AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Axar Patel: ವಿಶೇಷ ಮೈಲುಗಲ್ಲು ದಾಟಿದ ಅಕ್ಷರ್ ಪಟೇಲ್

India vs Afghanistan: ಅಕ್ಷರ್ ಪಟೇಲ್ ಅವರ ಈ ಸ್ಪಿನ್ ಮೋಡಿಯಿಂದಾಗಿ ಭಾರತ ತಂಡವು ಅಫ್ಘಾನಿಸ್ತಾನ್ ತಂಡವನ್ನು 20 ಓವರ್​ಗಳಲ್ಲಿ 172 ರನ್​ಗಳಿಗೆ ಆಲೌಟ್ ಮಾಡಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು.

TV9 Web
| Edited By: |

Updated on: Jan 15, 2024 | 8:34 AM

Share
ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಅಕ್ಷರ್ ಪಟೇಲ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಅಕ್ಷರ್ 17 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.

ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಅಕ್ಷರ್ ಪಟೇಲ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಅಕ್ಷರ್ 17 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.

1 / 6
ಈ ಎರಡು ವಿಕೆಟ್​ಗಳೊಂದಿಗೆ ಅಕ್ಷರ್ ಪಟೇಲ್ ಟಿ20 ಕ್ರಿಕೆಟ್​ನಲ್ಲಿ 200 ವಿಕೆಟ್​ಗಳ ಸಾಧನೆ ಮಾಡಿದರು. ಒಟ್ಟು 230 ಟಿ20 ಇನಿಂಗ್ಸ್​ಗಳ ಮೂಲಕ ಎಡಗೈ ಸ್ಪಿನ್ನರ್ ಈ ದಾಖಲೆ ಬರೆದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 11ನೇ ಬೌಲರ್​ ಎನಿಸಿಕೊಂಡರು.

ಈ ಎರಡು ವಿಕೆಟ್​ಗಳೊಂದಿಗೆ ಅಕ್ಷರ್ ಪಟೇಲ್ ಟಿ20 ಕ್ರಿಕೆಟ್​ನಲ್ಲಿ 200 ವಿಕೆಟ್​ಗಳ ಸಾಧನೆ ಮಾಡಿದರು. ಒಟ್ಟು 230 ಟಿ20 ಇನಿಂಗ್ಸ್​ಗಳ ಮೂಲಕ ಎಡಗೈ ಸ್ಪಿನ್ನರ್ ಈ ದಾಖಲೆ ಬರೆದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 11ನೇ ಬೌಲರ್​ ಎನಿಸಿಕೊಂಡರು.

2 / 6
 ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಯುಜ್ವೇಂದ್ರ ಚಹಲ್. 287 ಟಿ20 ಇನಿಂಗ್ಸ್​ಗಳಲ್ಲಿ ಸ್ಪಿನ್ ಮೋಡಿ ಮಾಡಿರುವ ಚಹಲ್ 336 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಯುಜ್ವೇಂದ್ರ ಚಹಲ್. 287 ಟಿ20 ಇನಿಂಗ್ಸ್​ಗಳಲ್ಲಿ ಸ್ಪಿನ್ ಮೋಡಿ ಮಾಡಿರುವ ಚಹಲ್ 336 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

3 / 6
ಇನ್ನು ದ್ವಿತೀಯ ಸ್ಥಾನದಲ್ಲಿ ಪಿಯೂಷ್ ಚಾವ್ಲಾ ಇದ್ದಾರೆ. 283 ಟಿ20 ಇನಿಂಗ್ಸ್ ಆಡಿರುವ ಚಾವ್ಲಾ 302 ವಿಕೆಟ್​ಗಳನ್ನು ಕಬಳಿಸಿ ಭಾರತದ 2ನೇ ಯಶಸ್ವಿ ಟಿ20 ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

ಇನ್ನು ದ್ವಿತೀಯ ಸ್ಥಾನದಲ್ಲಿ ಪಿಯೂಷ್ ಚಾವ್ಲಾ ಇದ್ದಾರೆ. 283 ಟಿ20 ಇನಿಂಗ್ಸ್ ಆಡಿರುವ ಚಾವ್ಲಾ 302 ವಿಕೆಟ್​ಗಳನ್ನು ಕಬಳಿಸಿ ಭಾರತದ 2ನೇ ಯಶಸ್ವಿ ಟಿ20 ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

4 / 6
ಹಾಗೆಯೇ ರವಿಚಂದ್ರನ್ ಅಶ್ವಿನ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 306 ಟಿ20 ಇನಿಂಗ್ಸ್​ಗಳಿಂದ ಒಟ್ಟು 302 ವಿಕೆಟ್ ಕಬಳಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಮುನ್ನೂರು ವಿಕೆಟ್​ ಕಬಳಿಸಿದ 3ನೇ ಭಾರತೀಯ ಎನಿಸಿಕೊಂಡಿದ್ದಾರೆ. ಯುಜ್ವೇಂದ್ರ ಚಹಲ್, ಪಿಯೂಷ್ ಚಾವ್ಲಾ ಹಾಗೂ ರವಿಚಂದ್ರನ್ ಅಶ್ವಿನ್ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬೌಲರ್ ಟಿ20 ಕ್ರಿಕೆಟ್​ನಲ್ಲಿ 300 ವಿಕೆಟ್​ಗಳನ್ನು ಕಬಳಿಸಿಲ್ಲ ಎಂಬುದು ವಿಶೇಷ.

ಹಾಗೆಯೇ ರವಿಚಂದ್ರನ್ ಅಶ್ವಿನ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 306 ಟಿ20 ಇನಿಂಗ್ಸ್​ಗಳಿಂದ ಒಟ್ಟು 302 ವಿಕೆಟ್ ಕಬಳಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಮುನ್ನೂರು ವಿಕೆಟ್​ ಕಬಳಿಸಿದ 3ನೇ ಭಾರತೀಯ ಎನಿಸಿಕೊಂಡಿದ್ದಾರೆ. ಯುಜ್ವೇಂದ್ರ ಚಹಲ್, ಪಿಯೂಷ್ ಚಾವ್ಲಾ ಹಾಗೂ ರವಿಚಂದ್ರನ್ ಅಶ್ವಿನ್ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬೌಲರ್ ಟಿ20 ಕ್ರಿಕೆಟ್​ನಲ್ಲಿ 300 ವಿಕೆಟ್​ಗಳನ್ನು ಕಬಳಿಸಿಲ್ಲ ಎಂಬುದು ವಿಶೇಷ.

5 / 6
ಇನ್ನು ಅಕ್ಷರ್ ಪಟೇಲ್ ಅವರ ಈ ಸ್ಪಿನ್ ಮೋಡಿಯಿಂದಾಗಿ ಭಾರತ ತಂಡವು ಅಫ್ಘಾನಿಸ್ತಾನ್ ತಂಡವನ್ನು 20 ಓವರ್​ಗಳಲ್ಲಿ 172 ರನ್​ಗಳಿಗೆ ಆಲೌಟ್ ಮಾಡಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು. ಈ ಮೂಲಕ 15.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್​ಗಳಿಸಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಅಕ್ಷರ್ ಪಟೇಲ್ ಅವರ ಈ ಸ್ಪಿನ್ ಮೋಡಿಯಿಂದಾಗಿ ಭಾರತ ತಂಡವು ಅಫ್ಘಾನಿಸ್ತಾನ್ ತಂಡವನ್ನು 20 ಓವರ್​ಗಳಲ್ಲಿ 172 ರನ್​ಗಳಿಗೆ ಆಲೌಟ್ ಮಾಡಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು. ಈ ಮೂಲಕ 15.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್​ಗಳಿಸಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

6 / 6
Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ