AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬರ್ ಆಝಮ್ ನಂಬರ್ 1 ಆಟಗಾರ, ಅದಕ್ಕೆ ವಿಶ್ರಾಂತಿ ನೀಡಿದ್ದೀವಿ ಎಂದ ಪಾಕ್ ಕೋಚ್

Babar Azam: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಫಲರಾಗಿದ್ದ ಬಾಬರ್ ಆಝಂ ಅವರನ್ನು ಟೆಸ್ಟ್ ತಂಡದಿಂದ ಕೈ ಬಿಡಲಾಗಿದೆ. ಹೀಗಾಗಿ ಪಾಕಿಸ್ತಾನ್ ತಂಡದ ಮುಂದಿನ ಎರಡು ಪಂದ್ಯಗಳಲ್ಲಿ ಬಾಬರ್ ಕಾಣಿಸಿಕೊಳ್ಳುವುದಿಲ್ಲ. ಪಾಕ್ ತಂಡದ ಮಾಜಿ ನಾಯಕನೊಂದಿಗೆ ವೇಗಿಗಳಾದ ಶಾಹೀನ್ ಶಾ ಅಫ್ರಿದಿ ಹಾಗೂ ನಸೀಮ್ ಶಾ ಕೂಡ ಟೆಸ್ಟ್ ತಂಡದಿಂದ ಹೊರಬಿದ್ದಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 15, 2024 | 8:14 AM

Share
ಪಾಕಿಸ್ತಾನ್ ಟೆಸ್ಟ್ ತಂಡದಿಂದ ಬಾಬರ್ ಆಝಂ ಹೊರಬಿದ್ದ ಬೆನ್ನಲ್ಲೇ ಹೊಸ ಚರ್ಚೆಯೊಂದು ಶುರುವಾಗಿದೆ. ಈ ಚರ್ಚೆಗಳ ನಡುವೆ ಪಾಕಿಸ್ತಾನ್ ತಂಡದ ಸಹಾಯಕ ಕೋಚ್ ಅಝರ್ ಮಹಮೂದ್ ನೀಡಿದ ಹೇಳಿಕೆಯೊಂದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅವರ ಹೇಳಿಕೆಯಂತೆ ಬಾಬರ್ ಆಝಂ ಅವರನ್ನು ತಂಡದಿಂದ ಕೈ ಬಿಡಲಾಗಿಲ್ಲ. ಬದಲಾಗಿ ವಿಶ್ರಾಂತಿ ನೀಡಲಾಗಿದೆಯಂತೆ.

ಪಾಕಿಸ್ತಾನ್ ಟೆಸ್ಟ್ ತಂಡದಿಂದ ಬಾಬರ್ ಆಝಂ ಹೊರಬಿದ್ದ ಬೆನ್ನಲ್ಲೇ ಹೊಸ ಚರ್ಚೆಯೊಂದು ಶುರುವಾಗಿದೆ. ಈ ಚರ್ಚೆಗಳ ನಡುವೆ ಪಾಕಿಸ್ತಾನ್ ತಂಡದ ಸಹಾಯಕ ಕೋಚ್ ಅಝರ್ ಮಹಮೂದ್ ನೀಡಿದ ಹೇಳಿಕೆಯೊಂದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅವರ ಹೇಳಿಕೆಯಂತೆ ಬಾಬರ್ ಆಝಂ ಅವರನ್ನು ತಂಡದಿಂದ ಕೈ ಬಿಡಲಾಗಿಲ್ಲ. ಬದಲಾಗಿ ವಿಶ್ರಾಂತಿ ನೀಡಲಾಗಿದೆಯಂತೆ.

1 / 6
ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಝರ್ ಮಹಮೂದ್​ಗೆ ಬಾಬರ್ ಆಝಂ ಅವರನ್ನು ಕೈ ಬಿಟ್ಟಿರುವ ಬಗ್ಗೆ ಪ್ರಶ್ನಿಸಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಅಝರ್, ನಾವು ಬಾಬರ್​ನನ್ನು ತಂಡದಿಂದ ಕೈ ಬಿಟ್ಟಿಲ್ಲ. ಆತ ನಂಬರ್ 1 ಆಟಗಾರ. ಹೀಗಾಗಿ ಅವರಿಗೆ ವಿಶ್ರಾಂತಿ ನೀಡಿದ್ದೇವೆ ಎಂದಿದ್ದಾರೆ.

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಝರ್ ಮಹಮೂದ್​ಗೆ ಬಾಬರ್ ಆಝಂ ಅವರನ್ನು ಕೈ ಬಿಟ್ಟಿರುವ ಬಗ್ಗೆ ಪ್ರಶ್ನಿಸಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಅಝರ್, ನಾವು ಬಾಬರ್​ನನ್ನು ತಂಡದಿಂದ ಕೈ ಬಿಟ್ಟಿಲ್ಲ. ಆತ ನಂಬರ್ 1 ಆಟಗಾರ. ಹೀಗಾಗಿ ಅವರಿಗೆ ವಿಶ್ರಾಂತಿ ನೀಡಿದ್ದೇವೆ ಎಂದಿದ್ದಾರೆ.

2 / 6
ಇಂಗ್ಲೆಂಡ್ ವಿರುದ್ಧದ ಸರಣಿಯ ಬಳಿಕ ಪಾಕಿಸ್ತಾನ್ ತಂಡ ಮತ್ತಷ್ಟು ಪಂದ್ಯಳನ್ನಾಡಬೇಕಿದೆ. ಹೀಗಾಗಿ ಪ್ರಮುಖ ಆಟಗಾರರಿಗೆ ವಿಶ್ರಾಂತಿಯ ಅಗತ್ಯತೆಯಿತ್ತು. ಇದಾಗ್ಯೂ ಬಾಬರ್ ಆಝಂ ಆಡಲು ಸಿದ್ಧರಿದ್ದರು. ಆದರೆ ಅವರಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯೇ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದೆ ಎಂದು ಅಝರ್ ಮಹಮೂದ್ ತಿಳಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಸರಣಿಯ ಬಳಿಕ ಪಾಕಿಸ್ತಾನ್ ತಂಡ ಮತ್ತಷ್ಟು ಪಂದ್ಯಳನ್ನಾಡಬೇಕಿದೆ. ಹೀಗಾಗಿ ಪ್ರಮುಖ ಆಟಗಾರರಿಗೆ ವಿಶ್ರಾಂತಿಯ ಅಗತ್ಯತೆಯಿತ್ತು. ಇದಾಗ್ಯೂ ಬಾಬರ್ ಆಝಂ ಆಡಲು ಸಿದ್ಧರಿದ್ದರು. ಆದರೆ ಅವರಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯೇ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದೆ ಎಂದು ಅಝರ್ ಮಹಮೂದ್ ತಿಳಿಸಿದ್ದಾರೆ.

3 / 6
ಇದೀಗ ಪಾಕ್ ತಂಡದ ಸಹಾಯಕ ಕೋಚ್ ನೀಡಿದ ಹೇಳಿಕೆಯು ನಗೆಪಾಟಲಿಗೀಡಾಗಿದೆ. ಏಕೆಂದರೆ ಪಾಕಿಸ್ತಾನ್ ತಂಡವು ತವರಿನಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದು ಮೂರು ವರ್ಷಗಳೇ ಕಳೆದಿವೆ. ಅದರಲ್ಲೂ ಬಾಂಗ್ಲಾದೇಶ್ ವಿರುದ್ಧ ಹೀನಾಯವಾಗಿ ಸೋತಿದ್ದ ಪಾಕಿಸ್ತಾನ್, ಇಂಗ್ಲೆಂಡ್ ವಿರುದ್ಧ ಕೂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಮಾನಕರವಾಗಿ ಸೋತಿದೆ.

ಇದೀಗ ಪಾಕ್ ತಂಡದ ಸಹಾಯಕ ಕೋಚ್ ನೀಡಿದ ಹೇಳಿಕೆಯು ನಗೆಪಾಟಲಿಗೀಡಾಗಿದೆ. ಏಕೆಂದರೆ ಪಾಕಿಸ್ತಾನ್ ತಂಡವು ತವರಿನಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದು ಮೂರು ವರ್ಷಗಳೇ ಕಳೆದಿವೆ. ಅದರಲ್ಲೂ ಬಾಂಗ್ಲಾದೇಶ್ ವಿರುದ್ಧ ಹೀನಾಯವಾಗಿ ಸೋತಿದ್ದ ಪಾಕಿಸ್ತಾನ್, ಇಂಗ್ಲೆಂಡ್ ವಿರುದ್ಧ ಕೂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಮಾನಕರವಾಗಿ ಸೋತಿದೆ.

4 / 6
ಹೀಗೆ ಸೋಲಿನ ಸರಪಳಿಗೆ ಸಿಲುಕಿರುವ ಪಾಕಿಸ್ತಾನ್ ತಂಡವು ಒಂದೇ ಒಂದು ಜಯಕ್ಕಾಗಿ ಪರಿತಪಿಸುತ್ತಿದೆ. ಅಂತದ್ರಲ್ಲಿ ಮುಂದಿನ ಪಂದ್ಯಗಳಿಗಾಗಿ ನಂಬರ್-1 ಬ್ಯಾಟರ್​ಗೆ ವಿಶ್ರಾಂತಿ ನೀಡಿದ್ದೇವೆ ಎಂದೇಳುವ ಮೂಲಕ ಪಾಕ್ ಕೋಚ್ ಅಝರ್ ಮಹಮೂದ್ ನಗೆಪಾಟಲಿಗೀಡಾಗಿದ್ದಾರೆ.

ಹೀಗೆ ಸೋಲಿನ ಸರಪಳಿಗೆ ಸಿಲುಕಿರುವ ಪಾಕಿಸ್ತಾನ್ ತಂಡವು ಒಂದೇ ಒಂದು ಜಯಕ್ಕಾಗಿ ಪರಿತಪಿಸುತ್ತಿದೆ. ಅಂತದ್ರಲ್ಲಿ ಮುಂದಿನ ಪಂದ್ಯಗಳಿಗಾಗಿ ನಂಬರ್-1 ಬ್ಯಾಟರ್​ಗೆ ವಿಶ್ರಾಂತಿ ನೀಡಿದ್ದೇವೆ ಎಂದೇಳುವ ಮೂಲಕ ಪಾಕ್ ಕೋಚ್ ಅಝರ್ ಮಹಮೂದ್ ನಗೆಪಾಟಲಿಗೀಡಾಗಿದ್ದಾರೆ.

5 / 6
ಅಂದಹಾಗೆ ಬಾಬರ್ ಆಝಂ ಅವರನ್ನು ಪಾಕ್ ತಂಡದಿಂದ ಕೈ ಬಿಡಲು ಮುಖ್ಯ ಕಾರಣ ಕಳಪೆ ಫಾರ್ಮ್​ನಲ್ಲಿರುವುದು. ಟೆಸ್ಟ್ ಕ್ರಿಕೆಟ್​ನಲ್ಲಿ ಬಾಬರ್ ಅರ್ಧಶತಕ ಬಾರಿಸಿ 2 ವರ್ಷಗಳೇ ಕಳೆದಿವೆ. ಅದರಲ್ಲೂ ರನ್​ ಮಳೆಯೇ ಹರಿದಿರುವ ಮುಲ್ತಾನ್ ಟೆಸ್ಟ್​ನಲ್ಲಿ ಬಾಬರ್ ಆಝಂ ಕಲೆಹಾಕಿದ್ದು ಕೇವಲ 35 ರನ್​ಗಳು ಮಾತ್ರ. ಅಲ್ಲದೆ ಕಳೆದ 18 ಇನಿಂಗ್ಸ್​ಗಳಿಂದ ಒಂದೇ ಒಂದು ಅರ್ಧಶತಕ ಬಾರಿಸಿಲ್ಲ. ಹೀಗಾಗಿಯೇ ಬಾಬರ್ ಆಝಂಗೆ ಟೆಸ್ಟ್ ತಂಡದಿಂದ ಗೇಟ್ ಪಾಸ್ ನೀಡಲಾಗಿದೆ.

ಅಂದಹಾಗೆ ಬಾಬರ್ ಆಝಂ ಅವರನ್ನು ಪಾಕ್ ತಂಡದಿಂದ ಕೈ ಬಿಡಲು ಮುಖ್ಯ ಕಾರಣ ಕಳಪೆ ಫಾರ್ಮ್​ನಲ್ಲಿರುವುದು. ಟೆಸ್ಟ್ ಕ್ರಿಕೆಟ್​ನಲ್ಲಿ ಬಾಬರ್ ಅರ್ಧಶತಕ ಬಾರಿಸಿ 2 ವರ್ಷಗಳೇ ಕಳೆದಿವೆ. ಅದರಲ್ಲೂ ರನ್​ ಮಳೆಯೇ ಹರಿದಿರುವ ಮುಲ್ತಾನ್ ಟೆಸ್ಟ್​ನಲ್ಲಿ ಬಾಬರ್ ಆಝಂ ಕಲೆಹಾಕಿದ್ದು ಕೇವಲ 35 ರನ್​ಗಳು ಮಾತ್ರ. ಅಲ್ಲದೆ ಕಳೆದ 18 ಇನಿಂಗ್ಸ್​ಗಳಿಂದ ಒಂದೇ ಒಂದು ಅರ್ಧಶತಕ ಬಾರಿಸಿಲ್ಲ. ಹೀಗಾಗಿಯೇ ಬಾಬರ್ ಆಝಂಗೆ ಟೆಸ್ಟ್ ತಂಡದಿಂದ ಗೇಟ್ ಪಾಸ್ ನೀಡಲಾಗಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?