಆರಂಭಿಕ ಸೈಮ್ ಆಯೂಬ್ ಅವರನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ ಹಾರ್ದಿಕ್ ಪಾಂಡ್ಯ ಐತಿಹಾಸಿಕ ಸಾಧನೆ ಮಾಡಿದರು. ಈ ಮೂಲಕ ಇದಕ್ಕೂ ಮೊದಲು ಪಾಕಿಸ್ತಾನ ವಿರುದ್ಧ ಯಾವುದೇ ಭಾರತೀಯ ಬೌಲರ್ ಮಾಡಲು ಸಾಧ್ಯವಾಗದ ಸಾಧನೆಯನ್ನು ಹಾರ್ದಿಕ್ ಪಾಂಡ್ಯ ಮಾಡಿದರು.

2 / 5
ಪಂದ್ಯದ ಆರಂಭದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಜವಾಬ್ದಾರಿಯನ್ನು ಹಾರ್ದಿಕ್ ಪಾಂಡ್ಯಗೆ ವಹಿಸಿದರು. ನಾಯಕನ ನಂಬಿಕೆಗೆ ತಕ್ಕಂತೆ ಬೌಲಿಂಗ್ ಮಾಡಿದ ಪಾಂಡ್ಯ, ಪಾಕಿಸ್ತಾನದ ಆರಂಭಿಕ ಆಟಗಾರ ಸೈಮ್ ಅಯೂಬ್ ಅವರ ವಿಕೆಟ್ ಉರುಳಿಸಿದರು.

ಪಂದ್ಯದ ಆರಂಭದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಜವಾಬ್ದಾರಿಯನ್ನು ಹಾರ್ದಿಕ್ ಪಾಂಡ್ಯಗೆ ವಹಿಸಿದರು. ನಾಯಕನ ನಂಬಿಕೆಗೆ ತಕ್ಕಂತೆ ಬೌಲಿಂಗ್ ಮಾಡಿದ ಪಾಂಡ್ಯ, ಪಾಕಿಸ್ತಾನದ ಆರಂಭಿಕ ಆಟಗಾರ ಸೈಮ್ ಅಯೂಬ್ ಅವರ ವಿಕೆಟ್ ಉರುಳಿಸಿದರು.

3 / 5
ಈ ವಿಕೆಟ್‌ನೊಂದಿಗೆ, ಹಾರ್ದಿಕ್ ಪಂದ್ಯದ ಆರಂಭದಲ್ಲಿ ಭಾರತಕ್ಕೆ ಮುನ್ನಡೆ ತಂದುಕೊಟ್ಟಿದ್ದು ಮಾತ್ರವಲ್ಲದೆ, ತಮ್ಮ ಹೆಸರಿನಲ್ಲಿ ಒಂದು ವಿಶಿಷ್ಟ ದಾಖಲೆಯನ್ನೂ ನಿರ್ಮಿಸಿದರು. ವಾಸ್ತವವಾಗಿ ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಭಾರತೀಯ ಬೌಲರ್ ಒಬ್ಬ ವಿಕೆಟ್ ಪಡೆದ ದಾಖಲೆ ಹಾರ್ದಿಕ್ ಪಾಲಾಯಿತು.

ಈ ವಿಕೆಟ್‌ನೊಂದಿಗೆ, ಹಾರ್ದಿಕ್ ಪಂದ್ಯದ ಆರಂಭದಲ್ಲಿ ಭಾರತಕ್ಕೆ ಮುನ್ನಡೆ ತಂದುಕೊಟ್ಟಿದ್ದು ಮಾತ್ರವಲ್ಲದೆ, ತಮ್ಮ ಹೆಸರಿನಲ್ಲಿ ಒಂದು ವಿಶಿಷ್ಟ ದಾಖಲೆಯನ್ನೂ ನಿರ್ಮಿಸಿದರು. ವಾಸ್ತವವಾಗಿ ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಭಾರತೀಯ ಬೌಲರ್ ಒಬ್ಬ ವಿಕೆಟ್ ಪಡೆದ ದಾಖಲೆ ಹಾರ್ದಿಕ್ ಪಾಲಾಯಿತು.

4 / 5
ಹಾರ್ದಿಕ್ ಪಾಂಡ್ಯ ನಂತರ, ಜಸ್ಪ್ರೀತ್ ಬುಮ್ರಾ ಕೂಡ ಉತ್ತಮ ಆರಂಭ ನೀಡಿದರು. ಪಂದ್ಯದ ಎರಡನೇ ಓವರ್‌ನಲ್ಲಿ ಅವರು ಪಾಕಿಸ್ತಾನಕ್ಕೆ ಎರಡನೇ ಹೊಡೆತ ನೀಡಿದರು. ಜಸ್ಪ್ರೀತ್ ಬುಮ್ರಾ ತಮ್ಮ ಸ್ಪೆಲ್‌ನ ಎರಡನೇ ಎಸೆತದಲ್ಲಿ ಮೊಹಮ್ಮದ್ ಹ್ಯಾರಿಸ್ ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು. ಮೊಹಮ್ಮದ್ ಹ್ಯಾರಿಸ್ ಬುಮ್ರಾ ಚೆಂಡಿನ ಮೇಲೆ ದೊಡ್ಡ ಶಾಟ್ ಆಡಲು ಪ್ರಯತ್ನಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಚ್ ನೀಡಿದರು. ಇದರಿಂದಾಗಿ ಪಾಕಿಸ್ತಾನ ಪಂದ್ಯದ ಮೊದಲ 8 ಎಸೆತಗಳಲ್ಲಿ 2 ವಿಕೆಟ್‌ಗಳನ್ನು ಕಳೆದುಕೊಂಡಿತು.

ಹಾರ್ದಿಕ್ ಪಾಂಡ್ಯ ನಂತರ, ಜಸ್ಪ್ರೀತ್ ಬುಮ್ರಾ ಕೂಡ ಉತ್ತಮ ಆರಂಭ ನೀಡಿದರು. ಪಂದ್ಯದ ಎರಡನೇ ಓವರ್‌ನಲ್ಲಿ ಅವರು ಪಾಕಿಸ್ತಾನಕ್ಕೆ ಎರಡನೇ ಹೊಡೆತ ನೀಡಿದರು. ಜಸ್ಪ್ರೀತ್ ಬುಮ್ರಾ ತಮ್ಮ ಸ್ಪೆಲ್‌ನ ಎರಡನೇ ಎಸೆತದಲ್ಲಿ ಮೊಹಮ್ಮದ್ ಹ್ಯಾರಿಸ್ ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು. ಮೊಹಮ್ಮದ್ ಹ್ಯಾರಿಸ್ ಬುಮ್ರಾ ಚೆಂಡಿನ ಮೇಲೆ ದೊಡ್ಡ ಶಾಟ್ ಆಡಲು ಪ್ರಯತ್ನಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಚ್ ನೀಡಿದರು. ಇದರಿಂದಾಗಿ ಪಾಕಿಸ್ತಾನ ಪಂದ್ಯದ ಮೊದಲ 8 ಎಸೆತಗಳಲ್ಲಿ 2 ವಿಕೆಟ್‌ಗಳನ್ನು ಕಳೆದುಕೊಂಡಿತು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ