AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam: ಪಾಕ್​ ತಂಡದಿಂದ ಬಾಬರ್ ಆಝಂಗೆ ಗೇಟ್ ಪಾಸ್: ವರದಿ

Babar Azam: ಪಾಕಿಸ್ತಾನ್ ಪರ 100 ಟೆಸ್ಟ್ ಇನಿಂಗ್ಸ್ ಆಡಿರುವ ಬಾಬರ್ ಆಝಂ ಒಟ್ಟು 3997 ರನ್ ಕಲೆಹಾಕಿದ್ದಾರೆ. ಈ ವೇಳೆ 26 ಅರ್ಧಶತಕ ಹಾಗೂ 9 ಶತಕಗಳನ್ನು ಬಾರಿಸಿದ್ದಾರೆ. ಆದರೆ ಅವರು ಕೊನೆಯ ಅರ್ಧಶತಕ ಬಾರಿಸಿದ್ದು 2022 ರಲ್ಲಿ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Oct 13, 2024 | 1:24 PM

Share
ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ ಅವರನ್ನು ಟೆಸ್ಟ್ ತಂಡದಿಂದ ಕೈ ಬಿಡಲು ಪಿಸಿಬಿ ಆಯ್ಕೆ ಸಮಿತಿ ನಿರ್ಧರಿಸಿದೆ. ಈ ನಿರ್ಧಾರದಂತೆ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಬಾಬರ್ ಆಝಂ ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ 4ನೇ ಕ್ರಮಾಂಕದಲ್ಲಿ ಮತ್ತೋರ್ವ ಆಟಗಾರನಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ ಅವರನ್ನು ಟೆಸ್ಟ್ ತಂಡದಿಂದ ಕೈ ಬಿಡಲು ಪಿಸಿಬಿ ಆಯ್ಕೆ ಸಮಿತಿ ನಿರ್ಧರಿಸಿದೆ. ಈ ನಿರ್ಧಾರದಂತೆ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಬಾಬರ್ ಆಝಂ ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ 4ನೇ ಕ್ರಮಾಂಕದಲ್ಲಿ ಮತ್ತೋರ್ವ ಆಟಗಾರನಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

1 / 5
ಕ್ರಿಕ್​ಇನ್​ಫೋ ವರದಿ ಪ್ರಕಾರ, ಮುಲ್ತಾನ್​ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಬಾಬರ್ ಆಝಂ ಅವರನ್ನು ಕೈ ಬಿಡಲಿದ್ದಾರೆ. ಅಲ್ಲದೆ ಅಕ್ಟೋಬರ್ 20 ರಿಂದ ಶುರುವಾಗಲಿರುವ ಪ್ರಥಮ ದರ್ಜೆ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳುವಂತೆ ಬಾಬರ್​ಗೆ ಸೂಚಿಸಲಾಗಿದೆ.

ಕ್ರಿಕ್​ಇನ್​ಫೋ ವರದಿ ಪ್ರಕಾರ, ಮುಲ್ತಾನ್​ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಬಾಬರ್ ಆಝಂ ಅವರನ್ನು ಕೈ ಬಿಡಲಿದ್ದಾರೆ. ಅಲ್ಲದೆ ಅಕ್ಟೋಬರ್ 20 ರಿಂದ ಶುರುವಾಗಲಿರುವ ಪ್ರಥಮ ದರ್ಜೆ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳುವಂತೆ ಬಾಬರ್​ಗೆ ಸೂಚಿಸಲಾಗಿದೆ.

2 / 5
ಕಳಪೆ ಫಾರ್ಮ್​ನಲ್ಲಿರುವ ಬಾಬರ್ ಆಝಂ ಟೆಸ್ಟ್ ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸಿ 2 ವರ್ಷಗಳೇ ಕಳೆದಿವೆ. ಅದರಲ್ಲೂ ರನ್​ ಮಳೆಯೇ ಹರಿದಿರುವ ಮುಲ್ತಾನ್ ಟೆಸ್ಟ್​ನಲ್ಲಿ ಬಾಬರ್ ಕಲೆಹಾಕಿದ್ದು ಕೇವಲ 35 ರನ್​ಗಳು ಮಾತ್ರ. ಹೀಗಾಗಿಯೇ ಅವರನ್ನು ತಂಡದಿಂದ ಕೈ ಬಿಡಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಹೊಸ ಆಯ್ಕೆ ಸಮಿತಿ ನಿರ್ಧರಿಸಿದೆ.

ಕಳಪೆ ಫಾರ್ಮ್​ನಲ್ಲಿರುವ ಬಾಬರ್ ಆಝಂ ಟೆಸ್ಟ್ ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸಿ 2 ವರ್ಷಗಳೇ ಕಳೆದಿವೆ. ಅದರಲ್ಲೂ ರನ್​ ಮಳೆಯೇ ಹರಿದಿರುವ ಮುಲ್ತಾನ್ ಟೆಸ್ಟ್​ನಲ್ಲಿ ಬಾಬರ್ ಕಲೆಹಾಕಿದ್ದು ಕೇವಲ 35 ರನ್​ಗಳು ಮಾತ್ರ. ಹೀಗಾಗಿಯೇ ಅವರನ್ನು ತಂಡದಿಂದ ಕೈ ಬಿಡಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಹೊಸ ಆಯ್ಕೆ ಸಮಿತಿ ನಿರ್ಧರಿಸಿದೆ.

3 / 5
ಕಳೆದ 18 ಇನಿಂಗ್ಸ್​ಗಳಿಂದ ಒಂದೇ ಒಂದು ಅರ್ಧಶತಕ ಬಾರಿಸಲು ಸಾಧ್ಯವಾಗದ ಬಾಬರ್ ಆಝಂ ಅವರನ್ನು ತಂಡದಲ್ಲಿ ಮುಂದುವರೆಸುವುದು ಸೂಕ್ತವಲ್ಲ. ಹೀಗಾಗಿ ದ್ವಿತೀಯ ಟೆಸ್ಟ್ ಪಂದ್ಯದಿಂದ ಬಾಬರ್ ಆಝಂ ಅವರನ್ನು ಕೈಬಿಡುವಂತೆ ಆಯ್ಕೆ ಸಮಿತಿ ಶಿಫಾರಸು ಮಾಡಿದೆ. ಅದರಂತೆ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ಬಾಬರ್ ಹೊರಬೀಳುವುದು ಬಹುತೇಕ ಖಚಿತವಾಗಿದೆ.

ಕಳೆದ 18 ಇನಿಂಗ್ಸ್​ಗಳಿಂದ ಒಂದೇ ಒಂದು ಅರ್ಧಶತಕ ಬಾರಿಸಲು ಸಾಧ್ಯವಾಗದ ಬಾಬರ್ ಆಝಂ ಅವರನ್ನು ತಂಡದಲ್ಲಿ ಮುಂದುವರೆಸುವುದು ಸೂಕ್ತವಲ್ಲ. ಹೀಗಾಗಿ ದ್ವಿತೀಯ ಟೆಸ್ಟ್ ಪಂದ್ಯದಿಂದ ಬಾಬರ್ ಆಝಂ ಅವರನ್ನು ಕೈಬಿಡುವಂತೆ ಆಯ್ಕೆ ಸಮಿತಿ ಶಿಫಾರಸು ಮಾಡಿದೆ. ಅದರಂತೆ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ಬಾಬರ್ ಹೊರಬೀಳುವುದು ಬಹುತೇಕ ಖಚಿತವಾಗಿದೆ.

4 / 5
ಅಂದಹಾಗೆ ಬಾಬರ್ ಆಝಂ ಟೆಸ್ಟ್ ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸಿ ಬರೋಬ್ಬರಿ 650 ದಿನಗಳೇ ಕಳೆದಿವೆ. ಡಿಸೆಂಬರ್ 26, 2022 ರಲ್ಲಿ ನ್ಯೂಝಿಲೆಂಡ್ ವಿರುದ್ಧ ಅವರು ಕೊನೆಯ ಅರ್ಧಶತಕ ಬಾರಿಸಿದ್ದರು. ಇದಾದ ಬಳಿಕ ಟೆಸ್ಟ್​ನಲ್ಲಿ ಒಂದೇ ಒಂದು ಹಾಫ್ ಸೆಂಚುರಿ ಸಿಡಿಸಿಲ್ಲ. ಹೀಗಾಗಿಯೇ ಇದೀಗ ಟೆಸ್ಟ್ ತಂಡದಿಂದ ಬಾಬರ್ ಆಝಂಗೆ ಗೇಟ್ ಪಾಸ್ ನೀಡಲು ನಿರ್ಧರಿಸಲಾಗಿದೆ.

ಅಂದಹಾಗೆ ಬಾಬರ್ ಆಝಂ ಟೆಸ್ಟ್ ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸಿ ಬರೋಬ್ಬರಿ 650 ದಿನಗಳೇ ಕಳೆದಿವೆ. ಡಿಸೆಂಬರ್ 26, 2022 ರಲ್ಲಿ ನ್ಯೂಝಿಲೆಂಡ್ ವಿರುದ್ಧ ಅವರು ಕೊನೆಯ ಅರ್ಧಶತಕ ಬಾರಿಸಿದ್ದರು. ಇದಾದ ಬಳಿಕ ಟೆಸ್ಟ್​ನಲ್ಲಿ ಒಂದೇ ಒಂದು ಹಾಫ್ ಸೆಂಚುರಿ ಸಿಡಿಸಿಲ್ಲ. ಹೀಗಾಗಿಯೇ ಇದೀಗ ಟೆಸ್ಟ್ ತಂಡದಿಂದ ಬಾಬರ್ ಆಝಂಗೆ ಗೇಟ್ ಪಾಸ್ ನೀಡಲು ನಿರ್ಧರಿಸಲಾಗಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?