AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಸ್ಟರಿ… ಹಿಸ್ಟರಿ… ಹಿಸ್ಟರಿ… ಕ್ಯಾಚ್ ಕೈಚೆಲ್ಲಿ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

India vs Bangladesh: ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ದುಬೈನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 168 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಪರ ಸೈಫ್ ಹಸನ್ 51 ಎಸೆತಗಳಲ್ಲಿ 69 ರನ್ ಬಾರಿಸಿದರು. ಇದಾಗ್ಯೂ ಬಾಂಗ್ಲಾದೇಶ್ ತಂಡ 127 ರನ್​ಗಳಿಗೆ ಆಲೌಟ್ ಆಗುವ ಮೂಲಕ 41 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಝಾಹಿರ್ ಯೂಸುಫ್
|

Updated on: Sep 25, 2025 | 7:54 AM

Share
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಟೀಮ್ ಇಂಡಿಯಾ (Team India) ಹೊಸ ದಾಖಲೆ ಬರೆದಿದೆ. ಅದು ಸಹ ಕ್ಯಾಚ್ ಕೈ ಚೆಲ್ಲುವ ಮೂಲಕ..! ಅಂದರೆ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಒಬ್ಬ ಬ್ಯಾಟರ್​ಗೆ ಅತ್ಯಧಿಕ ಬಾರಿ ಜೀವದಾನ ನೀಡಿದ ಅಪಕೀರ್ತಿ ಭಾರತ ತಂಡದ ಪಾಲಾಗಿದೆ.

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಟೀಮ್ ಇಂಡಿಯಾ (Team India) ಹೊಸ ದಾಖಲೆ ಬರೆದಿದೆ. ಅದು ಸಹ ಕ್ಯಾಚ್ ಕೈ ಚೆಲ್ಲುವ ಮೂಲಕ..! ಅಂದರೆ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಒಬ್ಬ ಬ್ಯಾಟರ್​ಗೆ ಅತ್ಯಧಿಕ ಬಾರಿ ಜೀವದಾನ ನೀಡಿದ ಅಪಕೀರ್ತಿ ಭಾರತ ತಂಡದ ಪಾಲಾಗಿದೆ.

1 / 5
ದುಬೈನಲ್ಲಿ ನಡೆದ ಏಷ್ಯಾಕಪ್ ಟೂರ್ನಿಯ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ 168 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಬಾಂಗ್ಲಾದೇಶ್ ಪರ ಆರಂಭಿಕರಾಗಿ ಸೈಫ್ ಹಸನ್ ಹಾಗೂ ತಂಝಿದ್ ಹಸನ್ ಕಣಕ್ಕಿಳಿದಿದ್ದರು.

ದುಬೈನಲ್ಲಿ ನಡೆದ ಏಷ್ಯಾಕಪ್ ಟೂರ್ನಿಯ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ 168 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಬಾಂಗ್ಲಾದೇಶ್ ಪರ ಆರಂಭಿಕರಾಗಿ ಸೈಫ್ ಹಸನ್ ಹಾಗೂ ತಂಝಿದ್ ಹಸನ್ ಕಣಕ್ಕಿಳಿದಿದ್ದರು.

2 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಸೈಫ್ ಹಸನ್​ಗೆ ಟೀಮ್ ಇಂಡಿಯಾ ಫೀಲ್ಡರ್ ಗಳು ನೀಡಿದ ಜೀವದಾನಗಳ ಸಂಖ್ಯೆ ಬರೋಬ್ಬರಿ ನಾಲ್ಕು.  40 ರನ್ ಗಳಿಸಿದ್ದಾಗ ಅಕ್ಷರ್ ಪಟೇಲ್ ಬಾಂಗ್ಲಾದೇಶ್ ಆರಂಭಿಕನಿಗೆ ಮೊದಲ ಜೀವದಾನ ನೀಡಿದ್ದರು. ಈ ಅವಕಾಶವನ್ನು ಬಳಸಿಕೊಂಡ ಸೈಫ್ ಹಸನ್ ಅರ್ಧಶತಕ ಪೂರೈಸಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಸೈಫ್ ಹಸನ್​ಗೆ ಟೀಮ್ ಇಂಡಿಯಾ ಫೀಲ್ಡರ್ ಗಳು ನೀಡಿದ ಜೀವದಾನಗಳ ಸಂಖ್ಯೆ ಬರೋಬ್ಬರಿ ನಾಲ್ಕು.  40 ರನ್ ಗಳಿಸಿದ್ದಾಗ ಅಕ್ಷರ್ ಪಟೇಲ್ ಬಾಂಗ್ಲಾದೇಶ್ ಆರಂಭಿಕನಿಗೆ ಮೊದಲ ಜೀವದಾನ ನೀಡಿದ್ದರು. ಈ ಅವಕಾಶವನ್ನು ಬಳಸಿಕೊಂಡ ಸೈಫ್ ಹಸನ್ ಅರ್ಧಶತಕ ಪೂರೈಸಿದರು.

3 / 5
ಇದಾದ ಬಳಿಕ 65, 67 ರನ್ ಗಳಿಸಿದ್ದ ವೇಳೆ ಶಿವಂ ದುಬೆ ಎರಡು ಬಾರಿ ಕ್ಯಾಚ್ ಕೈಬಿಟ್ಟರು. ಇನ್ನು 67 ರನ್ ಗಳಿಸಿದ್ದಾಗ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಕೂಡ ಕ್ಯಾಚ್ ಕೈಚೆಲ್ಲಿದರು. ಈ ಮೂಲಕ ಟೀಮ್ ಇಂಡಿಯಾ ಫೀಲ್ಡರ್​ಗಳು ಸೈಫ್ ಹಸನ್​ಗೆ ಬರೋಬ್ಬರಿ 4 ಜೀವದಾನಗಳನ್ನು ನೀಡಿದ್ದಾರೆ.

ಇದಾದ ಬಳಿಕ 65, 67 ರನ್ ಗಳಿಸಿದ್ದ ವೇಳೆ ಶಿವಂ ದುಬೆ ಎರಡು ಬಾರಿ ಕ್ಯಾಚ್ ಕೈಬಿಟ್ಟರು. ಇನ್ನು 67 ರನ್ ಗಳಿಸಿದ್ದಾಗ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಕೂಡ ಕ್ಯಾಚ್ ಕೈಚೆಲ್ಲಿದರು. ಈ ಮೂಲಕ ಟೀಮ್ ಇಂಡಿಯಾ ಫೀಲ್ಡರ್​ಗಳು ಸೈಫ್ ಹಸನ್​ಗೆ ಬರೋಬ್ಬರಿ 4 ಜೀವದಾನಗಳನ್ನು ನೀಡಿದ್ದಾರೆ.

4 / 5
ಇದರೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ ಅತೀ ಹೆಚ್ಚು ಬಾರಿ ಜೀವದಾನ ಪಡೆದ ಬ್ಯಾಟರ್ ಎಂಬ ದಾಖಲೆ ಸೈಫ್ ಹಸನ್ ಹೆಸರಿಗೆ ಸೇರ್ಪಡೆಯಾಗಿದೆ. ಇತ್ತ ಇನಿಂಗ್ಸ್​ವೊಂದರಲ್ಲಿ ಒಬ್ಬನೇ ಬ್ಯಾಟರ್​ನ ಅತೀ ಹೆಚ್ಚು ಕ್ಯಾಚ್ ಕೈಚೆಲ್ಲಿದ ಕಳಪೆ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಿದೆ.

ಇದರೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ ಅತೀ ಹೆಚ್ಚು ಬಾರಿ ಜೀವದಾನ ಪಡೆದ ಬ್ಯಾಟರ್ ಎಂಬ ದಾಖಲೆ ಸೈಫ್ ಹಸನ್ ಹೆಸರಿಗೆ ಸೇರ್ಪಡೆಯಾಗಿದೆ. ಇತ್ತ ಇನಿಂಗ್ಸ್​ವೊಂದರಲ್ಲಿ ಒಬ್ಬನೇ ಬ್ಯಾಟರ್​ನ ಅತೀ ಹೆಚ್ಚು ಕ್ಯಾಚ್ ಕೈಚೆಲ್ಲಿದ ಕಳಪೆ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!