AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬರ್ ಶತಕಕ್ಕೆ ವಿಶ್ವ ದಾಖಲೆಯೇ ಧೂಳೀಪಟ

Babar Azam Records: ದಾಖಲೆಗಳು ಇರುವುದೇ ಮುರಿಯುವುದಕ್ಕೆ ಎಂಬ ಮಾತನ್ನು ಬಾಬರ್ ಆಝಂ ತಮ್ಮ ಬ್ಯಾಟಿಂಗ್ ಮೂಲಕ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಈ ಹಿಂದೆ ಟಿ20 ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 12,000 ರನ್ ಪೂರೈಸಿದ ವಿಶ್ವ ದಾಖಲೆ ಬರೆದಿದ್ದ ಬಾಬರ್ ಇದೀಗ ನಾಯಕನಾಗಿ ಅತಿ ಹೆಚ್ಚು ಶತಕ ಸಿಡಿಸಿದ ವರ್ಲ್ಡ್​ ರೆಕಾರ್ಡ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 29, 2026 | 10:24 AM

Share
ಪಾಕಿಸ್ತಾನದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ವಿಶ್ವ ದಾಖಲೆಯೊಂದಿಗೆ ಬಾಬರ್ ಸೌತ್ ಆಫ್ರಿಕಾದ ಫಾಫ್ ಡುಪ್ಲೆಸಿಸ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಪಾಕಿಸ್ತಾನದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ವಿಶ್ವ ದಾಖಲೆಯೊಂದಿಗೆ ಬಾಬರ್ ಸೌತ್ ಆಫ್ರಿಕಾದ ಫಾಫ್ ಡುಪ್ಲೆಸಿಸ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 5
ಪಾಕಿಸ್ತಾನ್ ಸೂಪರ್ ಲೀಗ್​ನ ಕ್ವಾಲಿಫೈರ್​ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 59 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 12 ಫೋರ್​ಗಳೊಂದಿಗೆ 103 ರನ್ ಬಾರಿಸಿದ್ದರು. ಈ ಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ನಾಯಕನೆಂಬ ವಿಶ್ವ ದಾಖಲೆಯನ್ನು ಬಾಬರ್ ತಮ್ಮದಾಗಿಸಿಕೊಂಡರು.

ಪಾಕಿಸ್ತಾನ್ ಸೂಪರ್ ಲೀಗ್​ನ ಕ್ವಾಲಿಫೈರ್​ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ 59 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 12 ಫೋರ್​ಗಳೊಂದಿಗೆ 103 ರನ್ ಬಾರಿಸಿದ್ದರು. ಈ ಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ನಾಯಕನೆಂಬ ವಿಶ್ವ ದಾಖಲೆಯನ್ನು ಬಾಬರ್ ತಮ್ಮದಾಗಿಸಿಕೊಂಡರು.

2 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಸೌತ್ ಆಫ್ರಿಕಾದ ಫಾಫ್ ಡುಪ್ಲೆಸಿಸ್ ಹೆಸರಿನಲ್ಲಿತ್ತು. ಟಿ20 ಕ್ರಿಕೆಟ್​ನಲ್ಲಿ 208 ಇನಿಂಗ್ಸ್​ಗಳಲ್ಲಿ ನಾಯಕನಾಗಿ ಕಣಕ್ಕಿಳಿದಿರುವ ಫಾಫ್ ಡುಪ್ಲೆಸಿಸ್ 8 ಶತಕ ಸಿಡಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಶತಕ ಸಿಡಿಸಿದ ನಾಯಕ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಸೌತ್ ಆಫ್ರಿಕಾದ ಫಾಫ್ ಡುಪ್ಲೆಸಿಸ್ ಹೆಸರಿನಲ್ಲಿತ್ತು. ಟಿ20 ಕ್ರಿಕೆಟ್​ನಲ್ಲಿ 208 ಇನಿಂಗ್ಸ್​ಗಳಲ್ಲಿ ನಾಯಕನಾಗಿ ಕಣಕ್ಕಿಳಿದಿರುವ ಫಾಫ್ ಡುಪ್ಲೆಸಿಸ್ 8 ಶತಕ ಸಿಡಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಶತಕ ಸಿಡಿಸಿದ ನಾಯಕ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 5
ಇದೀಗ ಈ ವಿಶ್ವ ದಾಖಲೆಯನ್ನು ಬಾಬರ್ ಆಝಂ ತಮ್ಮದಾಗಿಸಿಕೊಂಡಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ 147 ಇನಿಂಗ್ಸ್​ಗಳಲ್ಲಿ ನಾಯಕನಾಗಿ ಕಣಕ್ಕಿಳಿದಿರುವ ಬಾಬರ್ ಒಟ್ಟು 9 ಶತಕ ಸಿಡಿಸಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಈ ವಿಶ್ವ ದಾಖಲೆಯನ್ನು ಬಾಬರ್ ಆಝಂ ತಮ್ಮದಾಗಿಸಿಕೊಂಡಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ 147 ಇನಿಂಗ್ಸ್​ಗಳಲ್ಲಿ ನಾಯಕನಾಗಿ ಕಣಕ್ಕಿಳಿದಿರುವ ಬಾಬರ್ ಒಟ್ಟು 9 ಶತಕ ಸಿಡಿಸಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 5
ಇನ್ನು ಈ ಶತಕದೊಂದಿಗೆ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ್ದ ಉಸ್ಮಾನ್ ಖಾನ್ (4 ಶತಕ) ಅವರ ದಾಖಲೆಯನ್ನು ಕೂಡ ಬಾಬರ್ ಆಝಂ ಸರಿಗಟ್ಟಿದ್ದಾರೆ. ಅಷ್ಟೇ ಅಲ್ಲದೆ ಪಿಎಸ್ಎಲ್​ನಲ್ಲಿ 4000 ರನ್ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇನ್ನು ಈ ಶತಕದೊಂದಿಗೆ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ್ದ ಉಸ್ಮಾನ್ ಖಾನ್ (4 ಶತಕ) ಅವರ ದಾಖಲೆಯನ್ನು ಕೂಡ ಬಾಬರ್ ಆಝಂ ಸರಿಗಟ್ಟಿದ್ದಾರೆ. ಅಷ್ಟೇ ಅಲ್ಲದೆ ಪಿಎಸ್ಎಲ್​ನಲ್ಲಿ 4000 ರನ್ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್