AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangladesh Cricket: ಬಾಂಗ್ಲಾದೇಶ ಏಕದಿನ ತಂಡಕ್ಕೆ ನೂತನ ನಾಯಕನ ಆಯ್ಕೆ! ಆದರೆ..?

Bangladesh Cricket: ಬಾಂಗ್ಲಾದೇಶ ತಂಡ ಪ್ರಸ್ತುತ ಅಫ್ಘಾನಿಸ್ತಾನದ ವಿರುದ್ಧ ಏಕದಿನ ಸರಣಿಯನ್ನಾಡುತ್ತಿದ್ದು, ಉಳಿದಿರುವ ಪಂದ್ಯಗಳಲ್ಲಿ ಬಾಂಗ್ಲಾ ತಂಡವನ್ನು ಲಿಟ್ಟನ್ ದಾಸ್ ಮುನ್ನಡೆಸಲಿದ್ದಾರೆ.

ಪೃಥ್ವಿಶಂಕರ
|

Updated on: Jul 07, 2023 | 2:34 PM

ಬಾಂಗ್ಲಾದೇಶ ಏಕದಿನ ಕ್ರಿಕೆಟ್ ತಂಡದ  ನಾಯಕ ತಮೀಮ್ ಇಕ್ಬಾಲ್ ತಮ್ಮ ನಾಯಕತ್ವಕ್ಕೆ ಗುರುವಾರ ಹಠಾತ್ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ತೆರವಾಗಿದ್ದ ಬಾಂಗ್ಲಾ ಏಕದಿನ ತಂಡದ ನೂತನ ನಾಯಕನಾಗಿ ಲಿಟ್ಟನ್ ದಾಸ್ ಅವರನ್ನು ಆಯ್ಕೆ ಮಾಡಿರುವುದಾಗಿ ಬಾಂಗ್ಲಾ ಕ್ರಿಕೆಟ್ ಮಂಡಳಿ ಘೋಷಿಸಿದೆ.

ಬಾಂಗ್ಲಾದೇಶ ಏಕದಿನ ಕ್ರಿಕೆಟ್ ತಂಡದ ನಾಯಕ ತಮೀಮ್ ಇಕ್ಬಾಲ್ ತಮ್ಮ ನಾಯಕತ್ವಕ್ಕೆ ಗುರುವಾರ ಹಠಾತ್ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ತೆರವಾಗಿದ್ದ ಬಾಂಗ್ಲಾ ಏಕದಿನ ತಂಡದ ನೂತನ ನಾಯಕನಾಗಿ ಲಿಟ್ಟನ್ ದಾಸ್ ಅವರನ್ನು ಆಯ್ಕೆ ಮಾಡಿರುವುದಾಗಿ ಬಾಂಗ್ಲಾ ಕ್ರಿಕೆಟ್ ಮಂಡಳಿ ಘೋಷಿಸಿದೆ.

1 / 7
ಬಾಂಗ್ಲಾದೇಶ ತಂಡ ಪ್ರಸ್ತುತ ಅಫ್ಘಾನಿಸ್ತಾನದ ವಿರುದ್ಧ ಏಕದಿನ ಸರಣಿಯನ್ನಾಡುತ್ತಿದ್ದು, ಉಳಿದಿರುವ ಪಂದ್ಯಗಳಲ್ಲಿ ಬಾಂಗ್ಲಾ ತಂಡವನ್ನು ಲಿಟ್ಟನ್ ದಾಸ್ ಮುನ್ನಡೆಸಲಿದ್ದಾರೆ.

ಬಾಂಗ್ಲಾದೇಶ ತಂಡ ಪ್ರಸ್ತುತ ಅಫ್ಘಾನಿಸ್ತಾನದ ವಿರುದ್ಧ ಏಕದಿನ ಸರಣಿಯನ್ನಾಡುತ್ತಿದ್ದು, ಉಳಿದಿರುವ ಪಂದ್ಯಗಳಲ್ಲಿ ಬಾಂಗ್ಲಾ ತಂಡವನ್ನು ಲಿಟ್ಟನ್ ದಾಸ್ ಮುನ್ನಡೆಸಲಿದ್ದಾರೆ.

2 / 7
ಮೂಲಗಳ ಪ್ರಕಾರ, ಏಕದಿನ ವಿಶ್ವಕಪ್​ನಲ್ಲಿ ಬಾಂಗ್ಲಾ ತಂಡದ ನಾಯಕತ್ವವನ್ನು ಅನುಭವಿ ಆಲ್​ರೌಂಡರ್ ಶಕಿಬ್ ಅಲ್ ಹಸನ್ ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಬಾಂಗ್ಲಾ ಕ್ರಿಕೆಟ್​ನಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಮೂಲಗಳ ಪ್ರಕಾರ, ಏಕದಿನ ವಿಶ್ವಕಪ್​ನಲ್ಲಿ ಬಾಂಗ್ಲಾ ತಂಡದ ನಾಯಕತ್ವವನ್ನು ಅನುಭವಿ ಆಲ್​ರೌಂಡರ್ ಶಕಿಬ್ ಅಲ್ ಹಸನ್ ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಬಾಂಗ್ಲಾ ಕ್ರಿಕೆಟ್​ನಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

3 / 7
28 ವರ್ಷದ ಲಿಟ್ಟನ್ ಈಗಾಗಲೇ 180 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಬಾಂಗ್ಲಾ ಪರ ಕಣಕ್ಕಿಳಿದಿದ್ದಾರೆ. ಅಲ್ಲದೆ ಎಲ್ಲಾ ಮೂರು ಸ್ವರೂಪಗಳಲ್ಲಿ ಬಾಂಗ್ಲಾದೇಶದ ನಾಯಕತ್ವವನ್ನು ನಿರ್ವಹಿಸಿರುವ ಅನುಭವವೂ ಲಿಟ್ಟನ್​ಗಿದೆ. ಪ್ರಸ್ತುತ ಉಪನಾಯಕನಾಗಿರುವ ಲಿಟ್ಟನ್, ತಮೀಮ್ ಅನುಪಸ್ಥಿತಿಯಲ್ಲಿ ಬಾಂಗ್ಲಾ ತಂಡವನ್ನು ಮುನ್ನಡೆಸಲಿದ್ದಾರೆ.

28 ವರ್ಷದ ಲಿಟ್ಟನ್ ಈಗಾಗಲೇ 180 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಬಾಂಗ್ಲಾ ಪರ ಕಣಕ್ಕಿಳಿದಿದ್ದಾರೆ. ಅಲ್ಲದೆ ಎಲ್ಲಾ ಮೂರು ಸ್ವರೂಪಗಳಲ್ಲಿ ಬಾಂಗ್ಲಾದೇಶದ ನಾಯಕತ್ವವನ್ನು ನಿರ್ವಹಿಸಿರುವ ಅನುಭವವೂ ಲಿಟ್ಟನ್​ಗಿದೆ. ಪ್ರಸ್ತುತ ಉಪನಾಯಕನಾಗಿರುವ ಲಿಟ್ಟನ್, ತಮೀಮ್ ಅನುಪಸ್ಥಿತಿಯಲ್ಲಿ ಬಾಂಗ್ಲಾ ತಂಡವನ್ನು ಮುನ್ನಡೆಸಲಿದ್ದಾರೆ.

4 / 7
ಕಳೆದ ವರ್ಷ ಡಿಸೆಂಬರ್‌ನಲ್ಲಿ ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ಬಾಂಗ್ಲಾದೇಶ ತಂಡವನ್ನು ಲಿಟ್ಟನ್ ಮುನ್ನಡೆಸಿದ್ದರು. ಅಲ್ಲದೆ ಲಿಟ್ಟನ್ ನಾಯಕತ್ವದಲ್ಲಿ ಬಾಂಗ್ಲಾ ತಂಡ ತವರಿನಲ್ಲಿ ಟೀಂ ಇಂಡಿಯಾವನ್ನು 2-1 ಅಂತರದಿಂದ ಮಣಿಸಿತ್ತು. ಹಾಗೆಯೇ ಗಾಯದ ಕಾರಣ ಶಕಿಬ್ ಅಲ್ ಹಸನ್ ಅನುಪಸ್ಥಿತಿಯಲ್ಲಿ ಕಳೆದ ತಿಂಗಳು ನಡೆದ ಏಕೈಕ ಟೆಸ್ಟ್‌ನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಬಾಂಗ್ಲಾ ತಂಡವನ್ನು ಲಿಟ್ಟನ್ ಮುನ್ನಡೆಸಿದ್ದರು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ಬಾಂಗ್ಲಾದೇಶ ತಂಡವನ್ನು ಲಿಟ್ಟನ್ ಮುನ್ನಡೆಸಿದ್ದರು. ಅಲ್ಲದೆ ಲಿಟ್ಟನ್ ನಾಯಕತ್ವದಲ್ಲಿ ಬಾಂಗ್ಲಾ ತಂಡ ತವರಿನಲ್ಲಿ ಟೀಂ ಇಂಡಿಯಾವನ್ನು 2-1 ಅಂತರದಿಂದ ಮಣಿಸಿತ್ತು. ಹಾಗೆಯೇ ಗಾಯದ ಕಾರಣ ಶಕಿಬ್ ಅಲ್ ಹಸನ್ ಅನುಪಸ್ಥಿತಿಯಲ್ಲಿ ಕಳೆದ ತಿಂಗಳು ನಡೆದ ಏಕೈಕ ಟೆಸ್ಟ್‌ನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಬಾಂಗ್ಲಾ ತಂಡವನ್ನು ಲಿಟ್ಟನ್ ಮುನ್ನಡೆಸಿದ್ದರು.

5 / 7
ಜುಲೈ 6 ರಂದು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಹಠಾತ್ ನಿವೃತ್ತಿ ಘೋಷಿಸುವ ಮೂಲಕ ತಮೀಮ್ ಕ್ರಿಕೆಟ್ ಜಗತ್ತನ್ನು ಬೆಚ್ಚಿಬೀಳಿಸಿದ್ದರು. ಏಕದಿನ ವಿಶ್ವಕಪ್‌ಗೆ ಕೇವಲ ಮೂರು ತಿಂಗಳುಗಳು ಬಾಕಿ ಇರುವಾಗ ಬಾಂಗ್ಲಾದೇಶದ ಸಿದ್ಧತೆಗೆ ಇದು ದೊಡ್ಡ ಹೊಡೆತವಾಗಿದೆ. ಇದೀಗ ತಮೀಮ್ ಸ್ಥಾನಕ್ಕೆ ತಂಡವನ್ನು ಮುನ್ನಡೆಸಿದ ಎಲ್ಲಾ ಅನುಭವವನ್ನು ಹೊಂದಿರುವ ಶಕೀಬ್ ಆಯ್ಕೆಯಾಗುವ ಸಾಧ್ಯತೆಗಳಿವೆ.

ಜುಲೈ 6 ರಂದು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಹಠಾತ್ ನಿವೃತ್ತಿ ಘೋಷಿಸುವ ಮೂಲಕ ತಮೀಮ್ ಕ್ರಿಕೆಟ್ ಜಗತ್ತನ್ನು ಬೆಚ್ಚಿಬೀಳಿಸಿದ್ದರು. ಏಕದಿನ ವಿಶ್ವಕಪ್‌ಗೆ ಕೇವಲ ಮೂರು ತಿಂಗಳುಗಳು ಬಾಕಿ ಇರುವಾಗ ಬಾಂಗ್ಲಾದೇಶದ ಸಿದ್ಧತೆಗೆ ಇದು ದೊಡ್ಡ ಹೊಡೆತವಾಗಿದೆ. ಇದೀಗ ತಮೀಮ್ ಸ್ಥಾನಕ್ಕೆ ತಂಡವನ್ನು ಮುನ್ನಡೆಸಿದ ಎಲ್ಲಾ ಅನುಭವವನ್ನು ಹೊಂದಿರುವ ಶಕೀಬ್ ಆಯ್ಕೆಯಾಗುವ ಸಾಧ್ಯತೆಗಳಿವೆ.

6 / 7
ಆದರೆ, ಮುಂದಿನ ಕ್ರಮದ ಕುರಿತು ಚರ್ಚಿಸಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಅಧ್ಯಕ್ಷ ನಜ್ಮುಲ್ ಹಸನ್ ಗುರುವಾರ ಸಂಜೆ ತುರ್ತು ಸಭೆ ನಡೆಸಿದ್ದರು. ಸಭೆಯ ನಂತರ, ಅಫ್ಘಾನಿಸ್ತಾನ ವಿರುದ್ಧದ ಉಳಿದ ಏಕದಿನ ಪಂದ್ಯಗಳಿಗೆ ಲಿಟ್ಟನ್ ತಂಡದ ನಾಯಕತ್ವವನ್ನು ವಹಿಸುತ್ತಾರೆ ಎಂಬುದನ್ನು ಖಚಿತಪಡಿಸಿದ್ದಾರೆ. ಆದರೆ ತಮೀಮ್ ಅವರು ತೆಗೆದುಕೊಂಡಿರುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ವಿನಂತಿಸಿದರು.

ಆದರೆ, ಮುಂದಿನ ಕ್ರಮದ ಕುರಿತು ಚರ್ಚಿಸಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಅಧ್ಯಕ್ಷ ನಜ್ಮುಲ್ ಹಸನ್ ಗುರುವಾರ ಸಂಜೆ ತುರ್ತು ಸಭೆ ನಡೆಸಿದ್ದರು. ಸಭೆಯ ನಂತರ, ಅಫ್ಘಾನಿಸ್ತಾನ ವಿರುದ್ಧದ ಉಳಿದ ಏಕದಿನ ಪಂದ್ಯಗಳಿಗೆ ಲಿಟ್ಟನ್ ತಂಡದ ನಾಯಕತ್ವವನ್ನು ವಹಿಸುತ್ತಾರೆ ಎಂಬುದನ್ನು ಖಚಿತಪಡಿಸಿದ್ದಾರೆ. ಆದರೆ ತಮೀಮ್ ಅವರು ತೆಗೆದುಕೊಂಡಿರುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ವಿನಂತಿಸಿದರು.

7 / 7
Follow us
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?