AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

89 ರನ್​ಗೆ ಆಲೌಟ್: 10 ವಿಕೆಟ್ ಕಬಳಿಸಿದ ಆಖಿಬ್ ನಬಿ

Auqib Nabi: ಜಮ್ಮು ಕಾಶ್ಮೀರ ವೇಗಿ ಆಖಿಬ್ ನಬಿ ಕಳೆದೊಂದು ವರ್ಷದಿಂದ ದೇಶೀಯ ಅಂಗಳದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಅದರಲ್ಲೂ ದುಲೀಪ್ ಟ್ರೋಫಿಯಲ್ಲಿ ಸತತ ನಾಲ್ಕು ಎಸೆತಗಳಲ್ಲಿ 4 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ರಣಜಿ ಟೂರ್ನಿ ಪಂದ್ಯವೊಂದರಲ್ಲಿ 10 ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 28, 2025 | 8:31 AM

Share
ರಣಜಿ ಟೂರ್ನಿ ಗ್ರೂಪ್-ಬಿ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಜಮ್ಮು-ಕಾಶ್ಮೀರ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ವೇಗಿ ಆಖಿಬ್ ನಬಿ (Auqib Nabi). ಈ ಪಂದ್ಯದಲ್ಲಿ ಟಾಸ್ ಗೆದ್ದ ಜಮ್ಮು-ಕಾಶ್ಮೀರ ತಂಡದ ನಾಯಕ ಪರಸ್ ಡೋಗ್ರಾ ಬೌಲಿಂಗ್ ಆಯ್ದುಕೊಂಡಿದ್ದರು.

ರಣಜಿ ಟೂರ್ನಿ ಗ್ರೂಪ್-ಬಿ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಜಮ್ಮು-ಕಾಶ್ಮೀರ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ವೇಗಿ ಆಖಿಬ್ ನಬಿ (Auqib Nabi). ಈ ಪಂದ್ಯದಲ್ಲಿ ಟಾಸ್ ಗೆದ್ದ ಜಮ್ಮು-ಕಾಶ್ಮೀರ ತಂಡದ ನಾಯಕ ಪರಸ್ ಡೋಗ್ರಾ ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಆಖಿಬ್ ನಬಿ ಹಾಗೂ ಸುನಿಲ್ ಕುಮಾರ್ ರಾಜಸ್ಥಾನ್ ಬ್ಯಾಟರ್​ಗಳನ್ನು ಇನ್ನಿಲ್ಲದಂತೆ ಕಾಡಿದರು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ರಾಜಸ್ಥಾನ್ ಕೇವಲ 152 ರನ್​ಗಳಿಗೆ ಆಲೌಟ್ ಆಯಿತು. ಜಮ್ಮು ಕಾಶ್ಮೀರ ಪರ ಆಖಿಬ್ ನಬಿ 29 ರನ್ ನೀಡಿ 3 ವಿಕೆಟ್ ಪಡೆದರೆ, ಸುನಿಲ್ ಕುಮಾರ್ 32 ರನ್ ನೀಡಿ 4 ವಿಕೆಟ್ ಉರುಳಿಸಿದರು.

ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಆಖಿಬ್ ನಬಿ ಹಾಗೂ ಸುನಿಲ್ ಕುಮಾರ್ ರಾಜಸ್ಥಾನ್ ಬ್ಯಾಟರ್​ಗಳನ್ನು ಇನ್ನಿಲ್ಲದಂತೆ ಕಾಡಿದರು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ರಾಜಸ್ಥಾನ್ ಕೇವಲ 152 ರನ್​ಗಳಿಗೆ ಆಲೌಟ್ ಆಯಿತು. ಜಮ್ಮು ಕಾಶ್ಮೀರ ಪರ ಆಖಿಬ್ ನಬಿ 29 ರನ್ ನೀಡಿ 3 ವಿಕೆಟ್ ಪಡೆದರೆ, ಸುನಿಲ್ ಕುಮಾರ್ 32 ರನ್ ನೀಡಿ 4 ವಿಕೆಟ್ ಉರುಳಿಸಿದರು.

2 / 5
ಆ ಬಳಿಕ ಮೊದಲ ಇನಿಂಗ್ಸ್ ಆಡಿದ ಜಮ್ಮು ಕಾಶ್ಮೀರ ಪರ ಅಬ್ದುಲ್ ಸಮದ್ 76 ರನ್​ ಚಚ್ಚಿದರು. ಇನ್ನು 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಖಿಬ್ ನಬಿ ಭರ್ಜರಿ ಬ್ಯಾಟಿಂಗ್ ಪ್ರದರ್ಶೀಸಿದರು. ಕೇವಲ 65 ಎಸೆತಗಳನ್ನು ಎದುರಿಸಿದ ಆಖಿಬ್ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 55 ರನ್ ಬಾರಿಸಿದರು. ಈ ಮೂಲಕ ಜಮ್ಮು ಕಾಶ್ಮೀರ ಮೊದಲ ಇನಿಂಗ್ಸ್​ನಲ್ಲಿ 282 ರನ್ ಕಲೆಹಾಕಿತು.

ಆ ಬಳಿಕ ಮೊದಲ ಇನಿಂಗ್ಸ್ ಆಡಿದ ಜಮ್ಮು ಕಾಶ್ಮೀರ ಪರ ಅಬ್ದುಲ್ ಸಮದ್ 76 ರನ್​ ಚಚ್ಚಿದರು. ಇನ್ನು 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಖಿಬ್ ನಬಿ ಭರ್ಜರಿ ಬ್ಯಾಟಿಂಗ್ ಪ್ರದರ್ಶೀಸಿದರು. ಕೇವಲ 65 ಎಸೆತಗಳನ್ನು ಎದುರಿಸಿದ ಆಖಿಬ್ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 55 ರನ್ ಬಾರಿಸಿದರು. ಈ ಮೂಲಕ ಜಮ್ಮು ಕಾಶ್ಮೀರ ಮೊದಲ ಇನಿಂಗ್ಸ್​ನಲ್ಲಿ 282 ರನ್ ಕಲೆಹಾಕಿತು.

3 / 5
130 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ರಾಜಸ್ಥಾನ್ ತಂಡಕ್ಕೆ ಆಖಿಬ್ ನಬಿ ಆಘಾತದ ಮೇಲೆ ಆಘಾತ ನೀಡಿದ್ದರು. ತಾನೆಸೆದ ಮೊದಲ 6 ಓವರ್​ಗಳಲ್ಲಿ ಕೇವಲ 5 ರನ್ ನೀಡಿ ಆಖಿಬ್ 5 ವಿಕೆಟ್ ಉರುಳಿಸಿದರು. ಇದಾದ ಬಳಿಕ ಮತ್ತೆರಡು ವಿಕೆಟ್ ಪಡೆದರು. ಈ ಮೂಲಕ 11 ಓವರ್​ಗಳಲ್ಲಿ ಕೇವಲ 24 ರನ್ ನೀಡಿ 7 ವಿಕೆಟ್ ಕಬಳಿಸಿದರು. ಪರಿಣಾಮ ರಾಜಸ್ಥಾನ್ ತಂಡವು ಕೇವಲ 89 ರನ್​​ಗೆ ಆಲೌಟ್ ಆಯಿತು.

130 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ರಾಜಸ್ಥಾನ್ ತಂಡಕ್ಕೆ ಆಖಿಬ್ ನಬಿ ಆಘಾತದ ಮೇಲೆ ಆಘಾತ ನೀಡಿದ್ದರು. ತಾನೆಸೆದ ಮೊದಲ 6 ಓವರ್​ಗಳಲ್ಲಿ ಕೇವಲ 5 ರನ್ ನೀಡಿ ಆಖಿಬ್ 5 ವಿಕೆಟ್ ಉರುಳಿಸಿದರು. ಇದಾದ ಬಳಿಕ ಮತ್ತೆರಡು ವಿಕೆಟ್ ಪಡೆದರು. ಈ ಮೂಲಕ 11 ಓವರ್​ಗಳಲ್ಲಿ ಕೇವಲ 24 ರನ್ ನೀಡಿ 7 ವಿಕೆಟ್ ಕಬಳಿಸಿದರು. ಪರಿಣಾಮ ರಾಜಸ್ಥಾನ್ ತಂಡವು ಕೇವಲ 89 ರನ್​​ಗೆ ಆಲೌಟ್ ಆಯಿತು.

4 / 5
ಈ ಮೂಲಕ ಜಮ್ಮು ಕಾಶ್ಮೀರ ತಂಡವು ಇನಿಂಗ್ಸ್ ಹಾಗೂ 41 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಇತ್ತ ಎರಡು ಇನಿಂಗ್ಸ್​ಗಳಲ್ಲಿ ಮಾರಕ ದಾಳಿ ಸಂಘಟಿಸಿದ ಬಲಗೈ ವೇಗಿ ಆಖಿಬ್ ನಬಿ  ಒಟ್ಟು 10 ವಿಕೆಟ್ ಕಬಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. 

ಈ ಮೂಲಕ ಜಮ್ಮು ಕಾಶ್ಮೀರ ತಂಡವು ಇನಿಂಗ್ಸ್ ಹಾಗೂ 41 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಇತ್ತ ಎರಡು ಇನಿಂಗ್ಸ್​ಗಳಲ್ಲಿ ಮಾರಕ ದಾಳಿ ಸಂಘಟಿಸಿದ ಬಲಗೈ ವೇಗಿ ಆಖಿಬ್ ನಬಿ  ಒಟ್ಟು 10 ವಿಕೆಟ್ ಕಬಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. 

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ