AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ‘ತಿಂಗಳ’ ಬದಲಾವಣೆಗೆ ಭರ್ಜರಿ ಪ್ಲ್ಯಾನ್

Indian Premier League: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-21 ರಲ್ಲಿ ಮಹತ್ವದ ಬದಲಾವಣೆ ಮಾಡಲು ಬಿಸಿಸಿಐ ಪ್ಲ್ಯಾನ್ ರೂಪಿಸುತ್ತಿದೆ. ಈ ಪ್ಲ್ಯಾನಿಂಗ್​​ನೊಂದಿಗೆ ಐಪಿಎಲ್​​ನಲ್ಲಿ ಕೆಲ ಬದಲಾವಣೆಯಾಗಲಿದೆ. ಅದರಲ್ಲಿ ಮುಖ್ಯ ಬದಲಾವಣೆ ಎಂದರೆ ಟೂರ್ನಿಯ ವಿಂಡೋ. ಅಂದರೆ ಐಪಿಎಲ್ ನಡೆಸುವ ತಿಂಗಳು ಬದಲಾಗಲಿದೆ.

ಝಾಹಿರ್ ಯೂಸುಫ್
|

Updated on:Jun 11, 2026 | 7:24 AM

Share
ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮಹತ್ವದ ಬದಲಾವಣೆ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಗಂಭೀರ ಚಿಂತನೆ ನಡೆಸುತ್ತಿದೆ. ಈ ಬದಲಾವಣೆಯೊಂದಿಗೆ ಐಪಿಎಲ್ ಆರಂಭದ ತಿಂಗಳು ಕೂಡ ಬದಲಾಗಲಿದೆ. (PC: IPL)

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮಹತ್ವದ ಬದಲಾವಣೆ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಗಂಭೀರ ಚಿಂತನೆ ನಡೆಸುತ್ತಿದೆ. ಈ ಬದಲಾವಣೆಯೊಂದಿಗೆ ಐಪಿಎಲ್ ಆರಂಭದ ತಿಂಗಳು ಕೂಡ ಬದಲಾಗಲಿದೆ. (PC: IPL)

1 / 6
ಸಾಮಾನ್ಯವಾಗಿ ಐಪಿಎಲ್​​ ಅನ್ನು ಮಾರ್ಚ್ ತಿಂಗಳಿಂದ ಆರಂಭಿಸಿ ಮೇ ತಿಂಗಳಲ್ಲಿ ಕೊನೆಗೊಳಿಸಲಾಗುತ್ತದೆ. ಆದರೆ ಮುಂಬರುವ ಟೂರ್ನಿಯನ್ನು ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅವಧಿಗೆ ಸ್ಥಳಾಂತರಿಸಲು ಬಿಸಿಸಿಐ ಯೋಜನೆ ರೂಪಿಸುತ್ತಿದೆ. (PC: IPL)

ಸಾಮಾನ್ಯವಾಗಿ ಐಪಿಎಲ್​​ ಅನ್ನು ಮಾರ್ಚ್ ತಿಂಗಳಿಂದ ಆರಂಭಿಸಿ ಮೇ ತಿಂಗಳಲ್ಲಿ ಕೊನೆಗೊಳಿಸಲಾಗುತ್ತದೆ. ಆದರೆ ಮುಂಬರುವ ಟೂರ್ನಿಯನ್ನು ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅವಧಿಗೆ ಸ್ಥಳಾಂತರಿಸಲು ಬಿಸಿಸಿಐ ಯೋಜನೆ ರೂಪಿಸುತ್ತಿದೆ. (PC: IPL)

2 / 6
ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಅವರ ಪ್ರಕಾರ, ಈ ಮಹತ್ವದ ಬದಲಾವಣೆಗೆ ಪ್ರಮುಖ ಕಾರಣ, ಬೇಸಿಗೆಯ ಅತಿಯಾದ ಶಾಖ ಮತ್ತು ಆಟಗಾರರ ಆಯಾಸ. ಅಂದರೆ ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೇಸಿಗೆಯ ತಾಪಮಾನ ವಿಪರೀತವಾಗಿ ಹೆಚ್ಚಾಗುತ್ತಿದೆ. (PC: TIE)

ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಅವರ ಪ್ರಕಾರ, ಈ ಮಹತ್ವದ ಬದಲಾವಣೆಗೆ ಪ್ರಮುಖ ಕಾರಣ, ಬೇಸಿಗೆಯ ಅತಿಯಾದ ಶಾಖ ಮತ್ತು ಆಟಗಾರರ ಆಯಾಸ. ಅಂದರೆ ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೇಸಿಗೆಯ ತಾಪಮಾನ ವಿಪರೀತವಾಗಿ ಹೆಚ್ಚಾಗುತ್ತಿದೆ. (PC: TIE)

3 / 6
ಬೇಸಿಗೆಯಲ್ಲಿ ಟೂರ್ನಿ ಆಡುವುದರಿಂದ ಆಟಗಾರರಲ್ಲಿ ತೀವ್ರ ಆಯಾಸ, ನಿರ್ಜಲೀಕರಣ ಮತ್ತು ಗಾಯದ ಸಮಸ್ಯೆಗಳನ್ನು ಉಂಟುಮಾಡುತ್ತಿದೆ. ಸ್ಟೇಡಿಯಂಗೆ ಬರುವ ಪ್ರೇಕ್ಷಕರಿಗೂ ಈ ಬಿಸಿಲು ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ. (PC: IPL)

ಬೇಸಿಗೆಯಲ್ಲಿ ಟೂರ್ನಿ ಆಡುವುದರಿಂದ ಆಟಗಾರರಲ್ಲಿ ತೀವ್ರ ಆಯಾಸ, ನಿರ್ಜಲೀಕರಣ ಮತ್ತು ಗಾಯದ ಸಮಸ್ಯೆಗಳನ್ನು ಉಂಟುಮಾಡುತ್ತಿದೆ. ಸ್ಟೇಡಿಯಂಗೆ ಬರುವ ಪ್ರೇಕ್ಷಕರಿಗೂ ಈ ಬಿಸಿಲು ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ. (PC: IPL)

4 / 6
ಅತ್ತ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳು ಭಾರತದಲ್ಲಿ ದಸರಾ ಮತ್ತು ದೀಪಾವಳಿ ಹಬ್ಬಗಳ ಕಾಲ. ಈ ಸಮಯದಲ್ಲಿ ಮಾರುಕಟ್ಟೆಯಲ್ಲಿ ವ್ಯಾಪಾರ ಮತ್ತು ಜಾಹೀರಾತುಗಳ ಹರಿವು ಹೆಚ್ಚಿರುತ್ತದೆ. ಈ ಅವಧಿಯಲ್ಲಿ ಐಪಿಎಲ್ ನಡೆಸುವುದರಿಂದ ಬ್ರಾಂಡ್‌ಗಳು ಮತ್ತು ಬ್ರಾಡ್‌ಕಾಸ್ಟರ್‌ಗಳಿಗೆ (ಪ್ರಸಾರಕರು) ಭಾರಿ ಆರ್ಥಿಕ ಲಾಭ ಸಿಗಲಿದೆ. (PC: IPL)

ಅತ್ತ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳು ಭಾರತದಲ್ಲಿ ದಸರಾ ಮತ್ತು ದೀಪಾವಳಿ ಹಬ್ಬಗಳ ಕಾಲ. ಈ ಸಮಯದಲ್ಲಿ ಮಾರುಕಟ್ಟೆಯಲ್ಲಿ ವ್ಯಾಪಾರ ಮತ್ತು ಜಾಹೀರಾತುಗಳ ಹರಿವು ಹೆಚ್ಚಿರುತ್ತದೆ. ಈ ಅವಧಿಯಲ್ಲಿ ಐಪಿಎಲ್ ನಡೆಸುವುದರಿಂದ ಬ್ರಾಂಡ್‌ಗಳು ಮತ್ತು ಬ್ರಾಡ್‌ಕಾಸ್ಟರ್‌ಗಳಿಗೆ (ಪ್ರಸಾರಕರು) ಭಾರಿ ಆರ್ಥಿಕ ಲಾಭ ಸಿಗಲಿದೆ. (PC: IPL)

5 / 6
ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್​ನ ವಿಂಡೋ ಬದಲಿಸಲು ಚಿಂತಿಸಲಾಗಿದೆ. ಇದಾಗ್ಯೂ ಐಪಿಎಲ್ 2027 ಮಾರ್ಚ್-ಮೇ ತಿಂಗಳಲ್ಲೇ ನಡೆಯಲಿದೆ ಎಂಬುದನ್ನು ಖಚಿತಪಡಿಸಿದ್ದಾರೆ. ಆದರೆ 2028ರ ಐಪಿಎಲ್ ಸೀಸನ್​ ಅನ್ನು ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅವಧಿಗೆ ಸ್ಥಳಾಂತರಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು. (PC: IPL)

ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್​ನ ವಿಂಡೋ ಬದಲಿಸಲು ಚಿಂತಿಸಲಾಗಿದೆ. ಇದಾಗ್ಯೂ ಐಪಿಎಲ್ 2027 ಮಾರ್ಚ್-ಮೇ ತಿಂಗಳಲ್ಲೇ ನಡೆಯಲಿದೆ ಎಂಬುದನ್ನು ಖಚಿತಪಡಿಸಿದ್ದಾರೆ. ಆದರೆ 2028ರ ಐಪಿಎಲ್ ಸೀಸನ್​ ಅನ್ನು ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅವಧಿಗೆ ಸ್ಥಳಾಂತರಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು. (PC: IPL)

6 / 6

Published On - 7:22 am, Thu, 11 June 26

Follow Us
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು ವಿನಯ್ ಆಸೆ
‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು ವಿನಯ್ ಆಸೆ
12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ
12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ
ಲಿಫ್ಟ್​ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ?
ಲಿಫ್ಟ್​ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ?
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ
ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ