AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Axar Patel: ವಿಶೇಷ ಮೈಲುಗಲ್ಲು ದಾಟಿದ ಅಕ್ಷರ್ ಪಟೇಲ್

India vs Afghanistan: ಅಕ್ಷರ್ ಪಟೇಲ್ ಅವರ ಈ ಸ್ಪಿನ್ ಮೋಡಿಯಿಂದಾಗಿ ಭಾರತ ತಂಡವು ಅಫ್ಘಾನಿಸ್ತಾನ್ ತಂಡವನ್ನು 20 ಓವರ್​ಗಳಲ್ಲಿ 172 ರನ್​ಗಳಿಗೆ ಆಲೌಟ್ ಮಾಡಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು.

TV9 Web
| Edited By: |

Updated on: Jan 15, 2024 | 8:34 AM

Share
ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಅಕ್ಷರ್ ಪಟೇಲ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಅಕ್ಷರ್ 17 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.

ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಅಕ್ಷರ್ ಪಟೇಲ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಅಕ್ಷರ್ 17 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.

1 / 6
ಈ ಎರಡು ವಿಕೆಟ್​ಗಳೊಂದಿಗೆ ಅಕ್ಷರ್ ಪಟೇಲ್ ಟಿ20 ಕ್ರಿಕೆಟ್​ನಲ್ಲಿ 200 ವಿಕೆಟ್​ಗಳ ಸಾಧನೆ ಮಾಡಿದರು. ಒಟ್ಟು 230 ಟಿ20 ಇನಿಂಗ್ಸ್​ಗಳ ಮೂಲಕ ಎಡಗೈ ಸ್ಪಿನ್ನರ್ ಈ ದಾಖಲೆ ಬರೆದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 11ನೇ ಬೌಲರ್​ ಎನಿಸಿಕೊಂಡರು.

ಈ ಎರಡು ವಿಕೆಟ್​ಗಳೊಂದಿಗೆ ಅಕ್ಷರ್ ಪಟೇಲ್ ಟಿ20 ಕ್ರಿಕೆಟ್​ನಲ್ಲಿ 200 ವಿಕೆಟ್​ಗಳ ಸಾಧನೆ ಮಾಡಿದರು. ಒಟ್ಟು 230 ಟಿ20 ಇನಿಂಗ್ಸ್​ಗಳ ಮೂಲಕ ಎಡಗೈ ಸ್ಪಿನ್ನರ್ ಈ ದಾಖಲೆ ಬರೆದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 11ನೇ ಬೌಲರ್​ ಎನಿಸಿಕೊಂಡರು.

2 / 6
 ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಯುಜ್ವೇಂದ್ರ ಚಹಲ್. 287 ಟಿ20 ಇನಿಂಗ್ಸ್​ಗಳಲ್ಲಿ ಸ್ಪಿನ್ ಮೋಡಿ ಮಾಡಿರುವ ಚಹಲ್ 336 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಯುಜ್ವೇಂದ್ರ ಚಹಲ್. 287 ಟಿ20 ಇನಿಂಗ್ಸ್​ಗಳಲ್ಲಿ ಸ್ಪಿನ್ ಮೋಡಿ ಮಾಡಿರುವ ಚಹಲ್ 336 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

3 / 6
ಇನ್ನು ದ್ವಿತೀಯ ಸ್ಥಾನದಲ್ಲಿ ಪಿಯೂಷ್ ಚಾವ್ಲಾ ಇದ್ದಾರೆ. 283 ಟಿ20 ಇನಿಂಗ್ಸ್ ಆಡಿರುವ ಚಾವ್ಲಾ 302 ವಿಕೆಟ್​ಗಳನ್ನು ಕಬಳಿಸಿ ಭಾರತದ 2ನೇ ಯಶಸ್ವಿ ಟಿ20 ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

ಇನ್ನು ದ್ವಿತೀಯ ಸ್ಥಾನದಲ್ಲಿ ಪಿಯೂಷ್ ಚಾವ್ಲಾ ಇದ್ದಾರೆ. 283 ಟಿ20 ಇನಿಂಗ್ಸ್ ಆಡಿರುವ ಚಾವ್ಲಾ 302 ವಿಕೆಟ್​ಗಳನ್ನು ಕಬಳಿಸಿ ಭಾರತದ 2ನೇ ಯಶಸ್ವಿ ಟಿ20 ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

4 / 6
ಹಾಗೆಯೇ ರವಿಚಂದ್ರನ್ ಅಶ್ವಿನ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 306 ಟಿ20 ಇನಿಂಗ್ಸ್​ಗಳಿಂದ ಒಟ್ಟು 302 ವಿಕೆಟ್ ಕಬಳಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಮುನ್ನೂರು ವಿಕೆಟ್​ ಕಬಳಿಸಿದ 3ನೇ ಭಾರತೀಯ ಎನಿಸಿಕೊಂಡಿದ್ದಾರೆ. ಯುಜ್ವೇಂದ್ರ ಚಹಲ್, ಪಿಯೂಷ್ ಚಾವ್ಲಾ ಹಾಗೂ ರವಿಚಂದ್ರನ್ ಅಶ್ವಿನ್ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬೌಲರ್ ಟಿ20 ಕ್ರಿಕೆಟ್​ನಲ್ಲಿ 300 ವಿಕೆಟ್​ಗಳನ್ನು ಕಬಳಿಸಿಲ್ಲ ಎಂಬುದು ವಿಶೇಷ.

ಹಾಗೆಯೇ ರವಿಚಂದ್ರನ್ ಅಶ್ವಿನ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 306 ಟಿ20 ಇನಿಂಗ್ಸ್​ಗಳಿಂದ ಒಟ್ಟು 302 ವಿಕೆಟ್ ಕಬಳಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಮುನ್ನೂರು ವಿಕೆಟ್​ ಕಬಳಿಸಿದ 3ನೇ ಭಾರತೀಯ ಎನಿಸಿಕೊಂಡಿದ್ದಾರೆ. ಯುಜ್ವೇಂದ್ರ ಚಹಲ್, ಪಿಯೂಷ್ ಚಾವ್ಲಾ ಹಾಗೂ ರವಿಚಂದ್ರನ್ ಅಶ್ವಿನ್ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬೌಲರ್ ಟಿ20 ಕ್ರಿಕೆಟ್​ನಲ್ಲಿ 300 ವಿಕೆಟ್​ಗಳನ್ನು ಕಬಳಿಸಿಲ್ಲ ಎಂಬುದು ವಿಶೇಷ.

5 / 6
ಇನ್ನು ಅಕ್ಷರ್ ಪಟೇಲ್ ಅವರ ಈ ಸ್ಪಿನ್ ಮೋಡಿಯಿಂದಾಗಿ ಭಾರತ ತಂಡವು ಅಫ್ಘಾನಿಸ್ತಾನ್ ತಂಡವನ್ನು 20 ಓವರ್​ಗಳಲ್ಲಿ 172 ರನ್​ಗಳಿಗೆ ಆಲೌಟ್ ಮಾಡಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು. ಈ ಮೂಲಕ 15.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್​ಗಳಿಸಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಅಕ್ಷರ್ ಪಟೇಲ್ ಅವರ ಈ ಸ್ಪಿನ್ ಮೋಡಿಯಿಂದಾಗಿ ಭಾರತ ತಂಡವು ಅಫ್ಘಾನಿಸ್ತಾನ್ ತಂಡವನ್ನು 20 ಓವರ್​ಗಳಲ್ಲಿ 172 ರನ್​ಗಳಿಗೆ ಆಲೌಟ್ ಮಾಡಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು. ಈ ಮೂಲಕ 15.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್​ಗಳಿಸಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

6 / 6
Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ