AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 NEWS: ಐಪಿಎಲ್ 2024 ಕುರಿತ ಬಿಗ್ ನ್ಯೂಸ್: ಈ ಬಾರಿ ಟೂರ್ನಿ ಎಲ್ಲಿ ನಡೆಯಲಿದೆ ಗೊತ್ತೇ?

IPL 2024 Venue: ಲೋಕಸಭೆ ಚುನಾವಣೆಯಿಂದಾಗಿ ಐಪಿಎಲ್ 17ನೇ ಸೀಸನ್ ಯುಎಇ ಅಥವಾ ದಕ್ಷಿಣ ಆಫ್ರಿಕಾಕ್ಕೆ ಸ್ಥಳಾಂತರವಾಗಲಿದೆ ಎಂಬ ಊಹಾಪೋಹಗಳು ಈ ಹಿಂದೆ ಇದ್ದವು. ಆದರೆ, ಈಗ ಈ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಇಂಡಿಯನ್ ಪ್ರೀಮಿಯರ್ ಲೀಗ್ 17 ನೇ ಸೀಸನ್‌ನ ಅಂತಿಮ ಪಂದ್ಯ ಮೇ 26 ರಂದು ಆಯೋಜಿಸಲಾಗಿದೆ. ಟೂರ್ನಿ ಎಲ್ಲಿ ನಡೆಯಲಿದೆ ನೋಡಿ.

Vinay Bhat
|

Updated on: Feb 15, 2024 | 8:04 AM

Share
ಇಂಡಿಯನ್ ಪ್ರೀಮಿಯರ್ ಲೀಗ್‌ನ 17 ನೇ ಆವೃತ್ತಿ ಎಲ್ಲಿ ನಡೆಯಲಿದೆ ಎಂಬ ಮಾತು ಕಳೆದ ಕೆಲವು ತಿಂಗಳುಗಳಿಂದ ಕೇಳಿಬರುತ್ತಲೇ ಇತ್ತು. ಆದರೀಗ ಈ ಬಗ್ಗೆ  ಐಪಿಎಲ್ ಅಧ್ಯಕ್ಷರು ಖಚಿತಪಡಿಸಿದ್ದು, ಐಪಿಎಲ್ 2024 ಟೂರ್ನಿ ಭಾರತದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ಸಂಪೂರ್ಣ ಟೂರ್ನಿ ದೇಶದಲ್ಲೇ ನಡೆಯಲಿದೆಯಂತೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನ 17 ನೇ ಆವೃತ್ತಿ ಎಲ್ಲಿ ನಡೆಯಲಿದೆ ಎಂಬ ಮಾತು ಕಳೆದ ಕೆಲವು ತಿಂಗಳುಗಳಿಂದ ಕೇಳಿಬರುತ್ತಲೇ ಇತ್ತು. ಆದರೀಗ ಈ ಬಗ್ಗೆ ಐಪಿಎಲ್ ಅಧ್ಯಕ್ಷರು ಖಚಿತಪಡಿಸಿದ್ದು, ಐಪಿಎಲ್ 2024 ಟೂರ್ನಿ ಭಾರತದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ಸಂಪೂರ್ಣ ಟೂರ್ನಿ ದೇಶದಲ್ಲೇ ನಡೆಯಲಿದೆಯಂತೆ.

1 / 6
ಲೋಕಸಭೆ ಚುನಾವಣೆಯಿಂದಾಗಿ ಐಪಿಎಲ್ 17ನೇ ಸೀಸನ್ ಯುಎಇ ಅಥವಾ ದಕ್ಷಿಣ ಆಫ್ರಿಕಾಕ್ಕೆ ಸ್ಥಳಾಂತರವಾಗಲಿದೆ ಎಂಬ ಊಹಾಪೋಹಗಳು ಈ ಹಿಂದೆ ಇದ್ದವು. ಆದರೆ, ಈಗ ಈ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಇಂಡಿಯನ್ ಪ್ರೀಮಿಯರ್ ಲೀಗ್ 17 ನೇ ಸೀಸನ್‌ನ ಅಂತಿಮ ಪಂದ್ಯ ಮೇ 26 ರಂದು ನಡೆಯಲಿದೆ ಎಂದಿದ್ದಾರೆ.

ಲೋಕಸಭೆ ಚುನಾವಣೆಯಿಂದಾಗಿ ಐಪಿಎಲ್ 17ನೇ ಸೀಸನ್ ಯುಎಇ ಅಥವಾ ದಕ್ಷಿಣ ಆಫ್ರಿಕಾಕ್ಕೆ ಸ್ಥಳಾಂತರವಾಗಲಿದೆ ಎಂಬ ಊಹಾಪೋಹಗಳು ಈ ಹಿಂದೆ ಇದ್ದವು. ಆದರೆ, ಈಗ ಈ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಇಂಡಿಯನ್ ಪ್ರೀಮಿಯರ್ ಲೀಗ್ 17 ನೇ ಸೀಸನ್‌ನ ಅಂತಿಮ ಪಂದ್ಯ ಮೇ 26 ರಂದು ನಡೆಯಲಿದೆ ಎಂದಿದ್ದಾರೆ.

2 / 6
ಐಪಿಎಲ್ 2024ರ ಸಂಪೂರ್ಣ ವೇಳಾಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಆದರೆ, ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತೀಯ ಆಟಗಾರರಿಗೆ 8ರಿಂದ 10 ದಿನಗಳ ಕಾಲಾವಕಾಶ ನೀಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಯಸಿದೆಯಂತೆ.

ಐಪಿಎಲ್ 2024ರ ಸಂಪೂರ್ಣ ವೇಳಾಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಆದರೆ, ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತೀಯ ಆಟಗಾರರಿಗೆ 8ರಿಂದ 10 ದಿನಗಳ ಕಾಲಾವಕಾಶ ನೀಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಯಸಿದೆಯಂತೆ.

3 / 6
ಸುದ್ದಿ ಸಂಸ್ಥೆ ಐಎಎನ್‌ಎಸ್‌ನೊಂದಿಗೆ ಮಾತನಾಡಿದ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, 17 ನೇ ಸೀಸನ್ ಭಾರತದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ದಿನಾಂಕವನ್ನು ಬಿಸಿಸಿಐ ಶೀಘ್ರದಲ್ಲೇ ಪ್ರಕಟಿಸಲಿದೆ. ನಾವು ಲೋಕಸಭೆ ಚುನಾವಣೆ ದಿನಾಂಕಗಳಿಗಾಗಿ ಕಾಯುತ್ತಿದ್ದೇವೆ. ಲೋಕಸಭೆ ಚುನಾವಣೆ ಘೋಷಣೆಯಾದ ತಕ್ಷಣ ಐಪಿಎಲ್ 17ನೇ ಸೀಸನ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.

ಸುದ್ದಿ ಸಂಸ್ಥೆ ಐಎಎನ್‌ಎಸ್‌ನೊಂದಿಗೆ ಮಾತನಾಡಿದ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, 17 ನೇ ಸೀಸನ್ ಭಾರತದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ದಿನಾಂಕವನ್ನು ಬಿಸಿಸಿಐ ಶೀಘ್ರದಲ್ಲೇ ಪ್ರಕಟಿಸಲಿದೆ. ನಾವು ಲೋಕಸಭೆ ಚುನಾವಣೆ ದಿನಾಂಕಗಳಿಗಾಗಿ ಕಾಯುತ್ತಿದ್ದೇವೆ. ಲೋಕಸಭೆ ಚುನಾವಣೆ ಘೋಷಣೆಯಾದ ತಕ್ಷಣ ಐಪಿಎಲ್ 17ನೇ ಸೀಸನ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.

4 / 6
ಸುದ್ದಿ ಸಂಸ್ಥೆ ಪಿಟಿಐ ವರದಿ ಪ್ರಕಾರ, ಐಪಿಎಲ್ ಸೀಸನ್ 17 ರ ಅಂತಿಮ ಪಂದ್ಯವನ್ನು ಮೇ 26 ರವರೆಗೆ ಆಡಬಹುದು. ಜೂನ್ 5ರಿಂದ ಟಿ20 ವಿಶ್ವಕಪ್ ಆರಂಭವಾಗಲಿರುವ ಕಾರಣ ಬಿಸಿಸಿಐ ಆಟಗಾರರಿಗೆ ತಯಾರಿ ನಡೆಸಲು 8ರಿಂದ 10 ದಿನಗಳ ಕಾಲಾವಕಾಶ ನೀಡಬಹುದು. ಆದಾಗ್ಯೂ, ಈ ಬಗ್ಗೆ ಇನ್ನೂ ಅಧಿಕೃತ ದೃಢೀಕರಣವಿಲ್ಲ.

ಸುದ್ದಿ ಸಂಸ್ಥೆ ಪಿಟಿಐ ವರದಿ ಪ್ರಕಾರ, ಐಪಿಎಲ್ ಸೀಸನ್ 17 ರ ಅಂತಿಮ ಪಂದ್ಯವನ್ನು ಮೇ 26 ರವರೆಗೆ ಆಡಬಹುದು. ಜೂನ್ 5ರಿಂದ ಟಿ20 ವಿಶ್ವಕಪ್ ಆರಂಭವಾಗಲಿರುವ ಕಾರಣ ಬಿಸಿಸಿಐ ಆಟಗಾರರಿಗೆ ತಯಾರಿ ನಡೆಸಲು 8ರಿಂದ 10 ದಿನಗಳ ಕಾಲಾವಕಾಶ ನೀಡಬಹುದು. ಆದಾಗ್ಯೂ, ಈ ಬಗ್ಗೆ ಇನ್ನೂ ಅಧಿಕೃತ ದೃಢೀಕರಣವಿಲ್ಲ.

5 / 6
2009 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಐಪಿಎಲ್ ಎರಡನೇ ಸೀಸನ್ ದಕ್ಷಿಣ ಆಫ್ರಿಕಾದಲ್ಲಿ ನಡೆಯಿತು. ಅಲ್ಲದೆ 2014ರಲ್ಲಿ ಲೋಕಸಭೆ ಚುನಾವಣೆಯಿಂದಾಗಿ ಐಪಿಎಲ್‌ನ ಮೊದಲಾರ್ಧ ಯುಎಇಗೆ ಸ್ಥಳಾಂತರಗೊಂಡಿತ್ತು. ಆದರೆ, ಈ ಬಾರಿ ಲೋಕಸಭೆ ಚುನಾವಣೆ ವೇಳೆ ಬಿಸಿಸಿಐ ಐಪಿಎಲ್ 17ನೇ ಸೀಸನ್ ಅನ್ನು ಭಾರತದಲ್ಲಿ ಆಯೋಜಿಸಲು ತೀರ್ಮಾನಿಸಿದೆ.

2009 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಐಪಿಎಲ್ ಎರಡನೇ ಸೀಸನ್ ದಕ್ಷಿಣ ಆಫ್ರಿಕಾದಲ್ಲಿ ನಡೆಯಿತು. ಅಲ್ಲದೆ 2014ರಲ್ಲಿ ಲೋಕಸಭೆ ಚುನಾವಣೆಯಿಂದಾಗಿ ಐಪಿಎಲ್‌ನ ಮೊದಲಾರ್ಧ ಯುಎಇಗೆ ಸ್ಥಳಾಂತರಗೊಂಡಿತ್ತು. ಆದರೆ, ಈ ಬಾರಿ ಲೋಕಸಭೆ ಚುನಾವಣೆ ವೇಳೆ ಬಿಸಿಸಿಐ ಐಪಿಎಲ್ 17ನೇ ಸೀಸನ್ ಅನ್ನು ಭಾರತದಲ್ಲಿ ಆಯೋಜಿಸಲು ತೀರ್ಮಾನಿಸಿದೆ.

6 / 6
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!