AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರನ್​ಗೆ 5 ವಿಕೆಟ್: ಭರ್ಜರಿ ದಾಖಲೆ ಬರೆದ ಕಾಶ್ಮೀರಿ ವೇಗಿ

Auqib Nabi: ಜಮ್ಮು ಕಾಶ್ಮೀರದ ವೇಗಿ ಆಖಿಬ್ ನಬಿ ಕಳೆದ ಬಾರಿಯ ದುಲೀಪ್ ಟ್ರೋಫಿ ಟೂರ್ನಿಯಲ್ಲಿ 4 ಎಸೆತಗಳಲ್ಲಿ 4 ವಿಕೆಟ್ ಕಬಳಿಸಿ ಭರ್ಜರಿ ದಾಖಲೆ ನಿರ್ಮಿಸಿದ್ದರು. ದುಲೀಪ್ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಉತ್ತರ ವಲಯ ಪರ ಕಣಕ್ಕಿಳಿದಿದ್ದ ಆಖಿಬ್ ಪೂರ್ವ ವಲಯ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದರು. ಇದೀಗ ರಣಜಿ ಪಂದ್ಯದಲ್ಲಿ 5 ರನ್ ಗೆ ಐದು ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 27, 2025 | 8:23 AM

Share
ರಣಜಿ ಟೂರ್ನಿಯಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಜಮ್ಮು-ಕಾಶ್ಮೀರ್ ವೇಗಿ ಆಖಿಬ್ ನಬಿ (Auqib nabi) ಸಂಚಲನ ಸೃಷ್ಟಿಸಿದ್ದಾರೆ. ಅದು ಸಹ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಎಂಬುದು ಮತ್ತೊಂದು ವಿಶೇಷ. ಅಂದರೆ ಹಾಫ್ ಸೆಂಚುರಿ ಸಿಡಿಸಿದ ಬೆನ್ನಲ್ಲೇ ಆಖಿಬ್ ಐದು ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

ರಣಜಿ ಟೂರ್ನಿಯಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಜಮ್ಮು-ಕಾಶ್ಮೀರ್ ವೇಗಿ ಆಖಿಬ್ ನಬಿ (Auqib nabi) ಸಂಚಲನ ಸೃಷ್ಟಿಸಿದ್ದಾರೆ. ಅದು ಸಹ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಎಂಬುದು ಮತ್ತೊಂದು ವಿಶೇಷ. ಅಂದರೆ ಹಾಫ್ ಸೆಂಚುರಿ ಸಿಡಿಸಿದ ಬೆನ್ನಲ್ಲೇ ಆಖಿಬ್ ಐದು ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

1 / 5
ಶ್ರೀನಗರದ ಶೇರ್ ಐ ಕಾಶ್ಮೀರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಜಮ್ಮು ಕಾಶ್ಮೀರ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ತಂಡವು ಕೇವಲ 152 ರನ್ ಗಳಿಗೆ ಆಲೌಟ್ ಆಗಿತ್ತು. ಜಮ್ಮು ಕಾಶ್ಮೀರ ಪರ ಆಖಿಬ್ ನಬಿ 29 ರನ್ ನೀಡಿ 3 ವಿಕೆಟ್ ಪಡೆದರೆ, ಸುನಿಲ್ ಕುಮಾರ್ 32 ರನ್ ಗೆ 4 ವಿಕೆಟ್ ಕಬಳಿಸಿದರು.

ಶ್ರೀನಗರದ ಶೇರ್ ಐ ಕಾಶ್ಮೀರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಜಮ್ಮು ಕಾಶ್ಮೀರ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ತಂಡವು ಕೇವಲ 152 ರನ್ ಗಳಿಗೆ ಆಲೌಟ್ ಆಗಿತ್ತು. ಜಮ್ಮು ಕಾಶ್ಮೀರ ಪರ ಆಖಿಬ್ ನಬಿ 29 ರನ್ ನೀಡಿ 3 ವಿಕೆಟ್ ಪಡೆದರೆ, ಸುನಿಲ್ ಕುಮಾರ್ 32 ರನ್ ಗೆ 4 ವಿಕೆಟ್ ಕಬಳಿಸಿದರು.

2 / 5
ಆ ಬಳಿಕ ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು ಕಾಶ್ಮೀರ ಪರ ಅಬ್ದುಲ್‌ ಸಮದ್ 76 ರನ್ ಬಾರಿಸಿದರು. ಇನ್ನು 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಖಿಬ್ ನಬಿ 65 ಎಸೆತಗಳಲ್ಲಿ 55 ರನ್ ಚಚ್ಚಿದರು. ಈ ಮೂಲಕ ಜಮ್ಮು ಕಾಶ್ಮೀರ ತಂಡವು ಮೊದಲ ಇನಿಂಗ್ಸ್ ನಲ್ಲಿ 282 ರನ್ ಗಳಿಸಿ ಆಲೌಟ್ ಆಯಿತು.

ಆ ಬಳಿಕ ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು ಕಾಶ್ಮೀರ ಪರ ಅಬ್ದುಲ್‌ ಸಮದ್ 76 ರನ್ ಬಾರಿಸಿದರು. ಇನ್ನು 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಖಿಬ್ ನಬಿ 65 ಎಸೆತಗಳಲ್ಲಿ 55 ರನ್ ಚಚ್ಚಿದರು. ಈ ಮೂಲಕ ಜಮ್ಮು ಕಾಶ್ಮೀರ ತಂಡವು ಮೊದಲ ಇನಿಂಗ್ಸ್ ನಲ್ಲಿ 282 ರನ್ ಗಳಿಸಿ ಆಲೌಟ್ ಆಯಿತು.

3 / 5
ಇದರ ಬೆನ್ನಲ್ಲೇ ದ್ವಿತೀಯ ಆರಂಭಿಸಿದ ರಾಜಸ್ಥಾನ್ ತಂಡಕ್ಕೆ ಆಖಿಬ್ ನಬಿ ಆಘಾತದ ಮೇಲೆ ಆಘಾತ ನೀಡಿದರು. ದ್ವಿತೀಯ ದಿನದಾಟದ ಅಂತ್ಯದಲ್ಲಿ 6 ಓವರ್‌ಗಳನ್ನು ಎಸೆದ ಆಖಿಬ್ ಕೇವಲ 5 ವಿಕೆಟ್ ಕಬಳಿಸಿದರು. ವಿಶೇಷ ಎಂದರೆ ಆಖಿಬ್ ನಬಿ ಕಬಳಿಸಿರುವುದು ರಾಜಸ್ಥಾನ್ ತಂಡ ಟಾಪ್-5 ಬ್ಯಾಟರ್ ಗಳ ವಿಕೆಟ್ ಗಳನ್ನು. ಅಂದರೆ ಸತತವಾಗಿ ಐವರನ್ನು ಔಟ್ ಮಾಡಿದ್ದಾರೆ.

ಇದರ ಬೆನ್ನಲ್ಲೇ ದ್ವಿತೀಯ ಆರಂಭಿಸಿದ ರಾಜಸ್ಥಾನ್ ತಂಡಕ್ಕೆ ಆಖಿಬ್ ನಬಿ ಆಘಾತದ ಮೇಲೆ ಆಘಾತ ನೀಡಿದರು. ದ್ವಿತೀಯ ದಿನದಾಟದ ಅಂತ್ಯದಲ್ಲಿ 6 ಓವರ್‌ಗಳನ್ನು ಎಸೆದ ಆಖಿಬ್ ಕೇವಲ 5 ವಿಕೆಟ್ ಕಬಳಿಸಿದರು. ವಿಶೇಷ ಎಂದರೆ ಆಖಿಬ್ ನಬಿ ಕಬಳಿಸಿರುವುದು ರಾಜಸ್ಥಾನ್ ತಂಡ ಟಾಪ್-5 ಬ್ಯಾಟರ್ ಗಳ ವಿಕೆಟ್ ಗಳನ್ನು. ಅಂದರೆ ಸತತವಾಗಿ ಐವರನ್ನು ಔಟ್ ಮಾಡಿದ್ದಾರೆ.

4 / 5
ಈ ಮೂಲಕ ರಣಜಿ ಕ್ರಿಕೆಟ್ ಇತಿಹಾಸದಲ್ಲೇ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಅತೀ ಕಡಿಮೆ ಅವಧಿಯಲ್ಲಿ 5 ವಿಕೆಟ್ ಕಬಳಿಸಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಅಂದಹಾಗೆ ಆಖಿಬ್ ನಬಿ ಈ ವಿಶೇಷ ದಾಖಲೆ ಬರೆಯುವ ಮುನ್ನ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದರು. ಅದು ಸಹ ಸತತ 4 ಎಸೆತಗಳಲ್ಲಿ 4 ವಿಕೆಟ್ ಕಬಳಿಸುವ ಮೂಲಕ. ಇದೀಗ ರಣಜಿ ಪಂದ್ಯದಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದಾರೆ.

ಈ ಮೂಲಕ ರಣಜಿ ಕ್ರಿಕೆಟ್ ಇತಿಹಾಸದಲ್ಲೇ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಅತೀ ಕಡಿಮೆ ಅವಧಿಯಲ್ಲಿ 5 ವಿಕೆಟ್ ಕಬಳಿಸಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಅಂದಹಾಗೆ ಆಖಿಬ್ ನಬಿ ಈ ವಿಶೇಷ ದಾಖಲೆ ಬರೆಯುವ ಮುನ್ನ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದರು. ಅದು ಸಹ ಸತತ 4 ಎಸೆತಗಳಲ್ಲಿ 4 ವಿಕೆಟ್ ಕಬಳಿಸುವ ಮೂಲಕ. ಇದೀಗ ರಣಜಿ ಪಂದ್ಯದಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ