AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shakib Al Hasan: ದೃಷ್ಟಿ ಕಳೆದುಕೊಳ್ಳುವ ಭೀತಿಯಲ್ಲಿ ಬಾಂಗ್ಲಾ ನಾಯಕ ಶಕೀಬ್ ಅಲ್ ಹಸನ್..!

Shakib Al Hasan: ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ಶಕೀಬ್ ಅಲ್ ಹಸನ್ ದೃಷ್ಟಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂಬ ಸುದ್ದಿ ಕೆಲವು ದಿನಗಳ ಹಿಂದೆ ವರದಿಯಾಗಿತ್ತು. ಆದರೀಗ ಅದಕ್ಕೆ ಸಂಬಂಧಿಸಿದಂತೆ ಬಿಗ್ ಅಪ್​ಡೇಟ್ ಹೊರಬಿದ್ದಿದ್ದು, ಪ್ರಸ್ತುತ ವಿಶ್ವದ ನಂಬರ್ 1 ಆಲ್​ರೌಂಡರ್ ಶಾಶ್ವತ ಕುರುಡತನಕ್ಕೊಳಗಾಗುವ ಭೀತಿಯಲ್ಲಿದ್ದಾರೆ.

ಪೃಥ್ವಿಶಂಕರ
|

Updated on:Jan 25, 2024 | 4:05 PM

Share
ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ಶಕೀಬ್ ಅಲ್ ಹಸನ್ ದೃಷ್ಟಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂಬ ಸುದ್ದಿ ಕೆಲವು ದಿನಗಳ ಹಿಂದೆ ವರದಿಯಾಗಿತ್ತು. ಆದರೀಗ ಅದಕ್ಕೆ ಸಂಬಂಧಿಸಿದಂತೆ ಬಿಗ್ ಅಪ್​ಡೇಟ್ ಹೊರಬಿದ್ದಿದ್ದು, ಪ್ರಸ್ತುತ ವಿಶ್ವದ ನಂಬರ್ 1 ಆಲ್​ರೌಂಡರ್ ಶಾಶ್ವತ ಕುರುಡತನಕ್ಕೊಳಗಾಗುವ ಭೀತಿಯಲ್ಲಿದ್ದಾರೆ.

ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ಶಕೀಬ್ ಅಲ್ ಹಸನ್ ದೃಷ್ಟಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂಬ ಸುದ್ದಿ ಕೆಲವು ದಿನಗಳ ಹಿಂದೆ ವರದಿಯಾಗಿತ್ತು. ಆದರೀಗ ಅದಕ್ಕೆ ಸಂಬಂಧಿಸಿದಂತೆ ಬಿಗ್ ಅಪ್​ಡೇಟ್ ಹೊರಬಿದ್ದಿದ್ದು, ಪ್ರಸ್ತುತ ವಿಶ್ವದ ನಂಬರ್ 1 ಆಲ್​ರೌಂಡರ್ ಶಾಶ್ವತ ಕುರುಡತನಕ್ಕೊಳಗಾಗುವ ಭೀತಿಯಲ್ಲಿದ್ದಾರೆ.

1 / 7
ಬಾಂಗ್ಲಾ ನಾಯಕ ಶಕೀಬ್ ಅವರ ಎಡಗಣ್ಣಿನ ರೆಟಿನಾದಲ್ಲಿ ಸಮಸ್ಯೆ ಕಂಡುಬಂದಿದ್ದು, ಇದರಿಂದಾಗಿ ಅವರ ಎಡಗಣ್ಣಿನಲ್ಲಿ ದೃಷ್ಟಿ ದೋಷ ಕಂಡುಬಂದಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮಾಹಿತಿ ಹಂಚಿಕೊಂಡಿದೆ.

ಬಾಂಗ್ಲಾ ನಾಯಕ ಶಕೀಬ್ ಅವರ ಎಡಗಣ್ಣಿನ ರೆಟಿನಾದಲ್ಲಿ ಸಮಸ್ಯೆ ಕಂಡುಬಂದಿದ್ದು, ಇದರಿಂದಾಗಿ ಅವರ ಎಡಗಣ್ಣಿನಲ್ಲಿ ದೃಷ್ಟಿ ದೋಷ ಕಂಡುಬಂದಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮಾಹಿತಿ ಹಂಚಿಕೊಂಡಿದೆ.

2 / 7
2023ರ ಏಕದಿನ ವಿಶ್ವಕಪ್‌ನ ನಂತರ ಶಕೀಬ್, ಕಣ್ಣಿನಲ್ಲಿ ಸಮಸ್ಯೆ ಇರುವ ಬಗ್ಗೆ ಮಾಹಿತಿ ನೀಡಿದ್ದರು. ನಂತರ ಅದನ್ನು ನೇತ್ರ ತಜ್ಞ ವೈದರ ಬಳಿ ತೊರಿಸಲಾಗಿ, ಶಕೀಬ್ ಅವರ ರೆಟಿನಾದಲ್ಲಿ ಸಮಸ್ಯೆ ಇದೆ ಎಂಬುದು ಬೆಳಕಿಗೆ ಬಂದಿದೆ.

2023ರ ಏಕದಿನ ವಿಶ್ವಕಪ್‌ನ ನಂತರ ಶಕೀಬ್, ಕಣ್ಣಿನಲ್ಲಿ ಸಮಸ್ಯೆ ಇರುವ ಬಗ್ಗೆ ಮಾಹಿತಿ ನೀಡಿದ್ದರು. ನಂತರ ಅದನ್ನು ನೇತ್ರ ತಜ್ಞ ವೈದರ ಬಳಿ ತೊರಿಸಲಾಗಿ, ಶಕೀಬ್ ಅವರ ರೆಟಿನಾದಲ್ಲಿ ಸಮಸ್ಯೆ ಇದೆ ಎಂಬುದು ಬೆಳಕಿಗೆ ಬಂದಿದೆ.

3 / 7
ಈ ಕುರಿತು ಬಿಸಿಬಿಯ ಹಿರಿಯ ವೈದ್ಯ ದೇಬಾಶಿಶ್ ಚೌಧರಿ ಮಾಹಿತಿ ನೀಡಿದ್ದು, ಶಕೀಬ್ ಎಡಗಣ್ಣಿನ ಎಕ್ಸ್‌ಟ್ರಾಫೋವಲ್ ಸೆಂಟ್ರಲ್ ಸೆರೋಸ್ ಕೊರಿಯೊ ರೆಟಿನೋಪತಿ (ಸಿಎಸ್‌ಆರ್) ನಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಬಿಸಿಬಿಯ ಹಿರಿಯ ವೈದ್ಯ ದೇಬಾಶಿಶ್ ಚೌಧರಿ ಮಾಹಿತಿ ನೀಡಿದ್ದು, ಶಕೀಬ್ ಎಡಗಣ್ಣಿನ ಎಕ್ಸ್‌ಟ್ರಾಫೋವಲ್ ಸೆಂಟ್ರಲ್ ಸೆರೋಸ್ ಕೊರಿಯೊ ರೆಟಿನೋಪತಿ (ಸಿಎಸ್‌ಆರ್) ನಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ.

4 / 7
ಇನ್ನು ಈ ಸಮಸ್ಯೆಯ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡಿರುವ BCB ಯ ಹಿರಿಯ ವೈದ್ಯ ದೇಬಾಶಿಶ್ ಚೌಧರಿ, ಸೆಂಟ್ರಲ್ ಸೆರೋಸ್ ಕೊರಿಯೊ ರೆಟಿನೋಪತಿ ಸಮಸ್ಯೆಗೆ ತುತ್ತಾಗುವ ವ್ಯಕ್ತಿಯ ಕಣ್ಣುಗಳ ರೆಟಿನಾದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಆ ವ್ಯಕ್ತಿಯ ದೃಷ್ಟಿ ಅಡಚಣೆಗಳಿಗೆ ಕಾರಣವಾಗುತ್ತದೆ ಎಂದಿದ್ದಾರೆ.

ಇನ್ನು ಈ ಸಮಸ್ಯೆಯ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡಿರುವ BCB ಯ ಹಿರಿಯ ವೈದ್ಯ ದೇಬಾಶಿಶ್ ಚೌಧರಿ, ಸೆಂಟ್ರಲ್ ಸೆರೋಸ್ ಕೊರಿಯೊ ರೆಟಿನೋಪತಿ ಸಮಸ್ಯೆಗೆ ತುತ್ತಾಗುವ ವ್ಯಕ್ತಿಯ ಕಣ್ಣುಗಳ ರೆಟಿನಾದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಆ ವ್ಯಕ್ತಿಯ ದೃಷ್ಟಿ ಅಡಚಣೆಗಳಿಗೆ ಕಾರಣವಾಗುತ್ತದೆ ಎಂದಿದ್ದಾರೆ.

5 / 7
ಇನ್ನು ಶಕೀಬ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ತಂಡವು, ಶಕೀಬ್ಗೆ ಉತ್ತಮ ಚಿಕಿತ್ಸೆ ನೀಡುವ ಬಗ್ಗೆ ಭರವಸೆ ನೀಡಿದೆ. ಅಲ್ಲದೆ ಹೆಚ್ಚಿನ ಚಿಕಿತ್ಸೆಗಾಗಿ ಶಕೀಬ್ ಸಿಂಗಾಪುರಕ್ಕೆ ತೆರಳುವ ಸಾಧ್ಯತೆ ಇದ್ದು, ಚಿಕಿತ್ಸೆಗೆ ಸಾಕಷ್ಟು ಹಣ ಖರ್ಚಾಗಲಿದೆ ಎಂದು ಹೇಳಲಾಗುತ್ತಿದೆ.

ಇನ್ನು ಶಕೀಬ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ತಂಡವು, ಶಕೀಬ್ಗೆ ಉತ್ತಮ ಚಿಕಿತ್ಸೆ ನೀಡುವ ಬಗ್ಗೆ ಭರವಸೆ ನೀಡಿದೆ. ಅಲ್ಲದೆ ಹೆಚ್ಚಿನ ಚಿಕಿತ್ಸೆಗಾಗಿ ಶಕೀಬ್ ಸಿಂಗಾಪುರಕ್ಕೆ ತೆರಳುವ ಸಾಧ್ಯತೆ ಇದ್ದು, ಚಿಕಿತ್ಸೆಗೆ ಸಾಕಷ್ಟು ಹಣ ಖರ್ಚಾಗಲಿದೆ ಎಂದು ಹೇಳಲಾಗುತ್ತಿದೆ.

6 / 7
ಬಾಂಗ್ಲಾದೇಶ ನಾಯಕ ಶಕೀಬ್ ಅಲ್ ಹಸನ್ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವುದು ತಂಡಕ್ಕೆ ಆಘಾತ ತಂದೊಡ್ಡಿದೆ. ಏಕೆಂದರೆ ಇನ್ನೇನು ಕೆಲವೇ ತಿಂಗಳಲ್ಲಿ ಟಿ20 ವಿಶ್ವಕಪ್ ಆರಂಭವಾಗುತ್ತಿದ್ದು, ತಂಡದಲ್ಲಿ ಶಕೀಬ್ ಅನುಪಸ್ಥಿತಿ ಕಾಡುವುದಂತೂ ಖಚಿತ.

ಬಾಂಗ್ಲಾದೇಶ ನಾಯಕ ಶಕೀಬ್ ಅಲ್ ಹಸನ್ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವುದು ತಂಡಕ್ಕೆ ಆಘಾತ ತಂದೊಡ್ಡಿದೆ. ಏಕೆಂದರೆ ಇನ್ನೇನು ಕೆಲವೇ ತಿಂಗಳಲ್ಲಿ ಟಿ20 ವಿಶ್ವಕಪ್ ಆರಂಭವಾಗುತ್ತಿದ್ದು, ತಂಡದಲ್ಲಿ ಶಕೀಬ್ ಅನುಪಸ್ಥಿತಿ ಕಾಡುವುದಂತೂ ಖಚಿತ.

7 / 7

Published On - 4:02 pm, Thu, 25 January 24

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ