AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babar Azam vs Virat Kohli: ಬಾಬರ್ ಮುಂದೆ ವಿರಾಟ್ ಶೂನ್ಯ ಎಂದ ಪಾಕ್ ಮಾಜಿ ಕೋಚ್

Babar Azam vs Virat Kohli: 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ನಿರಾಶಾದಾಯಕ ಪ್ರದರ್ಶನ ನೀಡಿ ಟೂರ್ನಿಯಿಂದಲೇ ಹೊರಬಿದ್ದಿದೆ. ಈ ನಡುವೆ ಪಾಕ್ ತಂಡದ ಮಾಜಿ ಕೋಚ್ ಮೊಹ್ಸಿನ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಬಾಬರ್ ಅಜಮ್ ಮುಂದೆ ವಿರಾಟ್ ಕೊಹ್ಲಿ ಏನೇನೂ ಅಲ್ಲ ಎಂದಿದ್ದಾರೆ.

ಪೃಥ್ವಿಶಂಕರ
|

Updated on: Mar 02, 2025 | 8:12 PM

Share
2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ತಂಡದ ಪ್ರದರ್ಶನ ತುಂಬಾ ಕಳಪೆಯಾಗಿತ್ತು. ಆತಿಥೇಯ ತಂಡ ಗುಂಪು ಹಂತದಿಂದಲೇ ಟೂರ್ನಿಯಿಂದ ಹೊರಬಿತ್ತು. ಪಾಕಿಸ್ತಾನ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತರೆ ಆ ನಂತರ ಭಾರತ ವಿರುದ್ಧವೂ ಸೋತಿತು. ಉಳಿದಂತೆ ಕೊನೆಯ ಪಂದ್ಯ ಮಳೆಯಿಂದ ರದ್ದಾಗಿತ್ತು.

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ತಂಡದ ಪ್ರದರ್ಶನ ತುಂಬಾ ಕಳಪೆಯಾಗಿತ್ತು. ಆತಿಥೇಯ ತಂಡ ಗುಂಪು ಹಂತದಿಂದಲೇ ಟೂರ್ನಿಯಿಂದ ಹೊರಬಿತ್ತು. ಪಾಕಿಸ್ತಾನ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತರೆ ಆ ನಂತರ ಭಾರತ ವಿರುದ್ಧವೂ ಸೋತಿತು. ಉಳಿದಂತೆ ಕೊನೆಯ ಪಂದ್ಯ ಮಳೆಯಿಂದ ರದ್ದಾಗಿತ್ತು.

1 / 6
ತಂಡದ ಈ ಕಳಪೆ ಸಾಧನೆಗೆ ಬ್ಯಾಟಿಂಗ್ ವೈಫಲ್ಯವೇ ಕಾರಣವಾಗಿತ್ತು. ಅದರಲ್ಲೂ ಸ್ಟಾರ್ ಬ್ಯಾಟ್ಸ್‌ಮನ್ ಬಾಬರ್ ಆಝಂ ಅವರ ಬ್ಯಾಟ್ ಸಂಪೂರ್ಣವಾಗಿ ಮೌನವಾಗಿತ್ತು. ಪಾಕಿಸ್ತಾನದ ಹೀನಾಯ ಸೋಲಿನ ನಂತರ, ಬಾಬರ್ ಆಝಂರನ್ನು ತಂಡದಿಂದ ಹೊರಹಾಕಬೇಕು ಎಂಬ ಕೂಗು ಜೋರಾಗಿದೆ. ಈ ಮಧ್ಯೆ, ಪಾಕಿಸ್ತಾನದ ಮಾಜಿ ಕೋಚ್ ಮತ್ತು ಆಟಗಾರ ಮೊಹ್ಸಿನ್ ಖಾನ್ ವಿಚಿತ್ರ ಹೇಳಿಕೆ ನೀಡಿದ್ದಾರೆ.

ತಂಡದ ಈ ಕಳಪೆ ಸಾಧನೆಗೆ ಬ್ಯಾಟಿಂಗ್ ವೈಫಲ್ಯವೇ ಕಾರಣವಾಗಿತ್ತು. ಅದರಲ್ಲೂ ಸ್ಟಾರ್ ಬ್ಯಾಟ್ಸ್‌ಮನ್ ಬಾಬರ್ ಆಝಂ ಅವರ ಬ್ಯಾಟ್ ಸಂಪೂರ್ಣವಾಗಿ ಮೌನವಾಗಿತ್ತು. ಪಾಕಿಸ್ತಾನದ ಹೀನಾಯ ಸೋಲಿನ ನಂತರ, ಬಾಬರ್ ಆಝಂರನ್ನು ತಂಡದಿಂದ ಹೊರಹಾಕಬೇಕು ಎಂಬ ಕೂಗು ಜೋರಾಗಿದೆ. ಈ ಮಧ್ಯೆ, ಪಾಕಿಸ್ತಾನದ ಮಾಜಿ ಕೋಚ್ ಮತ್ತು ಆಟಗಾರ ಮೊಹ್ಸಿನ್ ಖಾನ್ ವಿಚಿತ್ರ ಹೇಳಿಕೆ ನೀಡಿದ್ದಾರೆ.

2 / 6
2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾಬರ್ ಅಜಮ್ ಕೇವಲ 87 ರನ್ ಗಳಿಸಲಷ್ಟೇ ಶಕ್ತರಾದರು. ಮತ್ತೊಂದೆಡೆ, ವಿರಾಟ್ ಕೊಹ್ಲಿ ಇದುವರೆಗೆ 133 ರನ್ ಬಾರಿಸಿದ್ದಾರೆ. ಇದಲ್ಲದೆ ವಿರಾಟ್ ಪಾಕಿಸ್ತಾನ ವಿರುದ್ಧ ಶತಕದ ಇನ್ನಿಂಗ್ಸ್ ಕೂಡ ಆಡಿದ್ದರು. ವಾಸ್ತವವಾಗಿ ಕ್ರಿಕೆಟ್ ಅಭಿಮಾನಿಗಳು ಆಗಾಗ್ಗೆ ಈ ಇಬ್ಬರು ಆಟಗಾರರನ್ನು ಹೋಲಿಸುತ್ತಲೇ ಇರುತ್ತಾರೆ.

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾಬರ್ ಅಜಮ್ ಕೇವಲ 87 ರನ್ ಗಳಿಸಲಷ್ಟೇ ಶಕ್ತರಾದರು. ಮತ್ತೊಂದೆಡೆ, ವಿರಾಟ್ ಕೊಹ್ಲಿ ಇದುವರೆಗೆ 133 ರನ್ ಬಾರಿಸಿದ್ದಾರೆ. ಇದಲ್ಲದೆ ವಿರಾಟ್ ಪಾಕಿಸ್ತಾನ ವಿರುದ್ಧ ಶತಕದ ಇನ್ನಿಂಗ್ಸ್ ಕೂಡ ಆಡಿದ್ದರು. ವಾಸ್ತವವಾಗಿ ಕ್ರಿಕೆಟ್ ಅಭಿಮಾನಿಗಳು ಆಗಾಗ್ಗೆ ಈ ಇಬ್ಬರು ಆಟಗಾರರನ್ನು ಹೋಲಿಸುತ್ತಲೇ ಇರುತ್ತಾರೆ.

3 / 6
ಆದಾಗ್ಯೂ, ವಿರಾಟ್ ಅವರ ಅಂಕಿಅಂಶಗಳಿಗೆ ಹೋಲಿಸಿದರೆ, ಬಾಬರ್ ಅವರಿಗಿಂತ ಬಹಳ ಹಿಂದಿದ್ದಾರೆ. ಆದರೆ ಪಾಕಿಸ್ತಾನದ ಮಾಜಿ ಕೋಚ್ ಮತ್ತು ಆಟಗಾರ ಮೊಹ್ಸಿನ್ ಖಾನ್ ಇದೀಗ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ಬಾಬರ್ ಮುಂದೆ ವಿರಾಟ್ ಶೂನ್ಯ ಎಂದಿದ್ದಾರೆ.

ಆದಾಗ್ಯೂ, ವಿರಾಟ್ ಅವರ ಅಂಕಿಅಂಶಗಳಿಗೆ ಹೋಲಿಸಿದರೆ, ಬಾಬರ್ ಅವರಿಗಿಂತ ಬಹಳ ಹಿಂದಿದ್ದಾರೆ. ಆದರೆ ಪಾಕಿಸ್ತಾನದ ಮಾಜಿ ಕೋಚ್ ಮತ್ತು ಆಟಗಾರ ಮೊಹ್ಸಿನ್ ಖಾನ್ ಇದೀಗ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದು, ಬಾಬರ್ ಮುಂದೆ ವಿರಾಟ್ ಶೂನ್ಯ ಎಂದಿದ್ದಾರೆ. )

4 / 6
ವಿರಾಟ್ ಕೊಹ್ಲಿ ಮತ್ತು ಬಾಬರ್ ಆಝಂ ನಡುವಿನ ಹೋಲಿಕೆಯ ಕುರಿತು ಎಆರ್‌ವೈ ನ್ಯೂಸ್ ಜೊತೆ ಮಾತನಾಡಿದ ಮೊಹ್ಸಿನ್ ಖಾನ್, ‘ಮೊದಲನೆಯದಾಗಿ, ನಾನು ಒಂದು ವಿಷಯವನ್ನು ಸ್ಪಷ್ಟಪಡಿಸುತ್ತೇನೆ, ವಿರಾಟ್ ಕೊಹ್ಲಿಗೆ ಬಾಬರ್ ಆಝಂ ಜೊತೆ ಯಾವುದೇ ಹೋಲಿಕೆ ಇಲ್ಲ. ಬಾಬರ್ ಮುಂದೆ ಕೊಹ್ಲಿ ಶೂನ್ಯ ಎಂದಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಬಾಬರ್ ಆಝಂ ನಡುವಿನ ಹೋಲಿಕೆಯ ಕುರಿತು ಎಆರ್‌ವೈ ನ್ಯೂಸ್ ಜೊತೆ ಮಾತನಾಡಿದ ಮೊಹ್ಸಿನ್ ಖಾನ್, ‘ಮೊದಲನೆಯದಾಗಿ, ನಾನು ಒಂದು ವಿಷಯವನ್ನು ಸ್ಪಷ್ಟಪಡಿಸುತ್ತೇನೆ, ವಿರಾಟ್ ಕೊಹ್ಲಿಗೆ ಬಾಬರ್ ಆಝಂ ಜೊತೆ ಯಾವುದೇ ಹೋಲಿಕೆ ಇಲ್ಲ. ಬಾಬರ್ ಮುಂದೆ ಕೊಹ್ಲಿ ಶೂನ್ಯ ಎಂದಿದ್ದಾರೆ.

5 / 6
ನಾವು ಇಲ್ಲಿ ಯಾರು ಉತ್ತಮ ಆಟಗಾರ ಎಂದು ಹೇಳುತ್ತಿಲ್ಲ, ನಾವು ಪಾಕಿಸ್ತಾನ ಕ್ರಿಕೆಟ್ ಬಗ್ಗೆ ಮಾತನಾಡುತ್ತಿದ್ದೇವೆ. ಪಾಕಿಸ್ತಾನ ಕ್ರಿಕೆಟ್ ಸಂಪೂರ್ಣವಾಗಿ ಹಾಳಾಗಿದೆ. ಯಾವುದೇ ಯೋಜನೆ ಇಲ್ಲ, ತಂತ್ರವಿಲ್ಲ, ಅರ್ಹತೆ ಇಲ್ಲ, ಮತ್ತು ಹೊಣೆಗಾರಿಕೆ ಇಲ್ಲ ಎಂದಿದ್ದಾರೆ. ಮೊಹ್ಸಿನ್ ಖಾನ್ ಅವರ ಈ ಹೇಳಿಕೆ ಈಗ ಸಾಕಷ್ಟು ವೈರಲ್ ಆಗುತ್ತಿದ್ದು, ಅಭಿಮಾನಿಗಳು ಅವರನ್ನು ತೀವ್ರವಾಗಿ ಟೀಕಿಸುತ್ತಿದ್ದಾರೆ.

ನಾವು ಇಲ್ಲಿ ಯಾರು ಉತ್ತಮ ಆಟಗಾರ ಎಂದು ಹೇಳುತ್ತಿಲ್ಲ, ನಾವು ಪಾಕಿಸ್ತಾನ ಕ್ರಿಕೆಟ್ ಬಗ್ಗೆ ಮಾತನಾಡುತ್ತಿದ್ದೇವೆ. ಪಾಕಿಸ್ತಾನ ಕ್ರಿಕೆಟ್ ಸಂಪೂರ್ಣವಾಗಿ ಹಾಳಾಗಿದೆ. ಯಾವುದೇ ಯೋಜನೆ ಇಲ್ಲ, ತಂತ್ರವಿಲ್ಲ, ಅರ್ಹತೆ ಇಲ್ಲ, ಮತ್ತು ಹೊಣೆಗಾರಿಕೆ ಇಲ್ಲ ಎಂದಿದ್ದಾರೆ. ಮೊಹ್ಸಿನ್ ಖಾನ್ ಅವರ ಈ ಹೇಳಿಕೆ ಈಗ ಸಾಕಷ್ಟು ವೈರಲ್ ಆಗುತ್ತಿದ್ದು, ಅಭಿಮಾನಿಗಳು ಅವರನ್ನು ತೀವ್ರವಾಗಿ ಟೀಕಿಸುತ್ತಿದ್ದಾರೆ.

6 / 6
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ