AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup Prize Money: ಭಾರತ ಏಷ್ಯಾಕಪ್ ಗೆದ್ದರೂ ಬಹುಮಾನದ ಹಣ ಪಡೆಯದಿರಲು ಕಾರಣವೇನು?

Asia Cup Prize Money: 2025ರ ಏಷ್ಯಾಕಪ್ ಟಿ20 ಟೂರ್ನಿ ಸೆಪ್ಟೆಂಬರ್ 9ರಿಂದ ಆರಂಭವಾಗಲಿದೆ. ಭಾರತ ತನ್ನ ಅಭಿಯಾನವನ್ನು ಸೆಪ್ಟೆಂಬರ್ 10ರಿಂದ ಆರಂಭಿಸಲಿದೆ. ಭಾರತ-ಪಾಕಿಸ್ತಾನ ಪಂದ್ಯ ಸೆಪ್ಟೆಂಬರ್ 14ರಂದು ನಡೆಯಲಿದೆ. ಈ ಬಾರಿಯ ಚಾಂಪಿಯನ್ ತಂಡಕ್ಕೆ 1 ಕೋಟಿ ರೂಪಾಯಿಗಳಷ್ಟು ಹೆಚ್ಚುವರಿ ಬಹುಮಾನ ಸಿಗಲಿದೆ. ಒಟ್ಟು 8 ತಂಡಗಳು ಭಾಗವಹಿಸುತ್ತಿವೆ.

ಪೃಥ್ವಿಶಂಕರ
|

Updated on: Sep 09, 2025 | 3:31 PM

Share
2025 ರ ಟಿ20 ಏಷ್ಯಾಕಪ್ ಇಂದಿನಿಂದ ಅಂದರೆ ಸೆಪ್ಟೆಂಬರ್ 9 ರಿಂದ ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ನಡುವೆ ಅಬುಧಾಬಿಯಲ್ಲಿ ನಡೆಯಲಿದ್ದು, ಟೀಂ ಇಂಡಿಯಾ ತನ್ನ ಅಭಿಯಾನವನ್ನು ನಾಳೆ ಅಂದರೆ ಸೆಪ್ಟೆಂಬರ್ 10 ರಿಂದ ಆರಂಭಿಸಲಿದೆ. ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ಪಂದ್ಯ ಸೆಪ್ಟೆಂಬರ್ 14 ರ ಭಾನುವಾರ ನಡೆಯಲಿದೆ.

2025 ರ ಟಿ20 ಏಷ್ಯಾಕಪ್ ಇಂದಿನಿಂದ ಅಂದರೆ ಸೆಪ್ಟೆಂಬರ್ 9 ರಿಂದ ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ನಡುವೆ ಅಬುಧಾಬಿಯಲ್ಲಿ ನಡೆಯಲಿದ್ದು, ಟೀಂ ಇಂಡಿಯಾ ತನ್ನ ಅಭಿಯಾನವನ್ನು ನಾಳೆ ಅಂದರೆ ಸೆಪ್ಟೆಂಬರ್ 10 ರಿಂದ ಆರಂಭಿಸಲಿದೆ. ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ಪಂದ್ಯ ಸೆಪ್ಟೆಂಬರ್ 14 ರ ಭಾನುವಾರ ನಡೆಯಲಿದೆ.

1 / 6
ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಭಾಗವಹಿಸುತ್ತಿದ್ದು, ಇವುಗಳನ್ನು ತಲಾ 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-ಎ ನಲ್ಲಿ ಭಾರತ-ಪಾಕಿಸ್ತಾನದೊಂದಿಗೆ ಓಮನ್ ಮತ್ತು ಯುಎಇ ನಂತಹ ತಂಡಗಳಿವೆ. ಗ್ರೂಪ್-ಬಿ ನಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಹಾಂಗ್ ಕಾಂಗ್ ಜೊತೆಗೆ ಶ್ರೀಲಂಕಾ ತಂಡಗಳಿವೆ.

ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಭಾಗವಹಿಸುತ್ತಿದ್ದು, ಇವುಗಳನ್ನು ತಲಾ 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-ಎ ನಲ್ಲಿ ಭಾರತ-ಪಾಕಿಸ್ತಾನದೊಂದಿಗೆ ಓಮನ್ ಮತ್ತು ಯುಎಇ ನಂತಹ ತಂಡಗಳಿವೆ. ಗ್ರೂಪ್-ಬಿ ನಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಹಾಂಗ್ ಕಾಂಗ್ ಜೊತೆಗೆ ಶ್ರೀಲಂಕಾ ತಂಡಗಳಿವೆ.

2 / 6
ಮೂರನೇ ಬಾರಿಗೆ ಟಿ20 ಮಾದರಿಯಲ್ಲಿ ನಡೆಯುತ್ತಿರುವ ಏಷ್ಯಾಕಪ್​ ಆರಂಭಕ್ಕೂ ಮುನ್ನ ಮಹತ್ವದ ಸುದ್ದಿಯೊಂದು ಹೊರಬಿದ್ದಿದ್ದು, ಈ ಬಾರಿ ಚಾಂಪಿಯನ್ ಆಗುವ ತಂಡಕ್ಕೆ 1 ಕೋಟಿ ರೂ. ಅಧಿಕ ಬಹುಮಾನ ಸಿಗಲಿದೆ. ಅಂದರೆ 2025 ರ ಏಷ್ಯಾಕಪ್ ಬಹುಮಾನದ ಮೊತ್ತ ಪೂರ್ಣ 1 ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ.

ಮೂರನೇ ಬಾರಿಗೆ ಟಿ20 ಮಾದರಿಯಲ್ಲಿ ನಡೆಯುತ್ತಿರುವ ಏಷ್ಯಾಕಪ್​ ಆರಂಭಕ್ಕೂ ಮುನ್ನ ಮಹತ್ವದ ಸುದ್ದಿಯೊಂದು ಹೊರಬಿದ್ದಿದ್ದು, ಈ ಬಾರಿ ಚಾಂಪಿಯನ್ ಆಗುವ ತಂಡಕ್ಕೆ 1 ಕೋಟಿ ರೂ. ಅಧಿಕ ಬಹುಮಾನ ಸಿಗಲಿದೆ. ಅಂದರೆ 2025 ರ ಏಷ್ಯಾಕಪ್ ಬಹುಮಾನದ ಮೊತ್ತ ಪೂರ್ಣ 1 ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ.

3 / 6
ಕಳೆದ ಬಾರಿ, ಅಂದರೆ 2022 ರಲ್ಲಿ ನಡೆದಿದ್ದ ಟಿ20 ಏಷ್ಯಾಕಪ್​ನಲ್ಲಿ ಚಾಂಪಿಯನ್ ಆಗಿದ್ದ ಶ್ರೀಲಂಕಾ ತಂಡಕ್ಕೆ ಸುಮಾರು 1.6 ಕೋಟಿ ಬಹುಮಾನದ ಹಣ ಸಿಕ್ಕಿತು. ಹಾಗೆಯೇ ಪಂದ್ಯಾವಳಿಯಲ್ಲಿ ರನ್ನರ್ ಅಪ್ ತಂಡವಾಗಿದ್ದ ಪಾಕಿಸ್ತಾನಕ್ಕೆ 79.66 ಲಕ್ಷ ರೂ. ಬಹುಮಾನ ನೀಡಲಾಗಿತ್ತು. ಉಳಿದಂತೆ ಮೂರನೇ ಮತ್ತು ನಾಲ್ಕನೇ ಸ್ಥಾನ ಪಡೆದ ತಂಡಗಳು ಕ್ರಮವಾಗಿ ಸುಮಾರು 53 ಲಕ್ಷ ಮತ್ತು 39 ಲಕ್ಷ ರೂ. ಹಣ ಪಡೆದಿದ್ದವು.

ಕಳೆದ ಬಾರಿ, ಅಂದರೆ 2022 ರಲ್ಲಿ ನಡೆದಿದ್ದ ಟಿ20 ಏಷ್ಯಾಕಪ್​ನಲ್ಲಿ ಚಾಂಪಿಯನ್ ಆಗಿದ್ದ ಶ್ರೀಲಂಕಾ ತಂಡಕ್ಕೆ ಸುಮಾರು 1.6 ಕೋಟಿ ಬಹುಮಾನದ ಹಣ ಸಿಕ್ಕಿತು. ಹಾಗೆಯೇ ಪಂದ್ಯಾವಳಿಯಲ್ಲಿ ರನ್ನರ್ ಅಪ್ ತಂಡವಾಗಿದ್ದ ಪಾಕಿಸ್ತಾನಕ್ಕೆ 79.66 ಲಕ್ಷ ರೂ. ಬಹುಮಾನ ನೀಡಲಾಗಿತ್ತು. ಉಳಿದಂತೆ ಮೂರನೇ ಮತ್ತು ನಾಲ್ಕನೇ ಸ್ಥಾನ ಪಡೆದ ತಂಡಗಳು ಕ್ರಮವಾಗಿ ಸುಮಾರು 53 ಲಕ್ಷ ಮತ್ತು 39 ಲಕ್ಷ ರೂ. ಹಣ ಪಡೆದಿದ್ದವು.

4 / 6
2022 ರ ಟಿ20 ಏಷ್ಯಾ ಕಪ್‌ಗೆ ಹೋಲಿಸಿದರೆ, ಈ ವರ್ಷದ ವಿಜೇತರಿಗೆ ಸಿಗುವ ಬಹುಮಾನದ ಮೊತ್ತ 2.6 ಕೋಟಿ ರೂ. ಆಗಿದೆ. ಅಂದರೆ ಕಳೆದ ಏಷ್ಯಾಕಪ್‌ನ ಬಹುಮಾನದ ಮೊತ್ತಕ್ಕಿಂತ ಸುಮಾರು ಒಂದು ಕೋಟಿ ಭಾರತೀಯ ರೂಪಾಯಿ ಹೆಚ್ಚಾಗಿದೆ. ಹಾಗೆಯೇ ರನ್ನರ್ ಅಪ್ ತಂಡವು 1.3 ಕೋಟಿ ರೂ. ಪಡೆಯುವ ನಿರೀಕ್ಷೆಯಿದೆ. ಸರಣಿ ಶ್ರೇಷ್ಠ ಆಟಗಾರನಿಗೆ 12.5 ಲಕ್ಷ ರೂ. ಬಹುಮಾನದ ಮೊತ್ತ ಸಿಗಲಿದೆ ಎಂದು ವರದಿಯಾಗಿದೆ.

2022 ರ ಟಿ20 ಏಷ್ಯಾ ಕಪ್‌ಗೆ ಹೋಲಿಸಿದರೆ, ಈ ವರ್ಷದ ವಿಜೇತರಿಗೆ ಸಿಗುವ ಬಹುಮಾನದ ಮೊತ್ತ 2.6 ಕೋಟಿ ರೂ. ಆಗಿದೆ. ಅಂದರೆ ಕಳೆದ ಏಷ್ಯಾಕಪ್‌ನ ಬಹುಮಾನದ ಮೊತ್ತಕ್ಕಿಂತ ಸುಮಾರು ಒಂದು ಕೋಟಿ ಭಾರತೀಯ ರೂಪಾಯಿ ಹೆಚ್ಚಾಗಿದೆ. ಹಾಗೆಯೇ ರನ್ನರ್ ಅಪ್ ತಂಡವು 1.3 ಕೋಟಿ ರೂ. ಪಡೆಯುವ ನಿರೀಕ್ಷೆಯಿದೆ. ಸರಣಿ ಶ್ರೇಷ್ಠ ಆಟಗಾರನಿಗೆ 12.5 ಲಕ್ಷ ರೂ. ಬಹುಮಾನದ ಮೊತ್ತ ಸಿಗಲಿದೆ ಎಂದು ವರದಿಯಾಗಿದೆ.

5 / 6
ಇನ್ನು ಏಷ್ಯಾಕಪ್​ನ ಒಂದು ವಿಶೇಷ ಸಂಗತಿಯೆಂದರೆ, ಟೀಂ ಇಂಡಿಯಾ ಏಷ್ಯಾಕಪ್ ಗೆದ್ದಾಗಲೆಲ್ಲ ಆ ಹಣವನ್ನು ತಾನು ಪಡೆದುಕೊಳ್ಳುವುದಿಲ್ಲ. ಅಂದರೆ ಆ ಹಣವನ್ನು ತಂಡದ ಆಟಗಾರರಿಗೆ ಹಂಚುವ ಬದಲು ಬಿಸಿಸಿಐ, ಏಷ್ಯನ್ ಕ್ರಿಕೆಟ್ ಅನ್ನು ಉತ್ತೇಜಿಸಲು ಈ ಮೊತ್ತವನ್ನು ದೇಣಿಗೆ ನೀಡುತ್ತದೆ.

ಇನ್ನು ಏಷ್ಯಾಕಪ್​ನ ಒಂದು ವಿಶೇಷ ಸಂಗತಿಯೆಂದರೆ, ಟೀಂ ಇಂಡಿಯಾ ಏಷ್ಯಾಕಪ್ ಗೆದ್ದಾಗಲೆಲ್ಲ ಆ ಹಣವನ್ನು ತಾನು ಪಡೆದುಕೊಳ್ಳುವುದಿಲ್ಲ. ಅಂದರೆ ಆ ಹಣವನ್ನು ತಂಡದ ಆಟಗಾರರಿಗೆ ಹಂಚುವ ಬದಲು ಬಿಸಿಸಿಐ, ಏಷ್ಯನ್ ಕ್ರಿಕೆಟ್ ಅನ್ನು ಉತ್ತೇಜಿಸಲು ಈ ಮೊತ್ತವನ್ನು ದೇಣಿಗೆ ನೀಡುತ್ತದೆ.

6 / 6
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು