Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಂಟಿ ಎಸೆತಗಳಲ್ಲಿ ಪಲ್ಟಿ: ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ

Champions Trophy 2025: ಚಾಂಪಿಯನ್ಸ್ ಟ್ರೋಫಿ 2025ರ ಉದ್ಘಾಟನಾ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕಿವೀಸ್ ಪಡೆ 320 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಕೇವಲ 260 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ನ್ಯೂಝಿಲೆಂಡ್ 60 ರನ್​ಗಳ ಜಯ ಸಾಧಿಸಿದೆ. ಈ ಸೋಲಿನೊಂದಿಗೆ ಪಾಕ್ ಆಟಗಾರ ಬಾಬರ್ ಆಝಂ ಅನಗತ್ಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 20, 2025 | 7:54 AM

ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಪಂದ್ಯದಲ್ಲೇ ಆತಿಥೇಯ ಪಾಕಿಸ್ತಾನ್ ತಂಡ ಮುಗ್ಗರಿಸಿದೆ. ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿ ಪಾಕ್ ತಂಡದ ಮಾಜಿ ನಾಯಕ ಬಾಬರ್ ಆಝಂ ಹೀನಾಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಪಂದ್ಯದಲ್ಲೇ ಆತಿಥೇಯ ಪಾಕಿಸ್ತಾನ್ ತಂಡ ಮುಗ್ಗರಿಸಿದೆ. ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿ ಪಾಕ್ ತಂಡದ ಮಾಜಿ ನಾಯಕ ಬಾಬರ್ ಆಝಂ ಹೀನಾಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಪರ ವಿಲ್ ಯಂಗ್ (107) ಹಾಗೂ ಟಾಮ್ ಲ್ಯಾಥಮ್ (118) ಶತಕ ಬಾರಿಸಿದರು. ಈ ಶತಕಗಳ ನೆರವಿನಿಂದ ನ್ಯೂಝಿಲೆಂಡ್ ತಂಡ 50 ಓವರುಗಳಲ್ಲಿ 320 ಕಲೆಹಾಕಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಪರ ವಿಲ್ ಯಂಗ್ (107) ಹಾಗೂ ಟಾಮ್ ಲ್ಯಾಥಮ್ (118) ಶತಕ ಬಾರಿಸಿದರು. ಈ ಶತಕಗಳ ನೆರವಿನಿಂದ ನ್ಯೂಝಿಲೆಂಡ್ ತಂಡ 50 ಓವರುಗಳಲ್ಲಿ 320 ಕಲೆಹಾಕಿತು.

2 / 6
321 ರನ್ ಗಳ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಪರ ಬಾಬರ್ ಆಝಂ ಹಾಗೂ ಸೌದ್ ಶಕೀಲ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. 6 ರನ್ ಗಳಿಸಿ ಸೌದ್ ಔಟಾದರೆ, ಬಾಬರ್ ಮಾತ್ರ ಕ್ರೀಸ್ ಕಚ್ಚಿ ನಿಂತಿದ್ದರು. ಇದಾಗ್ಯೂ ಕಿವೀಸ್ ಬೌಲರ್‌ಗಳ ಎದುರು ರನ್ ಗಳಿಸಲು ಪರದಾಡಿದರು.

321 ರನ್ ಗಳ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಪರ ಬಾಬರ್ ಆಝಂ ಹಾಗೂ ಸೌದ್ ಶಕೀಲ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. 6 ರನ್ ಗಳಿಸಿ ಸೌದ್ ಔಟಾದರೆ, ಬಾಬರ್ ಮಾತ್ರ ಕ್ರೀಸ್ ಕಚ್ಚಿ ನಿಂತಿದ್ದರು. ಇದಾಗ್ಯೂ ಕಿವೀಸ್ ಬೌಲರ್‌ಗಳ ಎದುರು ರನ್ ಗಳಿಸಲು ಪರದಾಡಿದರು.

3 / 6
ಪರಿಣಾಮ ಅರ್ಧಶತಕ ಪೂರೈಸಲು ಬಾಬರ್ ಆಝಂ ಬರೋಬ್ಬರಿ 81 ಎಸೆತಗಳನ್ನು ತೆಗೆದುಕೊಂಡರು. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಅತ್ಯಂತ ನಿಧಾನಗತಿಯಲ್ಲಿ ಅರ್ಧಶತಕ ಬಾರಿಸಿದ ಸಕ್ರಿಯ ಬ್ಯಾಟರ್ ಕುಖ್ಯಾತಿಯು ಬಾಬರ್ ಪಾಲಾಯಿತು. ಅಷ್ಟೇ ಅಲ್ಲದೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಹಾಫ್ ಸೆಂಚುರಿ ಪೂರೈಸಿದ ಪಾಕಿಸ್ತಾನದ 2ನೇ ಬ್ಯಾಟರ್ ಎನಿಸಿಕೊಂಡರು.

ಪರಿಣಾಮ ಅರ್ಧಶತಕ ಪೂರೈಸಲು ಬಾಬರ್ ಆಝಂ ಬರೋಬ್ಬರಿ 81 ಎಸೆತಗಳನ್ನು ತೆಗೆದುಕೊಂಡರು. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಅತ್ಯಂತ ನಿಧಾನಗತಿಯಲ್ಲಿ ಅರ್ಧಶತಕ ಬಾರಿಸಿದ ಸಕ್ರಿಯ ಬ್ಯಾಟರ್ ಕುಖ್ಯಾತಿಯು ಬಾಬರ್ ಪಾಲಾಯಿತು. ಅಷ್ಟೇ ಅಲ್ಲದೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಹಾಫ್ ಸೆಂಚುರಿ ಪೂರೈಸಿದ ಪಾಕಿಸ್ತಾನದ 2ನೇ ಬ್ಯಾಟರ್ ಎನಿಸಿಕೊಂಡರು.

4 / 6
ಇದಕ್ಕೂ ಮುನ್ನ 2013 ರಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಪಾಕಿಸ್ತಾನ್ ತಂಡದ ಮಾಜಿ ಆರಂಭಿಕ ನಾಸರ್ ಜೆಮ್ಶೇಡ್ 83 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇದೀಗ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ ಬಾಬರ್ ಆಝಂ ಈ ಕಳಪೆ ದಾಖಲೆ ಪಟ್ಟಿಯಲ್ಲಿ ಎರಡನೇ ಸ್ಥಾನ ಅಲಂಕರಿಸಿದ್ದಾರೆ.

ಇದಕ್ಕೂ ಮುನ್ನ 2013 ರಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಪಾಕಿಸ್ತಾನ್ ತಂಡದ ಮಾಜಿ ಆರಂಭಿಕ ನಾಸರ್ ಜೆಮ್ಶೇಡ್ 83 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇದೀಗ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ ಬಾಬರ್ ಆಝಂ ಈ ಕಳಪೆ ದಾಖಲೆ ಪಟ್ಟಿಯಲ್ಲಿ ಎರಡನೇ ಸ್ಥಾನ ಅಲಂಕರಿಸಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ 90 ಎಸೆತಗಳನ್ನು ಎದುರಿಸಿದ ಬಾಬರ್ ಆಝಂ ಕಲೆಹಾಕಿದ್ದು 64 ರನ್ ಗಳು ಮಾತ್ರ. ಇದರಿಂದ ಒತ್ತಡಕ್ಕೊಳಗಾದ ಪಾಕಿಸ್ತಾನದ ಉಳಿದ ಬ್ಯಾಟರ್​ಗಳು ಬಿರುಸಿನ ಹೊಡೆತಗಳಿಗೆ ಮುಂದಾಗಿ ವಿಕೆಟ್ ಒಪ್ಪಿಸಿದರು‌. ಪರಿಣಾಮ ಪಾಕ್ ಪಡೆ 47.2 ಒವರುಗಳಲ್ಲಿ 260 ರನ್​ಗಳಿಸಿ ಆಲೌಟ್ ಆಯಿತು. ಅತ್ತ ನ್ಯೂಝಿಲೆಂಡ್ ಮೊದಲ ಪಂದ್ಯದಲ್ಲೇ 60 ರನ್ ಗಳ ಭರ್ಜರಿ ಜಯ ಸಾಧಿಸಿ ಗೆಲುವಿನ ಖಾತೆ ತೆರೆದಿದೆ.

ಇನ್ನು ಈ ಪಂದ್ಯದಲ್ಲಿ 90 ಎಸೆತಗಳನ್ನು ಎದುರಿಸಿದ ಬಾಬರ್ ಆಝಂ ಕಲೆಹಾಕಿದ್ದು 64 ರನ್ ಗಳು ಮಾತ್ರ. ಇದರಿಂದ ಒತ್ತಡಕ್ಕೊಳಗಾದ ಪಾಕಿಸ್ತಾನದ ಉಳಿದ ಬ್ಯಾಟರ್​ಗಳು ಬಿರುಸಿನ ಹೊಡೆತಗಳಿಗೆ ಮುಂದಾಗಿ ವಿಕೆಟ್ ಒಪ್ಪಿಸಿದರು‌. ಪರಿಣಾಮ ಪಾಕ್ ಪಡೆ 47.2 ಒವರುಗಳಲ್ಲಿ 260 ರನ್​ಗಳಿಸಿ ಆಲೌಟ್ ಆಯಿತು. ಅತ್ತ ನ್ಯೂಝಿಲೆಂಡ್ ಮೊದಲ ಪಂದ್ಯದಲ್ಲೇ 60 ರನ್ ಗಳ ಭರ್ಜರಿ ಜಯ ಸಾಧಿಸಿ ಗೆಲುವಿನ ಖಾತೆ ತೆರೆದಿದೆ.

6 / 6
Follow us
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ