AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯ ಜಯ ಜಯ ಜಯ ಜಯಯೇ… ಆಸ್ಟ್ರೇಲಿಯಾ ದಾಖಲೆಯ ಜಯಭೇರಿ

West Indies vs Australia: ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಆಸ್ಟ್ರೇಲಿಯಾ 5-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಆಸ್ಟ್ರೇಲಿಯಾ 3 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು 2ನೇ ಮತ್ತು 3ನೇ ಟಿ20 ಪಂದ್ಯಗಳಲ್ಲಿ ಕ್ರಮವಾಗಿ 8 ಮತ್ತು 6 ವಿಕೆಟ್​ಗಳ ಗೆಲುವು ದಾಖಲಿಸಿತ್ತು. ಹಾಗೆಯೇ 4ನೇ ಟಿ20 ಪಂದ್ಯದಲ್ಲಿ 3 ವಿಕೆಟ್​ಗಳ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ಇದೀಗ 5ನೇ ಟಿ20 ಪಂದ್ಯವನ್ನೂ 3 ವಿಕೆಟ್​ಗಳಿಂದ ಗೆದ್ದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Jul 29, 2025 | 9:31 AM

Share
ವೆಸ್ಟ್ ಇಂಡೀಸ್ ವಿರುದ್ಧದ 5ನೇ ಟಿ20 ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಜಯಭೇರಿ ಬಾರಿಸಿದೆ. ಸೇಂಟ್ ಕಿಟ್ಸ್​ನ ವಾರ್ನರ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ವೆಸ್ಟ್ ಇಂಡೀಸ್ ವಿರುದ್ಧದ 5ನೇ ಟಿ20 ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಜಯಭೇರಿ ಬಾರಿಸಿದೆ. ಸೇಂಟ್ ಕಿಟ್ಸ್​ನ ವಾರ್ನರ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

1 / 5
ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಶೆರ್ಫೆನ್ ರದರ್​ಫೋರ್ಡ್​ 35 ರನ್​ ಬಾರಿಸಿ ತಂಡಕ್ಕೆ ಆಸರೆಯಾದರು. ಇನ್ನು ಶಿಮ್ರಾನ್ ಹೆಟ್ಮೆಯರ್ 31 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 52 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನೊಂದಿಗೆ ವೆಸ್ಟ್ ಇಂಡೀಸ್ ತಂಡವು 19.4 ಓವರ್​ಗಳಲ್ಲಿ 170 ರನ್​ಗಳಿಸಿ ಆಲೌಟ್ ಆಯಿತು.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಶೆರ್ಫೆನ್ ರದರ್​ಫೋರ್ಡ್​ 35 ರನ್​ ಬಾರಿಸಿ ತಂಡಕ್ಕೆ ಆಸರೆಯಾದರು. ಇನ್ನು ಶಿಮ್ರಾನ್ ಹೆಟ್ಮೆಯರ್ 31 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 52 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನೊಂದಿಗೆ ವೆಸ್ಟ್ ಇಂಡೀಸ್ ತಂಡವು 19.4 ಓವರ್​ಗಳಲ್ಲಿ 170 ರನ್​ಗಳಿಸಿ ಆಲೌಟ್ ಆಯಿತು.

2 / 5
171 ರನ್​ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕನಾಗಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್​ವೆಲ್ ಶೂನ್ಯಕ್ಕೆ ಔಟಾದರೆ, ಜೋಶ್ ಇಂಗ್ಲಿಸ್ 10 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ಮಿಚೆಲ್ ಮಾರ್ಷ್ 14 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದ್ದರು. 

171 ರನ್​ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕನಾಗಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್​ವೆಲ್ ಶೂನ್ಯಕ್ಕೆ ಔಟಾದರೆ, ಜೋಶ್ ಇಂಗ್ಲಿಸ್ 10 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ಮಿಚೆಲ್ ಮಾರ್ಷ್ 14 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದ್ದರು. 

3 / 5
ಈ ಹಂತದಲ್ಲಿ ಜೊತೆಗೂಡಿದ ಕ್ಯಾಮರೋನ್ ಗ್ರೀನ್ ಹಾಗೂ ಟಿಮ್ ಡೇವಿಡ್ ಸ್ಫೋಟಕ ಇನಿಂಗ್ಸ್ ಆಡಿದರು. ಪರಿಣಾಮ ಗ್ರೀನ್​ ಬ್ಯಾಟ್​ನಿಂದ 18 ಎಸೆತಗಳಲ್ಲಿ 32 ರನ್ ಮೂಡಿಬಂತು. ಅತ್ತ ಟಿಮ್ ಡೇವಿಡ್ 12 ಎಸೆತಗಳಲ್ಲಿ 4 ಸಿಕ್ಸ್, 1 ಫೋರ್​ನೊಂದಿಗೆ 30 ರನ್ ಚಚ್ಚಿದರು. ಆ ಬಳಿಕ ಬಂದ ಮಿಚೆಲ್ ಓವನ್ 17 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 37 ರನ್ ಬಾರಿಸಿದರು.

ಈ ಹಂತದಲ್ಲಿ ಜೊತೆಗೂಡಿದ ಕ್ಯಾಮರೋನ್ ಗ್ರೀನ್ ಹಾಗೂ ಟಿಮ್ ಡೇವಿಡ್ ಸ್ಫೋಟಕ ಇನಿಂಗ್ಸ್ ಆಡಿದರು. ಪರಿಣಾಮ ಗ್ರೀನ್​ ಬ್ಯಾಟ್​ನಿಂದ 18 ಎಸೆತಗಳಲ್ಲಿ 32 ರನ್ ಮೂಡಿಬಂತು. ಅತ್ತ ಟಿಮ್ ಡೇವಿಡ್ 12 ಎಸೆತಗಳಲ್ಲಿ 4 ಸಿಕ್ಸ್, 1 ಫೋರ್​ನೊಂದಿಗೆ 30 ರನ್ ಚಚ್ಚಿದರು. ಆ ಬಳಿಕ ಬಂದ ಮಿಚೆಲ್ ಓವನ್ 17 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 37 ರನ್ ಬಾರಿಸಿದರು.

4 / 5
ಈ ಮೂಲಕ ಆಸ್ಟ್ರೇಲಿಯಾ ತಂಡವು 17 ಓವರ್​ಗಳಲ್ಲಿ 173 ರನ್​ಗಳಿಸಿ 3 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು ಇದೇ ಮೊದಲ ಬಾರಿಗೆ 5-0 ಅಂತರದಿಂದ ಟಿ20 ಸರಣಿ ಗೆದ್ದ ದಾಖಲೆ ಬರೆದಿದೆ. ಅಂದರೆ ಈವರೆಗೆ ಆಸೀಸ್ ಪಡೆ ಯಾವುದೇ ತಂಡದ ವಿರುದ್ಧ 5-0 ಅಂತರದಿಂದ ಟಿ20 ಸರಣಿ ಗೆದ್ದಿರಲಿಲ್ಲ. ಇದೀಗ ವೆಸ್ಟ್ ಇಂಡೀಸ್ ತಂಡವನ್ನು ವೈಟ್ ವಾಶ್ ಮಾಡುವ ಮೂಲಕ ಆಸ್ಟ್ರೇಲಿಯಾ ಹೊಸ ಇತಿಹಾಸ ನಿರ್ಮಿಸಿದೆ.

ಈ ಮೂಲಕ ಆಸ್ಟ್ರೇಲಿಯಾ ತಂಡವು 17 ಓವರ್​ಗಳಲ್ಲಿ 173 ರನ್​ಗಳಿಸಿ 3 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು ಇದೇ ಮೊದಲ ಬಾರಿಗೆ 5-0 ಅಂತರದಿಂದ ಟಿ20 ಸರಣಿ ಗೆದ್ದ ದಾಖಲೆ ಬರೆದಿದೆ. ಅಂದರೆ ಈವರೆಗೆ ಆಸೀಸ್ ಪಡೆ ಯಾವುದೇ ತಂಡದ ವಿರುದ್ಧ 5-0 ಅಂತರದಿಂದ ಟಿ20 ಸರಣಿ ಗೆದ್ದಿರಲಿಲ್ಲ. ಇದೀಗ ವೆಸ್ಟ್ ಇಂಡೀಸ್ ತಂಡವನ್ನು ವೈಟ್ ವಾಶ್ ಮಾಡುವ ಮೂಲಕ ಆಸ್ಟ್ರೇಲಿಯಾ ಹೊಸ ಇತಿಹಾಸ ನಿರ್ಮಿಸಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ