AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 5 ಕೋಟಿ ರೂ. ಘೋಷಿಸಿದ ಬಿಸಿಸಿಐ

India vs England U19 World Cup 2023: ಸೌತ್ ಆಫ್ರಿಕಾದಲ್ಲಿ ನಡೆದ ಮಹಿಳಾ ಅಂಡರ್ 19 ವಿಶ್ವಕಪ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವನ್ನು ಭಾರತೀಯ ಯುವತಿಯರು ಕೇವಲ 68 ರನ್​ಗಳಿಗೆ ಆಲೌಟ್ ಮಾಡಿದ್ದರು.

TV9 Web
| Edited By: |

Updated on:Jan 29, 2023 | 8:57 PM

Share
ಸೌತ್ ಆಫ್ರಿಕಾದಲ್ಲಿ ನಡೆದ ಅಂಡರ್ 19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದು ವಿಶ್ವಕಪ್ ಗೆದ್ದುಕೊಂಡಿದೆ. ಈ ಗೆಲುವಿನ ಬೆನ್ನಲ್ಲೇ ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಬಿಸಿಸಿಐ 5 ಕೋಟಿ ರೂ. ಪ್ರೋತ್ಸಾಹ ಧನ ಘೋಷಿಸಿದೆ.

ಸೌತ್ ಆಫ್ರಿಕಾದಲ್ಲಿ ನಡೆದ ಅಂಡರ್ 19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದು ವಿಶ್ವಕಪ್ ಗೆದ್ದುಕೊಂಡಿದೆ. ಈ ಗೆಲುವಿನ ಬೆನ್ನಲ್ಲೇ ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಬಿಸಿಸಿಐ 5 ಕೋಟಿ ರೂ. ಪ್ರೋತ್ಸಾಹ ಧನ ಘೋಷಿಸಿದೆ.

1 / 6
ಈ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತೀಯ ಮಹಿಳಾ ಕ್ರಿಕೆಟ್​ ಮುನ್ನುಗ್ಗುತ್ತಿದೆ. ಈ ವಿಶ್ವಕಪ್ ವಿಜಯೋತ್ಸವವು ಮಹಿಳಾ ಕ್ರಿಕೆಟ್‌ನ ಸ್ಥಾನಮಾನವನ್ನು ಮತ್ತಷ್ಟು ಎತ್ತರಕ್ಕೇರಿಸಿದೆ. ಈ ಸಂತೋಷದ ಘಳಿಗೆಯಲ್ಲಿ ಇಡೀ ತಂಡ ಮತ್ತು ಸಹಾಯಕ ಸಿಬ್ಬಂದಿಗೆ 5 ಕೋಟಿಯನ್ನು ಘೋಷಿಸುತ್ತಿರುವುದು ಸಂತೋಷದಾಯಕ ವಿಷಯ ಎಂದು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ವಿಶ್ವಕಪ್ ವಿಜೇತ ತಂಡವನ್ನು ಭಾರತ-ನ್ಯೂಜಿಲೆಂಡ್ ನಡುವಣ 3ನೇ ಟಿ20 ಪಂದ್ಯದ ವೇಳೆ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತೀಯ ಮಹಿಳಾ ಕ್ರಿಕೆಟ್​ ಮುನ್ನುಗ್ಗುತ್ತಿದೆ. ಈ ವಿಶ್ವಕಪ್ ವಿಜಯೋತ್ಸವವು ಮಹಿಳಾ ಕ್ರಿಕೆಟ್‌ನ ಸ್ಥಾನಮಾನವನ್ನು ಮತ್ತಷ್ಟು ಎತ್ತರಕ್ಕೇರಿಸಿದೆ. ಈ ಸಂತೋಷದ ಘಳಿಗೆಯಲ್ಲಿ ಇಡೀ ತಂಡ ಮತ್ತು ಸಹಾಯಕ ಸಿಬ್ಬಂದಿಗೆ 5 ಕೋಟಿಯನ್ನು ಘೋಷಿಸುತ್ತಿರುವುದು ಸಂತೋಷದಾಯಕ ವಿಷಯ ಎಂದು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ವಿಶ್ವಕಪ್ ವಿಜೇತ ತಂಡವನ್ನು ಭಾರತ-ನ್ಯೂಜಿಲೆಂಡ್ ನಡುವಣ 3ನೇ ಟಿ20 ಪಂದ್ಯದ ವೇಳೆ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.

2 / 6
ಸೌತ್ ಆಫ್ರಿಕಾದಲ್ಲಿ ನಡೆದ ಮಹಿಳಾ ಅಂಡರ್ 19 ವಿಶ್ವಕಪ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವನ್ನು ಭಾರತೀಯ ಯುವತಿಯರು ಕೇವಲ 68 ರನ್​ಗಳಿಗೆ ಆಲೌಟ್ ಮಾಡಿದ್ದರು.

ಸೌತ್ ಆಫ್ರಿಕಾದಲ್ಲಿ ನಡೆದ ಮಹಿಳಾ ಅಂಡರ್ 19 ವಿಶ್ವಕಪ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವನ್ನು ಭಾರತೀಯ ಯುವತಿಯರು ಕೇವಲ 68 ರನ್​ಗಳಿಗೆ ಆಲೌಟ್ ಮಾಡಿದ್ದರು.

3 / 6
ಅಲ್ಲದೆ ಸುಲಭ ಗುರಿ ಪಡೆದ ಟೀಮ್ ಇಂಡಿಯಾ 14 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 69 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಭಾರತೀಯ ತಂಡ ಮಹಿಳಾ ಕ್ರಿಕೆಟ್​ನಲ್ಲಿ ಚೊಚ್ಚಲ ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

ಅಲ್ಲದೆ ಸುಲಭ ಗುರಿ ಪಡೆದ ಟೀಮ್ ಇಂಡಿಯಾ 14 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 69 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಭಾರತೀಯ ತಂಡ ಮಹಿಳಾ ಕ್ರಿಕೆಟ್​ನಲ್ಲಿ ಚೊಚ್ಚಲ ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

4 / 6
ಇನ್ನು ಚೊಚ್ಚಲ ಅಂಡರ್​-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಭಾರತೀಯ ಮಹಿಳಾ ಕ್ರೀಡಾಪಟುಗಳು ಉತ್ತಮ ಆಟವಾಡಿದ್ದಾರೆ. ಅವರ ಯಶಸ್ಸು ಮುಂದಿನ ಕ್ರಿಕೆಟಿಗರಿಗೆ ಸ್ಫೂರ್ತಿ ನೀಡುತ್ತದೆ. ವಿಜೇತ ತಂಡದ ಮುಂದಿನ ಪ್ರಯತ್ನಕ್ಕೆ ಶುಭವಾಗಲಿ ಎಂದು ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನು ಚೊಚ್ಚಲ ಅಂಡರ್​-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಭಾರತೀಯ ಮಹಿಳಾ ಕ್ರೀಡಾಪಟುಗಳು ಉತ್ತಮ ಆಟವಾಡಿದ್ದಾರೆ. ಅವರ ಯಶಸ್ಸು ಮುಂದಿನ ಕ್ರಿಕೆಟಿಗರಿಗೆ ಸ್ಫೂರ್ತಿ ನೀಡುತ್ತದೆ. ವಿಜೇತ ತಂಡದ ಮುಂದಿನ ಪ್ರಯತ್ನಕ್ಕೆ ಶುಭವಾಗಲಿ ಎಂದು ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ.

5 / 6
ಟೀಮ್ ಇಂಡಿಯಾ WU19 ಪ್ಲೇಯಿಂಗ್ 11: ಶಫಾಲಿ ವರ್ಮಾ (ನಾಯಕಿ) , ಶ್ವೇತಾ ಸೆಹ್ರಾವತ್ , ಸೌಮ್ಯ ತಿವಾರಿ , ಗೊಂಗಡಿ ತ್ರಿಶಾ , ರಿಚಾ ಘೋಷ್ ( ವಿಕೆಟ್ ಕೀಪರ್ ) , ಹೃಷಿತಾ ಬಸು , ಟಿಟಾಸ್ ಸಾಧು , ಮನ್ನತ್ ಕಶ್ಯಪ್ , ಅರ್ಚನಾ ದೇವಿ , ಪಾರ್ಶವಿ ಚೋಪ್ರಾ , ಸೋನಮ್ ಯಾದವ್.

ಟೀಮ್ ಇಂಡಿಯಾ WU19 ಪ್ಲೇಯಿಂಗ್ 11: ಶಫಾಲಿ ವರ್ಮಾ (ನಾಯಕಿ) , ಶ್ವೇತಾ ಸೆಹ್ರಾವತ್ , ಸೌಮ್ಯ ತಿವಾರಿ , ಗೊಂಗಡಿ ತ್ರಿಶಾ , ರಿಚಾ ಘೋಷ್ ( ವಿಕೆಟ್ ಕೀಪರ್ ) , ಹೃಷಿತಾ ಬಸು , ಟಿಟಾಸ್ ಸಾಧು , ಮನ್ನತ್ ಕಶ್ಯಪ್ , ಅರ್ಚನಾ ದೇವಿ , ಪಾರ್ಶವಿ ಚೋಪ್ರಾ , ಸೋನಮ್ ಯಾದವ್.

6 / 6

Published On - 8:44 pm, Sun, 29 January 23

TV9 Web
TV9 Web

TV9 Kannada

Read More
Follow Us
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?