AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ

Babar Azam Records: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಹೊಂದಿರುವ ಬಾಬರ್ ಆಝಂ ಇದೀಗ ಅತ್ಯಂತ ಹೀನಾಯ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟಿ20 ವಿಶ್ವಕಪ್​ನಲ್ಲಿ ಅತೀ ನಿಧಾನವಾಗಿ ಬ್ಯಾಟ್ ಬೀಸುವ ಮೂಲಕ. ಈ ದಾಖಲೆಯೊಂದಿಗೆ ಪಾಕ್ ತಂಡದ ಮಾಜಿ ಆಟಗಾರನ ಅನಗತ್ಯ ದಾಖಲೆಯನ್ನು ಮುರಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 25, 2026 | 7:41 AM

Share
T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅವರ ಕಳಪೆ ಬ್ಯಾಟಿಂಗ್ ಮುಂದುವರೆದಿದೆ. ಈ ಕಳಪೆ ಬ್ಯಾಟಿಂಗ್​ನೊಂದಿಗೆ ವಿಶ್ವಕಪ್ ಇತಿಹಾಸದಲ್ಲೇ ಬಾಬರ್ ಅತ್ಯಂತ ಹೀನಾಯ ದಾಖಲೆ ಬರೆದಿದ್ದಾರೆ. ಅದು ಸಹ ಅತೀ ಕಡಿಮೆ ಸ್ಟ್ರೈಕ್ ರೇಟ್​ನೊಂದಿಗೆ..!

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅವರ ಕಳಪೆ ಬ್ಯಾಟಿಂಗ್ ಮುಂದುವರೆದಿದೆ. ಈ ಕಳಪೆ ಬ್ಯಾಟಿಂಗ್​ನೊಂದಿಗೆ ವಿಶ್ವಕಪ್ ಇತಿಹಾಸದಲ್ಲೇ ಬಾಬರ್ ಅತ್ಯಂತ ಹೀನಾಯ ದಾಖಲೆ ಬರೆದಿದ್ದಾರೆ. ಅದು ಸಹ ಅತೀ ಕಡಿಮೆ ಸ್ಟ್ರೈಕ್ ರೇಟ್​ನೊಂದಿಗೆ..!

1 / 5
ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ 45ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ 24 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 25 ರನ್​ಗಳು ಮಾತ್ರ. ಈ 25 ರನ್​ಗಳೊಂದಿಗೆ ವಿಶ್ವಕಪ್​ ಇತಿಹಾಸದಲ್ಲಿ ಅತೀ ಕಡಿಮೆ ಸ್ಟ್ರೈಕ್ ರೇಟ್ ಹೊಂದಿರುವ ಬ್ಯಾಟರ್​ ಎಂಬ ಅನಗತ್ಯ ದಾಖಲೆಯೊಂದನ್ನು ಬಾಬರ್ ತಮ್ಮದಾಗಿಸಿಕೊಂಡಿದ್ದಾರೆ.

ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ 45ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ 24 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 25 ರನ್​ಗಳು ಮಾತ್ರ. ಈ 25 ರನ್​ಗಳೊಂದಿಗೆ ವಿಶ್ವಕಪ್​ ಇತಿಹಾಸದಲ್ಲಿ ಅತೀ ಕಡಿಮೆ ಸ್ಟ್ರೈಕ್ ರೇಟ್ ಹೊಂದಿರುವ ಬ್ಯಾಟರ್​ ಎಂಬ ಅನಗತ್ಯ ದಾಖಲೆಯೊಂದನ್ನು ಬಾಬರ್ ತಮ್ಮದಾಗಿಸಿಕೊಂಡಿದ್ದಾರೆ.

2 / 5
ಅಂದರೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಕನಿಷ್ಠ 500 ರನ್​ಗಳಿಸಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ ಅತೀ ಕಡಿಮೆ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವ ಬ್ಯಾಟರ್ ಬಾಬರ್. ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಪಾಕಿಸ್ತಾನದ ಮಾಜಿ ಆಟಗಾರ ಮೊಹಮ್ಮದ್ ಹಫೀಝ್ ಹೆಸರಿನಲ್ಲಿತ್ತು.

ಅಂದರೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಕನಿಷ್ಠ 500 ರನ್​ಗಳಿಸಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ ಅತೀ ಕಡಿಮೆ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿರುವ ಬ್ಯಾಟರ್ ಬಾಬರ್. ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಪಾಕಿಸ್ತಾನದ ಮಾಜಿ ಆಟಗಾರ ಮೊಹಮ್ಮದ್ ಹಫೀಝ್ ಹೆಸರಿನಲ್ಲಿತ್ತು.

3 / 5
ಟಿ20 ವಿಶ್ವಕಪ್​ನಲ್ಲಿ 27 ಇನಿಂಗ್ಸ್ ಆಡಿರುವ ಮೊಹಮ್ಮದ್ ಹಫೀಝ್ 457 ಎಸೆತಗಳಲ್ಲಿ ಕಲೆಹಾಕಿರುವ ಒಟ್ಟು ರನ್ 511  ಮಾತ್ರ. ಅಂದರೆ 111.8ರ ಸ್ಟ್ರೈಕ್ ರೇಟ್​ನಲ್ಲಿ ರನ್​ ಗಳಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಕಡಿಮೆ ಸ್ಟ್ರೈಕ್ ರೇಟ್ ಹೊಂದಿರುವ ಬ್ಯಾಟರ್ ಎನಿಸಿಕೊಂಡಿದ್ದರು.

ಟಿ20 ವಿಶ್ವಕಪ್​ನಲ್ಲಿ 27 ಇನಿಂಗ್ಸ್ ಆಡಿರುವ ಮೊಹಮ್ಮದ್ ಹಫೀಝ್ 457 ಎಸೆತಗಳಲ್ಲಿ ಕಲೆಹಾಕಿರುವ ಒಟ್ಟು ರನ್ 511  ಮಾತ್ರ. ಅಂದರೆ 111.8ರ ಸ್ಟ್ರೈಕ್ ರೇಟ್​ನಲ್ಲಿ ರನ್​ ಗಳಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಕಡಿಮೆ ಸ್ಟ್ರೈಕ್ ರೇಟ್ ಹೊಂದಿರುವ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಇದೀಗ ಈ ಹೀನಾಯ ದಾಖಲೆಯನ್ನು ಬಾಬರ್ ಆಝಂ ತಮ್ಮದಾಗಿಸಿಕೊಂಡಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಈವರೆಗೆ 21 ಇನಿಂಗ್ಸ್ ಆಡಿರುವ ಬಾಬರ್ ಆಝಂ ಒಟ್ಟು 640 ರನ್​ ಕಲೆಹಾಕಿದ್ದಾರೆ. ಈ 640 ರನ್​ಗಳಿಸಲು ಅವರು ತೆಗೆದುಕೊಂಡಿರುವುದು ಬರೋಬ್ಬರಿ 574 ಎಸೆತಗಳನ್ನು ಎಂಬುದು ವಿಶೇಷ. ಅಂದರೆ ಕೇವಲ 111.5 ರ ಸ್ಟ್ರೈಕ್ ರೇಟ್​ನಲ್ಲಿ ರನ್​ ಗಳಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತೀ ಕಡಿಮೆ ಸ್ಟ್ರೈಕ್ ರೇಟ್​ನಲ್ಲಿ 500 ಕ್ಕೂ ಅಧಿಕ ರನ್​ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ಈ ಹೀನಾಯ ದಾಖಲೆಯನ್ನು ಬಾಬರ್ ಆಝಂ ತಮ್ಮದಾಗಿಸಿಕೊಂಡಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಈವರೆಗೆ 21 ಇನಿಂಗ್ಸ್ ಆಡಿರುವ ಬಾಬರ್ ಆಝಂ ಒಟ್ಟು 640 ರನ್​ ಕಲೆಹಾಕಿದ್ದಾರೆ. ಈ 640 ರನ್​ಗಳಿಸಲು ಅವರು ತೆಗೆದುಕೊಂಡಿರುವುದು ಬರೋಬ್ಬರಿ 574 ಎಸೆತಗಳನ್ನು ಎಂಬುದು ವಿಶೇಷ. ಅಂದರೆ ಕೇವಲ 111.5 ರ ಸ್ಟ್ರೈಕ್ ರೇಟ್​ನಲ್ಲಿ ರನ್​ ಗಳಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತೀ ಕಡಿಮೆ ಸ್ಟ್ರೈಕ್ ರೇಟ್​ನಲ್ಲಿ 500 ಕ್ಕೂ ಅಧಿಕ ರನ್​ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
Follow Us
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ