AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Athiya Shetty- KL Rahul: ಶಸ್ತ್ರಚಿಕಿತ್ಸೆಗಾಗಿ ಗೆಳತಿ ಅಥಿಯಾ ಜೊತೆ ಜರ್ಮನಿಗೆ ಹಾರಿದ ಕೆಎಲ್ ರಾಹುಲ್; ಫೋಟೋ

Athiya Shetty- KL Rahul: ಈಗ ರಾಹುಲ್ ತನ್ನ ಶಸ್ತ್ರಚಿಕಿತ್ಸೆಗಾಗಿ ಜರ್ಮನಿಗೆ ಹೋಗುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅವರ ಗೆಳತಿ ಅಥಿಯಾ ಶೆಟ್ಟಿ ಕೂಡ ರಾಹುಲ್​ಗೆ ಬೆಂಬಲವಾಗಿ ನಿಂತಿದ್ದಾರೆ.

TV9 Web
| Edited By: |

Updated on:Jun 26, 2022 | 5:42 PM

Share
ಟೀಂ ಇಂಡಿಯಾದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ಕೆಲ ಕಾಲ ಕ್ರಿಕೆಟ್ ಮೈದಾನದಿಂದ ದೂರ ಉಳಿದಿದ್ದಾರೆ. ಐಪಿಎಲ್‌ನಲ್ಲಿ, ಅವರ ನಾಯಕತ್ವದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಪ್ಲೇಆಫ್ ತಲುಪಿತು. ಆದರೆ ತಂಡದ ಪ್ರಯಾಣ ಅಲ್ಲಿಗೆ ಕೊನೆಗೊಂಡಿತು. ಇದಾದ ಬಳಿಕ ರಾಹುಲ್ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಬೇಕಿತ್ತು ಆದರೆ ಗಾಯದ ಕಾರಣ ಅಲ್ಲಿಗೆ ಹೋಗಲು ಸಾಧ್ಯವಾಗಲಿಲ್ಲ. ಈಗ ರಾಹುಲ್ ತನ್ನ ಶಸ್ತ್ರಚಿಕಿತ್ಸೆಗಾಗಿ ಜರ್ಮನಿಗೆ ಹೋಗುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅವರ ಗೆಳತಿ ಅಥಿಯಾ ಶೆಟ್ಟಿ ಕೂಡ ರಾಹುಲ್​ಗೆ ಬೆಂಬಲವಾಗಿ ನಿಂತಿದ್ದಾರೆ. ಹೀಗಾಗಿ ಭಾನುವಾರ ಇಬ್ಬರೂ ಒಟ್ಟಿಗೆ ಜರ್ಮನಿಗೆ ತೆರಳಿದ್ದಾರೆ.

ಟೀಂ ಇಂಡಿಯಾದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ಕೆಲ ಕಾಲ ಕ್ರಿಕೆಟ್ ಮೈದಾನದಿಂದ ದೂರ ಉಳಿದಿದ್ದಾರೆ. ಐಪಿಎಲ್‌ನಲ್ಲಿ, ಅವರ ನಾಯಕತ್ವದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಪ್ಲೇಆಫ್ ತಲುಪಿತು. ಆದರೆ ತಂಡದ ಪ್ರಯಾಣ ಅಲ್ಲಿಗೆ ಕೊನೆಗೊಂಡಿತು. ಇದಾದ ಬಳಿಕ ರಾಹುಲ್ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಬೇಕಿತ್ತು ಆದರೆ ಗಾಯದ ಕಾರಣ ಅಲ್ಲಿಗೆ ಹೋಗಲು ಸಾಧ್ಯವಾಗಲಿಲ್ಲ. ಈಗ ರಾಹುಲ್ ತನ್ನ ಶಸ್ತ್ರಚಿಕಿತ್ಸೆಗಾಗಿ ಜರ್ಮನಿಗೆ ಹೋಗುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅವರ ಗೆಳತಿ ಅಥಿಯಾ ಶೆಟ್ಟಿ ಕೂಡ ರಾಹುಲ್​ಗೆ ಬೆಂಬಲವಾಗಿ ನಿಂತಿದ್ದಾರೆ. ಹೀಗಾಗಿ ಭಾನುವಾರ ಇಬ್ಬರೂ ಒಟ್ಟಿಗೆ ಜರ್ಮನಿಗೆ ತೆರಳಿದ್ದಾರೆ.

1 / 5
ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ ನಾಯಕರಾಗಿ ಕೆಎಲ್ ರಾಹುಲ್ ಆಯ್ಕೆಯಾಗಿದ್ದರು. ಆದರೆ, ಸರಣಿ ಆರಂಭಕ್ಕೂ ಮುನ್ನ ಈ ಆರಂಭಿಕ ಆಟಗಾರ ಗಾಯಗೊಂಡು ಪ್ರವಾಸಕ್ಕೆ ತೆರಳಲು ಸಾಧ್ಯವಾಗಲಿಲ್ಲ. ಜೊತೆಗೆ ರಾಹುಲ್ ಇಂಗ್ಲೆಂಡ್ ಪ್ರವಾಸದಿಂದಲೂ ದೂರ ಉಳಿದರು. ನಂತರ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುತ್ತಾರೆ ಎಂಬ ಸುದ್ದಿ ಇತ್ತು.

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ ನಾಯಕರಾಗಿ ಕೆಎಲ್ ರಾಹುಲ್ ಆಯ್ಕೆಯಾಗಿದ್ದರು. ಆದರೆ, ಸರಣಿ ಆರಂಭಕ್ಕೂ ಮುನ್ನ ಈ ಆರಂಭಿಕ ಆಟಗಾರ ಗಾಯಗೊಂಡು ಪ್ರವಾಸಕ್ಕೆ ತೆರಳಲು ಸಾಧ್ಯವಾಗಲಿಲ್ಲ. ಜೊತೆಗೆ ರಾಹುಲ್ ಇಂಗ್ಲೆಂಡ್ ಪ್ರವಾಸದಿಂದಲೂ ದೂರ ಉಳಿದರು. ನಂತರ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುತ್ತಾರೆ ಎಂಬ ಸುದ್ದಿ ಇತ್ತು.

2 / 5
Athiya Shetty- KL Rahul: ಶಸ್ತ್ರಚಿಕಿತ್ಸೆಗಾಗಿ ಗೆಳತಿ ಅಥಿಯಾ ಜೊತೆ ಜರ್ಮನಿಗೆ ಹಾರಿದ ಕೆಎಲ್ ರಾಹುಲ್; ಫೋಟೋ

ಈಗ ರಾಹುಲ್ ಶಸ್ತ್ರಚಿಕಿತ್ಸೆಗೆಂದು ಭಾನುವಾರ ಮುಂಬೈ ವಿಮಾನ ನಿಲ್ದಾಣದಿಂದ ಜರ್ಮನಿಗೆ ತೆರಳಿದರು. ಈ ಸಮಯದಲ್ಲಿ, ಅವರ ಗೆಳತಿ ಮತ್ತು ನಟಿ ಅಥಿಯಾ ಶೆಟ್ಟಿ ಅವರೊಂದಿಗೆ ಕಾಣಿಸಿಕೊಂಡರು. ರಾಹುಲ್ ತಮ್ಮ ಶಸ್ತ್ರಚಿಕಿತ್ಸೆಗಾಗಿ ಜರ್ಮನಿಯಲ್ಲಿ ಒಂದು ತಿಂಗಳ ಕಾಲ ಇರಲಿದ್ದು, ಈ ಸಮಯದಲ್ಲಿ ಅಥಿಯಾ ಅವರೊಂದಿಗೆ ಇರಲಿದ್ದಾರೆ.

3 / 5
Athiya Shetty- KL Rahul: ಶಸ್ತ್ರಚಿಕಿತ್ಸೆಗಾಗಿ ಗೆಳತಿ ಅಥಿಯಾ ಜೊತೆ ಜರ್ಮನಿಗೆ ಹಾರಿದ ಕೆಎಲ್ ರಾಹುಲ್; ಫೋಟೋ

ಇಬ್ಬರೂ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಟೈಲಿಶ್ ಉಡುಗೆಯಲ್ಲಿ ಕಾಣಿಸಿಕೊಂಡರು. ನೀಲಿ ಡೆನಿಮ್ ಜೀನ್ಸ್‌ನ ಮೇಲೆ ಬಿಳಿ ಟಾಪ್‌ನೊಂದಿಗೆ ನೇರಳೆ ಸ್ವೆಟರ್‌ನಲ್ಲಿ ಅಥಿಯಾ ಕ್ಯಾಶುಯಲ್ ಲುಕ್‌ನಲ್ಲಿ ಕಾಣಿಸಿಕೊಂಡರು. ಅದೇ ಸಮಯದಲ್ಲಿ, ಕೆಎಲ್ ರಾಹುಲ್ ಕಪ್ಪು ಗ್ರಾಫಿಕ್ ಟೀ ಶರ್ಟ್ ಮತ್ತು ಬೀಜ್ ಬಣ್ಣದ ಕಾರ್ಗೋ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡರು. ಈ ಸಮಯದಲ್ಲಿ, ಇಬ್ಬರೂ ಅಭಿಮಾನಿಗಳ ಮೊಬೈಲ್ ಕ್ಯಾಮರಕ್ಕೆ ಪೋಸ್ ನೀಡಿದರು.

4 / 5
Athiya Shetty- KL Rahul: ಶಸ್ತ್ರಚಿಕಿತ್ಸೆಗಾಗಿ ಗೆಳತಿ ಅಥಿಯಾ ಜೊತೆ ಜರ್ಮನಿಗೆ ಹಾರಿದ ಕೆಎಲ್ ರಾಹುಲ್; ಫೋಟೋ

ಬಹಳ ದಿನಗಳಿಂದ ಈ ಜೋಡಿ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ವರದಿಗಳು ಕೇಳಿಬರುತ್ತಿವೆ. ಈ ಜೋಡಿ ಡಿಸೆಂಬರ್‌ನಲ್ಲಿ ಮದುವೆಯಾಗಲಿದ್ದಾರೆ ಎಂದು ಕೆಲವು ಮಾಧ್ಯಮ ವರದಿಗಳು ಹೇಳಿವೆ. ಈ ಮದುವೆಯ ಸುದ್ದಿಯ ಬಗ್ಗೆ ಇಬ್ಬರೂ ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ಅಥಿಯಾ ಅವರ ತಂದೆ ಮತ್ತು ನಟ ಸುನೀಲ್ ಶೆಟ್ಟಿ 'ಇ-ಟೈಮ್ಸ್' ಜೊತೆಗಿನ ಸಂವಾದದಲ್ಲಿ, 'ಅವಳು ನನ್ನ ಮಗಳು, ಅವಳು ಯಾವಾಗಲಾದರೂ ಮದುವೆಯಾಗಬಹುದು. ನನ್ನ ಮಗನಿಗೂ ಮದುವೆ ಆಗಬೇಕು, ಎಷ್ಟು ಬೇಗ ಅಷ್ಟು ಬೇಗ ಆಗುತ್ತೋ ಅಷ್ಟು ಒಳ್ಳೆಯದು. ಅವನು ತನ್ನ ಆಯ್ಕೆಯ ಹುಡುಗಿಯನ್ನು ಮದುವೆಯಾಗುತ್ತಾನೆ. ಕೆಎಲ್ ರಾಹುಲ್ ಬಗ್ಗೆ ಹೇಳುವುದಾದರೆ, ನಾನು ಅವರನ್ನು ಪ್ರೀತಿಸುತ್ತೇನೆ. ಈಗ ಕಾಲ ಬದಲಾಗಿರುವುದರಿಂದ ಅವರು ಏನು ಮಾಡಬೇಕೆಂದು ಅವರೇ ನಿರ್ಧರಿಸುತ್ತಾರೆ ಎಂದು ಹೇಳಿದ್ದರು.

5 / 5

Published On - 5:42 pm, Sun, 26 June 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು