AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ದಾಖಲೆಗಳೆಲ್ಲವೂ ಧೂಳೀಪಟ: ಹೊಸ ಇತಿಹಾಸ ನಿರ್ಮಿಸಿದ ಬಾಬರ್ ಆಝಂ

Babar Azam Record: ಟಿ20 ಕ್ರಿಕೆಟ್​ನಲ್ಲಿ ಕ್ರಿಸ್ ಗೇಲ್ ಬಳಿಕ ಅತ್ಯಧಿಕ ಶತಕ ಸಿಡಿಸಿದ ದಾಖಲೆ ಹೊಂದಿರುವ ಬಾಬರ್ ಆಝಂ ಇದೀಗ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುರ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Edited By: |

Updated on: Dec 15, 2024 | 9:53 AM

Share
ಸೆಂಚುರಿಯನ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ಪಾಕಿಸ್ತಾನ್ ಬ್ಯಾಟರ್ ಬಾಬರ್ ಆಝಂ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಕ್ರಿಸ್ ಗೇಲ್, ವಿರಾಟ್ ಕೊಹ್ಲಿ, ಡೇವಿಡ್ ವಾರ್ನರ್ ಬರೆದಿದ್ದ ದಾಖಲೆಗಳನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.

ಸೆಂಚುರಿಯನ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ಪಾಕಿಸ್ತಾನ್ ಬ್ಯಾಟರ್ ಬಾಬರ್ ಆಝಂ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಕ್ರಿಸ್ ಗೇಲ್, ವಿರಾಟ್ ಕೊಹ್ಲಿ, ಡೇವಿಡ್ ವಾರ್ನರ್ ಬರೆದಿದ್ದ ದಾಖಲೆಗಳನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದಲ್ಲಿ ಬಾಬರ್ ಆಝಂ 20 ಎಸೆತಗಳಲ್ಲಿ 1 ಸಿಕ್ಸ್ 3 ಫೋರ್​​ಗಳೊಂದಿಗೆ 31 ರನ್ ಬಾರಿಸಿದ್ದರು. ಈ ಮೂವತ್ತು ರನ್​​ಗಳೊಂದಿಗೆ ಬಾಬರ್ ಆಝಂ ಟಿ20 ಕ್ರಿಕೆಟ್​ನಲ್ಲಿ 11 ಸಾವಿರ ರನ್ ಪೂರೈಸಿದ್ದಾರೆ. ಅದು ಕೂಡ 300 ಕ್ಕಿಂತ ಕಡಿಮೆ ಇನಿಂಗ್ಸ್​​ಗಳಲ್ಲಿ..!

ಈ ಪಂದ್ಯದಲ್ಲಿ ಬಾಬರ್ ಆಝಂ 20 ಎಸೆತಗಳಲ್ಲಿ 1 ಸಿಕ್ಸ್ 3 ಫೋರ್​​ಗಳೊಂದಿಗೆ 31 ರನ್ ಬಾರಿಸಿದ್ದರು. ಈ ಮೂವತ್ತು ರನ್​​ಗಳೊಂದಿಗೆ ಬಾಬರ್ ಆಝಂ ಟಿ20 ಕ್ರಿಕೆಟ್​ನಲ್ಲಿ 11 ಸಾವಿರ ರನ್ ಪೂರೈಸಿದ್ದಾರೆ. ಅದು ಕೂಡ 300 ಕ್ಕಿಂತ ಕಡಿಮೆ ಇನಿಂಗ್ಸ್​​ಗಳಲ್ಲಿ..!

2 / 6
ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲಿ 300 ಕ್ಕಿಂತ ಕಡಿಮೆ ಇನಿಂಗ್ಸ್​ನಲ್ಲಿ 11 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆ ಇದೀಗ ಬಾಬರ್ ಆಝಂ ಪಾಲಾಗಿದೆ. ಹಾಗೆಯೇ ಅತೀ ವೇಗವಾಗಿ 11 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲಿ 300 ಕ್ಕಿಂತ ಕಡಿಮೆ ಇನಿಂಗ್ಸ್​ನಲ್ಲಿ 11 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆ ಇದೀಗ ಬಾಬರ್ ಆಝಂ ಪಾಲಾಗಿದೆ. ಹಾಗೆಯೇ ಅತೀ ವೇಗವಾಗಿ 11 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

3 / 6
ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ವೆಸ್ಟ್ ಇಂಡೀಸ್ ದಾಂಡಿಗ ಗೇಲ್ 314 ಇನಿಂಗ್ಸ್​​ಗಳ ಮೂಲಕ ಟಿ20 ಕ್ರಿಕೆಟ್​ನಲ್ಲಿ 11 ಸಾವಿರ ರನ್ ಪೂರೈಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಮುರಿಯುವಲ್ಲಿ ಬಾಬರ್ ಆಝಂ ಯಶಸ್ವಿಯಾಗಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ವೆಸ್ಟ್ ಇಂಡೀಸ್ ದಾಂಡಿಗ ಗೇಲ್ 314 ಇನಿಂಗ್ಸ್​​ಗಳ ಮೂಲಕ ಟಿ20 ಕ್ರಿಕೆಟ್​ನಲ್ಲಿ 11 ಸಾವಿರ ರನ್ ಪೂರೈಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಮುರಿಯುವಲ್ಲಿ ಬಾಬರ್ ಆಝಂ ಯಶಸ್ವಿಯಾಗಿದ್ದಾರೆ.

4 / 6
ಟಿ20 ಕ್ರಿಕೆಟ್​ನಲ್ಲಿ ಈವರೆಗೆ 298 ಇನಿಂಗ್ಸ್ ಆಡಿರುವ ಬಾಬರ್ ಆಝಂ 11 ಶತಕ ಹಾಗೂ 90 ಅರ್ಧಶತಕಗಳೊಂದಿಗೆ ಒಟ್ಟು 11020 ರನ್ ಕಲೆಹಾಕಿದ್ದಾರೆ. ಈ ಮೂಲಕ ಅತೀ ಕಡಿಮೆ ಟಿ20 ಇನಿಂಗ್ಸ್​ಗಳಲ್ಲಿ 11 ಸಾವಿರ ಪೂರೈಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಈವರೆಗೆ 298 ಇನಿಂಗ್ಸ್ ಆಡಿರುವ ಬಾಬರ್ ಆಝಂ 11 ಶತಕ ಹಾಗೂ 90 ಅರ್ಧಶತಕಗಳೊಂದಿಗೆ ಒಟ್ಟು 11020 ರನ್ ಕಲೆಹಾಕಿದ್ದಾರೆ. ಈ ಮೂಲಕ ಅತೀ ಕಡಿಮೆ ಟಿ20 ಇನಿಂಗ್ಸ್​ಗಳಲ್ಲಿ 11 ಸಾವಿರ ಪೂರೈಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಟಿ20 ಕ್ರಿಕೆಟ್​ನಲ್ಲಿ 11 ಸಾವಿರ ರನ್ ಪೂರೈಸಲು ವಿರಾಟ್ ಕೊಹ್ಲಿ ತೆಗೆದುಕೊಂಡಿದ್ದು 337 ಇನಿಂಗ್ಸ್​​ಗಳನ್ನು. ಹಾಗೆಯೇ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 330 ಇನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ್ದರು. ಇದೀಗ ಇವರೆಲ್ಲರನ್ನು ಹಿಂದಿಕ್ಕಿ ಬಾಬರ್ ಆಝಂ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇನ್ನು ಟಿ20 ಕ್ರಿಕೆಟ್​ನಲ್ಲಿ 11 ಸಾವಿರ ರನ್ ಪೂರೈಸಲು ವಿರಾಟ್ ಕೊಹ್ಲಿ ತೆಗೆದುಕೊಂಡಿದ್ದು 337 ಇನಿಂಗ್ಸ್​​ಗಳನ್ನು. ಹಾಗೆಯೇ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 330 ಇನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ್ದರು. ಇದೀಗ ಇವರೆಲ್ಲರನ್ನು ಹಿಂದಿಕ್ಕಿ ಬಾಬರ್ ಆಝಂ ಹೊಸ ಇತಿಹಾಸ ನಿರ್ಮಿಸಿದ್ದಾರೆ.

6 / 6
Web contact
Web contact

TV9 Kannada

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು