648 ದಿನಗಳಿಂದ ಬಾಬರ್ ಆಝಂ ಬಂದ ಪುಟ್ಟ ಹೋದ ಪುಟ್ಟ

Babar Azam: ಪಾಕಿಸ್ತಾನ್ ಪರ 98 ಟೆಸ್ಟ್ ಇನಿಂಗ್ಸ್ ಆಡಿರುವ ಬಾಬರ್ ಆಝಂ ಒಟ್ಟು 3962 ರನ್ ಕಲೆಹಾಕಿದ್ದಾರೆ. ಈ ವೇಳೆ 26 ಅರ್ಧಶತಕ ಹಾಗೂ 9 ಶತಕಗಳನ್ನು ಬಾರಿಸಿದ್ದಾರೆ. ಆದರೆ ಅವರು ಕೊನೆಯ ಅರ್ಧಶತಕ ಬಾರಿಸಿದ್ದು 2022 ರಲ್ಲಿ ಎಂಬುದು ವಿಶೇಷ.

|

Updated on: Oct 08, 2024 | 9:53 AM

ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ ಅವರ ಪೆವಿಲಿಯನ್ ಪರೇಡ್ ಮುಂದುವರೆದಿದೆ. ಮುಲ್ತಾನ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಬರ್ ಕೇವಲ 30 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಇದರ ಬೆನ್ನಲ್ಲೇ ಬಾಬರ್ ಬ್ಯಾಟಿಂಗ್​ ಬಗ್ಗೆ ಟೀಕೆಗಳು ಕೇಳಿ ಬರಲಾರಂಭಿಸಿದೆ.

ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ ಅವರ ಪೆವಿಲಿಯನ್ ಪರೇಡ್ ಮುಂದುವರೆದಿದೆ. ಮುಲ್ತಾನ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಬರ್ ಕೇವಲ 30 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಇದರ ಬೆನ್ನಲ್ಲೇ ಬಾಬರ್ ಬ್ಯಾಟಿಂಗ್​ ಬಗ್ಗೆ ಟೀಕೆಗಳು ಕೇಳಿ ಬರಲಾರಂಭಿಸಿದೆ.

1 / 6
ಇದಕ್ಕೆ ಮುಖ್ಯ ಕಾರಣ, ಬಾಬರ್ ಆಝಂ ಟೆಸ್ಟ್ ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸಿ ಬರೋಬ್ಬರಿ 648 ದಿನಗಳು ಕಳೆದಿರುವುದು. ಡಿಸೆಂಬರ್ 26, 2022 ರಲ್ಲಿ ನ್ಯೂಝಿಲೆಂಡ್ ವಿರುದ್ಧ ಅವರು ಕೊನೆಯ ಅರ್ಧಶತಕ ಬಾರಿಸಿದ್ದರು. ಇದಾದ ಬಳಿಕ ಟೆಸ್ಟ್​ನಲ್ಲಿ ಒಂದೇ ಒಂದು ಹಾಫ್ ಸೆಂಚುರಿ ಸಿಡಿಸಿಲ್ಲ. ಹೀಗಾಗಿಯೇ ಇದೀಗ ಟೆಸ್ಟ್ ತಂಡಕ್ಕೆ ಬಾಬರ್ ಆಝಂ ಅವರ ಆಯ್ಕೆಯನ್ನು ಕೆಲ ಮಾಜಿ ಆಟಗಾರರು ಪ್ರಶ್ನಿಸಿದ್ದಾರೆ.

ಇದಕ್ಕೆ ಮುಖ್ಯ ಕಾರಣ, ಬಾಬರ್ ಆಝಂ ಟೆಸ್ಟ್ ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸಿ ಬರೋಬ್ಬರಿ 648 ದಿನಗಳು ಕಳೆದಿರುವುದು. ಡಿಸೆಂಬರ್ 26, 2022 ರಲ್ಲಿ ನ್ಯೂಝಿಲೆಂಡ್ ವಿರುದ್ಧ ಅವರು ಕೊನೆಯ ಅರ್ಧಶತಕ ಬಾರಿಸಿದ್ದರು. ಇದಾದ ಬಳಿಕ ಟೆಸ್ಟ್​ನಲ್ಲಿ ಒಂದೇ ಒಂದು ಹಾಫ್ ಸೆಂಚುರಿ ಸಿಡಿಸಿಲ್ಲ. ಹೀಗಾಗಿಯೇ ಇದೀಗ ಟೆಸ್ಟ್ ತಂಡಕ್ಕೆ ಬಾಬರ್ ಆಝಂ ಅವರ ಆಯ್ಕೆಯನ್ನು ಕೆಲ ಮಾಜಿ ಆಟಗಾರರು ಪ್ರಶ್ನಿಸಿದ್ದಾರೆ.

2 / 6
ಬಾಬರ್ ಆಝಂ ಕಳೆದ ಒಂದೂವರೆ ವರ್ಷದಿಂದ ಕ್ರೀಸ್ ಕಚ್ಚಿ ನಿಲ್ಲಲು ಪರದಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ 17 ಇನಿಂಗ್ಸ್​ಗಳಲ್ಲಿ ಅವರು ಒಂದೇ ಒಂದು ಅರ್ಧಶತಕ ಬಾರಿಸದಿರುವುದು. ಹೀಗಾಗಿಯೇ ಈ ಕಳಪೆ ಫಾರ್ಮ್ ಕಾರಣದಿಂದ ಬಾಬರ್ ಆಝಂ ಅವರನ್ನು ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಸಲಾಗಿತ್ತು.

ಬಾಬರ್ ಆಝಂ ಕಳೆದ ಒಂದೂವರೆ ವರ್ಷದಿಂದ ಕ್ರೀಸ್ ಕಚ್ಚಿ ನಿಲ್ಲಲು ಪರದಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ 17 ಇನಿಂಗ್ಸ್​ಗಳಲ್ಲಿ ಅವರು ಒಂದೇ ಒಂದು ಅರ್ಧಶತಕ ಬಾರಿಸದಿರುವುದು. ಹೀಗಾಗಿಯೇ ಈ ಕಳಪೆ ಫಾರ್ಮ್ ಕಾರಣದಿಂದ ಬಾಬರ್ ಆಝಂ ಅವರನ್ನು ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಸಲಾಗಿತ್ತು.

3 / 6
ಇದಾಗ್ಯೂ ಪಾಕ್ ಟೆಸ್ಟ್ ತಂಡದಲ್ಲಿ ಬಾಬರ್ ಆಝಂಗೆ ಸತತ ಅವಕಾಶಗಳನ್ನು ನೀಡಲಾಗಿದೆ. ಆದರೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ 648 ದಿನಗಳಿಂದ ಒಂದೇ ಒಂದು ಹಾಫ್ ಸೆಂಚುರಿ ಸಿಡಿಸದಿರುವುದು. ಹೀಗಾಗಿಯೇ ಅವರ ಆಯ್ಕೆಯ ಬಗ್ಗೆ ಅಪಸ್ವರಗಳು ಎದ್ದಿವೆ.

ಇದಾಗ್ಯೂ ಪಾಕ್ ಟೆಸ್ಟ್ ತಂಡದಲ್ಲಿ ಬಾಬರ್ ಆಝಂಗೆ ಸತತ ಅವಕಾಶಗಳನ್ನು ನೀಡಲಾಗಿದೆ. ಆದರೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ 648 ದಿನಗಳಿಂದ ಒಂದೇ ಒಂದು ಹಾಫ್ ಸೆಂಚುರಿ ಸಿಡಿಸದಿರುವುದು. ಹೀಗಾಗಿಯೇ ಅವರ ಆಯ್ಕೆಯ ಬಗ್ಗೆ ಅಪಸ್ವರಗಳು ಎದ್ದಿವೆ.

4 / 6
ಇದೀಗ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ವಿಫಲನಾಗಿರುವ ಬಾಬರ್ ಆಝಂ ದ್ವಿತೀಯ ಇನಿಂಗ್ಸ್​ನಲ್ಲಿ ಲಯ ಕಂಡುಕೊಳ್ಳಬೇಕಾದ ಅನಿವಾರ್ಯತೆ ಇದೆ. ಇದರಲ್ಲೂ ವಿಫಲರಾದರೆ ಅವರು ಮುಂದಿನ ಸರಣಿ ವೇಳೆಗೆ ತಂಡದಿಂದ ಹೊರಬೀಳುವುದು ಖಚಿತ.

ಇದೀಗ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ವಿಫಲನಾಗಿರುವ ಬಾಬರ್ ಆಝಂ ದ್ವಿತೀಯ ಇನಿಂಗ್ಸ್​ನಲ್ಲಿ ಲಯ ಕಂಡುಕೊಳ್ಳಬೇಕಾದ ಅನಿವಾರ್ಯತೆ ಇದೆ. ಇದರಲ್ಲೂ ವಿಫಲರಾದರೆ ಅವರು ಮುಂದಿನ ಸರಣಿ ವೇಳೆಗೆ ತಂಡದಿಂದ ಹೊರಬೀಳುವುದು ಖಚಿತ.

5 / 6
ಏಕೆಂದರೆ ಬಾಬರ್ ಆಝಂ ಸದ್ಯ ಪಾಕ್​ ತಂಡದಲ್ಲಿ ಕೇವಲ ಆಟಗಾರನಾಗಿ ಮಾತ್ರ ಕಣಕ್ಕಿಳಿಯುತ್ತಿದ್ದಾರೆ. ಅಂದರೆ ತಂಡದ ನಾಯಕತ್ವ ಕೈತಪ್ಪಿದೆ. ಇದೀಗ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಸ್ಥಾನ ಪಡೆದಿರುವ ಬಾಬರ್ ಶೀಘ್ರದಲ್ಲೇ ಲಯ ಕಂಡುಕೊಳ್ಳಬೇಕಿದೆ. ಹೀಗಾಗಿ ಬಾಬರ್ ಪಾಲಿಗೆ ಮುಂದಿನ ಮ್ಯಾಚ್​ಗಳು ಮಾಡು ಇಲ್ಲವೇ ಮಡಿ ಪಂದ್ಯವಾಗಿರಲಿದೆ.

ಏಕೆಂದರೆ ಬಾಬರ್ ಆಝಂ ಸದ್ಯ ಪಾಕ್​ ತಂಡದಲ್ಲಿ ಕೇವಲ ಆಟಗಾರನಾಗಿ ಮಾತ್ರ ಕಣಕ್ಕಿಳಿಯುತ್ತಿದ್ದಾರೆ. ಅಂದರೆ ತಂಡದ ನಾಯಕತ್ವ ಕೈತಪ್ಪಿದೆ. ಇದೀಗ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಸ್ಥಾನ ಪಡೆದಿರುವ ಬಾಬರ್ ಶೀಘ್ರದಲ್ಲೇ ಲಯ ಕಂಡುಕೊಳ್ಳಬೇಕಿದೆ. ಹೀಗಾಗಿ ಬಾಬರ್ ಪಾಲಿಗೆ ಮುಂದಿನ ಮ್ಯಾಚ್​ಗಳು ಮಾಡು ಇಲ್ಲವೇ ಮಡಿ ಪಂದ್ಯವಾಗಿರಲಿದೆ.

6 / 6
Follow us
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ಕ್ಯಾಪ್ಟನ್​ಗೆ ಲೈನ್ ಹಾಕೋಕೆ ಆರಂಭಿಸಿದ ಜಗದೀಶ್
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್