ಬಾಬರ್ ಆಝಮ್ ನಂಬರ್ 1 ಆಟಗಾರ, ಅದಕ್ಕೆ ವಿಶ್ರಾಂತಿ ನೀಡಿದ್ದೀವಿ ಎಂದ ಪಾಕ್ ಕೋಚ್

Babar Azam: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಫಲರಾಗಿದ್ದ ಬಾಬರ್ ಆಝಂ ಅವರನ್ನು ಟೆಸ್ಟ್ ತಂಡದಿಂದ ಕೈ ಬಿಡಲಾಗಿದೆ. ಹೀಗಾಗಿ ಪಾಕಿಸ್ತಾನ್ ತಂಡದ ಮುಂದಿನ ಎರಡು ಪಂದ್ಯಗಳಲ್ಲಿ ಬಾಬರ್ ಕಾಣಿಸಿಕೊಳ್ಳುವುದಿಲ್ಲ. ಪಾಕ್ ತಂಡದ ಮಾಜಿ ನಾಯಕನೊಂದಿಗೆ ವೇಗಿಗಳಾದ ಶಾಹೀನ್ ಶಾ ಅಫ್ರಿದಿ ಹಾಗೂ ನಸೀಮ್ ಶಾ ಕೂಡ ಟೆಸ್ಟ್ ತಂಡದಿಂದ ಹೊರಬಿದ್ದಿದ್ದಾರೆ.

|

Updated on: Oct 15, 2024 | 8:14 AM

ಪಾಕಿಸ್ತಾನ್ ಟೆಸ್ಟ್ ತಂಡದಿಂದ ಬಾಬರ್ ಆಝಂ ಹೊರಬಿದ್ದ ಬೆನ್ನಲ್ಲೇ ಹೊಸ ಚರ್ಚೆಯೊಂದು ಶುರುವಾಗಿದೆ. ಈ ಚರ್ಚೆಗಳ ನಡುವೆ ಪಾಕಿಸ್ತಾನ್ ತಂಡದ ಸಹಾಯಕ ಕೋಚ್ ಅಝರ್ ಮಹಮೂದ್ ನೀಡಿದ ಹೇಳಿಕೆಯೊಂದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅವರ ಹೇಳಿಕೆಯಂತೆ ಬಾಬರ್ ಆಝಂ ಅವರನ್ನು ತಂಡದಿಂದ ಕೈ ಬಿಡಲಾಗಿಲ್ಲ. ಬದಲಾಗಿ ವಿಶ್ರಾಂತಿ ನೀಡಲಾಗಿದೆಯಂತೆ.

ಪಾಕಿಸ್ತಾನ್ ಟೆಸ್ಟ್ ತಂಡದಿಂದ ಬಾಬರ್ ಆಝಂ ಹೊರಬಿದ್ದ ಬೆನ್ನಲ್ಲೇ ಹೊಸ ಚರ್ಚೆಯೊಂದು ಶುರುವಾಗಿದೆ. ಈ ಚರ್ಚೆಗಳ ನಡುವೆ ಪಾಕಿಸ್ತಾನ್ ತಂಡದ ಸಹಾಯಕ ಕೋಚ್ ಅಝರ್ ಮಹಮೂದ್ ನೀಡಿದ ಹೇಳಿಕೆಯೊಂದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅವರ ಹೇಳಿಕೆಯಂತೆ ಬಾಬರ್ ಆಝಂ ಅವರನ್ನು ತಂಡದಿಂದ ಕೈ ಬಿಡಲಾಗಿಲ್ಲ. ಬದಲಾಗಿ ವಿಶ್ರಾಂತಿ ನೀಡಲಾಗಿದೆಯಂತೆ.

1 / 6
ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಝರ್ ಮಹಮೂದ್​ಗೆ ಬಾಬರ್ ಆಝಂ ಅವರನ್ನು ಕೈ ಬಿಟ್ಟಿರುವ ಬಗ್ಗೆ ಪ್ರಶ್ನಿಸಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಅಝರ್, ನಾವು ಬಾಬರ್​ನನ್ನು ತಂಡದಿಂದ ಕೈ ಬಿಟ್ಟಿಲ್ಲ. ಆತ ನಂಬರ್ 1 ಆಟಗಾರ. ಹೀಗಾಗಿ ಅವರಿಗೆ ವಿಶ್ರಾಂತಿ ನೀಡಿದ್ದೇವೆ ಎಂದಿದ್ದಾರೆ.

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಝರ್ ಮಹಮೂದ್​ಗೆ ಬಾಬರ್ ಆಝಂ ಅವರನ್ನು ಕೈ ಬಿಟ್ಟಿರುವ ಬಗ್ಗೆ ಪ್ರಶ್ನಿಸಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಅಝರ್, ನಾವು ಬಾಬರ್​ನನ್ನು ತಂಡದಿಂದ ಕೈ ಬಿಟ್ಟಿಲ್ಲ. ಆತ ನಂಬರ್ 1 ಆಟಗಾರ. ಹೀಗಾಗಿ ಅವರಿಗೆ ವಿಶ್ರಾಂತಿ ನೀಡಿದ್ದೇವೆ ಎಂದಿದ್ದಾರೆ.

2 / 6
ಇಂಗ್ಲೆಂಡ್ ವಿರುದ್ಧದ ಸರಣಿಯ ಬಳಿಕ ಪಾಕಿಸ್ತಾನ್ ತಂಡ ಮತ್ತಷ್ಟು ಪಂದ್ಯಳನ್ನಾಡಬೇಕಿದೆ. ಹೀಗಾಗಿ ಪ್ರಮುಖ ಆಟಗಾರರಿಗೆ ವಿಶ್ರಾಂತಿಯ ಅಗತ್ಯತೆಯಿತ್ತು. ಇದಾಗ್ಯೂ ಬಾಬರ್ ಆಝಂ ಆಡಲು ಸಿದ್ಧರಿದ್ದರು. ಆದರೆ ಅವರಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯೇ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದೆ ಎಂದು ಅಝರ್ ಮಹಮೂದ್ ತಿಳಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಸರಣಿಯ ಬಳಿಕ ಪಾಕಿಸ್ತಾನ್ ತಂಡ ಮತ್ತಷ್ಟು ಪಂದ್ಯಳನ್ನಾಡಬೇಕಿದೆ. ಹೀಗಾಗಿ ಪ್ರಮುಖ ಆಟಗಾರರಿಗೆ ವಿಶ್ರಾಂತಿಯ ಅಗತ್ಯತೆಯಿತ್ತು. ಇದಾಗ್ಯೂ ಬಾಬರ್ ಆಝಂ ಆಡಲು ಸಿದ್ಧರಿದ್ದರು. ಆದರೆ ಅವರಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯೇ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದೆ ಎಂದು ಅಝರ್ ಮಹಮೂದ್ ತಿಳಿಸಿದ್ದಾರೆ.

3 / 6
ಇದೀಗ ಪಾಕ್ ತಂಡದ ಸಹಾಯಕ ಕೋಚ್ ನೀಡಿದ ಹೇಳಿಕೆಯು ನಗೆಪಾಟಲಿಗೀಡಾಗಿದೆ. ಏಕೆಂದರೆ ಪಾಕಿಸ್ತಾನ್ ತಂಡವು ತವರಿನಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದು ಮೂರು ವರ್ಷಗಳೇ ಕಳೆದಿವೆ. ಅದರಲ್ಲೂ ಬಾಂಗ್ಲಾದೇಶ್ ವಿರುದ್ಧ ಹೀನಾಯವಾಗಿ ಸೋತಿದ್ದ ಪಾಕಿಸ್ತಾನ್, ಇಂಗ್ಲೆಂಡ್ ವಿರುದ್ಧ ಕೂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಮಾನಕರವಾಗಿ ಸೋತಿದೆ.

ಇದೀಗ ಪಾಕ್ ತಂಡದ ಸಹಾಯಕ ಕೋಚ್ ನೀಡಿದ ಹೇಳಿಕೆಯು ನಗೆಪಾಟಲಿಗೀಡಾಗಿದೆ. ಏಕೆಂದರೆ ಪಾಕಿಸ್ತಾನ್ ತಂಡವು ತವರಿನಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದು ಮೂರು ವರ್ಷಗಳೇ ಕಳೆದಿವೆ. ಅದರಲ್ಲೂ ಬಾಂಗ್ಲಾದೇಶ್ ವಿರುದ್ಧ ಹೀನಾಯವಾಗಿ ಸೋತಿದ್ದ ಪಾಕಿಸ್ತಾನ್, ಇಂಗ್ಲೆಂಡ್ ವಿರುದ್ಧ ಕೂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಮಾನಕರವಾಗಿ ಸೋತಿದೆ.

4 / 6
ಹೀಗೆ ಸೋಲಿನ ಸರಪಳಿಗೆ ಸಿಲುಕಿರುವ ಪಾಕಿಸ್ತಾನ್ ತಂಡವು ಒಂದೇ ಒಂದು ಜಯಕ್ಕಾಗಿ ಪರಿತಪಿಸುತ್ತಿದೆ. ಅಂತದ್ರಲ್ಲಿ ಮುಂದಿನ ಪಂದ್ಯಗಳಿಗಾಗಿ ನಂಬರ್-1 ಬ್ಯಾಟರ್​ಗೆ ವಿಶ್ರಾಂತಿ ನೀಡಿದ್ದೇವೆ ಎಂದೇಳುವ ಮೂಲಕ ಪಾಕ್ ಕೋಚ್ ಅಝರ್ ಮಹಮೂದ್ ನಗೆಪಾಟಲಿಗೀಡಾಗಿದ್ದಾರೆ.

ಹೀಗೆ ಸೋಲಿನ ಸರಪಳಿಗೆ ಸಿಲುಕಿರುವ ಪಾಕಿಸ್ತಾನ್ ತಂಡವು ಒಂದೇ ಒಂದು ಜಯಕ್ಕಾಗಿ ಪರಿತಪಿಸುತ್ತಿದೆ. ಅಂತದ್ರಲ್ಲಿ ಮುಂದಿನ ಪಂದ್ಯಗಳಿಗಾಗಿ ನಂಬರ್-1 ಬ್ಯಾಟರ್​ಗೆ ವಿಶ್ರಾಂತಿ ನೀಡಿದ್ದೇವೆ ಎಂದೇಳುವ ಮೂಲಕ ಪಾಕ್ ಕೋಚ್ ಅಝರ್ ಮಹಮೂದ್ ನಗೆಪಾಟಲಿಗೀಡಾಗಿದ್ದಾರೆ.

5 / 6
ಅಂದಹಾಗೆ ಬಾಬರ್ ಆಝಂ ಅವರನ್ನು ಪಾಕ್ ತಂಡದಿಂದ ಕೈ ಬಿಡಲು ಮುಖ್ಯ ಕಾರಣ ಕಳಪೆ ಫಾರ್ಮ್​ನಲ್ಲಿರುವುದು. ಟೆಸ್ಟ್ ಕ್ರಿಕೆಟ್​ನಲ್ಲಿ ಬಾಬರ್ ಅರ್ಧಶತಕ ಬಾರಿಸಿ 2 ವರ್ಷಗಳೇ ಕಳೆದಿವೆ. ಅದರಲ್ಲೂ ರನ್​ ಮಳೆಯೇ ಹರಿದಿರುವ ಮುಲ್ತಾನ್ ಟೆಸ್ಟ್​ನಲ್ಲಿ ಬಾಬರ್ ಆಝಂ ಕಲೆಹಾಕಿದ್ದು ಕೇವಲ 35 ರನ್​ಗಳು ಮಾತ್ರ. ಅಲ್ಲದೆ ಕಳೆದ 18 ಇನಿಂಗ್ಸ್​ಗಳಿಂದ ಒಂದೇ ಒಂದು ಅರ್ಧಶತಕ ಬಾರಿಸಿಲ್ಲ. ಹೀಗಾಗಿಯೇ ಬಾಬರ್ ಆಝಂಗೆ ಟೆಸ್ಟ್ ತಂಡದಿಂದ ಗೇಟ್ ಪಾಸ್ ನೀಡಲಾಗಿದೆ.

ಅಂದಹಾಗೆ ಬಾಬರ್ ಆಝಂ ಅವರನ್ನು ಪಾಕ್ ತಂಡದಿಂದ ಕೈ ಬಿಡಲು ಮುಖ್ಯ ಕಾರಣ ಕಳಪೆ ಫಾರ್ಮ್​ನಲ್ಲಿರುವುದು. ಟೆಸ್ಟ್ ಕ್ರಿಕೆಟ್​ನಲ್ಲಿ ಬಾಬರ್ ಅರ್ಧಶತಕ ಬಾರಿಸಿ 2 ವರ್ಷಗಳೇ ಕಳೆದಿವೆ. ಅದರಲ್ಲೂ ರನ್​ ಮಳೆಯೇ ಹರಿದಿರುವ ಮುಲ್ತಾನ್ ಟೆಸ್ಟ್​ನಲ್ಲಿ ಬಾಬರ್ ಆಝಂ ಕಲೆಹಾಕಿದ್ದು ಕೇವಲ 35 ರನ್​ಗಳು ಮಾತ್ರ. ಅಲ್ಲದೆ ಕಳೆದ 18 ಇನಿಂಗ್ಸ್​ಗಳಿಂದ ಒಂದೇ ಒಂದು ಅರ್ಧಶತಕ ಬಾರಿಸಿಲ್ಲ. ಹೀಗಾಗಿಯೇ ಬಾಬರ್ ಆಝಂಗೆ ಟೆಸ್ಟ್ ತಂಡದಿಂದ ಗೇಟ್ ಪಾಸ್ ನೀಡಲಾಗಿದೆ.

6 / 6
Follow us
Daily Devotional: ಕನಸಿನಲ್ಲಿ ಹಾವುಗಳು ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ
Daily Devotional: ಕನಸಿನಲ್ಲಿ ಹಾವುಗಳು ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ
Nithya Bhavishya: ಶುಭ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಶುಭ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ಐಶ್ವರ್ಯಾ, ಅನುಷಾ ರೈ ನಡುವೆ ಜೋರು ಜಗಳ; ಬಿಗ್​ ಬಾಸ್​ ಮನೆಯಲ್ಲಿ ರಂಪಾಟ
ಐಶ್ವರ್ಯಾ, ಅನುಷಾ ರೈ ನಡುವೆ ಜೋರು ಜಗಳ; ಬಿಗ್​ ಬಾಸ್​ ಮನೆಯಲ್ಲಿ ರಂಪಾಟ
ರಸ್ತೆಯಲ್ಲೇ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ತಾಯಿ
ರಸ್ತೆಯಲ್ಲೇ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ತಾಯಿ
ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ
ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ