ಟೀಂ ಇಂಡಿಯಾದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ಕೆಲ ಕಾಲ ಕ್ರಿಕೆಟ್ ಮೈದಾನದಿಂದ ದೂರ ಉಳಿದಿದ್ದಾರೆ. ಐಪಿಎಲ್ನಲ್ಲಿ, ಅವರ ನಾಯಕತ್ವದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಪ್ಲೇಆಫ್ ತಲುಪಿತು. ಆದರೆ ತಂಡದ ಪ್ರಯಾಣ ಅಲ್ಲಿಗೆ ಕೊನೆಗೊಂಡಿತು. ಇದಾದ ಬಳಿಕ ರಾಹುಲ್ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಬೇಕಿತ್ತು ಆದರೆ ಗಾಯದ ಕಾರಣ ಅಲ್ಲಿಗೆ ಹೋಗಲು ಸಾಧ್ಯವಾಗಲಿಲ್ಲ. ಈಗ ರಾಹುಲ್ ತನ್ನ ಶಸ್ತ್ರಚಿಕಿತ್ಸೆಗಾಗಿ ಜರ್ಮನಿಗೆ ಹೋಗುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅವರ ಗೆಳತಿ ಅಥಿಯಾ ಶೆಟ್ಟಿ ಕೂಡ ರಾಹುಲ್ಗೆ ಬೆಂಬಲವಾಗಿ ನಿಂತಿದ್ದಾರೆ. ಹೀಗಾಗಿ ಭಾನುವಾರ ಇಬ್ಬರೂ ಒಟ್ಟಿಗೆ ಜರ್ಮನಿಗೆ ತೆರಳಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ ನಾಯಕರಾಗಿ ಕೆಎಲ್ ರಾಹುಲ್ ಆಯ್ಕೆಯಾಗಿದ್ದರು. ಆದರೆ, ಸರಣಿ ಆರಂಭಕ್ಕೂ ಮುನ್ನ ಈ ಆರಂಭಿಕ ಆಟಗಾರ ಗಾಯಗೊಂಡು ಪ್ರವಾಸಕ್ಕೆ ತೆರಳಲು ಸಾಧ್ಯವಾಗಲಿಲ್ಲ. ಜೊತೆಗೆ ರಾಹುಲ್ ಇಂಗ್ಲೆಂಡ್ ಪ್ರವಾಸದಿಂದಲೂ ದೂರ ಉಳಿದರು. ನಂತರ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುತ್ತಾರೆ ಎಂಬ ಸುದ್ದಿ ಇತ್ತು.
Published On - 5:42 pm, Sun, 26 June 22