AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರನ್​ಗೆ 5 ವಿಕೆಟ್: ಭರ್ಜರಿ ದಾಖಲೆ ಬರೆದ ಕಾಶ್ಮೀರಿ ವೇಗಿ

Auqib Nabi: ಜಮ್ಮು ಕಾಶ್ಮೀರದ ವೇಗಿ ಆಖಿಬ್ ನಬಿ ಕಳೆದ ಬಾರಿಯ ದುಲೀಪ್ ಟ್ರೋಫಿ ಟೂರ್ನಿಯಲ್ಲಿ 4 ಎಸೆತಗಳಲ್ಲಿ 4 ವಿಕೆಟ್ ಕಬಳಿಸಿ ಭರ್ಜರಿ ದಾಖಲೆ ನಿರ್ಮಿಸಿದ್ದರು. ದುಲೀಪ್ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಉತ್ತರ ವಲಯ ಪರ ಕಣಕ್ಕಿಳಿದಿದ್ದ ಆಖಿಬ್ ಪೂರ್ವ ವಲಯ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದರು. ಇದೀಗ ರಣಜಿ ಪಂದ್ಯದಲ್ಲಿ 5 ರನ್ ಗೆ ಐದು ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 27, 2025 | 8:23 AM

Share
ರಣಜಿ ಟೂರ್ನಿಯಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಜಮ್ಮು-ಕಾಶ್ಮೀರ್ ವೇಗಿ ಆಖಿಬ್ ನಬಿ (Auqib nabi) ಸಂಚಲನ ಸೃಷ್ಟಿಸಿದ್ದಾರೆ. ಅದು ಸಹ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಎಂಬುದು ಮತ್ತೊಂದು ವಿಶೇಷ. ಅಂದರೆ ಹಾಫ್ ಸೆಂಚುರಿ ಸಿಡಿಸಿದ ಬೆನ್ನಲ್ಲೇ ಆಖಿಬ್ ಐದು ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

ರಣಜಿ ಟೂರ್ನಿಯಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಜಮ್ಮು-ಕಾಶ್ಮೀರ್ ವೇಗಿ ಆಖಿಬ್ ನಬಿ (Auqib nabi) ಸಂಚಲನ ಸೃಷ್ಟಿಸಿದ್ದಾರೆ. ಅದು ಸಹ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಎಂಬುದು ಮತ್ತೊಂದು ವಿಶೇಷ. ಅಂದರೆ ಹಾಫ್ ಸೆಂಚುರಿ ಸಿಡಿಸಿದ ಬೆನ್ನಲ್ಲೇ ಆಖಿಬ್ ಐದು ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

1 / 5
ಶ್ರೀನಗರದ ಶೇರ್ ಐ ಕಾಶ್ಮೀರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಜಮ್ಮು ಕಾಶ್ಮೀರ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ತಂಡವು ಕೇವಲ 152 ರನ್ ಗಳಿಗೆ ಆಲೌಟ್ ಆಗಿತ್ತು. ಜಮ್ಮು ಕಾಶ್ಮೀರ ಪರ ಆಖಿಬ್ ನಬಿ 29 ರನ್ ನೀಡಿ 3 ವಿಕೆಟ್ ಪಡೆದರೆ, ಸುನಿಲ್ ಕುಮಾರ್ 32 ರನ್ ಗೆ 4 ವಿಕೆಟ್ ಕಬಳಿಸಿದರು.

ಶ್ರೀನಗರದ ಶೇರ್ ಐ ಕಾಶ್ಮೀರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಜಮ್ಮು ಕಾಶ್ಮೀರ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ತಂಡವು ಕೇವಲ 152 ರನ್ ಗಳಿಗೆ ಆಲೌಟ್ ಆಗಿತ್ತು. ಜಮ್ಮು ಕಾಶ್ಮೀರ ಪರ ಆಖಿಬ್ ನಬಿ 29 ರನ್ ನೀಡಿ 3 ವಿಕೆಟ್ ಪಡೆದರೆ, ಸುನಿಲ್ ಕುಮಾರ್ 32 ರನ್ ಗೆ 4 ವಿಕೆಟ್ ಕಬಳಿಸಿದರು.

2 / 5
ಆ ಬಳಿಕ ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು ಕಾಶ್ಮೀರ ಪರ ಅಬ್ದುಲ್‌ ಸಮದ್ 76 ರನ್ ಬಾರಿಸಿದರು. ಇನ್ನು 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಖಿಬ್ ನಬಿ 65 ಎಸೆತಗಳಲ್ಲಿ 55 ರನ್ ಚಚ್ಚಿದರು. ಈ ಮೂಲಕ ಜಮ್ಮು ಕಾಶ್ಮೀರ ತಂಡವು ಮೊದಲ ಇನಿಂಗ್ಸ್ ನಲ್ಲಿ 282 ರನ್ ಗಳಿಸಿ ಆಲೌಟ್ ಆಯಿತು.

ಆ ಬಳಿಕ ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು ಕಾಶ್ಮೀರ ಪರ ಅಬ್ದುಲ್‌ ಸಮದ್ 76 ರನ್ ಬಾರಿಸಿದರು. ಇನ್ನು 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಖಿಬ್ ನಬಿ 65 ಎಸೆತಗಳಲ್ಲಿ 55 ರನ್ ಚಚ್ಚಿದರು. ಈ ಮೂಲಕ ಜಮ್ಮು ಕಾಶ್ಮೀರ ತಂಡವು ಮೊದಲ ಇನಿಂಗ್ಸ್ ನಲ್ಲಿ 282 ರನ್ ಗಳಿಸಿ ಆಲೌಟ್ ಆಯಿತು.

3 / 5
ಇದರ ಬೆನ್ನಲ್ಲೇ ದ್ವಿತೀಯ ಆರಂಭಿಸಿದ ರಾಜಸ್ಥಾನ್ ತಂಡಕ್ಕೆ ಆಖಿಬ್ ನಬಿ ಆಘಾತದ ಮೇಲೆ ಆಘಾತ ನೀಡಿದರು. ದ್ವಿತೀಯ ದಿನದಾಟದ ಅಂತ್ಯದಲ್ಲಿ 6 ಓವರ್‌ಗಳನ್ನು ಎಸೆದ ಆಖಿಬ್ ಕೇವಲ 5 ವಿಕೆಟ್ ಕಬಳಿಸಿದರು. ವಿಶೇಷ ಎಂದರೆ ಆಖಿಬ್ ನಬಿ ಕಬಳಿಸಿರುವುದು ರಾಜಸ್ಥಾನ್ ತಂಡ ಟಾಪ್-5 ಬ್ಯಾಟರ್ ಗಳ ವಿಕೆಟ್ ಗಳನ್ನು. ಅಂದರೆ ಸತತವಾಗಿ ಐವರನ್ನು ಔಟ್ ಮಾಡಿದ್ದಾರೆ.

ಇದರ ಬೆನ್ನಲ್ಲೇ ದ್ವಿತೀಯ ಆರಂಭಿಸಿದ ರಾಜಸ್ಥಾನ್ ತಂಡಕ್ಕೆ ಆಖಿಬ್ ನಬಿ ಆಘಾತದ ಮೇಲೆ ಆಘಾತ ನೀಡಿದರು. ದ್ವಿತೀಯ ದಿನದಾಟದ ಅಂತ್ಯದಲ್ಲಿ 6 ಓವರ್‌ಗಳನ್ನು ಎಸೆದ ಆಖಿಬ್ ಕೇವಲ 5 ವಿಕೆಟ್ ಕಬಳಿಸಿದರು. ವಿಶೇಷ ಎಂದರೆ ಆಖಿಬ್ ನಬಿ ಕಬಳಿಸಿರುವುದು ರಾಜಸ್ಥಾನ್ ತಂಡ ಟಾಪ್-5 ಬ್ಯಾಟರ್ ಗಳ ವಿಕೆಟ್ ಗಳನ್ನು. ಅಂದರೆ ಸತತವಾಗಿ ಐವರನ್ನು ಔಟ್ ಮಾಡಿದ್ದಾರೆ.

4 / 5
ಈ ಮೂಲಕ ರಣಜಿ ಕ್ರಿಕೆಟ್ ಇತಿಹಾಸದಲ್ಲೇ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಅತೀ ಕಡಿಮೆ ಅವಧಿಯಲ್ಲಿ 5 ವಿಕೆಟ್ ಕಬಳಿಸಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಅಂದಹಾಗೆ ಆಖಿಬ್ ನಬಿ ಈ ವಿಶೇಷ ದಾಖಲೆ ಬರೆಯುವ ಮುನ್ನ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದರು. ಅದು ಸಹ ಸತತ 4 ಎಸೆತಗಳಲ್ಲಿ 4 ವಿಕೆಟ್ ಕಬಳಿಸುವ ಮೂಲಕ. ಇದೀಗ ರಣಜಿ ಪಂದ್ಯದಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದಾರೆ.

ಈ ಮೂಲಕ ರಣಜಿ ಕ್ರಿಕೆಟ್ ಇತಿಹಾಸದಲ್ಲೇ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಅತೀ ಕಡಿಮೆ ಅವಧಿಯಲ್ಲಿ 5 ವಿಕೆಟ್ ಕಬಳಿಸಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಅಂದಹಾಗೆ ಆಖಿಬ್ ನಬಿ ಈ ವಿಶೇಷ ದಾಖಲೆ ಬರೆಯುವ ಮುನ್ನ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದರು. ಅದು ಸಹ ಸತತ 4 ಎಸೆತಗಳಲ್ಲಿ 4 ವಿಕೆಟ್ ಕಬಳಿಸುವ ಮೂಲಕ. ಇದೀಗ ರಣಜಿ ಪಂದ್ಯದಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದಾರೆ.

5 / 5
Follow Us
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ