AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯ ಬೇಡದ ದಾಖಲೆ ಮುರಿದ ಬಾಬರ್ ಆಝಂ

Babar Azam vs Virat Kohli: ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ ಟಿ೨೦ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿದ್ದಾರೆ. ಆ ದಾಖಲೆ ಬರೆಯುವ ಮುನ್ನವೇ ಬಾಬರ್, ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಬೇಡದ ದಾಖಲೆಯೊಂದನ್ನು ಮುರಿದಿದ್ದಾರೆ. ಆ ದಾಖಲೆ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on:Oct 30, 2025 | 7:25 AM

Share
ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಹೊಸ ದಾಖಲೆ ಬರೆದಿದ್ದಾರೆ. ಆದರೆ ಅದು ಅನಗತ್ಯ ದಾಖಲೆ. ಅಂದರೆ ಟಿ20 ಕ್ರಿಕೆಟ್‌ನಲ್ಲಿ ಸೊನ್ನೆ ಸುತ್ತುವ ಮೂಲಕ ಬೇಡದ ದಾಖಲೆಯೊಂದಕ್ಕೆ ಬಾಬರ್ ಕೊರೊಳೊಡ್ಡಿದ್ದಾರೆ.

ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಹೊಸ ದಾಖಲೆ ಬರೆದಿದ್ದಾರೆ. ಆದರೆ ಅದು ಅನಗತ್ಯ ದಾಖಲೆ. ಅಂದರೆ ಟಿ20 ಕ್ರಿಕೆಟ್‌ನಲ್ಲಿ ಸೊನ್ನೆ ಸುತ್ತುವ ಮೂಲಕ ಬೇಡದ ದಾಖಲೆಯೊಂದಕ್ಕೆ ಬಾಬರ್ ಕೊರೊಳೊಡ್ಡಿದ್ದಾರೆ.

1 / 5
ರಾವಲ್ಪಿಂಡಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಬಾಬರ್ ಆಝಂ ಶೂನ್ಯಕ್ಕೆ ಔಟಾಗಿದ್ದರು. ಹೀಗೆ ಸೊನ್ನೆ ಸುತ್ತುವ ಮೂಲಕ ಪಾಕ್ ಪರ ಟಿ೨೦ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಬಾರಿ ಝೀರೋಗೆ ಔಟಾದ ಬ್ಯಾಟರ್​ಗಳ ಪಟ್ಟಿಯಲ್ಲಿ ಬಾಬರ್ ಮೂರನೇ ಸ್ಥಾನಕ್ಕೇರಿದ್ದಾರೆ.

ರಾವಲ್ಪಿಂಡಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಬಾಬರ್ ಆಝಂ ಶೂನ್ಯಕ್ಕೆ ಔಟಾಗಿದ್ದರು. ಹೀಗೆ ಸೊನ್ನೆ ಸುತ್ತುವ ಮೂಲಕ ಪಾಕ್ ಪರ ಟಿ೨೦ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಬಾರಿ ಝೀರೋಗೆ ಔಟಾದ ಬ್ಯಾಟರ್​ಗಳ ಪಟ್ಟಿಯಲ್ಲಿ ಬಾಬರ್ ಮೂರನೇ ಸ್ಥಾನಕ್ಕೇರಿದ್ದಾರೆ.

2 / 5
ಅಷ್ಟೇ ಅಲ್ಲದೇ ಟಿ೨೦ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಸೊನ್ನೆ ಸುತ್ತಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಭಾರತದ ಪರ 117 ಟಿ೨೦ ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಒಟ್ಟು 7 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಇದೀಗ ಈ ಪಟ್ಟಿಯಲ್ಲಿ ಬಾಬರ್ ಕಿಂಗ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.

ಅಷ್ಟೇ ಅಲ್ಲದೇ ಟಿ೨೦ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಸೊನ್ನೆ ಸುತ್ತಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಭಾರತದ ಪರ 117 ಟಿ೨೦ ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಒಟ್ಟು 7 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಇದೀಗ ಈ ಪಟ್ಟಿಯಲ್ಲಿ ಬಾಬರ್ ಕಿಂಗ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.

3 / 5
ಪಾಕಿಸ್ತಾನ್ ಪರ ಈವರೆಗೆ 129 ಟಿ೨೦ ಪಂದ್ಯಗಳನ್ನಾಡಿರುವ ಬಾಬರ್ ಆಝಂ 122 ಇನಿಂಗ್ಸ್ ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 8 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಟಿ೨೦ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಬಾರಿ ಝೀರೋಗೆ ಔಟಾದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಬಾಬರ್ ಆಝಂ ಕಳಪೆ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಪಾಕಿಸ್ತಾನ್ ಪರ ಈವರೆಗೆ 129 ಟಿ೨೦ ಪಂದ್ಯಗಳನ್ನಾಡಿರುವ ಬಾಬರ್ ಆಝಂ 122 ಇನಿಂಗ್ಸ್ ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 8 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಟಿ೨೦ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಬಾರಿ ಝೀರೋಗೆ ಔಟಾದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಬಾಬರ್ ಆಝಂ ಕಳಪೆ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

4 / 5
ಈ ಕಳಪೆ ದಾಖಲೆಯ ಹೊರತಾಗಿಯೂ ಮುಂದಿನ ಪಂದ್ಯದಲ್ಲಿ ಭರ್ಜರಿ ದಾಖಲೆಯೊಂದು ನಿರ್ಮಿಸುವ ಅವಕಾಶ ಬಾಬರ್ ಆಝಂ ಮುಂದಿದೆ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಟಿ೨೦ ಪಂದ್ಯದಲ್ಲಿ 9 ರನ್ ಗಳಿಸಿದರೆ ಟಿ೨೦ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಬಾಬರ್ ಆಝಂ (4223) ಪಾಲಾಗಲಿದೆ. ಸದ್ಯ ಈ ವಿಶ್ವ ದಾಖಲೆ ರೋಹಿತ್ ಶರ್ಮಾ (4231)  ಹೆಸರಿನಲ್ಲಿದೆ.

ಈ ಕಳಪೆ ದಾಖಲೆಯ ಹೊರತಾಗಿಯೂ ಮುಂದಿನ ಪಂದ್ಯದಲ್ಲಿ ಭರ್ಜರಿ ದಾಖಲೆಯೊಂದು ನಿರ್ಮಿಸುವ ಅವಕಾಶ ಬಾಬರ್ ಆಝಂ ಮುಂದಿದೆ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಟಿ೨೦ ಪಂದ್ಯದಲ್ಲಿ 9 ರನ್ ಗಳಿಸಿದರೆ ಟಿ೨೦ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಬಾಬರ್ ಆಝಂ (4223) ಪಾಲಾಗಲಿದೆ. ಸದ್ಯ ಈ ವಿಶ್ವ ದಾಖಲೆ ರೋಹಿತ್ ಶರ್ಮಾ (4231)  ಹೆಸರಿನಲ್ಲಿದೆ.

5 / 5

Published On - 7:23 am, Thu, 30 October 25

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ