AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam: ಟೆಸ್ಟ್ ಕ್ರಿಕೆಟ್​ನಲ್ಲಿ ಕೊಹ್ಲಿ- ಸ್ಮಿತ್​ ಹಿಂದಿಕ್ಕಿ ವಿಶೇಷ ದಾಖಲೆ ಬರೆದ ಬಾಬರ್ ಅಜಮ್..!

Babar Azam: 2022 ರಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ಮಾಡಿರುವ ಬಾಬರ್ ನಾಲ್ಕು ಶತಕ ಮತ್ತು 7 ಅರ್ಧ ಶತಕಗಳನ್ನೊಳಗೊಂಡಂತೆ 69.10 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

ಪೃಥ್ವಿಶಂಕರ
|

Updated on: Jun 14, 2023 | 9:56 AM

ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಟೆಸ್ಟ್ ಕ್ರಿಕೆಟ್​ನಲ್ಲಿ ವಿಶೇಷ ಮೈಲಿಗಲ್ಲು ಸಾಧಿಸಿದ್ದಾರೆ. ಟೆಸ್ಟ್ ಕ್ರಿಕೆಟ್​ನಲ್ಲಿ ಆಡಿದ ಕನಿಷ್ಠ 20 ಇನ್ನಿಂಗ್ಸ್​ನಲ್ಲಿ ಅತಿ ಹೆಚ್ಚು ಬ್ಯಾಟಿಂಗ್ ಸರಾಸರಿ ಹೊಂದುವ ಮೂಲಕ ಆಸೀಸ್ ಆಟಗಾರ ಸ್ವೀವ್ ಸ್ಮಿತ್ ಹಾಗೂ ಟೀಂ ಇಂಡಿಯಾದ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿಯನ್ನು ಮೀರಿಸಿ ಬಾಬರ್ ಅಜಮ್ ನಂ.1 ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಟೆಸ್ಟ್ ಕ್ರಿಕೆಟ್​ನಲ್ಲಿ ವಿಶೇಷ ಮೈಲಿಗಲ್ಲು ಸಾಧಿಸಿದ್ದಾರೆ. ಟೆಸ್ಟ್ ಕ್ರಿಕೆಟ್​ನಲ್ಲಿ ಆಡಿದ ಕನಿಷ್ಠ 20 ಇನ್ನಿಂಗ್ಸ್​ನಲ್ಲಿ ಅತಿ ಹೆಚ್ಚು ಬ್ಯಾಟಿಂಗ್ ಸರಾಸರಿ ಹೊಂದುವ ಮೂಲಕ ಆಸೀಸ್ ಆಟಗಾರ ಸ್ವೀವ್ ಸ್ಮಿತ್ ಹಾಗೂ ಟೀಂ ಇಂಡಿಯಾದ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿಯನ್ನು ಮೀರಿಸಿ ಬಾಬರ್ ಅಜಮ್ ನಂ.1 ಸ್ಥಾನವನ್ನು ಪಡೆದುಕೊಂಡಿದ್ದಾರೆ.

1 / 6
ಪ್ರಸ್ತುತ ಮೂರು ಸ್ವರೂಪಗಳಲ್ಲಿ 40 ಕ್ಕಿಂತ ಹೆಚ್ಚು ಸರಾಸರಿ ಹೊಂದಿರುವ ಬಾಬರ್, ಏಕದಿನ ಮಾದರಿಯಲ್ಲಿ 59.17 ಸರಾಸರಿಯನ್ನು ಹೊಂದಿದ್ದಾರೆ. ಇನ್ನು 2022 ರಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ಮಾಡಿರುವ ಬಾಬರ್ ನಾಲ್ಕು ಶತಕ ಮತ್ತು 7 ಅರ್ಧ ಶತಕಗಳನ್ನೊಳಗೊಂಡಂತೆ 69.10 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

ಪ್ರಸ್ತುತ ಮೂರು ಸ್ವರೂಪಗಳಲ್ಲಿ 40 ಕ್ಕಿಂತ ಹೆಚ್ಚು ಸರಾಸರಿ ಹೊಂದಿರುವ ಬಾಬರ್, ಏಕದಿನ ಮಾದರಿಯಲ್ಲಿ 59.17 ಸರಾಸರಿಯನ್ನು ಹೊಂದಿದ್ದಾರೆ. ಇನ್ನು 2022 ರಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ಮಾಡಿರುವ ಬಾಬರ್ ನಾಲ್ಕು ಶತಕ ಮತ್ತು 7 ಅರ್ಧ ಶತಕಗಳನ್ನೊಳಗೊಂಡಂತೆ 69.10 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

2 / 6
ಬಾಬರ್ ಹೊರತುಪಡಿಸಿದರೆ, ಟೆಸ್ಟ್ ಕ್ರಿಕೆಟ್​ನ ಕನಿಷ್ಠ 20 ಇನ್ನಿಂಗ್ಸ್​ಗಳಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಅತ್ಯುತ್ತಮ ಸರಾಸರಿಯಲ್ಲಿ ಹೆಚ್ಚು ರನ್ ಕಲೆ ಹಾಕಿರುವ ಆಟಗಾರರನ್ನು ನೋಡುವುದಾದರೆ, ಈ ಪಟ್ಟಿಯಲ್ಲಿ ಆಸೀಸ್ ಬ್ಯಾಟರ್ ಸ್ಮಿತ್ 2ನೇ ಸ್ಥಾನ ಪಡೆದುಕೊಂಡಿದ್ದಾರೆ. ಸ್ಮಿತ್ ಬರೋಬ್ಬರಿ 30 ಇನ್ನಿಂಗ್ಸ್‌ಗಳಲ್ಲಿ ಆರು ಅರ್ಧಶತಕ ಮತ್ತು ನಾಲ್ಕು ಶತಕಗಳನ್ನು ಒಳಗೊಂಡಂತೆ 55.40 ಸರಾಸರಿಯಲ್ಲಿ ರನ್ ಬಾರಿಸಿದ್ದಾರೆ.

ಬಾಬರ್ ಹೊರತುಪಡಿಸಿದರೆ, ಟೆಸ್ಟ್ ಕ್ರಿಕೆಟ್​ನ ಕನಿಷ್ಠ 20 ಇನ್ನಿಂಗ್ಸ್​ಗಳಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಅತ್ಯುತ್ತಮ ಸರಾಸರಿಯಲ್ಲಿ ಹೆಚ್ಚು ರನ್ ಕಲೆ ಹಾಕಿರುವ ಆಟಗಾರರನ್ನು ನೋಡುವುದಾದರೆ, ಈ ಪಟ್ಟಿಯಲ್ಲಿ ಆಸೀಸ್ ಬ್ಯಾಟರ್ ಸ್ಮಿತ್ 2ನೇ ಸ್ಥಾನ ಪಡೆದುಕೊಂಡಿದ್ದಾರೆ. ಸ್ಮಿತ್ ಬರೋಬ್ಬರಿ 30 ಇನ್ನಿಂಗ್ಸ್‌ಗಳಲ್ಲಿ ಆರು ಅರ್ಧಶತಕ ಮತ್ತು ನಾಲ್ಕು ಶತಕಗಳನ್ನು ಒಳಗೊಂಡಂತೆ 55.40 ಸರಾಸರಿಯಲ್ಲಿ ರನ್ ಬಾರಿಸಿದ್ದಾರೆ.

3 / 6
ಸ್ಮಿತ್ ಬಳಿಕ ಇಂಗ್ಲೆಂಡ್‌ನ ಮಾಜಿ ನಾಯಕ ಜೋ ರೂಟ್ ಇದ್ದು, ರೂಟ್ 34 ಇನ್ನಿಂಗ್ಸ್‌ಗಳಲ್ಲಿ 54.20 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

ಸ್ಮಿತ್ ಬಳಿಕ ಇಂಗ್ಲೆಂಡ್‌ನ ಮಾಜಿ ನಾಯಕ ಜೋ ರೂಟ್ ಇದ್ದು, ರೂಟ್ 34 ಇನ್ನಿಂಗ್ಸ್‌ಗಳಲ್ಲಿ 54.20 ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

4 / 6
ಶ್ರೀಲಂಕಾದ ಏಂಜೆಲೊ ಮ್ಯಾಥ್ಯೂಸ್ 16 ಇನ್ನಿಂಗ್ಸ್‌ಗಳಲ್ಲಿ 48.40 ಸರಾಸರಿಯಲ್ಲಿ ರನ್ ಕಲೆ ಹಾಕಿದ್ದು ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.

ಶ್ರೀಲಂಕಾದ ಏಂಜೆಲೊ ಮ್ಯಾಥ್ಯೂಸ್ 16 ಇನ್ನಿಂಗ್ಸ್‌ಗಳಲ್ಲಿ 48.40 ಸರಾಸರಿಯಲ್ಲಿ ರನ್ ಕಲೆ ಹಾಕಿದ್ದು ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.

5 / 6
ಇನ್ನು 5ನೇ ಸ್ಥಾನದಲ್ಲಿ ಭಾರತದ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ಇದ್ದು, ಕೊಹ್ಲಿ 27 ಇನ್ನಿಂಗ್ಸ್‌ಗಳಲ್ಲಿ 34.65 ಸರಾಸರಿಯಲ್ಲಿ ರನ್ ಬಾರಿಸಿದ್ದಾರೆ.  ಈ ಅವಧಿಯಲ್ಲಿ ವಿರಾಟ್ ಬ್ಯಾಟ್‌ನಿಂದ ಮೂರು ಅರ್ಧ ಶತಕ ಮತ್ತು ಒಂದು ಶತಕ ಹೊರಬಂದಿದೆ.

ಇನ್ನು 5ನೇ ಸ್ಥಾನದಲ್ಲಿ ಭಾರತದ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ಇದ್ದು, ಕೊಹ್ಲಿ 27 ಇನ್ನಿಂಗ್ಸ್‌ಗಳಲ್ಲಿ 34.65 ಸರಾಸರಿಯಲ್ಲಿ ರನ್ ಬಾರಿಸಿದ್ದಾರೆ. ಈ ಅವಧಿಯಲ್ಲಿ ವಿರಾಟ್ ಬ್ಯಾಟ್‌ನಿಂದ ಮೂರು ಅರ್ಧ ಶತಕ ಮತ್ತು ಒಂದು ಶತಕ ಹೊರಬಂದಿದೆ.

6 / 6
Follow us
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ