AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಆಸ್ಟ್ರೇಲಿಯಾ

ಐಸಿಸಿ ಟೂರ್ನಿಯಲ್ಲಿ ಅತೀ ಹೆಚ್ಚು ಟ್ರೋಫಿ ಗೆದ್ದಿರುವುದು ಆಸ್ಟ್ರೇಲಿಯಾ ತಂಡ. ಈವರೆಗೆ 13 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಆಸೀಸ್ ಪಡೆ ಇದೀಗ ಮತ್ತೊಂದು ಟ್ರೋಫಿ ಎತ್ತಿ ಹಿಡಿಯುವ ವಿಶ್ವಾಸದಲ್ಲಿದೆ. ಅದು ಕೂಡ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿಯುವ ಮೂಲಕ. ಅಂದರೆ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಆಸ್ಟ್ರೇಲಿಯಾ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

ಝಾಹಿರ್ ಯೂಸುಫ್
|

Updated on: Jun 12, 2025 | 11:24 AM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ (WTC Final) ಕಣಕ್ಕಿಳಿಯುವುದರೊಂದಿಗೆ ಆಸ್ಟ್ರೇಲಿಯಾ ತಂಡವು ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಭಾರತ ತಂಡದ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಅಂದರೆ ಐಸಿಸಿ ಟೂರ್ನಿಯಲ್ಲಿ ಅತ್ಯಧಿಕ ಬಾರಿ ಫೈನಲ್ ಆಡಿದ ಹಿರಿಮೆಗೆ ಆಸ್ಟ್ರೇಲಿಯಾ ತಂಡ ಕೂಡ ಪಾತ್ರವಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ (WTC Final) ಕಣಕ್ಕಿಳಿಯುವುದರೊಂದಿಗೆ ಆಸ್ಟ್ರೇಲಿಯಾ ತಂಡವು ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಭಾರತ ತಂಡದ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಅಂದರೆ ಐಸಿಸಿ ಟೂರ್ನಿಯಲ್ಲಿ ಅತ್ಯಧಿಕ ಬಾರಿ ಫೈನಲ್ ಆಡಿದ ಹಿರಿಮೆಗೆ ಆಸ್ಟ್ರೇಲಿಯಾ ತಂಡ ಕೂಡ ಪಾತ್ರವಾಗಿದೆ.

1 / 5
ಇಂಗ್ಲೆಂಡ್​ನ ಲಾರ್ಡ್ಸ್​ ಮೈದಾನದಲ್ಲಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಐಸಿಸಿ ಟೂರ್ನಿಯಲ್ಲಿ ಅತ್ಯಧಿಕ ಫೈನಲ್ ಆಡಿದ ತಂಡಗಳ ಪಟ್ಟಿಯಲ್ಲಿ ಆಸೀಸ್ ಪಡೆ ಕೂಡ ಮೊದಲ ಸ್ಥಾನಕ್ಕೇರಿದೆ.

ಇಂಗ್ಲೆಂಡ್​ನ ಲಾರ್ಡ್ಸ್​ ಮೈದಾನದಲ್ಲಿ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಐಸಿಸಿ ಟೂರ್ನಿಯಲ್ಲಿ ಅತ್ಯಧಿಕ ಫೈನಲ್ ಆಡಿದ ತಂಡಗಳ ಪಟ್ಟಿಯಲ್ಲಿ ಆಸೀಸ್ ಪಡೆ ಕೂಡ ಮೊದಲ ಸ್ಥಾನಕ್ಕೇರಿದೆ.

2 / 5
ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿತ್ತು. ಭಾರತ ತಂಡವು ಈವರೆಗೆ 14 ಬಾರಿ ಐಸಿಸಿ ಟೂರ್ನಿಯಲ್ಲಿ ಫೈನಲ್ ಪಂದ್ಯವಾಡಿದೆ. ಈ ವೇಳೆ 2 ಏಕದಿನ ವಿಶ್ವಕಪ್, 2 ಟಿ20 ವಿಶ್ವಕಪ್ ಹಾಗೂ 3 ಚಾಂಪಿಯನ್ಸ್ ಟ್ರೋಫಿಯಯನ್ನು ಭಾರತ ತಂಡ ಗೆದ್ದುಕೊಂಡಿದೆ.

ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿತ್ತು. ಭಾರತ ತಂಡವು ಈವರೆಗೆ 14 ಬಾರಿ ಐಸಿಸಿ ಟೂರ್ನಿಯಲ್ಲಿ ಫೈನಲ್ ಪಂದ್ಯವಾಡಿದೆ. ಈ ವೇಳೆ 2 ಏಕದಿನ ವಿಶ್ವಕಪ್, 2 ಟಿ20 ವಿಶ್ವಕಪ್ ಹಾಗೂ 3 ಚಾಂಪಿಯನ್ಸ್ ಟ್ರೋಫಿಯಯನ್ನು ಭಾರತ ತಂಡ ಗೆದ್ದುಕೊಂಡಿದೆ.

3 / 5
ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವಾಡುವ ಮೂಲಕ ಆಸ್ಟ್ರೇಲಿಯಾ ಕೂಡ ಐಸಿಸಿ ಟೂರ್ನಿಯಲ್ಲಿ 14 ಫೈನಲ್ ಪಂದ್ಯವಾಡಿದ ಸಾಧನೆ ಮಾಡಿದೆ. ಈ ಹದಿನಾಲ್ಕು ಫೈನಲ್​ಗಳಲ್ಲಿ ಆಸ್ಟ್ರೇಲಿಯಾ ತಂಡವು 6 ಏಕದಿನ ವಿಶ್ವಕಪ್, 1 ಟಿ20 ವಿಶ್ವಕಪ್, 2 ಚಾಂಪಿಯನ್ಸ್ ಟ್ರೋಫಿ ಹಾಗೂ 1 ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಟ್ರೋಫಿ ಗೆದ್ದುಕೊಂಡಿದೆ.

ಇದೀಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವಾಡುವ ಮೂಲಕ ಆಸ್ಟ್ರೇಲಿಯಾ ಕೂಡ ಐಸಿಸಿ ಟೂರ್ನಿಯಲ್ಲಿ 14 ಫೈನಲ್ ಪಂದ್ಯವಾಡಿದ ಸಾಧನೆ ಮಾಡಿದೆ. ಈ ಹದಿನಾಲ್ಕು ಫೈನಲ್​ಗಳಲ್ಲಿ ಆಸ್ಟ್ರೇಲಿಯಾ ತಂಡವು 6 ಏಕದಿನ ವಿಶ್ವಕಪ್, 1 ಟಿ20 ವಿಶ್ವಕಪ್, 2 ಚಾಂಪಿಯನ್ಸ್ ಟ್ರೋಫಿ ಹಾಗೂ 1 ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಟ್ರೋಫಿ ಗೆದ್ದುಕೊಂಡಿದೆ.

4 / 5
ಅಂದರೆ 14 ಐಸಿಸಿ ಟೂರ್ನಿ ಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡವು 10 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಈ ಬಾರಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದರೆ ಆಸೀಸ್ ಪಡೆ 11 ಐಸಿಸಿ ಟ್ರೋಫಿಗಳನ್ನು ಎತ್ತಿ ಹಿಡಿದ ಏಕೈಕ ತಂಡವೆಂಬ ಖ್ಯಾತಿಯನ್ನು ತನ್ನದಾಗಿಸಿಕೊಳ್ಳಲಿದೆ.

ಅಂದರೆ 14 ಐಸಿಸಿ ಟೂರ್ನಿ ಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡವು 10 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಈ ಬಾರಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದರೆ ಆಸೀಸ್ ಪಡೆ 11 ಐಸಿಸಿ ಟ್ರೋಫಿಗಳನ್ನು ಎತ್ತಿ ಹಿಡಿದ ಏಕೈಕ ತಂಡವೆಂಬ ಖ್ಯಾತಿಯನ್ನು ತನ್ನದಾಗಿಸಿಕೊಳ್ಳಲಿದೆ.

5 / 5
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ