AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್‌ ನೆಲದಲ್ಲಿ ಒಂದಂಕಿ ದಾಟದ ಬಾಬರ್ ಆಝಂ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಕಿಸ್ತಾನ ನಾಯಕ ಬಾಬರ್ ಆಝಂ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಮೂರನೇ ಟೆಸ್ಟ್‌ನಲ್ಲೂ 7 ರನ್‌ಗಳಿಗೆ ಔಟಾಗುವ ಮೂಲಕ ತಂಡದ ಬ್ಯಾಟಿಂಗ್ ವೈಫಲ್ಯಕ್ಕೆ ಕಾರಣರಾದರು. ಸತತ ಮೂರು ಇನ್ನಿಂಗ್ಸ್‌ಗಳಲ್ಲಿ ಒಂದಂಕಿ ದಾಟಲು ವಿಫಲರಾದರು. ಸರಣಿಯುದ್ದಕ್ಕೂ ಪಾಕಿಸ್ತಾನ 200 ರನ್ ಗಡಿ ದಾಟಿಲ್ಲ, 2-0 ಹಿನ್ನಡೆಯಲ್ಲಿರುವ ತಂಡದ ಭವಿಷ್ಯ ಕಳವಳಕಾರಿಯಾಗಿದೆ.

ಪೃಥ್ವಿಶಂಕರ
|

Updated on: Sep 09, 2026 | 9:41 PM

Share
ಇಂಗ್ಲೆಂಡ್ ಪ್ರವಾಸ ಪಾಕಿಸ್ತಾನ ಟೆಸ್ಟ್ ನಾಯಕ ಬಾಬರ್ ಆಝಂ ದುಃಸ್ವಪ್ನದಂತೆ ಕಾಡುತ್ತಿದೆ. ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನದಂದು ಪಾಕಿಸ್ತಾನದ ಬ್ಯಾಟಿಂಗ್ ಮತ್ತೊಮ್ಮೆ ವಿಫಲವಾತಯಿತು. ಪರಿಣಾಮವಾಗಿ ಇಡೀ ತಂಡ ಕೇವಲ 133 ರನ್​ಗಳಿಗೆ ಆಲೌಟ್ ಆಯಿತು. ನಾಯಕ ಬಾಬರ್ ಆಝಂ ಕೂಡ ಕೇವಲ 7 ರನ್​ಗೆ ಔಟಾಗುವ ಮೂಲಕ ತಂಡದ ಪತನಕ್ಕೆ ಕಾರಣರಾದರು.

ಇಂಗ್ಲೆಂಡ್ ಪ್ರವಾಸ ಪಾಕಿಸ್ತಾನ ಟೆಸ್ಟ್ ನಾಯಕ ಬಾಬರ್ ಆಝಂ ದುಃಸ್ವಪ್ನದಂತೆ ಕಾಡುತ್ತಿದೆ. ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನದಂದು ಪಾಕಿಸ್ತಾನದ ಬ್ಯಾಟಿಂಗ್ ಮತ್ತೊಮ್ಮೆ ವಿಫಲವಾತಯಿತು. ಪರಿಣಾಮವಾಗಿ ಇಡೀ ತಂಡ ಕೇವಲ 133 ರನ್​ಗಳಿಗೆ ಆಲೌಟ್ ಆಯಿತು. ನಾಯಕ ಬಾಬರ್ ಆಝಂ ಕೂಡ ಕೇವಲ 7 ರನ್​ಗೆ ಔಟಾಗುವ ಮೂಲಕ ತಂಡದ ಪತನಕ್ಕೆ ಕಾರಣರಾದರು.

1 / 5
ವಾಸ್ತವವಾಗಿ ಬಾಬರ್ ಆಝಂ ಸತತ ಮೂರನೇ ಇನ್ನಿಂಗ್ಸ್​ನಲ್ಲಿ ಒಂದಂಕಿ ಗಡಿ ದಾಟುವಲ್ಲಿ ವಿಫಲರಾದರು. ಈ ಸರಣಿಯ ಮೊದಲ ಪಂದ್ಯದಲ್ಲಿ ಬಾಬರ್ ಆಝಂ ಆಡಿರಲಿಲ್ಲ. ಆ ಪಂದ್ಯದಲ್ಲೂ ತಂಡ ಸೋತಿತು. ಎರಡನೇ ಪಂದ್ಯದಲ್ಲಿ ತಂಡಕ್ಕೆ ಮರಳಿದ ಬಾಬರ್, ಆ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 8 ರನ್ ಬಾರಿಸಿದ್ದ ಬಾಬರ್, 2ನೇ ಇನ್ನಿಂಗ್ಸ್​ನಲ್ಲಿ ಕೇವಲ 7 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು.

ವಾಸ್ತವವಾಗಿ ಬಾಬರ್ ಆಝಂ ಸತತ ಮೂರನೇ ಇನ್ನಿಂಗ್ಸ್​ನಲ್ಲಿ ಒಂದಂಕಿ ಗಡಿ ದಾಟುವಲ್ಲಿ ವಿಫಲರಾದರು. ಈ ಸರಣಿಯ ಮೊದಲ ಪಂದ್ಯದಲ್ಲಿ ಬಾಬರ್ ಆಝಂ ಆಡಿರಲಿಲ್ಲ. ಆ ಪಂದ್ಯದಲ್ಲೂ ತಂಡ ಸೋತಿತು. ಎರಡನೇ ಪಂದ್ಯದಲ್ಲಿ ತಂಡಕ್ಕೆ ಮರಳಿದ ಬಾಬರ್, ಆ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 8 ರನ್ ಬಾರಿಸಿದ್ದ ಬಾಬರ್, 2ನೇ ಇನ್ನಿಂಗ್ಸ್​ನಲ್ಲಿ ಕೇವಲ 7 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು.

2 / 5
ಬಾಬರ್ ಆಗಮನದ ಹೊರತಾಗಿಯೂ ಪಾಕಿಸ್ತಾನ ತಂಡ ಎರಡನೇ ಟೆಸ್ಟ್​ನಲ್ಲೂ 194 ರನ್​ಗಳ ಹೀನಾಯ ಸೋಲು ಅನುಭವಿಸಿತ್ತು. ಇದೀಗ ಮೂರನೇ ಟೆಸ್ಟ್​ನಲ್ಲೂ ಪಾಕ್ ತಂಡದ ಪ್ರದರ್ಶನ ತೀರ ಕಳಪೆಯಾಗಿದೆ. ಈ ಇಡೀ ಸರಣಿಯಲ್ಲಿ ಪಾಕ್ ತಂಡ 200 ರನ್​ಗಳ ಗಡಿ ದಾಟಿಲ್ಲ. ಪಾಕ್ ತಂಡ ಇಂಗ್ಲೆಂಡ್‌ ಪ್ರವಾಸದಲ್ಲಿ ಎಲ್ಲಾ ವಿಭಾಗದಲ್ಲೂ ವಿಫಲವಾಗಿದೆ.

ಬಾಬರ್ ಆಗಮನದ ಹೊರತಾಗಿಯೂ ಪಾಕಿಸ್ತಾನ ತಂಡ ಎರಡನೇ ಟೆಸ್ಟ್​ನಲ್ಲೂ 194 ರನ್​ಗಳ ಹೀನಾಯ ಸೋಲು ಅನುಭವಿಸಿತ್ತು. ಇದೀಗ ಮೂರನೇ ಟೆಸ್ಟ್​ನಲ್ಲೂ ಪಾಕ್ ತಂಡದ ಪ್ರದರ್ಶನ ತೀರ ಕಳಪೆಯಾಗಿದೆ. ಈ ಇಡೀ ಸರಣಿಯಲ್ಲಿ ಪಾಕ್ ತಂಡ 200 ರನ್​ಗಳ ಗಡಿ ದಾಟಿಲ್ಲ. ಪಾಕ್ ತಂಡ ಇಂಗ್ಲೆಂಡ್‌ ಪ್ರವಾಸದಲ್ಲಿ ಎಲ್ಲಾ ವಿಭಾಗದಲ್ಲೂ ವಿಫಲವಾಗಿದೆ.

3 / 5
ಮೂರನೇ ಟೆಸ್ಟ್ ಪಂದ್ಯದಲ್ಲಿ ಐದನೇ ಕ್ರಮಾಂಕದಲ್ಲಿ ಬಂದ ಬಾಬರ್ ಆಝಂ 18 ಎಸೆತಗಳನ್ನು ಎದುರಿಸಿ ಕೇವಲ ಏಳು ರನ್ ಗಳಿಸಿ ಔಟಾದರು. ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ ಒಂದು ಬೌಂಡರಿ ಬಾರಿಸಲಷ್ಟೇ ಶಕ್ತರಾದ ಬಾಬರ್,  ಜೋಶ್ ಟಂಗ್ ಅವರ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.

ಮೂರನೇ ಟೆಸ್ಟ್ ಪಂದ್ಯದಲ್ಲಿ ಐದನೇ ಕ್ರಮಾಂಕದಲ್ಲಿ ಬಂದ ಬಾಬರ್ ಆಝಂ 18 ಎಸೆತಗಳನ್ನು ಎದುರಿಸಿ ಕೇವಲ ಏಳು ರನ್ ಗಳಿಸಿ ಔಟಾದರು. ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ ಒಂದು ಬೌಂಡರಿ ಬಾರಿಸಲಷ್ಟೇ ಶಕ್ತರಾದ ಬಾಬರ್, ಜೋಶ್ ಟಂಗ್ ಅವರ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.

4 / 5
ಸರಣಿಯಲ್ಲಿ ಈಗಾಗಲೇ 2-0 ಹಿನ್ನಡೆಯಲ್ಲಿರುವ ಪಾಕಿಸ್ತಾನ ಈ ಸರಣಿಯಲ್ಲಿ ಕ್ಲೀನ್ ಸ್ವೀಪ್ ತಪ್ಪಿಸಲು ಪ್ರಯತ್ನಿಸುತ್ತದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಮೂರನೇ ಟೆಸ್ಟ್​ನಲ್ಲೂ ಪಾಕ್ ತಂಡದ ಪ್ರದರ್ಶನ ಬದಲಾಗಲಿಲ್ಲ. ಈ ಪಂದ್ಯಕ್ಕಾಗಿ ಪಾಕ್ ತಂಡದಲ್ಲಿ 4 ಬದಲಾವಣೆಗಳನ್ನು ಮಾಡಲಾಗಿದೆಯಾದರೂ ಯಾರ ಪ್ರದರ್ಶನವೂ ಉತ್ತಮವಾಗಿಲ್ಲ.

ಸರಣಿಯಲ್ಲಿ ಈಗಾಗಲೇ 2-0 ಹಿನ್ನಡೆಯಲ್ಲಿರುವ ಪಾಕಿಸ್ತಾನ ಈ ಸರಣಿಯಲ್ಲಿ ಕ್ಲೀನ್ ಸ್ವೀಪ್ ತಪ್ಪಿಸಲು ಪ್ರಯತ್ನಿಸುತ್ತದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಮೂರನೇ ಟೆಸ್ಟ್​ನಲ್ಲೂ ಪಾಕ್ ತಂಡದ ಪ್ರದರ್ಶನ ಬದಲಾಗಲಿಲ್ಲ. ಈ ಪಂದ್ಯಕ್ಕಾಗಿ ಪಾಕ್ ತಂಡದಲ್ಲಿ 4 ಬದಲಾವಣೆಗಳನ್ನು ಮಾಡಲಾಗಿದೆಯಾದರೂ ಯಾರ ಪ್ರದರ್ಶನವೂ ಉತ್ತಮವಾಗಿಲ್ಲ.

5 / 5
Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್