AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ಪಡೆಯ ಗರ್ವಭಂಗ: 34 ವರ್ಷಗಳ ಬಳಿಕ ಅತ್ಯಂತ ಹೀನಾಯ ಸೋಲು

Australia vs South Africa: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 50 ಓವರ್​ಗಳಲ್ಲಿ 296 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಕೇವಲ 198 ರನ್​ಗಳಿಗೆ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: Aug 20, 2025 | 10:25 AM

Share
ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಹೀನಾಯ ಸೋಲನುಭವಿಸಿದೆ. ಕೈರ್ನ್ಸ್​ನ ಕಝಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡಕ್ಕೆ ಐಡೆನ್ ಮಾರ್ಕ್ರಾಮ್ ಹಾಗೂ ರಯಾನ್ ರಿಕೆಲ್ಟನ್ ಭರ್ಜರಿ ಆರಂಭ ಒದಗಿಸಿದ್ದರು.

ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಹೀನಾಯ ಸೋಲನುಭವಿಸಿದೆ. ಕೈರ್ನ್ಸ್​ನ ಕಝಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡಕ್ಕೆ ಐಡೆನ್ ಮಾರ್ಕ್ರಾಮ್ ಹಾಗೂ ರಯಾನ್ ರಿಕೆಲ್ಟನ್ ಭರ್ಜರಿ ಆರಂಭ ಒದಗಿಸಿದ್ದರು.

1 / 5
ಮೊದಲ ವಿಕೆಟ್​ಗೆ 92 ರನ್​ಗಳ ಜೊತೆಯಾಟವಾಡಿದ ಬಳಿಕ ರಯಾನ್ ರಿಕೆಲ್ಟನ್ 33 ಔಟಾದರು. ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಮುಂದುವರೆಸಿದ ಐಡೆನ್ ಮಾರ್ಕ್ರಾಮ್ 81 ಎಸೆತಗಳಲ್ಲಿ 9 ಫೋರ್​ಗಳೊಂದಿಗೆ 82 ರನ್ ಬಾರಿಸಿದರು. ಆ ಬಳಿಕ ಬಂದ ಟೆಂಬಾ ಬವುಮಾ 65 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಸೌತ್ ಆಫ್ರಿಕಾ ತಂಡವು 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 296 ರನ್ ಕಲೆಹಾಕಿತು.

ಮೊದಲ ವಿಕೆಟ್​ಗೆ 92 ರನ್​ಗಳ ಜೊತೆಯಾಟವಾಡಿದ ಬಳಿಕ ರಯಾನ್ ರಿಕೆಲ್ಟನ್ 33 ಔಟಾದರು. ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಮುಂದುವರೆಸಿದ ಐಡೆನ್ ಮಾರ್ಕ್ರಾಮ್ 81 ಎಸೆತಗಳಲ್ಲಿ 9 ಫೋರ್​ಗಳೊಂದಿಗೆ 82 ರನ್ ಬಾರಿಸಿದರು. ಆ ಬಳಿಕ ಬಂದ ಟೆಂಬಾ ಬವುಮಾ 65 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಸೌತ್ ಆಫ್ರಿಕಾ ತಂಡವು 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 296 ರನ್ ಕಲೆಹಾಕಿತು.

2 / 5
297 ರನ್​ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡಕ್ಕೆ ಅನುಭವಿ ಸ್ಪಿನ್ನರ್ ಕೇಶವ್ ಮಹಾರಾಜ್ ಆಘಾತ ನೀಡಿದರು. ಮೊದಲ ವಿಕೆಟ್​ಗೆ 60 ರನ್​ ಪೇರಿಸಿದ ಆಸೀಸ್ ಪಡೆ ಕೇಶವ್ ಮಹರಾಜ್ ಸ್ಪಿನ್ ಮೋಡಿಯಿಂದಾಗಿ ದಿಢೀರ್ ಕುಸಿತಕ್ಕೊಳಗಾಯಿತು. ಇದಾಗ್ಯೂ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಮಾರ್ಷ್ 88 ರನ್​ ಕಲೆಹಾಕಿದರು. ಆದರೆ ಮತ್ತೊಂದೆಡೆ ಮಹಾರಾಜ್ ಸ್ಪಿನ್ ಮೋಡಿಯೊಂದಿಗೆ 33 ರನ್ ನೀಡಿ 5 ವಿಕೆಟ್ ಕಬಳಿಸಿದರು. ಪರಿಣಾಮ ಆಸ್ಟ್ರೇಲಿಯಾ ತಂಡವು 40.5 ಓವರ್​ಗಳಲ್ಲಿ 198 ರನ್​ಗಳಿಸಿ ಆಲೌಟ್ ಆಯಿತು.

297 ರನ್​ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡಕ್ಕೆ ಅನುಭವಿ ಸ್ಪಿನ್ನರ್ ಕೇಶವ್ ಮಹಾರಾಜ್ ಆಘಾತ ನೀಡಿದರು. ಮೊದಲ ವಿಕೆಟ್​ಗೆ 60 ರನ್​ ಪೇರಿಸಿದ ಆಸೀಸ್ ಪಡೆ ಕೇಶವ್ ಮಹರಾಜ್ ಸ್ಪಿನ್ ಮೋಡಿಯಿಂದಾಗಿ ದಿಢೀರ್ ಕುಸಿತಕ್ಕೊಳಗಾಯಿತು. ಇದಾಗ್ಯೂ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಮಾರ್ಷ್ 88 ರನ್​ ಕಲೆಹಾಕಿದರು. ಆದರೆ ಮತ್ತೊಂದೆಡೆ ಮಹಾರಾಜ್ ಸ್ಪಿನ್ ಮೋಡಿಯೊಂದಿಗೆ 33 ರನ್ ನೀಡಿ 5 ವಿಕೆಟ್ ಕಬಳಿಸಿದರು. ಪರಿಣಾಮ ಆಸ್ಟ್ರೇಲಿಯಾ ತಂಡವು 40.5 ಓವರ್​ಗಳಲ್ಲಿ 198 ರನ್​ಗಳಿಸಿ ಆಲೌಟ್ ಆಯಿತು.

3 / 5
ಈ ಮೂಲಕ ಸೌತ್ ಆಫ್ರಿಕಾ ತಂಡವು 98 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಇತ್ತ ಈ ಹೀನಾಯ ಸೋಲಿನೊಂದಿಗೆ ಆಸ್ಟ್ರೇಲಿಯಾ ತಂಡವು 34 ವರ್ಷಗಳ ಬಳಿಕ ಕಾಂಗರೂನಾಡಿನಲ್ಲಿ ಭಾರೀ ಮುಖಭಂಗ ಅನುಭವಿಸಿದೆ. ಅಂದರೆ ಕಳೆದ ಮೂರು ದಶಕಗಳಿಂದ ಆಸ್ಟ್ರೇಲಿಯಾ ತಂಡವು ತವರಿನಲ್ಲಿ ಇಂತಹದೊಂದು ಹೀನಾಯ ಸೋಲನುಭವಿಸಿರಲಿಲ್ಲ.

ಈ ಮೂಲಕ ಸೌತ್ ಆಫ್ರಿಕಾ ತಂಡವು 98 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಇತ್ತ ಈ ಹೀನಾಯ ಸೋಲಿನೊಂದಿಗೆ ಆಸ್ಟ್ರೇಲಿಯಾ ತಂಡವು 34 ವರ್ಷಗಳ ಬಳಿಕ ಕಾಂಗರೂನಾಡಿನಲ್ಲಿ ಭಾರೀ ಮುಖಭಂಗ ಅನುಭವಿಸಿದೆ. ಅಂದರೆ ಕಳೆದ ಮೂರು ದಶಕಗಳಿಂದ ಆಸ್ಟ್ರೇಲಿಯಾ ತಂಡವು ತವರಿನಲ್ಲಿ ಇಂತಹದೊಂದು ಹೀನಾಯ ಸೋಲನುಭವಿಸಿರಲಿಲ್ಲ.

4 / 5
1991 ರಲ್ಲಿ ಟೀಮ್ ಇಂಡಿಯಾ ವಿರುದ್ಧ  107 ರನ್​ಗಳ ಸೋಲನುಭವಿಸಿದ ಬಳಿಕ ಆಸ್ಟ್ರೇಲಿಯಾ ತಂಡವು ತವರಿನಲ್ಲಿ ಯಾವುದೇ ತಂಡದ ವಿರುದ್ಧ ಹೀನಾಯವಾಗಿ ಸೋತಿರಲಿಲ್ಲ. ಆದರೀಗ ಬರೋಬ್ಬರಿ 34 ವರ್ಷಗಳ ಬಳಿಕ ಆಸ್ಟ್ರೇಲಿಯಾ ತಂಡವನ್ನು ಮಕಾಡೆ ಮಲಗಿಸುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ. ಅದು ಕೂಡ ಬರೋಬ್ಬರಿ 98 ರನ್​ಗಳಿಂದ ಸೋಲುಣಿಸುವ ಮೂಲಕ ಎಂಬುದು ವಿಶೇಷ.

1991 ರಲ್ಲಿ ಟೀಮ್ ಇಂಡಿಯಾ ವಿರುದ್ಧ  107 ರನ್​ಗಳ ಸೋಲನುಭವಿಸಿದ ಬಳಿಕ ಆಸ್ಟ್ರೇಲಿಯಾ ತಂಡವು ತವರಿನಲ್ಲಿ ಯಾವುದೇ ತಂಡದ ವಿರುದ್ಧ ಹೀನಾಯವಾಗಿ ಸೋತಿರಲಿಲ್ಲ. ಆದರೀಗ ಬರೋಬ್ಬರಿ 34 ವರ್ಷಗಳ ಬಳಿಕ ಆಸ್ಟ್ರೇಲಿಯಾ ತಂಡವನ್ನು ಮಕಾಡೆ ಮಲಗಿಸುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ. ಅದು ಕೂಡ ಬರೋಬ್ಬರಿ 98 ರನ್​ಗಳಿಂದ ಸೋಲುಣಿಸುವ ಮೂಲಕ ಎಂಬುದು ವಿಶೇಷ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ