AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಲ್ಲಿ ಫೀಲ್ಡಿಂಗ್​ಗೆ ಅಡ್ಡಿ ಪಡಿಸಿ ಔಟಾದ ನಾಲ್ವರು ಬ್ಯಾಟರ್​ಗಳು ಇವರೇ..!

ಕ್ರಿಕೆಟ್‌ನ ನಿಯಮ 37ರ ಪ್ರಕಾರ, ಒಬ್ಬ ಬ್ಯಾಟರ್ ಫೀಲ್ಡಿಂಗ್ ಮಾಡುವ ತಂಡಕ್ಕೆ ಮಾತು ಅಥವಾ ಕ್ರಿಯೆಯ ಮೂಲಕ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿದರೆ ಅವರನ್ನು ಔಟ್ ಎಂದು ಘೋಷಿಸಬಹುದು. ರನ್ ಓಡುವಾಗ ಫೀಲ್ಡರ್ ಎಸೆದ ಚೆಂಡು ಸ್ಟಂಪ್‌ಗೆ ತಗುಲದಂತೆ ತಡೆಯಲು ಬ್ಯಾಟರ್ ತನ್ನ ಓಟದ ಹಾದಿಯನ್ನು ಬದಲಿಸಿದರೆ ಅದು ಈ ನಿಯಮದಡಿ ಬರುತ್ತದೆ. ಇದನ್ನೇ 'ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್'  ಔಟ್ ಎನ್ನಲಾಗುತ್ತದೆ.

ಝಾಹಿರ್ ಯೂಸುಫ್
|

Updated on:Apr 27, 2026 | 1:33 PM

Share
ಕ್ರಿಕೆಟ್ ಜಗತ್ತಿನಲ್ಲಿ ಬ್ಯಾಟರ್ ಒಬ್ಬರು ಔಟ್ ಆಗಲು ಹಲವಾರು ದಾರಿಗಳಿವೆ. ಆದರೆ, ಅತಿ ಹೆಚ್ಚು ಚರ್ಚೆಗೆ ಮತ್ತು ವಿವಾದಕ್ಕೆ ಕಾರಣವಾಗುವ ಒಂದು ಔಟ್ ಎಂದರೆ ಅದು 'ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್'. ಅಂದರೆ, ಫೀಲ್ಡರ್ ಚೆಂಡನ್ನು ಎಸೆಯುವಾಗ ಅಥವಾ ಹಿಡಿಯುವಾಗ ಬ್ಯಾಟರ್ ಬೇಕೆಂದೇ ಅಡ್ಡ ಬರುವುದು ಅಥವಾ ಅಡ್ಡಿಪಡಿಸುವುದು. ಹೀಗೆ ಫೀಲ್ಡಿಂಗ್​ಗೆ ಅಡ್ಡಿಪಡಿಸಿ ಐಪಿಎಲ್​ನಲ್ಲಿ ಔಟಾದ ನಾಲ್ವರು ಬ್ಯಾಟರ್​ಗಳ ಪಟ್ಟಿ ಇಲ್ಲಿದೆ...

ಕ್ರಿಕೆಟ್ ಜಗತ್ತಿನಲ್ಲಿ ಬ್ಯಾಟರ್ ಒಬ್ಬರು ಔಟ್ ಆಗಲು ಹಲವಾರು ದಾರಿಗಳಿವೆ. ಆದರೆ, ಅತಿ ಹೆಚ್ಚು ಚರ್ಚೆಗೆ ಮತ್ತು ವಿವಾದಕ್ಕೆ ಕಾರಣವಾಗುವ ಒಂದು ಔಟ್ ಎಂದರೆ ಅದು 'ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್'. ಅಂದರೆ, ಫೀಲ್ಡರ್ ಚೆಂಡನ್ನು ಎಸೆಯುವಾಗ ಅಥವಾ ಹಿಡಿಯುವಾಗ ಬ್ಯಾಟರ್ ಬೇಕೆಂದೇ ಅಡ್ಡ ಬರುವುದು ಅಥವಾ ಅಡ್ಡಿಪಡಿಸುವುದು. ಹೀಗೆ ಫೀಲ್ಡಿಂಗ್​ಗೆ ಅಡ್ಡಿಪಡಿಸಿ ಐಪಿಎಲ್​ನಲ್ಲಿ ಔಟಾದ ನಾಲ್ವರು ಬ್ಯಾಟರ್​ಗಳ ಪಟ್ಟಿ ಇಲ್ಲಿದೆ...

1 / 5
ಯೂಸುಫ್ ಪಠಾಣ್ (2013): ಐಪಿಎಲ್ ಇತಿಹಾಸದಲ್ಲಿ ಈ ರೀತಿ ಔಟ್ ಆದ ಮೊದಲ ಆಟಗಾರ ಕೋಲ್ಕತ್ತಾ ನೈಟ್ ರೈಡರ್ಸ್‌ನ ಯೂಸುಫ್ ಪಠಾಣ್. ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ರನ್ ಓಡುವಾಗ ಬೌಲರ್ ವೇಯ್ನ್ ಪಾರ್ನೆಲ್ ಚೆಂಡನ್ನು ಎತ್ತಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಪಠಾಣ್ ಕಾಲಿನಿಂದ ಚೆಂಡನ್ನು ಒದ್ದಿದ್ದರು. ಇದನ್ನು ಉದ್ದೇಶಪೂರ್ವಕ ಫೀಲ್ಡಿಂಗ್ ಅಡ್ಡಿ ಎಂದು ಪರಿಗಣಿಸಿ ಔಟ್ ನೀಡಲಾಗಿತ್ತು.

ಯೂಸುಫ್ ಪಠಾಣ್ (2013): ಐಪಿಎಲ್ ಇತಿಹಾಸದಲ್ಲಿ ಈ ರೀತಿ ಔಟ್ ಆದ ಮೊದಲ ಆಟಗಾರ ಕೋಲ್ಕತ್ತಾ ನೈಟ್ ರೈಡರ್ಸ್‌ನ ಯೂಸುಫ್ ಪಠಾಣ್. ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ರನ್ ಓಡುವಾಗ ಬೌಲರ್ ವೇಯ್ನ್ ಪಾರ್ನೆಲ್ ಚೆಂಡನ್ನು ಎತ್ತಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಪಠಾಣ್ ಕಾಲಿನಿಂದ ಚೆಂಡನ್ನು ಒದ್ದಿದ್ದರು. ಇದನ್ನು ಉದ್ದೇಶಪೂರ್ವಕ ಫೀಲ್ಡಿಂಗ್ ಅಡ್ಡಿ ಎಂದು ಪರಿಗಣಿಸಿ ಔಟ್ ನೀಡಲಾಗಿತ್ತು.

2 / 5
ಅಮಿತ್ ಮಿಶ್ರಾ (2019): ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿದ್ದ ಅಮಿತ್ ಮಿಶ್ರಾ, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರನ್ ಓಡುವಾಗ ತಮ್ಮ ಹಾದಿಯನ್ನು ಬದಲಿಸಿದ್ದರು. ಫೀಲ್ಡರ್ ಎಸೆದ ಚೆಂಡು ಸ್ಟಂಪ್‌ಗೆ ತಗುಲದಂತೆ ತಡೆಯಲು ಅವರು ಪಿಚ್‌ನ ಮಧ್ಯದಲ್ಲಿ ಓಡಿದ್ದರಿಂದ 'ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್' ನಿಯಮದಡಿಯಲ್ಲಿ ಔಟ್ ನೀಡಲಾಗಿತ್ತು.

ಅಮಿತ್ ಮಿಶ್ರಾ (2019): ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿದ್ದ ಅಮಿತ್ ಮಿಶ್ರಾ, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರನ್ ಓಡುವಾಗ ತಮ್ಮ ಹಾದಿಯನ್ನು ಬದಲಿಸಿದ್ದರು. ಫೀಲ್ಡರ್ ಎಸೆದ ಚೆಂಡು ಸ್ಟಂಪ್‌ಗೆ ತಗುಲದಂತೆ ತಡೆಯಲು ಅವರು ಪಿಚ್‌ನ ಮಧ್ಯದಲ್ಲಿ ಓಡಿದ್ದರಿಂದ 'ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್' ನಿಯಮದಡಿಯಲ್ಲಿ ಔಟ್ ನೀಡಲಾಗಿತ್ತು.

3 / 5
ರವೀಂದ್ರ ಜಡೇಜಾ (2024): ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರ ಕಣಕ್ಕಿಳಿದಿದ್ದ ರವೀಂದ್ರ ಜಡೇಜಾ ಎರಡನೇ ರನ್‌ಗಾಗಿ ಓಡುವಾಗ ಸಂಜು ಸ್ಯಾಮ್ಸನ್ ಅವರ ಎಸೆತಕ್ಕೆ ಅಡ್ಡ ಬಂದಿದ್ದರು. ರಿಪ್ಲೇನಲ್ಲಿ ಜಡೇಜಾ ಚೆಂಡು ಬರುತ್ತಿರುವುದನ್ನು ನೋಡಿ ಓಟದ ಹಾದಿ ಬದಲಿಸಿದ್ದು ಸಾಬೀತಾದ ಕಾರಣ ಅಂಪೈರ್ ಔಟ್ ನೀಡಿದ್ದರು.

ರವೀಂದ್ರ ಜಡೇಜಾ (2024): ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರ ಕಣಕ್ಕಿಳಿದಿದ್ದ ರವೀಂದ್ರ ಜಡೇಜಾ ಎರಡನೇ ರನ್‌ಗಾಗಿ ಓಡುವಾಗ ಸಂಜು ಸ್ಯಾಮ್ಸನ್ ಅವರ ಎಸೆತಕ್ಕೆ ಅಡ್ಡ ಬಂದಿದ್ದರು. ರಿಪ್ಲೇನಲ್ಲಿ ಜಡೇಜಾ ಚೆಂಡು ಬರುತ್ತಿರುವುದನ್ನು ನೋಡಿ ಓಟದ ಹಾದಿ ಬದಲಿಸಿದ್ದು ಸಾಬೀತಾದ ಕಾರಣ ಅಂಪೈರ್ ಔಟ್ ನೀಡಿದ್ದರು.

4 / 5
ಅಂಗ್​​ಕ್ರಿಶ್ ರಘುವಂಶಿ (2026): ಕೊಲ್ಕತ್ತಾ ನೈಟ್ ರೈಡರ್ಸ್​ ತಂಡದ ಯುವ ಆಟಗಾರ ಅಂಗ್​ಕ್ರಿಶ್ ರಘುವಂಶಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಶಮಿ ಅವರ ಥ್ರೋಗೆ ಅಡ್ಡ ಬಂದಿದ್ದರು. ಇದನ್ನು ಪರಿಶೀಲಿಸಿದ ಮೂರನೇ ಅಂಪೈರ್ 'ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್' ನಿಯಮದಡಿಯಲ್ಲಿ ಔಟ್ ನೀಡಿದ್ದರು.

ಅಂಗ್​​ಕ್ರಿಶ್ ರಘುವಂಶಿ (2026): ಕೊಲ್ಕತ್ತಾ ನೈಟ್ ರೈಡರ್ಸ್​ ತಂಡದ ಯುವ ಆಟಗಾರ ಅಂಗ್​ಕ್ರಿಶ್ ರಘುವಂಶಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಶಮಿ ಅವರ ಥ್ರೋಗೆ ಅಡ್ಡ ಬಂದಿದ್ದರು. ಇದನ್ನು ಪರಿಶೀಲಿಸಿದ ಮೂರನೇ ಅಂಪೈರ್ 'ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್' ನಿಯಮದಡಿಯಲ್ಲಿ ಔಟ್ ನೀಡಿದ್ದರು.

5 / 5

Published On - 1:31 pm, Mon, 27 April 26

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ