Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam: ಬಾಬರ್ ಅಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಉಡೀಸ್

Babar Azam Records: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ತಂಡದ ಮೊತ್ತ 25 ರನ್ ಆಗುವಷ್ಟರಲ್ಲಿ ಇಬ್ಬರು ಆರಂಭಿಕರು ಪೆವಿಲಿಯನ್​ ಕಡೆ ಮುಖ ಮಾಡಿದ್ದರು. ಈ ಹಂತದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on: Aug 30, 2023 | 8:30 PM

ಏಷ್ಯಾಕಪ್​ನ ಮೊದಲ ಪಂದ್ಯದಲ್ಲೇ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಹೊಸ ಇತಿಹಾಸ ನಿರ್ಮಿಸಿದ್ದಾರೆ. ನೇಪಾಳ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡವು ಮೊದಲು ಬ್ಯಾಟ್ ಮಾಡುವ ನಿರ್ಧಾರ ಮಾಡಿತು.

ಏಷ್ಯಾಕಪ್​ನ ಮೊದಲ ಪಂದ್ಯದಲ್ಲೇ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಹೊಸ ಇತಿಹಾಸ ನಿರ್ಮಿಸಿದ್ದಾರೆ. ನೇಪಾಳ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡವು ಮೊದಲು ಬ್ಯಾಟ್ ಮಾಡುವ ನಿರ್ಧಾರ ಮಾಡಿತು.

1 / 7
ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ತಂಡದ ಮೊತ್ತ 25 ರನ್ ಆಗುವಷ್ಟರಲ್ಲಿ ಇಬ್ಬರು ಆರಂಭಿಕರು ಪೆವಿಲಿಯನ್​ ಕಡೆ ಮುಖ ಮಾಡಿದ್ದರು. ಈ ಹಂತದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ತಂಡದ ಮೊತ್ತ 25 ರನ್ ಆಗುವಷ್ಟರಲ್ಲಿ ಇಬ್ಬರು ಆರಂಭಿಕರು ಪೆವಿಲಿಯನ್​ ಕಡೆ ಮುಖ ಮಾಡಿದ್ದರು. ಈ ಹಂತದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು.

2 / 7
ಆರಂಭದಲ್ಲಿ ನಿಧಾನಗತಿಯ ಬ್ಯಾಟಿಂಗ್​ನೊಂದಿಗೆ ರನ್ ಕಲೆಹಾಕಿದ ಬಾಬರ್ ಅರ್ಧಶತಕದ ಬಳಿಕ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ 109 ಎಸೆತಗಳಲ್ಲಿ ಶತಕ ಪೂರೈಸಿದರು.

ಆರಂಭದಲ್ಲಿ ನಿಧಾನಗತಿಯ ಬ್ಯಾಟಿಂಗ್​ನೊಂದಿಗೆ ರನ್ ಕಲೆಹಾಕಿದ ಬಾಬರ್ ಅರ್ಧಶತಕದ ಬಳಿಕ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ 109 ಎಸೆತಗಳಲ್ಲಿ ಶತಕ ಪೂರೈಸಿದರು.

3 / 7
ಭರ್ಜರಿ ಸೆಂಚುರಿ ಬೆನ್ನಲ್ಲೇ ಬಿರುಸಿನ ಆಟಕ್ಕೆ ಮುಂದಾದ ಬಾಬರ್ ಆಝಂ ನೇಪಾಳ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ 22 ಎಸೆತಗಳಲ್ಲಿ 50 ರನ್​ಗಳು ಮೂಡಿಬಂತು. ಅಂತಿಮವಾಗಿ 131 ಎಸೆತಗಳನ್ನು ಎದುರಿಸಿದ ಬಾಬರ್ 4 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 151 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಭರ್ಜರಿ ಸೆಂಚುರಿ ಬೆನ್ನಲ್ಲೇ ಬಿರುಸಿನ ಆಟಕ್ಕೆ ಮುಂದಾದ ಬಾಬರ್ ಆಝಂ ನೇಪಾಳ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ 22 ಎಸೆತಗಳಲ್ಲಿ 50 ರನ್​ಗಳು ಮೂಡಿಬಂತು. ಅಂತಿಮವಾಗಿ 131 ಎಸೆತಗಳನ್ನು ಎದುರಿಸಿದ ಬಾಬರ್ 4 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 151 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

4 / 7
ಈ 151 ರನ್​ಗಳೊಂದಿಗೆ ಏಷ್ಯಾಕಪ್​ ಇತಿಹಾಸದಲ್ಲೇ ಅತ್ಯಧಿಕ ರನ್ ಬಾರಿಸಿದ ನಾಯಕ ಎಂಬ ದಾಖಲೆ ಬಾಬರ್ ಆಝಂ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

ಈ 151 ರನ್​ಗಳೊಂದಿಗೆ ಏಷ್ಯಾಕಪ್​ ಇತಿಹಾಸದಲ್ಲೇ ಅತ್ಯಧಿಕ ರನ್ ಬಾರಿಸಿದ ನಾಯಕ ಎಂಬ ದಾಖಲೆ ಬಾಬರ್ ಆಝಂ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

5 / 7
2014 ರ ಏಷ್ಯಾಕಪ್​ನಲ್ಲಿ ಬಾಂಗ್ಲಾದೇಶ್ ವಿರುದ್ಧ ಅಂದಿನ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 136 ರನ್ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ ಈ ದಾಖಲೆಯನ್ನು ಬಾಬರ್ ಆಝಂ ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

2014 ರ ಏಷ್ಯಾಕಪ್​ನಲ್ಲಿ ಬಾಂಗ್ಲಾದೇಶ್ ವಿರುದ್ಧ ಅಂದಿನ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 136 ರನ್ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ ಈ ದಾಖಲೆಯನ್ನು ಬಾಬರ್ ಆಝಂ ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

6 / 7
ಅಷ್ಟೇ ಅಲ್ಲದೆ ಏಷ್ಯಾಕಪ್ ಇತಿಹಾಸದಲ್ಲೇ 150+ ಸ್ಕೋರ್​ಗಳಿಸಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೂ ಬಾಬರ್ ಆಝಂ ಪಾತ್ರರಾಗಿದ್ದಾರೆ. ಒಟ್ಟಿನಲ್ಲಿ ಒಂದು ಭರ್ಜರಿ ಶತಕದೊಂದಿಗೆ ಬಾಬರ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

ಅಷ್ಟೇ ಅಲ್ಲದೆ ಏಷ್ಯಾಕಪ್ ಇತಿಹಾಸದಲ್ಲೇ 150+ ಸ್ಕೋರ್​ಗಳಿಸಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೂ ಬಾಬರ್ ಆಝಂ ಪಾತ್ರರಾಗಿದ್ದಾರೆ. ಒಟ್ಟಿನಲ್ಲಿ ಒಂದು ಭರ್ಜರಿ ಶತಕದೊಂದಿಗೆ ಬಾಬರ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

7 / 7
Follow us
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ