AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಸಿಐ ವಿರುದ್ಧ ತೊಡೆ ತಟ್ಟಿರುವ ಬಾಂಗ್ಲಾ ತಂಡದ ಟಿ20 ವಿಶ್ವಕಪ್ ಪ್ರದರ್ಶನ ಹೇಗಿದೆ?

Bangladesh T20 World Cup: ಬಾಂಗ್ಲಾದೇಶ 2026ರ ಟಿ20 ವಿಶ್ವಕಪ್‌ಗೆ ಭಾರತಕ್ಕೆ ತೆರಳದಿರಲು ನಿರ್ಧರಿಸಿದೆ. ಮುಸ್ತಾಫಿಜುರ್ ಐಪಿಎಲ್‌ನಿಂದ ಹೊರಹಾಕಿದ್ದೇ ಇದಕ್ಕೆ ಕಾರಣ. ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಐಸಿಸಿಗೆ ವಿನಂತಿಸಿದೆ. ಬಾಂಗ್ಲಾ ತಂಡದ ಟಿ20 ವಿಶ್ವಕಪ್ ಪ್ರದರ್ಶನ ಐತಿಹಾಸಿಕವಾಗಿ ಕಳಪೆ. ಇದುವರೆಗೆ ಸೆಮಿಫೈನಲ್ ತಲುಪಿಲ್ಲ.

ಪೃಥ್ವಿಶಂಕರ
|

Updated on: Jan 04, 2026 | 7:22 PM

Share
ಫೆಬ್ರವರಿ 7 ರಿಂದ ಪ್ರಾರಂಭವಾಗುವ 2026 ರ ಟಿ20 ವಿಶ್ವಕಪ್‌ಗಾಗಿ ಬಾಂಗ್ಲಾದೇಶ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಿದೆ. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿರುವ ಬಗ್ಗೆ ಐಸಿಸಿಗೆ ಪತ್ರ ಬರೆದಿದ್ದು ತಂಡದ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ವಿನಂತಿಸಿದೆ. ಮುಸ್ತಾಫಿಜುರ್ ರೆಹಮಾನ್​ರನ್ನು ಐಪಿಎಲ್​ನಿಂದ ಹೊರಹಾಕಿದ್ದು, ಬಿಸಿಬಿಯ ಈ ನಿರ್ಧಾರಕ್ಕೆ ಕಾರಣವಾಗಿದೆ.

ಫೆಬ್ರವರಿ 7 ರಿಂದ ಪ್ರಾರಂಭವಾಗುವ 2026 ರ ಟಿ20 ವಿಶ್ವಕಪ್‌ಗಾಗಿ ಬಾಂಗ್ಲಾದೇಶ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಿದೆ. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿರುವ ಬಗ್ಗೆ ಐಸಿಸಿಗೆ ಪತ್ರ ಬರೆದಿದ್ದು ತಂಡದ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ವಿನಂತಿಸಿದೆ. ಮುಸ್ತಾಫಿಜುರ್ ರೆಹಮಾನ್​ರನ್ನು ಐಪಿಎಲ್​ನಿಂದ ಹೊರಹಾಕಿದ್ದು, ಬಿಸಿಬಿಯ ಈ ನಿರ್ಧಾರಕ್ಕೆ ಕಾರಣವಾಗಿದೆ.

1 / 5
ಬಾಂಗ್ಲಾ ಕ್ರಿಕೆಟ್ ಮಂಡಳಿಯ ಈ ನಿರ್ಧಾರದಿಂದ ಬಿಸಿಸಿಐಗೆ ನಷ್ಟವಾಗಲಿದೆಯಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಆದರೆ ಅದಕ್ಕೆ ಉತ್ತರ ಇಲ್ಲ. ಏಕೆಂದರೆ ಚುಟುಕು ಮಾದರಿಯಲ್ಲಿ ಬಾಂಗ್ಲಾ ತಂಡದ ಪ್ರದರ್ಶನ ಅಷ್ಟಕಷ್ಟೆ. ಟಿ20 ವಿಶ್ವಕಪ್​ನ ಮೊದಲ ಆವೃತ್ತಿಯಿಂದಲೂ ಪಾಲ್ಗೊಳ್ಳುತ್ತಿರುವ ಬಾಂಗ್ಲಾ ತಂಡಕ್ಕೆ ಇದುವರೆಗೆ ಒಂದೇ ಒಂದು ಆವೃತ್ತಿಯಲ್ಲಿ ಫೈನಲ್‌ ಬಿಡಿ, ಸೆಮಿಫೈನಲ್ ತಲುಪಲು ಸಾಧ್ಯವಾಗಿಲ್ಲ.

ಬಾಂಗ್ಲಾ ಕ್ರಿಕೆಟ್ ಮಂಡಳಿಯ ಈ ನಿರ್ಧಾರದಿಂದ ಬಿಸಿಸಿಐಗೆ ನಷ್ಟವಾಗಲಿದೆಯಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಆದರೆ ಅದಕ್ಕೆ ಉತ್ತರ ಇಲ್ಲ. ಏಕೆಂದರೆ ಚುಟುಕು ಮಾದರಿಯಲ್ಲಿ ಬಾಂಗ್ಲಾ ತಂಡದ ಪ್ರದರ್ಶನ ಅಷ್ಟಕಷ್ಟೆ. ಟಿ20 ವಿಶ್ವಕಪ್​ನ ಮೊದಲ ಆವೃತ್ತಿಯಿಂದಲೂ ಪಾಲ್ಗೊಳ್ಳುತ್ತಿರುವ ಬಾಂಗ್ಲಾ ತಂಡಕ್ಕೆ ಇದುವರೆಗೆ ಒಂದೇ ಒಂದು ಆವೃತ್ತಿಯಲ್ಲಿ ಫೈನಲ್‌ ಬಿಡಿ, ಸೆಮಿಫೈನಲ್ ತಲುಪಲು ಸಾಧ್ಯವಾಗಿಲ್ಲ.

2 / 5
ಟಿ20 ವಿಶ್ವಕಪ್​ನಲ್ಲಿ ಸರಾಸರಿ ಪ್ರದರ್ಶನ ನೀಡಿರುವ ಬಾಂಗ್ಲಾದೇಶ ತಂಡವು ಯಾವ ಆವೃತ್ತಿಯಲ್ಲೂ ನಾಕೌಟ್ ಹಂತವನ್ನು ತಲುಪಿಲ್ಲ. ಆದಾಗ್ಯೂ 2007 ರಲ್ಲಿ ನಡೆದ ಉದ್ಘಾಟನಾ ಆವೃತ್ತಿಯಲ್ಲಿ ಬಾಂಗ್ಲಾದೇಶ, ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಸೂಪರ್ 8 ಸುತ್ತನ್ನು ಪ್ರವೇಶಿಸುವ ಮೂಲಕ ಸಂಚಲನ ಮೂಡಿಸಿತ್ತು. ಆದರೆ ಈ ಸುತ್ತಿನಲ್ಲಿ ನಡೆದ ಮೂರು ಪಂದ್ಯಗಳಲ್ಲಿಯೂ ಸೋತಿತು.

ಟಿ20 ವಿಶ್ವಕಪ್​ನಲ್ಲಿ ಸರಾಸರಿ ಪ್ರದರ್ಶನ ನೀಡಿರುವ ಬಾಂಗ್ಲಾದೇಶ ತಂಡವು ಯಾವ ಆವೃತ್ತಿಯಲ್ಲೂ ನಾಕೌಟ್ ಹಂತವನ್ನು ತಲುಪಿಲ್ಲ. ಆದಾಗ್ಯೂ 2007 ರಲ್ಲಿ ನಡೆದ ಉದ್ಘಾಟನಾ ಆವೃತ್ತಿಯಲ್ಲಿ ಬಾಂಗ್ಲಾದೇಶ, ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಸೂಪರ್ 8 ಸುತ್ತನ್ನು ಪ್ರವೇಶಿಸುವ ಮೂಲಕ ಸಂಚಲನ ಮೂಡಿಸಿತ್ತು. ಆದರೆ ಈ ಸುತ್ತಿನಲ್ಲಿ ನಡೆದ ಮೂರು ಪಂದ್ಯಗಳಲ್ಲಿಯೂ ಸೋತಿತು.

3 / 5
ಆ ಬಳಿಕ 2009, 2010 ಮತ್ತು 2012 ರಲ್ಲಿ ನಡೆದ ನಂತರದ ಆವೃತ್ತಿಗಳಲ್ಲೂ ಬಾಂಗ್ಲಾ ತಂಡ ನಿರಾಶಾದಾಯಕ ಪ್ರದರ್ಶನ ನೀಡಿತು, ಗುಂಪು ಹಂತದಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ವಿಫಲವಾಯಿತು. 2014 ಮತ್ತು 2016 ರಲ್ಲಿ ಸೂಪರ್ 10 ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದ ಬಾಂಗ್ಲಾ, ಈ ಸುತ್ತಿನಲ್ಲಿ ಸತತ ಸೋಲುಗಳನ್ನು ಅನುಭವಿಸಿತು.

ಆ ಬಳಿಕ 2009, 2010 ಮತ್ತು 2012 ರಲ್ಲಿ ನಡೆದ ನಂತರದ ಆವೃತ್ತಿಗಳಲ್ಲೂ ಬಾಂಗ್ಲಾ ತಂಡ ನಿರಾಶಾದಾಯಕ ಪ್ರದರ್ಶನ ನೀಡಿತು, ಗುಂಪು ಹಂತದಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ವಿಫಲವಾಯಿತು. 2014 ಮತ್ತು 2016 ರಲ್ಲಿ ಸೂಪರ್ 10 ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದ ಬಾಂಗ್ಲಾ, ಈ ಸುತ್ತಿನಲ್ಲಿ ಸತತ ಸೋಲುಗಳನ್ನು ಅನುಭವಿಸಿತು.

4 / 5
2021, 2022 ಮತ್ತು 2024 ರ ಟಿ20 ವಿಶ್ವಕಪ್‌ನಲ್ಲಿಯೂ ಬಾಂಗ್ಲಾ ತಂಡದ ಪ್ರದರ್ಶನ ವಿಶೇಷವಾಗಿರಲಿಲ್ಲ. ಆದಾಗ್ಯೂ ಬಾಂಗ್ಲಾ ತಂಡವು ಪ್ರತಿ ವರ್ಷ ಸೂಪರ್ 8 ಮತ್ತು ಸೂಪರ್ 10 ಹಂತಗಳನ್ನು ತಲುಪಿದೆ. ಆದರೆ ಸೆಮಿಫೈನಲ್​ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ. ಇದೀಗ 2026 ರ ವಿಶ್ವಕಪ್​ನಲ್ಲಿ ಬಾಂಗ್ಲಾ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.

2021, 2022 ಮತ್ತು 2024 ರ ಟಿ20 ವಿಶ್ವಕಪ್‌ನಲ್ಲಿಯೂ ಬಾಂಗ್ಲಾ ತಂಡದ ಪ್ರದರ್ಶನ ವಿಶೇಷವಾಗಿರಲಿಲ್ಲ. ಆದಾಗ್ಯೂ ಬಾಂಗ್ಲಾ ತಂಡವು ಪ್ರತಿ ವರ್ಷ ಸೂಪರ್ 8 ಮತ್ತು ಸೂಪರ್ 10 ಹಂತಗಳನ್ನು ತಲುಪಿದೆ. ಆದರೆ ಸೆಮಿಫೈನಲ್​ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ. ಇದೀಗ 2026 ರ ವಿಶ್ವಕಪ್​ನಲ್ಲಿ ಬಾಂಗ್ಲಾ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.

5 / 5
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!