AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಆಸ್ಟ್ರೇಲಿಯಾ

ಐಸಿಸಿ ಟೂರ್ನಿಯಲ್ಲಿ ಅತೀ ಹೆಚ್ಚು ಟ್ರೋಫಿ ಗೆದ್ದಿರುವುದು ಆಸ್ಟ್ರೇಲಿಯಾ ತಂಡ. ಈವರೆಗೆ 13 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಆಸೀಸ್ ಪಡೆ ಇದೀಗ ಮತ್ತೊಂದು ಟ್ರೋಫಿ ಎತ್ತಿ ಹಿಡಿಯುವ ವಿಶ್ವಾಸದಲ್ಲಿದೆ. ಅದು ಕೂಡ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿಯುವ ಮೂಲಕ. ಅಂದರೆ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಆಸ್ಟ್ರೇಲಿಯಾ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

ಝಾಹಿರ್ ಯೂಸುಫ್
|

Updated on: Jun 12, 2025 | 11:24 AM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ (WTC Final) ಕಣಕ್ಕಿಳಿಯುವುದರೊಂದಿಗೆ ಆಸ್ಟ್ರೇಲಿಯಾ ತಂಡವು ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಭಾರತ ತಂಡದ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಅಂದರೆ ಐಸಿಸಿ ಟೂರ್ನಿಯಲ್ಲಿ ಅತ್ಯಧಿಕ ಬಾರಿ ಫೈನಲ್ ಆಡಿದ ಹಿರಿಮೆಗೆ ಆಸ್ಟ್ರೇಲಿಯಾ ತಂಡ ಕೂಡ ಪಾತ್ರವಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ (WTC Final) ಕಣಕ್ಕಿಳಿಯುವುದರೊಂದಿಗೆ ಆಸ್ಟ್ರೇಲಿಯಾ ತಂಡವು ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಭಾರತ ತಂಡದ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಅಂದರೆ ಐಸಿಸಿ ಟೂರ್ನಿಯಲ್ಲಿ ಅತ್ಯಧಿಕ ಬಾರಿ ಫೈನಲ್ ಆಡಿದ ಹಿರಿಮೆಗೆ ಆಸ್ಟ್ರೇಲಿಯಾ ತಂಡ ಕೂಡ ಪಾತ್ರವಾಗಿದೆ.

1 / 5
ಇಂಗ್ಲೆಂಡ್​ನ ಲಾರ್ಡ್ಸ್​ ಮೈದಾನದಲ್ಲಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಐಸಿಸಿ ಟೂರ್ನಿಯಲ್ಲಿ ಅತ್ಯಧಿಕ ಫೈನಲ್ ಆಡಿದ ತಂಡಗಳ ಪಟ್ಟಿಯಲ್ಲಿ ಆಸೀಸ್ ಪಡೆ ಕೂಡ ಮೊದಲ ಸ್ಥಾನಕ್ಕೇರಿದೆ.

ಇಂಗ್ಲೆಂಡ್​ನ ಲಾರ್ಡ್ಸ್​ ಮೈದಾನದಲ್ಲಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಐಸಿಸಿ ಟೂರ್ನಿಯಲ್ಲಿ ಅತ್ಯಧಿಕ ಫೈನಲ್ ಆಡಿದ ತಂಡಗಳ ಪಟ್ಟಿಯಲ್ಲಿ ಆಸೀಸ್ ಪಡೆ ಕೂಡ ಮೊದಲ ಸ್ಥಾನಕ್ಕೇರಿದೆ.

2 / 5
ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿತ್ತು. ಭಾರತ ತಂಡವು ಈವರೆಗೆ 14 ಬಾರಿ ಐಸಿಸಿ ಟೂರ್ನಿಯಲ್ಲಿ ಫೈನಲ್ ಪಂದ್ಯವಾಡಿದೆ. ಈ ವೇಳೆ 2 ಏಕದಿನ ವಿಶ್ವಕಪ್, 2 ಟಿ20 ವಿಶ್ವಕಪ್ ಹಾಗೂ 3 ಚಾಂಪಿಯನ್ಸ್ ಟ್ರೋಫಿಯಯನ್ನು ಭಾರತ ತಂಡ ಗೆದ್ದುಕೊಂಡಿದೆ.

ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿತ್ತು. ಭಾರತ ತಂಡವು ಈವರೆಗೆ 14 ಬಾರಿ ಐಸಿಸಿ ಟೂರ್ನಿಯಲ್ಲಿ ಫೈನಲ್ ಪಂದ್ಯವಾಡಿದೆ. ಈ ವೇಳೆ 2 ಏಕದಿನ ವಿಶ್ವಕಪ್, 2 ಟಿ20 ವಿಶ್ವಕಪ್ ಹಾಗೂ 3 ಚಾಂಪಿಯನ್ಸ್ ಟ್ರೋಫಿಯಯನ್ನು ಭಾರತ ತಂಡ ಗೆದ್ದುಕೊಂಡಿದೆ.

3 / 5
ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವಾಡುವ ಮೂಲಕ ಆಸ್ಟ್ರೇಲಿಯಾ ಕೂಡ ಐಸಿಸಿ ಟೂರ್ನಿಯಲ್ಲಿ 14 ಫೈನಲ್ ಪಂದ್ಯವಾಡಿದ ಸಾಧನೆ ಮಾಡಿದೆ. ಈ ಹದಿನಾಲ್ಕು ಫೈನಲ್​ಗಳಲ್ಲಿ ಆಸ್ಟ್ರೇಲಿಯಾ ತಂಡವು 6 ಏಕದಿನ ವಿಶ್ವಕಪ್, 1 ಟಿ20 ವಿಶ್ವಕಪ್, 2 ಚಾಂಪಿಯನ್ಸ್ ಟ್ರೋಫಿ ಹಾಗೂ 1 ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಟ್ರೋಫಿ ಗೆದ್ದುಕೊಂಡಿದೆ.

ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವಾಡುವ ಮೂಲಕ ಆಸ್ಟ್ರೇಲಿಯಾ ಕೂಡ ಐಸಿಸಿ ಟೂರ್ನಿಯಲ್ಲಿ 14 ಫೈನಲ್ ಪಂದ್ಯವಾಡಿದ ಸಾಧನೆ ಮಾಡಿದೆ. ಈ ಹದಿನಾಲ್ಕು ಫೈನಲ್​ಗಳಲ್ಲಿ ಆಸ್ಟ್ರೇಲಿಯಾ ತಂಡವು 6 ಏಕದಿನ ವಿಶ್ವಕಪ್, 1 ಟಿ20 ವಿಶ್ವಕಪ್, 2 ಚಾಂಪಿಯನ್ಸ್ ಟ್ರೋಫಿ ಹಾಗೂ 1 ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಟ್ರೋಫಿ ಗೆದ್ದುಕೊಂಡಿದೆ.

4 / 5
ಅಂದರೆ 14 ಐಸಿಸಿ ಟೂರ್ನಿ ಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡವು 10 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಈ ಬಾರಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದರೆ ಆಸೀಸ್ ಪಡೆ 11 ಐಸಿಸಿ ಟ್ರೋಫಿಗಳನ್ನು ಎತ್ತಿ ಹಿಡಿದ ಏಕೈಕ ತಂಡವೆಂಬ ಖ್ಯಾತಿಯನ್ನು ತನ್ನದಾಗಿಸಿಕೊಳ್ಳಲಿದೆ.

ಅಂದರೆ 14 ಐಸಿಸಿ ಟೂರ್ನಿ ಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡವು 10 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಈ ಬಾರಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದರೆ ಆಸೀಸ್ ಪಡೆ 11 ಐಸಿಸಿ ಟ್ರೋಫಿಗಳನ್ನು ಎತ್ತಿ ಹಿಡಿದ ಏಕೈಕ ತಂಡವೆಂಬ ಖ್ಯಾತಿಯನ್ನು ತನ್ನದಾಗಿಸಿಕೊಳ್ಳಲಿದೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್