
2026 ರ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್ಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಆದಾಗ್ಯೂ ತಂಡದಿಂದ ಸಾಂಘಿಕ ಪ್ರದರ್ಶನ ಮೂಡಿಬರುತ್ತಿಲ್ಲ. ಕೆಲವು ಪಂದ್ಯಗಳಲ್ಲಿ ಬ್ಯಾಟ್ಸ್ಮನ್ಗಳು ಕೈಕೊಟ್ಟರೆ, ಇನ್ನು ಕೆಲವು ಪಂದ್ಯಗಳಲ್ಲಿ ಬೌಲರ್ಗಳು ತೀರ ದುಬಾರಿಯಾಗುತ್ತಿದ್ದಾರೆ. ಇದು ಆಡಳಿತ ಮಂಡಳಿಗೆ ಹೊಸ ತಲೆನೋವು ತಂದಿದೆ.

ಅದರಲ್ಲೂ ತಂಡದ ಬೌಲಿಂಗ್ ವಿಭಾಗ ಅಷ್ಟು ಪರಿಣಾಮಕಾರಿಯಾಗಿ ಕಾಣುತ್ತಿಲ್ಲ. ಜಸ್ಪ್ರೀತ್ ಬುಮ್ರಾರನ್ನು ಹೊರತುಪಡಿಸಿ ಮತ್ತ್ಯಾವ ಬೌಲರ್ ಕೂಡ ಲಯದಲ್ಲಿ ಕಾಣುತ್ತಿಲ್ಲ. ಹಾಗೆಯೇ ಭವಿಷ್ಯದಲ್ಲಿ ಬುಮ್ರಾರನ್ನು ಬದಲಾಯಿಸುವ ಸಾಮರ್ಥ್ಯವಿರುವ ವೇಗದ ಬೌಲರ್ ಭಾರತದಲ್ಲಿ ಪ್ರಸ್ತುತ ಇಲ್ಲ. ಅದಕ್ಕಾಗಿಯೇ ಬಿಸಿಸಿಐ ಈಗ ಈ ಸಮಸ್ಯೆಯನ್ನು ಪರಿಹರಿಸಲು ಮಾಜಿ ವೇಗದ ಬೌಲರ್ ಜಹೀರ್ ಖಾನ್ ಅವರ ಸಹಾಯವನ್ನು ಕೋರಿದೆ.

ಬಿಸಿಸಿಐ ಜಹೀರ್ ಖಾನ್ ಅವರಿಗೆ ಮಹತ್ವದ ಜವಾಬ್ದಾರಿಯನ್ನು ನೀಡಿದೆ. ಈ ತಿಂಗಳು ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ವಿಶೇಷ ತರಬೇತಿ ಶಿಬಿರ ನಡೆಯಲಿದ್ದು, ದೇಶದ ಅಗ್ರ ವೇಗದ ಬೌಲರ್ಗಳು ಈ ತರಬೇತಿ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಈ ಶಿಬಿರದಲ್ಲಿ ಜಹೀರ್ ಖಾನ್ ಬೌಲರ್ಗಳಿಗೆ ತರಬೇತಿ ನೀಡಲಿದ್ದಾರೆ.

ಗಮನಿಸಬೇಕಾದ ಅಂಶವೆಂದರೆ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ಪ್ರಸ್ತುತ ವೇಗದ ಬೌಲಿಂಗ್ ತರಬೇತುದಾರರ ಕೊರತೆಯಿದೆ. ಈಗ, ಜಹೀರ್ ಖಾನ್ ಈ ಸ್ಥಾನವನ್ನು ತುಂಬಲು ಸಜ್ಜಾಗಿದ್ದಾರೆ. ಸಿಒಇ ಕ್ರಿಕೆಟ್ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಕೂಡ ಜಹೀರ್ ಖಾನ್ ಅವರನ್ನು ಈ ಜವಾಬ್ದಾರಿಯಲ್ಲಿ ಎದುರು ನೋಡುತ್ತಿದ್ದು, ಜಹೀರ್ ಖಾನ್ ಕೂಡ ಕೋಚಿಂಗ್ನಲ್ಲಿ ತುಂಬಾ ಆಸಕ್ತಿ ಹೊಂದಿದ್ದಾರೆ.

47 ವರ್ಷದ ಜಹೀರ್ ಖಾನ್ ಭಾರತ ಪರ 92 ಟೆಸ್ಟ್ ಪಂದ್ಯಗಳಲ್ಲಿ 311 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 200 ಏಕದಿನ ಪಂದ್ಯಗಳಲ್ಲಿ 282 ವಿಕೆಟ್ ಮತ್ತು 17 ಟಿ20 ವಿಕೆಟ್ ಕೂಡ ಉರುಳಿಸಿದ್ದಾರೆ. ಐಪಿಎಲ್ನಲ್ಲಿ ಜಹೀರ್ ಖಾನ್ 100 ಪಂದ್ಯಗಳನ್ನಾಡಿದ್ದು 102 ವಿಕೆಟ್ ಪಡೆದಿದ್ದಾರೆ. ಸ್ಪಷ್ಟವಾಗಿ, ಜಹೀರ್ ಖಾನ್ ಸಾಕಷ್ಟು ಅನುಭವ ಹೊಂದಿದ್ದ್ದು, ಬಿಸಿಸಿಐ ಈಗ ಇದರ ಲಾಭ ಪಡೆಯಲು ನೋಡುತ್ತಿದೆ.