AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರನ್​ಗೆ 5 ವಿಕೆಟ್: ಭರ್ಜರಿ ದಾಖಲೆ ಬರೆದ ಕಾಶ್ಮೀರಿ ವೇಗಿ

Auqib Nabi: ಜಮ್ಮು ಕಾಶ್ಮೀರದ ವೇಗಿ ಆಖಿಬ್ ನಬಿ ಕಳೆದ ಬಾರಿಯ ದುಲೀಪ್ ಟ್ರೋಫಿ ಟೂರ್ನಿಯಲ್ಲಿ 4 ಎಸೆತಗಳಲ್ಲಿ 4 ವಿಕೆಟ್ ಕಬಳಿಸಿ ಭರ್ಜರಿ ದಾಖಲೆ ನಿರ್ಮಿಸಿದ್ದರು. ದುಲೀಪ್ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಉತ್ತರ ವಲಯ ಪರ ಕಣಕ್ಕಿಳಿದಿದ್ದ ಆಖಿಬ್ ಪೂರ್ವ ವಲಯ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದರು. ಇದೀಗ ರಣಜಿ ಪಂದ್ಯದಲ್ಲಿ 5 ರನ್ ಗೆ ಐದು ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 27, 2025 | 8:23 AM

Share
ರಣಜಿ ಟೂರ್ನಿಯಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಜಮ್ಮು-ಕಾಶ್ಮೀರ್ ವೇಗಿ ಆಖಿಬ್ ನಬಿ (Auqib nabi) ಸಂಚಲನ ಸೃಷ್ಟಿಸಿದ್ದಾರೆ. ಅದು ಸಹ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಎಂಬುದು ಮತ್ತೊಂದು ವಿಶೇಷ. ಅಂದರೆ ಹಾಫ್ ಸೆಂಚುರಿ ಸಿಡಿಸಿದ ಬೆನ್ನಲ್ಲೇ ಆಖಿಬ್ ಐದು ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

ರಣಜಿ ಟೂರ್ನಿಯಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಜಮ್ಮು-ಕಾಶ್ಮೀರ್ ವೇಗಿ ಆಖಿಬ್ ನಬಿ (Auqib nabi) ಸಂಚಲನ ಸೃಷ್ಟಿಸಿದ್ದಾರೆ. ಅದು ಸಹ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಎಂಬುದು ಮತ್ತೊಂದು ವಿಶೇಷ. ಅಂದರೆ ಹಾಫ್ ಸೆಂಚುರಿ ಸಿಡಿಸಿದ ಬೆನ್ನಲ್ಲೇ ಆಖಿಬ್ ಐದು ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

1 / 5
ಶ್ರೀನಗರದ ಶೇರ್ ಐ ಕಾಶ್ಮೀರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಜಮ್ಮು ಕಾಶ್ಮೀರ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ತಂಡವು ಕೇವಲ 152 ರನ್ ಗಳಿಗೆ ಆಲೌಟ್ ಆಗಿತ್ತು. ಜಮ್ಮು ಕಾಶ್ಮೀರ ಪರ ಆಖಿಬ್ ನಬಿ 29 ರನ್ ನೀಡಿ 3 ವಿಕೆಟ್ ಪಡೆದರೆ, ಸುನಿಲ್ ಕುಮಾರ್ 32 ರನ್ ಗೆ 4 ವಿಕೆಟ್ ಕಬಳಿಸಿದರು.

ಶ್ರೀನಗರದ ಶೇರ್ ಐ ಕಾಶ್ಮೀರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಜಮ್ಮು ಕಾಶ್ಮೀರ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ತಂಡವು ಕೇವಲ 152 ರನ್ ಗಳಿಗೆ ಆಲೌಟ್ ಆಗಿತ್ತು. ಜಮ್ಮು ಕಾಶ್ಮೀರ ಪರ ಆಖಿಬ್ ನಬಿ 29 ರನ್ ನೀಡಿ 3 ವಿಕೆಟ್ ಪಡೆದರೆ, ಸುನಿಲ್ ಕುಮಾರ್ 32 ರನ್ ಗೆ 4 ವಿಕೆಟ್ ಕಬಳಿಸಿದರು.

2 / 5
ಆ ಬಳಿಕ ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು ಕಾಶ್ಮೀರ ಪರ ಅಬ್ದುಲ್‌ ಸಮದ್ 76 ರನ್ ಬಾರಿಸಿದರು. ಇನ್ನು 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಖಿಬ್ ನಬಿ 65 ಎಸೆತಗಳಲ್ಲಿ 55 ರನ್ ಚಚ್ಚಿದರು. ಈ ಮೂಲಕ ಜಮ್ಮು ಕಾಶ್ಮೀರ ತಂಡವು ಮೊದಲ ಇನಿಂಗ್ಸ್ ನಲ್ಲಿ 282 ರನ್ ಗಳಿಸಿ ಆಲೌಟ್ ಆಯಿತು.

ಆ ಬಳಿಕ ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು ಕಾಶ್ಮೀರ ಪರ ಅಬ್ದುಲ್‌ ಸಮದ್ 76 ರನ್ ಬಾರಿಸಿದರು. ಇನ್ನು 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಖಿಬ್ ನಬಿ 65 ಎಸೆತಗಳಲ್ಲಿ 55 ರನ್ ಚಚ್ಚಿದರು. ಈ ಮೂಲಕ ಜಮ್ಮು ಕಾಶ್ಮೀರ ತಂಡವು ಮೊದಲ ಇನಿಂಗ್ಸ್ ನಲ್ಲಿ 282 ರನ್ ಗಳಿಸಿ ಆಲೌಟ್ ಆಯಿತು.

3 / 5
ಇದರ ಬೆನ್ನಲ್ಲೇ ದ್ವಿತೀಯ ಆರಂಭಿಸಿದ ರಾಜಸ್ಥಾನ್ ತಂಡಕ್ಕೆ ಆಖಿಬ್ ನಬಿ ಆಘಾತದ ಮೇಲೆ ಆಘಾತ ನೀಡಿದರು. ದ್ವಿತೀಯ ದಿನದಾಟದ ಅಂತ್ಯದಲ್ಲಿ 6 ಓವರ್‌ಗಳನ್ನು ಎಸೆದ ಆಖಿಬ್ ಕೇವಲ 5 ವಿಕೆಟ್ ಕಬಳಿಸಿದರು. ವಿಶೇಷ ಎಂದರೆ ಆಖಿಬ್ ನಬಿ ಕಬಳಿಸಿರುವುದು ರಾಜಸ್ಥಾನ್ ತಂಡ ಟಾಪ್-5 ಬ್ಯಾಟರ್ ಗಳ ವಿಕೆಟ್ ಗಳನ್ನು. ಅಂದರೆ ಸತತವಾಗಿ ಐವರನ್ನು ಔಟ್ ಮಾಡಿದ್ದಾರೆ.

ಇದರ ಬೆನ್ನಲ್ಲೇ ದ್ವಿತೀಯ ಆರಂಭಿಸಿದ ರಾಜಸ್ಥಾನ್ ತಂಡಕ್ಕೆ ಆಖಿಬ್ ನಬಿ ಆಘಾತದ ಮೇಲೆ ಆಘಾತ ನೀಡಿದರು. ದ್ವಿತೀಯ ದಿನದಾಟದ ಅಂತ್ಯದಲ್ಲಿ 6 ಓವರ್‌ಗಳನ್ನು ಎಸೆದ ಆಖಿಬ್ ಕೇವಲ 5 ವಿಕೆಟ್ ಕಬಳಿಸಿದರು. ವಿಶೇಷ ಎಂದರೆ ಆಖಿಬ್ ನಬಿ ಕಬಳಿಸಿರುವುದು ರಾಜಸ್ಥಾನ್ ತಂಡ ಟಾಪ್-5 ಬ್ಯಾಟರ್ ಗಳ ವಿಕೆಟ್ ಗಳನ್ನು. ಅಂದರೆ ಸತತವಾಗಿ ಐವರನ್ನು ಔಟ್ ಮಾಡಿದ್ದಾರೆ.

4 / 5
ಈ ಮೂಲಕ ರಣಜಿ ಕ್ರಿಕೆಟ್ ಇತಿಹಾಸದಲ್ಲೇ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಅತೀ ಕಡಿಮೆ ಅವಧಿಯಲ್ಲಿ 5 ವಿಕೆಟ್ ಕಬಳಿಸಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಅಂದಹಾಗೆ ಆಖಿಬ್ ನಬಿ ಈ ವಿಶೇಷ ದಾಖಲೆ ಬರೆಯುವ ಮುನ್ನ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದರು. ಅದು ಸಹ ಸತತ 4 ಎಸೆತಗಳಲ್ಲಿ 4 ವಿಕೆಟ್ ಕಬಳಿಸುವ ಮೂಲಕ. ಇದೀಗ ರಣಜಿ ಪಂದ್ಯದಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದಾರೆ.

ಈ ಮೂಲಕ ರಣಜಿ ಕ್ರಿಕೆಟ್ ಇತಿಹಾಸದಲ್ಲೇ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಅತೀ ಕಡಿಮೆ ಅವಧಿಯಲ್ಲಿ 5 ವಿಕೆಟ್ ಕಬಳಿಸಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಅಂದಹಾಗೆ ಆಖಿಬ್ ನಬಿ ಈ ವಿಶೇಷ ದಾಖಲೆ ಬರೆಯುವ ಮುನ್ನ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದರು. ಅದು ಸಹ ಸತತ 4 ಎಸೆತಗಳಲ್ಲಿ 4 ವಿಕೆಟ್ ಕಬಳಿಸುವ ಮೂಲಕ. ಇದೀಗ ರಣಜಿ ಪಂದ್ಯದಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದಾರೆ.

5 / 5
Follow Us
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ