AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Axar Patel: ವಿಶೇಷ ಮೈಲುಗಲ್ಲು ದಾಟಿದ ಅಕ್ಷರ್ ಪಟೇಲ್

India vs Afghanistan: ಅಕ್ಷರ್ ಪಟೇಲ್ ಅವರ ಈ ಸ್ಪಿನ್ ಮೋಡಿಯಿಂದಾಗಿ ಭಾರತ ತಂಡವು ಅಫ್ಘಾನಿಸ್ತಾನ್ ತಂಡವನ್ನು 20 ಓವರ್​ಗಳಲ್ಲಿ 172 ರನ್​ಗಳಿಗೆ ಆಲೌಟ್ ಮಾಡಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು.

TV9 Web
| Edited By: |

Updated on: Jan 15, 2024 | 8:34 AM

Share
ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಅಕ್ಷರ್ ಪಟೇಲ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಅಕ್ಷರ್ 17 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.

ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಅಕ್ಷರ್ ಪಟೇಲ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಅಕ್ಷರ್ 17 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.

1 / 6
ಈ ಎರಡು ವಿಕೆಟ್​ಗಳೊಂದಿಗೆ ಅಕ್ಷರ್ ಪಟೇಲ್ ಟಿ20 ಕ್ರಿಕೆಟ್​ನಲ್ಲಿ 200 ವಿಕೆಟ್​ಗಳ ಸಾಧನೆ ಮಾಡಿದರು. ಒಟ್ಟು 230 ಟಿ20 ಇನಿಂಗ್ಸ್​ಗಳ ಮೂಲಕ ಎಡಗೈ ಸ್ಪಿನ್ನರ್ ಈ ದಾಖಲೆ ಬರೆದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 11ನೇ ಬೌಲರ್​ ಎನಿಸಿಕೊಂಡರು.

ಈ ಎರಡು ವಿಕೆಟ್​ಗಳೊಂದಿಗೆ ಅಕ್ಷರ್ ಪಟೇಲ್ ಟಿ20 ಕ್ರಿಕೆಟ್​ನಲ್ಲಿ 200 ವಿಕೆಟ್​ಗಳ ಸಾಧನೆ ಮಾಡಿದರು. ಒಟ್ಟು 230 ಟಿ20 ಇನಿಂಗ್ಸ್​ಗಳ ಮೂಲಕ ಎಡಗೈ ಸ್ಪಿನ್ನರ್ ಈ ದಾಖಲೆ ಬರೆದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 11ನೇ ಬೌಲರ್​ ಎನಿಸಿಕೊಂಡರು.

2 / 6
 ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಯುಜ್ವೇಂದ್ರ ಚಹಲ್. 287 ಟಿ20 ಇನಿಂಗ್ಸ್​ಗಳಲ್ಲಿ ಸ್ಪಿನ್ ಮೋಡಿ ಮಾಡಿರುವ ಚಹಲ್ 336 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಯುಜ್ವೇಂದ್ರ ಚಹಲ್. 287 ಟಿ20 ಇನಿಂಗ್ಸ್​ಗಳಲ್ಲಿ ಸ್ಪಿನ್ ಮೋಡಿ ಮಾಡಿರುವ ಚಹಲ್ 336 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

3 / 6
ಇನ್ನು ದ್ವಿತೀಯ ಸ್ಥಾನದಲ್ಲಿ ಪಿಯೂಷ್ ಚಾವ್ಲಾ ಇದ್ದಾರೆ. 283 ಟಿ20 ಇನಿಂಗ್ಸ್ ಆಡಿರುವ ಚಾವ್ಲಾ 302 ವಿಕೆಟ್​ಗಳನ್ನು ಕಬಳಿಸಿ ಭಾರತದ 2ನೇ ಯಶಸ್ವಿ ಟಿ20 ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

ಇನ್ನು ದ್ವಿತೀಯ ಸ್ಥಾನದಲ್ಲಿ ಪಿಯೂಷ್ ಚಾವ್ಲಾ ಇದ್ದಾರೆ. 283 ಟಿ20 ಇನಿಂಗ್ಸ್ ಆಡಿರುವ ಚಾವ್ಲಾ 302 ವಿಕೆಟ್​ಗಳನ್ನು ಕಬಳಿಸಿ ಭಾರತದ 2ನೇ ಯಶಸ್ವಿ ಟಿ20 ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

4 / 6
ಹಾಗೆಯೇ ರವಿಚಂದ್ರನ್ ಅಶ್ವಿನ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 306 ಟಿ20 ಇನಿಂಗ್ಸ್​ಗಳಿಂದ ಒಟ್ಟು 302 ವಿಕೆಟ್ ಕಬಳಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಮುನ್ನೂರು ವಿಕೆಟ್​ ಕಬಳಿಸಿದ 3ನೇ ಭಾರತೀಯ ಎನಿಸಿಕೊಂಡಿದ್ದಾರೆ. ಯುಜ್ವೇಂದ್ರ ಚಹಲ್, ಪಿಯೂಷ್ ಚಾವ್ಲಾ ಹಾಗೂ ರವಿಚಂದ್ರನ್ ಅಶ್ವಿನ್ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬೌಲರ್ ಟಿ20 ಕ್ರಿಕೆಟ್​ನಲ್ಲಿ 300 ವಿಕೆಟ್​ಗಳನ್ನು ಕಬಳಿಸಿಲ್ಲ ಎಂಬುದು ವಿಶೇಷ.

ಹಾಗೆಯೇ ರವಿಚಂದ್ರನ್ ಅಶ್ವಿನ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 306 ಟಿ20 ಇನಿಂಗ್ಸ್​ಗಳಿಂದ ಒಟ್ಟು 302 ವಿಕೆಟ್ ಕಬಳಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಮುನ್ನೂರು ವಿಕೆಟ್​ ಕಬಳಿಸಿದ 3ನೇ ಭಾರತೀಯ ಎನಿಸಿಕೊಂಡಿದ್ದಾರೆ. ಯುಜ್ವೇಂದ್ರ ಚಹಲ್, ಪಿಯೂಷ್ ಚಾವ್ಲಾ ಹಾಗೂ ರವಿಚಂದ್ರನ್ ಅಶ್ವಿನ್ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬೌಲರ್ ಟಿ20 ಕ್ರಿಕೆಟ್​ನಲ್ಲಿ 300 ವಿಕೆಟ್​ಗಳನ್ನು ಕಬಳಿಸಿಲ್ಲ ಎಂಬುದು ವಿಶೇಷ.

5 / 6
ಇನ್ನು ಅಕ್ಷರ್ ಪಟೇಲ್ ಅವರ ಈ ಸ್ಪಿನ್ ಮೋಡಿಯಿಂದಾಗಿ ಭಾರತ ತಂಡವು ಅಫ್ಘಾನಿಸ್ತಾನ್ ತಂಡವನ್ನು 20 ಓವರ್​ಗಳಲ್ಲಿ 172 ರನ್​ಗಳಿಗೆ ಆಲೌಟ್ ಮಾಡಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು. ಈ ಮೂಲಕ 15.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್​ಗಳಿಸಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಅಕ್ಷರ್ ಪಟೇಲ್ ಅವರ ಈ ಸ್ಪಿನ್ ಮೋಡಿಯಿಂದಾಗಿ ಭಾರತ ತಂಡವು ಅಫ್ಘಾನಿಸ್ತಾನ್ ತಂಡವನ್ನು 20 ಓವರ್​ಗಳಲ್ಲಿ 172 ರನ್​ಗಳಿಗೆ ಆಲೌಟ್ ಮಾಡಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು. ಈ ಮೂಲಕ 15.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್​ಗಳಿಸಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ