Sign In

By signing in or creating an account, you agree with Associated Broadcasting Company's Terms & Conditions and Privacy Policy.

Ajit Agarkar New Chief Selector: ಟೀಂ ಇಂಡಿಯಾದ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ್ ಅಗರ್ಕರ್ ನೇಮಕ

Ajit Agarkar New Chief Selector: ಭಾರತದ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಟೀಂ ಇಂಡಿಯಾ ಆಯ್ಕೆ ಮಂಡಳಿಯ ಮುಖ್ಯ ಆಯ್ಕೆಗಾರರಾಗಿ ಅಧಿಕಾರವಹಿಸಿಕೊಳ್ಳಲಿದ್ದು, ಜುಲೈ 5 ರಿಂದ ಅವರ ಅಧಿಕಾರಾವಧಿ ಆರಂಭವಾಗಲಿದೆ.

ಪೃಥ್ವಿಶಂಕರ
|

Updated on:Jul 05, 2023 | 7:32 AM

ಭಾರತದ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಟೀಂ ಇಂಡಿಯಾ ಆಯ್ಕೆ ಮಂಡಳಿಯ ಮುಖ್ಯ ಆಯ್ಕೆಗಾರರಾಗಿ ಅಧಿಕಾರವಹಿಸಿಕೊಳ್ಳಲಿದ್ದು, ಜುಲೈ 5ರಿಂದ ಅವರ ಅಧಿಕಾರಾವಧಿ ಆರಂಭವಾಗಲಿದೆ. ಬಿಸಿಸಿಐ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದೆ. ಇದೀಗ ಅಜಿತ್ ಅಗರ್ಕರ್ ಏಷ್ಯಾಕಪ್ ಮತ್ತು ವಿಶ್ವಕಪ್‌ಗೆ ಭಾರತ ತಂಡವನ್ನು ಆಯ್ಕೆ ಮಾಡಲಿದ್ದಾರೆ.

ಭಾರತದ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಟೀಂ ಇಂಡಿಯಾ ಆಯ್ಕೆ ಮಂಡಳಿಯ ಮುಖ್ಯ ಆಯ್ಕೆಗಾರರಾಗಿ ಅಧಿಕಾರವಹಿಸಿಕೊಳ್ಳಲಿದ್ದು, ಜುಲೈ 5ರಿಂದ ಅವರ ಅಧಿಕಾರಾವಧಿ ಆರಂಭವಾಗಲಿದೆ. ಬಿಸಿಸಿಐ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದೆ. ಇದೀಗ ಅಜಿತ್ ಅಗರ್ಕರ್ ಏಷ್ಯಾಕಪ್ ಮತ್ತು ವಿಶ್ವಕಪ್‌ಗೆ ಭಾರತ ತಂಡವನ್ನು ಆಯ್ಕೆ ಮಾಡಲಿದ್ದಾರೆ.

1 / 8
ಸುಲಕ್ಷಣಾ ನಾಯಕ್, ಅಶೋಕ್ ಮಲ್ಹೋತ್ರಾ ಮತ್ತು ಜತಿನ್ ಪರಣಿಪೆ ಅವರನ್ನೊಳಗೊಂಡ 3 ಸದಸ್ಯರ ಸಿಎಸಿ ಸಮಿತಿಯು ಸಂದರ್ಶನವನ್ನು ನಡೆಸಿದ ನಂತರ ಅಜಿತ್ ಅಗರ್ಕರ್ ಅವರ ಹೆಸರನ್ನು ಈ ಹುದ್ದೆಗೆ ಶಿಫಾರಸು ಮಾಡಿತ್ತು. ಕಳೆದ ಹಲವು ದಿನಗಳಿಂದ ಕೂಡ ಅಜಿತ್ ಅಗರ್ಕರ್ ಅವರ ಹೆಸರೇ ಈ ಹುದ್ದೆಗೆ ಅಂತಿಮವೆಂಬ ಮಾತು ಕೇಳಿಬರುತ್ತಿತ್ತು.

ಸುಲಕ್ಷಣಾ ನಾಯಕ್, ಅಶೋಕ್ ಮಲ್ಹೋತ್ರಾ ಮತ್ತು ಜತಿನ್ ಪರಣಿಪೆ ಅವರನ್ನೊಳಗೊಂಡ 3 ಸದಸ್ಯರ ಸಿಎಸಿ ಸಮಿತಿಯು ಸಂದರ್ಶನವನ್ನು ನಡೆಸಿದ ನಂತರ ಅಜಿತ್ ಅಗರ್ಕರ್ ಅವರ ಹೆಸರನ್ನು ಈ ಹುದ್ದೆಗೆ ಶಿಫಾರಸು ಮಾಡಿತ್ತು. ಕಳೆದ ಹಲವು ದಿನಗಳಿಂದ ಕೂಡ ಅಜಿತ್ ಅಗರ್ಕರ್ ಅವರ ಹೆಸರೇ ಈ ಹುದ್ದೆಗೆ ಅಂತಿಮವೆಂಬ ಮಾತು ಕೇಳಿಬರುತ್ತಿತ್ತು.

2 / 8
ವಾಸ್ತವವಾಗಿ, ಕಳೆದ ಫೆಬ್ರವರಿಯಲ್ಲಿ ಖಾಸಗಿ ವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಚೇತನ್ ಶರ್ಮಾ ಬಿಸಿಸಿಐ ವಿರುದ್ಧ ಕೆಲವು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಇದೀಗ ಅವರ ಬದಲಿಗೆ ಅಗರ್ಕರ್ ಈ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ವಾಸ್ತವವಾಗಿ, ಕಳೆದ ಫೆಬ್ರವರಿಯಲ್ಲಿ ಖಾಸಗಿ ವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಚೇತನ್ ಶರ್ಮಾ ಬಿಸಿಸಿಐ ವಿರುದ್ಧ ಕೆಲವು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಇದೀಗ ಅವರ ಬದಲಿಗೆ ಅಗರ್ಕರ್ ಈ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

3 / 8
ಇನ್ನು ಅಜಿತ್ ಅಗರ್ಕರ್ ವೃತ್ತಿ ಜೀವನದ ಬಗ್ಗೆ ಹೇಳಬೇಕೆಂದರೆ, ಭಾರತದ ಈ ಮಾಜಿ ಆಲ್‌ರೌಂಡರ್ ಟೀಂ ಇಂಡಿಯಾ ಪರ 26 ಟೆಸ್ಟ್, 191 ಏಕದಿನ ಮತ್ತು 4 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅಲ್ಲದೆ ಅಗರ್ಕರ್ 2007ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಸದಸ್ಯರೂ ಆಗಿದ್ದರು.

ಇನ್ನು ಅಜಿತ್ ಅಗರ್ಕರ್ ವೃತ್ತಿ ಜೀವನದ ಬಗ್ಗೆ ಹೇಳಬೇಕೆಂದರೆ, ಭಾರತದ ಈ ಮಾಜಿ ಆಲ್‌ರೌಂಡರ್ ಟೀಂ ಇಂಡಿಯಾ ಪರ 26 ಟೆಸ್ಟ್, 191 ಏಕದಿನ ಮತ್ತು 4 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅಲ್ಲದೆ ಅಗರ್ಕರ್ 2007ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಸದಸ್ಯರೂ ಆಗಿದ್ದರು.

4 / 8
ಹಾಗೆಯೇ ವೃತ್ತಿ ಬದುಕಿನಲ್ಲಿ ಹಲವಾರು ದಾಖಲೆ ಬರೆದಿರುವ ಅಗರ್ಕರ್, ಏಕದಿನದಲ್ಲಿ ಅತ್ಯಂತ ವೇಗದ ಅರ್ಧಶತಕ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್‌ ಎಂಬ ದಾಖಲೆ ಬರೆದಿದ್ದಾರೆ. 2000ನೇ ಇಸವಿಯಲ್ಲಿ ಜಿಂಬಾಬ್ವೆ ವಿರುದ್ಧ 21 ಎಸೆತಗಳಲ್ಲಿ ಅಜಿತ್ ಫಿಫ್ಟಿ ಬಾರಿಸಿದ್ದರು.

ಹಾಗೆಯೇ ವೃತ್ತಿ ಬದುಕಿನಲ್ಲಿ ಹಲವಾರು ದಾಖಲೆ ಬರೆದಿರುವ ಅಗರ್ಕರ್, ಏಕದಿನದಲ್ಲಿ ಅತ್ಯಂತ ವೇಗದ ಅರ್ಧಶತಕ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್‌ ಎಂಬ ದಾಖಲೆ ಬರೆದಿದ್ದಾರೆ. 2000ನೇ ಇಸವಿಯಲ್ಲಿ ಜಿಂಬಾಬ್ವೆ ವಿರುದ್ಧ 21 ಎಸೆತಗಳಲ್ಲಿ ಅಜಿತ್ ಫಿಫ್ಟಿ ಬಾರಿಸಿದ್ದರು.

5 / 8
ಅಷ್ಟೇ ಅಲ್ಲ, ಏಕದಿನ ಕ್ರಿಕೆಟ್​ನಲ್ಲಿ ಅತಿ ವೇಗದ 50 ವಿಕೆಟ್ ಪಡೆದ ದಾಖಲೆಯೂ ಬಹುಕಾಲ ಅಜಿತ್ ಅವರ ಹೆಸರಿನಲ್ಲಿತ್ತು. ಅಗರ್ಕರ್ ಕೇವಲ 23 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ಕ್ರಿಕೆಟ್‌ನಿಂದ ನಿವೃತ್ತರಾದ ನಂತರ ಅಗರ್ಕರ್ ಮುಂಬೈ ಹಿರಿಯರ ತಂಡದ ಮುಖ್ಯ ಆಯ್ಕೆಗಾರರಾಗಿ ಸೇವೆ ಸಲ್ಲಿಸಿದ್ದರು.

ಅಷ್ಟೇ ಅಲ್ಲ, ಏಕದಿನ ಕ್ರಿಕೆಟ್​ನಲ್ಲಿ ಅತಿ ವೇಗದ 50 ವಿಕೆಟ್ ಪಡೆದ ದಾಖಲೆಯೂ ಬಹುಕಾಲ ಅಜಿತ್ ಅವರ ಹೆಸರಿನಲ್ಲಿತ್ತು. ಅಗರ್ಕರ್ ಕೇವಲ 23 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ಕ್ರಿಕೆಟ್‌ನಿಂದ ನಿವೃತ್ತರಾದ ನಂತರ ಅಗರ್ಕರ್ ಮುಂಬೈ ಹಿರಿಯರ ತಂಡದ ಮುಖ್ಯ ಆಯ್ಕೆಗಾರರಾಗಿ ಸೇವೆ ಸಲ್ಲಿಸಿದ್ದರು.

6 / 8
ಇದಲ್ಲದೆ ಐಪಿಎಲ್​ನಲ್ಲಿ ದೆಹಲಿ ಕ್ಯಾಪಿಟಲ್ಸ್‌ ತಂಡದ ಕೋಚಿಂಗ್ ಸಿಬ್ಬಂದಿಯ ಭಾಗವಾಗಿದ್ದ ಅಗರ್ಕರ್, ಸಹಾಯಕ ಬೌಲಿಂಗ್ ಕೋಚ್ ಆಗಿದ್ದರು. ಇತ್ತೀಚೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅಗರ್ಕರ್​ಗೆ ವೆಸ್ಟ್ ಇಂಡೀಸ್ ವಿರುದ್ಧದ 5 ಟಿ20 ಪಂದ್ಯಗಳ ಸರಣಿಗೆ ತಂಡವನ್ನು ಆಯ್ಕೆ ಮಾಡುವುದು ಅವರ ಮುಂದಿರುವ ಮೊದಲ ಸವಾಲಾಗಿದೆ. ಹಾಗೆಯೇ ಈ ವರ್ಷ ಅವರ ಮುಂದಿರುವ ದೊಡ್ಡ ಸವಾಲೆಂದರೆ ಏಷ್ಯಾಕಪ್ ಮತ್ತು ನಂತರ ವಿಶ್ವಕಪ್​ಗೆ ತಂಡವನ್ನು ಆಯ್ಕೆ ಮಾಡುವುದು.

ಇದಲ್ಲದೆ ಐಪಿಎಲ್​ನಲ್ಲಿ ದೆಹಲಿ ಕ್ಯಾಪಿಟಲ್ಸ್‌ ತಂಡದ ಕೋಚಿಂಗ್ ಸಿಬ್ಬಂದಿಯ ಭಾಗವಾಗಿದ್ದ ಅಗರ್ಕರ್, ಸಹಾಯಕ ಬೌಲಿಂಗ್ ಕೋಚ್ ಆಗಿದ್ದರು. ಇತ್ತೀಚೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅಗರ್ಕರ್​ಗೆ ವೆಸ್ಟ್ ಇಂಡೀಸ್ ವಿರುದ್ಧದ 5 ಟಿ20 ಪಂದ್ಯಗಳ ಸರಣಿಗೆ ತಂಡವನ್ನು ಆಯ್ಕೆ ಮಾಡುವುದು ಅವರ ಮುಂದಿರುವ ಮೊದಲ ಸವಾಲಾಗಿದೆ. ಹಾಗೆಯೇ ಈ ವರ್ಷ ಅವರ ಮುಂದಿರುವ ದೊಡ್ಡ ಸವಾಲೆಂದರೆ ಏಷ್ಯಾಕಪ್ ಮತ್ತು ನಂತರ ವಿಶ್ವಕಪ್​ಗೆ ತಂಡವನ್ನು ಆಯ್ಕೆ ಮಾಡುವುದು.

7 / 8
ಟೀಂ ಇಂಡಿಯಾದ ಆಯ್ಕೆ ಸಮಿತಿ - ಅಜಿತ್ ಅಗರ್ಕರ್ (ಅಧ್ಯಕ್ಷ), ಶಿವಸುಂದರ್ ದಾಸ್, ಸುಬ್ರೋತೊ ಬ್ಯಾನರ್ಜಿ, ಸಲೀಲ್ ಅಂಕೋಲಾ, ಎಸ್ ಶರತ್

ಟೀಂ ಇಂಡಿಯಾದ ಆಯ್ಕೆ ಸಮಿತಿ - ಅಜಿತ್ ಅಗರ್ಕರ್ (ಅಧ್ಯಕ್ಷ), ಶಿವಸುಂದರ್ ದಾಸ್, ಸುಬ್ರೋತೊ ಬ್ಯಾನರ್ಜಿ, ಸಲೀಲ್ ಅಂಕೋಲಾ, ಎಸ್ ಶರತ್

8 / 8

Published On - 7:31 am, Wed, 5 July 23

Follow us
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ