AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರನ್​ಗೆ 5 ವಿಕೆಟ್: ಭರ್ಜರಿ ದಾಖಲೆ ಬರೆದ ಕಾಶ್ಮೀರಿ ವೇಗಿ

Auqib Nabi: ಜಮ್ಮು ಕಾಶ್ಮೀರದ ವೇಗಿ ಆಖಿಬ್ ನಬಿ ಕಳೆದ ಬಾರಿಯ ದುಲೀಪ್ ಟ್ರೋಫಿ ಟೂರ್ನಿಯಲ್ಲಿ 4 ಎಸೆತಗಳಲ್ಲಿ 4 ವಿಕೆಟ್ ಕಬಳಿಸಿ ಭರ್ಜರಿ ದಾಖಲೆ ನಿರ್ಮಿಸಿದ್ದರು. ದುಲೀಪ್ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಉತ್ತರ ವಲಯ ಪರ ಕಣಕ್ಕಿಳಿದಿದ್ದ ಆಖಿಬ್ ಪೂರ್ವ ವಲಯ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದರು. ಇದೀಗ ರಣಜಿ ಪಂದ್ಯದಲ್ಲಿ 5 ರನ್ ಗೆ ಐದು ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 27, 2025 | 8:23 AM

Share
ರಣಜಿ ಟೂರ್ನಿಯಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಜಮ್ಮು-ಕಾಶ್ಮೀರ್ ವೇಗಿ ಆಖಿಬ್ ನಬಿ (Auqib nabi) ಸಂಚಲನ ಸೃಷ್ಟಿಸಿದ್ದಾರೆ. ಅದು ಸಹ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಎಂಬುದು ಮತ್ತೊಂದು ವಿಶೇಷ. ಅಂದರೆ ಹಾಫ್ ಸೆಂಚುರಿ ಸಿಡಿಸಿದ ಬೆನ್ನಲ್ಲೇ ಆಖಿಬ್ ಐದು ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

ರಣಜಿ ಟೂರ್ನಿಯಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಜಮ್ಮು-ಕಾಶ್ಮೀರ್ ವೇಗಿ ಆಖಿಬ್ ನಬಿ (Auqib nabi) ಸಂಚಲನ ಸೃಷ್ಟಿಸಿದ್ದಾರೆ. ಅದು ಸಹ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಎಂಬುದು ಮತ್ತೊಂದು ವಿಶೇಷ. ಅಂದರೆ ಹಾಫ್ ಸೆಂಚುರಿ ಸಿಡಿಸಿದ ಬೆನ್ನಲ್ಲೇ ಆಖಿಬ್ ಐದು ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

1 / 5
ಶ್ರೀನಗರದ ಶೇರ್ ಐ ಕಾಶ್ಮೀರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಜಮ್ಮು ಕಾಶ್ಮೀರ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ತಂಡವು ಕೇವಲ 152 ರನ್ ಗಳಿಗೆ ಆಲೌಟ್ ಆಗಿತ್ತು. ಜಮ್ಮು ಕಾಶ್ಮೀರ ಪರ ಆಖಿಬ್ ನಬಿ 29 ರನ್ ನೀಡಿ 3 ವಿಕೆಟ್ ಪಡೆದರೆ, ಸುನಿಲ್ ಕುಮಾರ್ 32 ರನ್ ಗೆ 4 ವಿಕೆಟ್ ಕಬಳಿಸಿದರು.

ಶ್ರೀನಗರದ ಶೇರ್ ಐ ಕಾಶ್ಮೀರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಜಮ್ಮು ಕಾಶ್ಮೀರ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ತಂಡವು ಕೇವಲ 152 ರನ್ ಗಳಿಗೆ ಆಲೌಟ್ ಆಗಿತ್ತು. ಜಮ್ಮು ಕಾಶ್ಮೀರ ಪರ ಆಖಿಬ್ ನಬಿ 29 ರನ್ ನೀಡಿ 3 ವಿಕೆಟ್ ಪಡೆದರೆ, ಸುನಿಲ್ ಕುಮಾರ್ 32 ರನ್ ಗೆ 4 ವಿಕೆಟ್ ಕಬಳಿಸಿದರು.

2 / 5
ಆ ಬಳಿಕ ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು ಕಾಶ್ಮೀರ ಪರ ಅಬ್ದುಲ್‌ ಸಮದ್ 76 ರನ್ ಬಾರಿಸಿದರು. ಇನ್ನು 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಖಿಬ್ ನಬಿ 65 ಎಸೆತಗಳಲ್ಲಿ 55 ರನ್ ಚಚ್ಚಿದರು. ಈ ಮೂಲಕ ಜಮ್ಮು ಕಾಶ್ಮೀರ ತಂಡವು ಮೊದಲ ಇನಿಂಗ್ಸ್ ನಲ್ಲಿ 282 ರನ್ ಗಳಿಸಿ ಆಲೌಟ್ ಆಯಿತು.

ಆ ಬಳಿಕ ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು ಕಾಶ್ಮೀರ ಪರ ಅಬ್ದುಲ್‌ ಸಮದ್ 76 ರನ್ ಬಾರಿಸಿದರು. ಇನ್ನು 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಖಿಬ್ ನಬಿ 65 ಎಸೆತಗಳಲ್ಲಿ 55 ರನ್ ಚಚ್ಚಿದರು. ಈ ಮೂಲಕ ಜಮ್ಮು ಕಾಶ್ಮೀರ ತಂಡವು ಮೊದಲ ಇನಿಂಗ್ಸ್ ನಲ್ಲಿ 282 ರನ್ ಗಳಿಸಿ ಆಲೌಟ್ ಆಯಿತು.

3 / 5
ಇದರ ಬೆನ್ನಲ್ಲೇ ದ್ವಿತೀಯ ಆರಂಭಿಸಿದ ರಾಜಸ್ಥಾನ್ ತಂಡಕ್ಕೆ ಆಖಿಬ್ ನಬಿ ಆಘಾತದ ಮೇಲೆ ಆಘಾತ ನೀಡಿದರು. ದ್ವಿತೀಯ ದಿನದಾಟದ ಅಂತ್ಯದಲ್ಲಿ 6 ಓವರ್‌ಗಳನ್ನು ಎಸೆದ ಆಖಿಬ್ ಕೇವಲ 5 ವಿಕೆಟ್ ಕಬಳಿಸಿದರು. ವಿಶೇಷ ಎಂದರೆ ಆಖಿಬ್ ನಬಿ ಕಬಳಿಸಿರುವುದು ರಾಜಸ್ಥಾನ್ ತಂಡ ಟಾಪ್-5 ಬ್ಯಾಟರ್ ಗಳ ವಿಕೆಟ್ ಗಳನ್ನು. ಅಂದರೆ ಸತತವಾಗಿ ಐವರನ್ನು ಔಟ್ ಮಾಡಿದ್ದಾರೆ.

ಇದರ ಬೆನ್ನಲ್ಲೇ ದ್ವಿತೀಯ ಆರಂಭಿಸಿದ ರಾಜಸ್ಥಾನ್ ತಂಡಕ್ಕೆ ಆಖಿಬ್ ನಬಿ ಆಘಾತದ ಮೇಲೆ ಆಘಾತ ನೀಡಿದರು. ದ್ವಿತೀಯ ದಿನದಾಟದ ಅಂತ್ಯದಲ್ಲಿ 6 ಓವರ್‌ಗಳನ್ನು ಎಸೆದ ಆಖಿಬ್ ಕೇವಲ 5 ವಿಕೆಟ್ ಕಬಳಿಸಿದರು. ವಿಶೇಷ ಎಂದರೆ ಆಖಿಬ್ ನಬಿ ಕಬಳಿಸಿರುವುದು ರಾಜಸ್ಥಾನ್ ತಂಡ ಟಾಪ್-5 ಬ್ಯಾಟರ್ ಗಳ ವಿಕೆಟ್ ಗಳನ್ನು. ಅಂದರೆ ಸತತವಾಗಿ ಐವರನ್ನು ಔಟ್ ಮಾಡಿದ್ದಾರೆ.

4 / 5
ಈ ಮೂಲಕ ರಣಜಿ ಕ್ರಿಕೆಟ್ ಇತಿಹಾಸದಲ್ಲೇ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಅತೀ ಕಡಿಮೆ ಅವಧಿಯಲ್ಲಿ 5 ವಿಕೆಟ್ ಕಬಳಿಸಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಅಂದಹಾಗೆ ಆಖಿಬ್ ನಬಿ ಈ ವಿಶೇಷ ದಾಖಲೆ ಬರೆಯುವ ಮುನ್ನ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದರು. ಅದು ಸಹ ಸತತ 4 ಎಸೆತಗಳಲ್ಲಿ 4 ವಿಕೆಟ್ ಕಬಳಿಸುವ ಮೂಲಕ. ಇದೀಗ ರಣಜಿ ಪಂದ್ಯದಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದಾರೆ.

ಈ ಮೂಲಕ ರಣಜಿ ಕ್ರಿಕೆಟ್ ಇತಿಹಾಸದಲ್ಲೇ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಅತೀ ಕಡಿಮೆ ಅವಧಿಯಲ್ಲಿ 5 ವಿಕೆಟ್ ಕಬಳಿಸಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಅಂದಹಾಗೆ ಆಖಿಬ್ ನಬಿ ಈ ವಿಶೇಷ ದಾಖಲೆ ಬರೆಯುವ ಮುನ್ನ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದರು. ಅದು ಸಹ ಸತತ 4 ಎಸೆತಗಳಲ್ಲಿ 4 ವಿಕೆಟ್ ಕಬಳಿಸುವ ಮೂಲಕ. ಇದೀಗ ರಣಜಿ ಪಂದ್ಯದಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದಾರೆ.

5 / 5
ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು
ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು
ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ; ಡಿಕೆಶಿ
ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ; ಡಿಕೆಶಿ
ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
‘ಗತವೈಭವ’ಕ್ಕಾಗಿ ಒಂದು ಕೋಟಿ ಮೌಲ್ಯದ ಆಭರಣ ಧರಿಸಿದ್ದ ಆಶಿಕಾ: ವಿಡಿಯೋ
‘ಗತವೈಭವ’ಕ್ಕಾಗಿ ಒಂದು ಕೋಟಿ ಮೌಲ್ಯದ ಆಭರಣ ಧರಿಸಿದ್ದ ಆಶಿಕಾ: ವಿಡಿಯೋ
ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ
ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ
ಬೆಳಗಾವಿ: 28 ಕೃಷ್ಣಮೃಗಗಳ ಸಾವು; ತನಿಖೆ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಮಾತು
ಬೆಳಗಾವಿ: 28 ಕೃಷ್ಣಮೃಗಗಳ ಸಾವು; ತನಿಖೆ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಮಾತು
ಗುಜರಾತ್​​ನಲ್ಲಿ ಮೋದಿ ರೋಡ್ ಶೋ; ಸಾಂಪ್ರದಾಯಿಕ ನೃತ್ಯದ ಮೂಲಕ ಸ್ವಾಗತ
ಗುಜರಾತ್​​ನಲ್ಲಿ ಮೋದಿ ರೋಡ್ ಶೋ; ಸಾಂಪ್ರದಾಯಿಕ ನೃತ್ಯದ ಮೂಲಕ ಸ್ವಾಗತ
Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್
Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್
ನೆತ್ತಿಗೇರಿತು ಕಿಚ್ಚನ ಸಿಟ್ಟು, ರಕ್ಷಿತಾ-ಗಿಲ್ಲಿಗೆ ಕಾದಿದೆ ಹಬ್ಬ
ನೆತ್ತಿಗೇರಿತು ಕಿಚ್ಚನ ಸಿಟ್ಟು, ರಕ್ಷಿತಾ-ಗಿಲ್ಲಿಗೆ ಕಾದಿದೆ ಹಬ್ಬ
ರಾಹುಲ್ ಗಾಂಧಿಯದು ಐರನ್ ಲೆಗ್ ಎಂಬುದು ಮತ್ತೆ ಸಾಬೀತಾಗಿದೆ; ಬಿವೈ ವಿಜಯೇಂದ್ರ
ರಾಹುಲ್ ಗಾಂಧಿಯದು ಐರನ್ ಲೆಗ್ ಎಂಬುದು ಮತ್ತೆ ಸಾಬೀತಾಗಿದೆ; ಬಿವೈ ವಿಜಯೇಂದ್ರ