AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

89 ರನ್​ಗೆ ಆಲೌಟ್: 10 ವಿಕೆಟ್ ಕಬಳಿಸಿದ ಆಖಿಬ್ ನಬಿ

Auqib Nabi: ಜಮ್ಮು ಕಾಶ್ಮೀರ ವೇಗಿ ಆಖಿಬ್ ನಬಿ ಕಳೆದೊಂದು ವರ್ಷದಿಂದ ದೇಶೀಯ ಅಂಗಳದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಅದರಲ್ಲೂ ದುಲೀಪ್ ಟ್ರೋಫಿಯಲ್ಲಿ ಸತತ ನಾಲ್ಕು ಎಸೆತಗಳಲ್ಲಿ 4 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ರಣಜಿ ಟೂರ್ನಿ ಪಂದ್ಯವೊಂದರಲ್ಲಿ 10 ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 28, 2025 | 8:31 AM

Share
ರಣಜಿ ಟೂರ್ನಿ ಗ್ರೂಪ್-ಬಿ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಜಮ್ಮು-ಕಾಶ್ಮೀರ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ವೇಗಿ ಆಖಿಬ್ ನಬಿ (Auqib Nabi). ಈ ಪಂದ್ಯದಲ್ಲಿ ಟಾಸ್ ಗೆದ್ದ ಜಮ್ಮು-ಕಾಶ್ಮೀರ ತಂಡದ ನಾಯಕ ಪರಸ್ ಡೋಗ್ರಾ ಬೌಲಿಂಗ್ ಆಯ್ದುಕೊಂಡಿದ್ದರು.

ರಣಜಿ ಟೂರ್ನಿ ಗ್ರೂಪ್-ಬಿ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಜಮ್ಮು-ಕಾಶ್ಮೀರ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ವೇಗಿ ಆಖಿಬ್ ನಬಿ (Auqib Nabi). ಈ ಪಂದ್ಯದಲ್ಲಿ ಟಾಸ್ ಗೆದ್ದ ಜಮ್ಮು-ಕಾಶ್ಮೀರ ತಂಡದ ನಾಯಕ ಪರಸ್ ಡೋಗ್ರಾ ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಆಖಿಬ್ ನಬಿ ಹಾಗೂ ಸುನಿಲ್ ಕುಮಾರ್ ರಾಜಸ್ಥಾನ್ ಬ್ಯಾಟರ್​ಗಳನ್ನು ಇನ್ನಿಲ್ಲದಂತೆ ಕಾಡಿದರು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ರಾಜಸ್ಥಾನ್ ಕೇವಲ 152 ರನ್​ಗಳಿಗೆ ಆಲೌಟ್ ಆಯಿತು. ಜಮ್ಮು ಕಾಶ್ಮೀರ ಪರ ಆಖಿಬ್ ನಬಿ 29 ರನ್ ನೀಡಿ 3 ವಿಕೆಟ್ ಪಡೆದರೆ, ಸುನಿಲ್ ಕುಮಾರ್ 32 ರನ್ ನೀಡಿ 4 ವಿಕೆಟ್ ಉರುಳಿಸಿದರು.

ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಆಖಿಬ್ ನಬಿ ಹಾಗೂ ಸುನಿಲ್ ಕುಮಾರ್ ರಾಜಸ್ಥಾನ್ ಬ್ಯಾಟರ್​ಗಳನ್ನು ಇನ್ನಿಲ್ಲದಂತೆ ಕಾಡಿದರು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ರಾಜಸ್ಥಾನ್ ಕೇವಲ 152 ರನ್​ಗಳಿಗೆ ಆಲೌಟ್ ಆಯಿತು. ಜಮ್ಮು ಕಾಶ್ಮೀರ ಪರ ಆಖಿಬ್ ನಬಿ 29 ರನ್ ನೀಡಿ 3 ವಿಕೆಟ್ ಪಡೆದರೆ, ಸುನಿಲ್ ಕುಮಾರ್ 32 ರನ್ ನೀಡಿ 4 ವಿಕೆಟ್ ಉರುಳಿಸಿದರು.

2 / 5
ಆ ಬಳಿಕ ಮೊದಲ ಇನಿಂಗ್ಸ್ ಆಡಿದ ಜಮ್ಮು ಕಾಶ್ಮೀರ ಪರ ಅಬ್ದುಲ್ ಸಮದ್ 76 ರನ್​ ಚಚ್ಚಿದರು. ಇನ್ನು 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಖಿಬ್ ನಬಿ ಭರ್ಜರಿ ಬ್ಯಾಟಿಂಗ್ ಪ್ರದರ್ಶೀಸಿದರು. ಕೇವಲ 65 ಎಸೆತಗಳನ್ನು ಎದುರಿಸಿದ ಆಖಿಬ್ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 55 ರನ್ ಬಾರಿಸಿದರು. ಈ ಮೂಲಕ ಜಮ್ಮು ಕಾಶ್ಮೀರ ಮೊದಲ ಇನಿಂಗ್ಸ್​ನಲ್ಲಿ 282 ರನ್ ಕಲೆಹಾಕಿತು.

ಆ ಬಳಿಕ ಮೊದಲ ಇನಿಂಗ್ಸ್ ಆಡಿದ ಜಮ್ಮು ಕಾಶ್ಮೀರ ಪರ ಅಬ್ದುಲ್ ಸಮದ್ 76 ರನ್​ ಚಚ್ಚಿದರು. ಇನ್ನು 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಖಿಬ್ ನಬಿ ಭರ್ಜರಿ ಬ್ಯಾಟಿಂಗ್ ಪ್ರದರ್ಶೀಸಿದರು. ಕೇವಲ 65 ಎಸೆತಗಳನ್ನು ಎದುರಿಸಿದ ಆಖಿಬ್ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 55 ರನ್ ಬಾರಿಸಿದರು. ಈ ಮೂಲಕ ಜಮ್ಮು ಕಾಶ್ಮೀರ ಮೊದಲ ಇನಿಂಗ್ಸ್​ನಲ್ಲಿ 282 ರನ್ ಕಲೆಹಾಕಿತು.

3 / 5
130 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ರಾಜಸ್ಥಾನ್ ತಂಡಕ್ಕೆ ಆಖಿಬ್ ನಬಿ ಆಘಾತದ ಮೇಲೆ ಆಘಾತ ನೀಡಿದ್ದರು. ತಾನೆಸೆದ ಮೊದಲ 6 ಓವರ್​ಗಳಲ್ಲಿ ಕೇವಲ 5 ರನ್ ನೀಡಿ ಆಖಿಬ್ 5 ವಿಕೆಟ್ ಉರುಳಿಸಿದರು. ಇದಾದ ಬಳಿಕ ಮತ್ತೆರಡು ವಿಕೆಟ್ ಪಡೆದರು. ಈ ಮೂಲಕ 11 ಓವರ್​ಗಳಲ್ಲಿ ಕೇವಲ 24 ರನ್ ನೀಡಿ 7 ವಿಕೆಟ್ ಕಬಳಿಸಿದರು. ಪರಿಣಾಮ ರಾಜಸ್ಥಾನ್ ತಂಡವು ಕೇವಲ 89 ರನ್​​ಗೆ ಆಲೌಟ್ ಆಯಿತು.

130 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ರಾಜಸ್ಥಾನ್ ತಂಡಕ್ಕೆ ಆಖಿಬ್ ನಬಿ ಆಘಾತದ ಮೇಲೆ ಆಘಾತ ನೀಡಿದ್ದರು. ತಾನೆಸೆದ ಮೊದಲ 6 ಓವರ್​ಗಳಲ್ಲಿ ಕೇವಲ 5 ರನ್ ನೀಡಿ ಆಖಿಬ್ 5 ವಿಕೆಟ್ ಉರುಳಿಸಿದರು. ಇದಾದ ಬಳಿಕ ಮತ್ತೆರಡು ವಿಕೆಟ್ ಪಡೆದರು. ಈ ಮೂಲಕ 11 ಓವರ್​ಗಳಲ್ಲಿ ಕೇವಲ 24 ರನ್ ನೀಡಿ 7 ವಿಕೆಟ್ ಕಬಳಿಸಿದರು. ಪರಿಣಾಮ ರಾಜಸ್ಥಾನ್ ತಂಡವು ಕೇವಲ 89 ರನ್​​ಗೆ ಆಲೌಟ್ ಆಯಿತು.

4 / 5
ಈ ಮೂಲಕ ಜಮ್ಮು ಕಾಶ್ಮೀರ ತಂಡವು ಇನಿಂಗ್ಸ್ ಹಾಗೂ 41 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಇತ್ತ ಎರಡು ಇನಿಂಗ್ಸ್​ಗಳಲ್ಲಿ ಮಾರಕ ದಾಳಿ ಸಂಘಟಿಸಿದ ಬಲಗೈ ವೇಗಿ ಆಖಿಬ್ ನಬಿ  ಒಟ್ಟು 10 ವಿಕೆಟ್ ಕಬಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. 

ಈ ಮೂಲಕ ಜಮ್ಮು ಕಾಶ್ಮೀರ ತಂಡವು ಇನಿಂಗ್ಸ್ ಹಾಗೂ 41 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಇತ್ತ ಎರಡು ಇನಿಂಗ್ಸ್​ಗಳಲ್ಲಿ ಮಾರಕ ದಾಳಿ ಸಂಘಟಿಸಿದ ಬಲಗೈ ವೇಗಿ ಆಖಿಬ್ ನಬಿ  ಒಟ್ಟು 10 ವಿಕೆಟ್ ಕಬಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. 

5 / 5
Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು