AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬರ್-ರಿಜ್ವಾನ್ ಟಿ20 ಕ್ರಿಕೆಟ್ ಆಡಲು ಯೋಗ್ಯರಲ್ಲ ಎಂದ ಪಾಕ್ ಮಾಜಿ ಕೋಚ್

Pakistan's Asia Cup 2025 Squad: 2025ರ ಏಷ್ಯಾಕಪ್‌ಗೆ ಪಾಕಿಸ್ತಾನ ತನ್ನ ತಂಡವನ್ನು ಪ್ರಕಟಿಸಿದ್ದು, ಅನುಭವಿ ಆಟಗಾರರಾದ ಬಾಬರ್ ಆಝಂ ಮತ್ತು ಮೊಹಮ್ಮದ್ ರಿಜ್ವಾನ್ ಅವರಿಗೆ ಸ್ಥಾನ ಸಿಕ್ಕಿಲ್ಲ. ಮಾಜಿ ಕೋಚ್ ಮಿಕ್ಕಿ ಆರ್ಥರ್ ಅವರು ಇಬ್ಬರೂ ಆಧುನಿಕ ಟಿ20 ಕ್ರಿಕೆಟ್‌ಗೆ ಸೂಕ್ತರಲ್ಲ ಎಂದು ಹೇಳಿದ್ದಾರೆ. ಪಾಕಿಸ್ತಾನ ತಂಡವು ಹೊಸ ಆಟಗಾರರೊಂದಿಗೆ ಆಕ್ರಮಣಕಾರಿ ಯೋಜನೆಯನ್ನು ಅನುಸರಿಸಲು ನಿರ್ಧರಿಸಿದೆ. ಹೀಗಾಗಿ ಮಂಡಳಿಯ ನಿರ್ಧಾರ ಸರಿ ಇದೆ ಎಂದಿದ್ದಾರೆ.

ಪೃಥ್ವಿಶಂಕರ
|

Updated on: Aug 27, 2025 | 6:23 PM

Share
2025 ರ ಏಷ್ಯಾಕಪ್ ಸನಿಹವಾಗುತ್ತಿದ್ದಂತೆ ಈ ಟೂರ್ನಿಯಲ್ಲಿ ಭಾಗವಹಿಸುವ ಎಲ್ಲಾ ತಂಡಗಳು ತಮ್ಮ ಸಿದ್ಧತೆಯಲ್ಲಿ ನಿರತವಾಗಿವೆ. ಹಾಗೆಯೇ ಎಲ್ಲಾ ಮಂಡಳಿಗಳು ತಮ್ಮ ತಮ್ಮ ತಂಡಗಳನ್ನು ಪ್ರಕಟಿಸಿವೆ. ಇದರಲ್ಲಿ ಪಾಕಿಸ್ತಾನವೂ ಸೇರಿದ್ದು, ಈಗಾಗಲೇ ಅದರ ಮಂಡಳಿ ಈ ಟೂರ್ನಿಗೆ ತನ್ನ ತಂಡವನ್ನು ಸಹ ಪ್ರಕಟಿಸಿದೆ. ಆದರೆ ಈ ತಂಡದಲ್ಲಿ ಅನುಭವಿಗಳಾದ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಜ್ವಾನ್​ಗೆ ಅವಕಾಶ ಸಿಕ್ಕಿಲ್ಲ.

2025 ರ ಏಷ್ಯಾಕಪ್ ಸನಿಹವಾಗುತ್ತಿದ್ದಂತೆ ಈ ಟೂರ್ನಿಯಲ್ಲಿ ಭಾಗವಹಿಸುವ ಎಲ್ಲಾ ತಂಡಗಳು ತಮ್ಮ ಸಿದ್ಧತೆಯಲ್ಲಿ ನಿರತವಾಗಿವೆ. ಹಾಗೆಯೇ ಎಲ್ಲಾ ಮಂಡಳಿಗಳು ತಮ್ಮ ತಮ್ಮ ತಂಡಗಳನ್ನು ಪ್ರಕಟಿಸಿವೆ. ಇದರಲ್ಲಿ ಪಾಕಿಸ್ತಾನವೂ ಸೇರಿದ್ದು, ಈಗಾಗಲೇ ಅದರ ಮಂಡಳಿ ಈ ಟೂರ್ನಿಗೆ ತನ್ನ ತಂಡವನ್ನು ಸಹ ಪ್ರಕಟಿಸಿದೆ. ಆದರೆ ಈ ತಂಡದಲ್ಲಿ ಅನುಭವಿಗಳಾದ ಬಾಬರ್ ಆಝಂ ಹಾಗೂ ಮೊಹಮ್ಮದ್ ರಿಜ್ವಾನ್​ಗೆ ಅವಕಾಶ ಸಿಕ್ಕಿಲ್ಲ.

1 / 7
ಮಂಡಳಿಯ ಈ ನಿರ್ಧಾರಕ್ಕೆ ಕಾರಣವೂ ಇದ್ದು, ಇವರಿಬ್ಬರು ಕಳೆದ ಟಿ20 ವಿಶ್ವಕಪ್ ಬಳಿಕ ಯಾವ ಮಾದರಿಯಲ್ಲೂ ಗಮನಾರ್ಹ ಪ್ರದರ್ಶನ ನೀಡಿಲ್ಲ. ಹೀಗಾಗಿ ಇವರಿಬ್ಬರನ್ನು ತಂಡದಿಂದ ಹೊರಗಿಡಲಾಗಿದೆ. ಇದಕ್ಕೆ ಪೂರಕವಾಗಿ ಪಾಕಿಸ್ತಾನ ತಂಡದ ಮಾಜಿ ಕೋಚ್ ಮಿಕ್ಕಿ ಆರ್ಥರ್ ಅಚ್ಚರಿಯ ಹೇಳಿಕೆ ನೀಡಿದ್ದು, ಇವರಿಬ್ಬರು ಆಟಗಾರರು ಟಿ20 ಕ್ರಿಕೆಟ್​ಗೆ ಸೂಕ್ತರಲ್ಲ ಎಂದಿದ್ದಾರೆ.

ಮಂಡಳಿಯ ಈ ನಿರ್ಧಾರಕ್ಕೆ ಕಾರಣವೂ ಇದ್ದು, ಇವರಿಬ್ಬರು ಕಳೆದ ಟಿ20 ವಿಶ್ವಕಪ್ ಬಳಿಕ ಯಾವ ಮಾದರಿಯಲ್ಲೂ ಗಮನಾರ್ಹ ಪ್ರದರ್ಶನ ನೀಡಿಲ್ಲ. ಹೀಗಾಗಿ ಇವರಿಬ್ಬರನ್ನು ತಂಡದಿಂದ ಹೊರಗಿಡಲಾಗಿದೆ. ಇದಕ್ಕೆ ಪೂರಕವಾಗಿ ಪಾಕಿಸ್ತಾನ ತಂಡದ ಮಾಜಿ ಕೋಚ್ ಮಿಕ್ಕಿ ಆರ್ಥರ್ ಅಚ್ಚರಿಯ ಹೇಳಿಕೆ ನೀಡಿದ್ದು, ಇವರಿಬ್ಬರು ಆಟಗಾರರು ಟಿ20 ಕ್ರಿಕೆಟ್​ಗೆ ಸೂಕ್ತರಲ್ಲ ಎಂದಿದ್ದಾರೆ.

2 / 7
ಸ್ಥಳೀಯ ಟಿವಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಪಾಕಿಸ್ತಾನದ ಮಾಜಿ ಮುಖ್ಯ ಕೋಚ್ ಮಿಕ್ಕಿ ಆರ್ಥರ್, ಬಾಬರ್ ಆಝಂ ಮತ್ತು ಮೊಹಮ್ಮದ್ ರಿಜ್ವಾನ್ ಉತ್ತಮ ಕ್ರಿಕೆಟಿಗರು. ಆದರೆ ಆಧುನಿಕ ಟಿ20 ಸ್ವರೂಪವು ಅವರ ನೈಸರ್ಗಿಕ ಆಟವನ್ನು ಮೀರಿದೆ. ಇಂದಿನ ಟಿ20 ಕ್ರಿಕೆಟ್‌ಗೆ ವೇಗದ ಆರಂಭ, ನಿರ್ಭೀತ ಬ್ಯಾಟಿಂಗ್ ಮತ್ತು ಮೊದಲ ಎಸೆತದಿಂದಲೇ ಆಕ್ರಮಣಕಾರಿ ಉದ್ದೇಶದ ಅಗತ್ಯವಿದೆ.

ಸ್ಥಳೀಯ ಟಿವಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಪಾಕಿಸ್ತಾನದ ಮಾಜಿ ಮುಖ್ಯ ಕೋಚ್ ಮಿಕ್ಕಿ ಆರ್ಥರ್, ಬಾಬರ್ ಆಝಂ ಮತ್ತು ಮೊಹಮ್ಮದ್ ರಿಜ್ವಾನ್ ಉತ್ತಮ ಕ್ರಿಕೆಟಿಗರು. ಆದರೆ ಆಧುನಿಕ ಟಿ20 ಸ್ವರೂಪವು ಅವರ ನೈಸರ್ಗಿಕ ಆಟವನ್ನು ಮೀರಿದೆ. ಇಂದಿನ ಟಿ20 ಕ್ರಿಕೆಟ್‌ಗೆ ವೇಗದ ಆರಂಭ, ನಿರ್ಭೀತ ಬ್ಯಾಟಿಂಗ್ ಮತ್ತು ಮೊದಲ ಎಸೆತದಿಂದಲೇ ಆಕ್ರಮಣಕಾರಿ ಉದ್ದೇಶದ ಅಗತ್ಯವಿದೆ.

3 / 7
ಬಾಬರ್ ಆಝಂ ಮತ್ತು ಮೊಹಮ್ಮದ್ ರಿಜ್ವಾನ್ ಉತ್ತಮ ಆಟಗಾರರು, ಆದರೆ ಕ್ರಿಕೆಟ್ ಬದಲಾಗಿದೆ. ಹೀಗಾಗಿ ಇವರಿಬ್ಬರು ಟಿ20ಕ್ರಿಕೆಟ್​ಗೆ ಸೂಕ್ತರಲ್ಲ. ಇಂದು ಟಿ20 ಕ್ರಿಕೆಟ್‌ಗೆ ವಿಭಿನ್ನವಾದ ವಿಧಾನದ ಅಗತ್ಯವಿದೆ. ಈ ಚುಟುಕು ಆಟಕ್ಕೆ ತಮ್ಮ ದೃಷ್ಟಿಕೋನವನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸುವ ಆಟಗಾರರು ಬೇಕಾಗುತ್ತಾರೆ. ಹೀಗಾಗಿ ಇದೀಗ ಪಾಕಿಸ್ತಾನ ತಂಡಕ್ಕೆ ವಿಭಿನ್ನ ವಿಧಾನಗಳ ಅಗತ್ಯವಿದೆ.

ಬಾಬರ್ ಆಝಂ ಮತ್ತು ಮೊಹಮ್ಮದ್ ರಿಜ್ವಾನ್ ಉತ್ತಮ ಆಟಗಾರರು, ಆದರೆ ಕ್ರಿಕೆಟ್ ಬದಲಾಗಿದೆ. ಹೀಗಾಗಿ ಇವರಿಬ್ಬರು ಟಿ20ಕ್ರಿಕೆಟ್​ಗೆ ಸೂಕ್ತರಲ್ಲ. ಇಂದು ಟಿ20 ಕ್ರಿಕೆಟ್‌ಗೆ ವಿಭಿನ್ನವಾದ ವಿಧಾನದ ಅಗತ್ಯವಿದೆ. ಈ ಚುಟುಕು ಆಟಕ್ಕೆ ತಮ್ಮ ದೃಷ್ಟಿಕೋನವನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸುವ ಆಟಗಾರರು ಬೇಕಾಗುತ್ತಾರೆ. ಹೀಗಾಗಿ ಇದೀಗ ಪಾಕಿಸ್ತಾನ ತಂಡಕ್ಕೆ ವಿಭಿನ್ನ ವಿಧಾನಗಳ ಅಗತ್ಯವಿದೆ.

4 / 7
ಸರ್ಫ್ರಾಜ್ ಅಹ್ಮದ್ ನಾಯಕತ್ವದಲ್ಲಿ ಪಾಕಿಸ್ತಾನ ತಂಡವನ್ನು ನಂ. 1 ಟಿ20 ಶ್ರೇಯಾಂಕಕ್ಕೆ ಕರೆದೊಯ್ದಿದ್ದ ಆರ್ಥರ್, ಮೈಕ್ ಹೆಸ್ಸನ್ ನೇತೃತ್ವದಲ್ಲಿ ತಂಡದ ಪ್ರಸ್ತುತ ನಿರ್ವಹಣೆಯು ಹೊಸ ಆಯ್ಕೆಗಳನ್ನು ಹುಡುಕುತ್ತಿರುವುದು ಸರಿಯಾಗಿದೆ. ಹೆಸ್ಸನ್ ಕೋಚಿಂಗ್ ಜವಾಬ್ದಾರಿಯನ್ನು ವಹಿಸಿಕೊಂಡಾಗಿನಿಂದ ಬಾಬರ್ ಮತ್ತು ರಿಜ್ವಾನ್ ಪ್ರತಿಯೊಂದು ತಂಡದಿಂದ ದೂರವಾಗಿದ್ದಾರೆ. ಅವರ ಬದಲಿಗೆ ಸ್ಯಾಮ್ ಅಯೂಬ್, ಫಖರ್ ಜಮಾನ್ ಮತ್ತು ಸಾಹಿಬ್ಜಾದಾ ಫರ್ಹಾನ್ ಅವರಂತಹ ಕಿರಿಯ ಹಾಗೂ ಸ್ಫೋಟಕ ಆರಂಭಿಕರನ್ನು ಆಯ್ಕೆ ಮಾಡಲಾಗಿದೆ ಇದು ಸರಿಯಾದ ನಿರ್ಧಾರ ಎಂದಿದ್ದಾರೆ.

ಸರ್ಫ್ರಾಜ್ ಅಹ್ಮದ್ ನಾಯಕತ್ವದಲ್ಲಿ ಪಾಕಿಸ್ತಾನ ತಂಡವನ್ನು ನಂ. 1 ಟಿ20 ಶ್ರೇಯಾಂಕಕ್ಕೆ ಕರೆದೊಯ್ದಿದ್ದ ಆರ್ಥರ್, ಮೈಕ್ ಹೆಸ್ಸನ್ ನೇತೃತ್ವದಲ್ಲಿ ತಂಡದ ಪ್ರಸ್ತುತ ನಿರ್ವಹಣೆಯು ಹೊಸ ಆಯ್ಕೆಗಳನ್ನು ಹುಡುಕುತ್ತಿರುವುದು ಸರಿಯಾಗಿದೆ. ಹೆಸ್ಸನ್ ಕೋಚಿಂಗ್ ಜವಾಬ್ದಾರಿಯನ್ನು ವಹಿಸಿಕೊಂಡಾಗಿನಿಂದ ಬಾಬರ್ ಮತ್ತು ರಿಜ್ವಾನ್ ಪ್ರತಿಯೊಂದು ತಂಡದಿಂದ ದೂರವಾಗಿದ್ದಾರೆ. ಅವರ ಬದಲಿಗೆ ಸ್ಯಾಮ್ ಅಯೂಬ್, ಫಖರ್ ಜಮಾನ್ ಮತ್ತು ಸಾಹಿಬ್ಜಾದಾ ಫರ್ಹಾನ್ ಅವರಂತಹ ಕಿರಿಯ ಹಾಗೂ ಸ್ಫೋಟಕ ಆರಂಭಿಕರನ್ನು ಆಯ್ಕೆ ಮಾಡಲಾಗಿದೆ ಇದು ಸರಿಯಾದ ನಿರ್ಧಾರ ಎಂದಿದ್ದಾರೆ.

5 / 7
ಪಾಕಿಸ್ತಾನ ಕ್ರಿಕೆಟ್ ತಂಡವು ಮುಂದಿನ ತಿಂಗಳು ಸೆಪ್ಟೆಂಬರ್ 9 ರಿಂದ ನಡೆಯಲಿರುವ 2025 ರ ಏಷ್ಯಾಕಪ್ ಸವಾಲನ್ನು ಎದುರಿಸುತ್ತಿದೆ. ಈ ಪಂದ್ಯಾವಳಿಗೆ ಪಾಕಿಸ್ತಾನ ತನ್ನ ತಂಡವನ್ನು ಘೋಷಿಸಿದೆ. ಸಲ್ಮಾನ್ ಅಘಾ ಅವರಿಗೆ ತಂಡದ ನಾಯಕತ್ವ ನೀಡಲಾಗಿದೆ. ಪಾಕಿಸ್ತಾನ ಮತ್ತು ಭಾರತ ಎರಡೂ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ.

ಪಾಕಿಸ್ತಾನ ಕ್ರಿಕೆಟ್ ತಂಡವು ಮುಂದಿನ ತಿಂಗಳು ಸೆಪ್ಟೆಂಬರ್ 9 ರಿಂದ ನಡೆಯಲಿರುವ 2025 ರ ಏಷ್ಯಾಕಪ್ ಸವಾಲನ್ನು ಎದುರಿಸುತ್ತಿದೆ. ಈ ಪಂದ್ಯಾವಳಿಗೆ ಪಾಕಿಸ್ತಾನ ತನ್ನ ತಂಡವನ್ನು ಘೋಷಿಸಿದೆ. ಸಲ್ಮಾನ್ ಅಘಾ ಅವರಿಗೆ ತಂಡದ ನಾಯಕತ್ವ ನೀಡಲಾಗಿದೆ. ಪಾಕಿಸ್ತಾನ ಮತ್ತು ಭಾರತ ಎರಡೂ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ.

6 / 7
ಏಷ್ಯಾಕಪ್​ಗೆ ಪಾಕಿಸ್ತಾನ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಜ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಮ್ ಝಾರ್ ಮಿರ್ಜಾ, ಶಾಹೀನ್ ಅಫ್ರಿದಿ, ಸುಫಿಯಾನ್ ಮೋಕಿಮ್.

ಏಷ್ಯಾಕಪ್​ಗೆ ಪಾಕಿಸ್ತಾನ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಜ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಮ್ ಝಾರ್ ಮಿರ್ಜಾ, ಶಾಹೀನ್ ಅಫ್ರಿದಿ, ಸುಫಿಯಾನ್ ಮೋಕಿಮ್.

7 / 7
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ