AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್ ಆತಿಥ್ಯ ತಿರಸ್ಕರಿಸಿದ ಬಿಸಿಸಿಐ..!

Women's T20 World Cup 2024: ಅಕ್ಟೋಬರ್‌ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸಲು ಬಿಸಿಸಿಐ ನಿರಾಕರಿಸಿದೆ ಎಂದು ಜಯ್ ಶಾ ಖಚಿತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈ ನಿರಾಕರಣೆ ಜಯ್ ಶಾ ಕಾರಣವನ್ನೂ ನೀಡಿದ್ದು, ಭಾರತದಲ್ಲಿ ಪ್ರಸ್ತುತ ಮಾನ್ಸೂನ್‌ ನಡೆಯುತ್ತಿದೆ. ಹೀಗಾಗಿ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ ಎಂದು ಜಯ್​ ಶಾ ಹೇಳಿದ್ದಾರೆ.

ಪೃಥ್ವಿಶಂಕರ
|

Updated on: Aug 15, 2024 | 6:28 PM

Share
ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಸಾರಥ್ಯದಲ್ಲಿ ಪುರುಷರ ಟಿ20 ವಿಶ್ವಕಪ್‌ ಯಶಸ್ವಿಯಾಗಿ ಮುಗಿದಿದೆ. ಇದೀಗ ಮಹಿಳೆಯರ ಟಿ20 ವಿಶ್ವಕಪ್ ಸರದಿ. ಈ ಬಾರಿಯ ಮಹಿಳೆಯರ ಟಿ20 ವಿಶ್ವಕಪ್​ಗೆ ಬಾಂಗ್ಲಾದೇಶ ಆತಿಥ್ಯವಹಿಸುವ ಹಕ್ಕನ್ನು ಪಡೆದುಕೊಂಡಿದೆ. ಆದರೆ ಬಾಂಗ್ಲಾದೇಶದಲ್ಲಿ ಎದ್ದಿರುವ ಅಶಾಂತಿಯಿಂದಾಗಿ ಈ ಐಸಿಸಿ ಟೂರ್ನಿ ಬೇರೆಡೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಸಾರಥ್ಯದಲ್ಲಿ ಪುರುಷರ ಟಿ20 ವಿಶ್ವಕಪ್‌ ಯಶಸ್ವಿಯಾಗಿ ಮುಗಿದಿದೆ. ಇದೀಗ ಮಹಿಳೆಯರ ಟಿ20 ವಿಶ್ವಕಪ್ ಸರದಿ. ಈ ಬಾರಿಯ ಮಹಿಳೆಯರ ಟಿ20 ವಿಶ್ವಕಪ್​ಗೆ ಬಾಂಗ್ಲಾದೇಶ ಆತಿಥ್ಯವಹಿಸುವ ಹಕ್ಕನ್ನು ಪಡೆದುಕೊಂಡಿದೆ. ಆದರೆ ಬಾಂಗ್ಲಾದೇಶದಲ್ಲಿ ಎದ್ದಿರುವ ಅಶಾಂತಿಯಿಂದಾಗಿ ಈ ಐಸಿಸಿ ಟೂರ್ನಿ ಬೇರೆಡೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

1 / 5
ಇದಕ್ಕೆ ಪೂರಕವಾಗಿ ಸಧ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಬಾಂಗ್ಲಾದೇಶದ ಬದಲು ಭಾರತ, ಶ್ರೀಲಂಕಾ ಹಾಗೂ ಯುಎಇಯಲ್ಲಿ ಟಿ20 ವಿಶ್ವಕಪ್ ಆಯೋಜಿಸಲು ಐಸಿಸಿ ತಯಾರಿ ನಡೆಸುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಐಸಿಸಿಯ ಈ ನಡೆಗೆ ಬಿಸಿಸಿಐ ಒಲ್ಲೆ ಎಂದಿದೆ. ಅಂದರೆ 20204 ರ ಮಹಿಳಾ ಟಿ20 ವಿಶ್ವಕಪ್ ಆತಿಥ್ಯವಹಿಸಿಕೊಳ್ಳಲು ಬಿಸಿಸಿಐ ನಿರಾಕರಿಸಿದೆ.

ಇದಕ್ಕೆ ಪೂರಕವಾಗಿ ಸಧ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಬಾಂಗ್ಲಾದೇಶದ ಬದಲು ಭಾರತ, ಶ್ರೀಲಂಕಾ ಹಾಗೂ ಯುಎಇಯಲ್ಲಿ ಟಿ20 ವಿಶ್ವಕಪ್ ಆಯೋಜಿಸಲು ಐಸಿಸಿ ತಯಾರಿ ನಡೆಸುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಐಸಿಸಿಯ ಈ ನಡೆಗೆ ಬಿಸಿಸಿಐ ಒಲ್ಲೆ ಎಂದಿದೆ. ಅಂದರೆ 20204 ರ ಮಹಿಳಾ ಟಿ20 ವಿಶ್ವಕಪ್ ಆತಿಥ್ಯವಹಿಸಿಕೊಳ್ಳಲು ಬಿಸಿಸಿಐ ನಿರಾಕರಿಸಿದೆ.

2 / 5
ಅಕ್ಟೋಬರ್‌ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸಲು ಬಿಸಿಸಿಐ ನಿರಾಕರಿಸಿದೆ ಎಂದು ಜಯ್ ಶಾ ಖಚಿತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈ ನಿರಾಕರಣೆ ಜಯ್ ಶಾ ಕಾರಣವನ್ನೂ ನೀಡಿದ್ದು, ಭಾರತದಲ್ಲಿ ಪ್ರಸ್ತುತ ಮಾನ್ಸೂನ್‌ ನಡೆಯುತ್ತಿದೆ. ಹೀಗಾಗಿ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ.

ಅಕ್ಟೋಬರ್‌ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸಲು ಬಿಸಿಸಿಐ ನಿರಾಕರಿಸಿದೆ ಎಂದು ಜಯ್ ಶಾ ಖಚಿತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈ ನಿರಾಕರಣೆ ಜಯ್ ಶಾ ಕಾರಣವನ್ನೂ ನೀಡಿದ್ದು, ಭಾರತದಲ್ಲಿ ಪ್ರಸ್ತುತ ಮಾನ್ಸೂನ್‌ ನಡೆಯುತ್ತಿದೆ. ಹೀಗಾಗಿ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ.

3 / 5
ಇದಲ್ಲದೆ ಮುಂದಿನ ಆವೃತ್ತಿಯ ಟಿ20 ವಿಶ್ವಕಪ್​ಗೆ ಭಾರತ ಆತಿಥ್ಯವಹಿಸುತ್ತಿದೆ. ಹೀಗಾಗಿ ನಾವು ವಿಶ್ವಕಪ್‌ಗಳನ್ನು ನಿರಂತರವಾಗಿ ಆಯೋಜಿಸಲು ಬಯಸುತ್ತೇವೆ ಎಂಬುದಕ್ಕೆ ಯಾವುದೇ ರೀತಿಯ ಸೂಚನೆ ನೀಡಲು ನಾನು ಬಯಸುವುದಿಲ್ಲ ಎಂದಿದ್ದಾರೆ.

ಇದಲ್ಲದೆ ಮುಂದಿನ ಆವೃತ್ತಿಯ ಟಿ20 ವಿಶ್ವಕಪ್​ಗೆ ಭಾರತ ಆತಿಥ್ಯವಹಿಸುತ್ತಿದೆ. ಹೀಗಾಗಿ ನಾವು ವಿಶ್ವಕಪ್‌ಗಳನ್ನು ನಿರಂತರವಾಗಿ ಆಯೋಜಿಸಲು ಬಯಸುತ್ತೇವೆ ಎಂಬುದಕ್ಕೆ ಯಾವುದೇ ರೀತಿಯ ಸೂಚನೆ ನೀಡಲು ನಾನು ಬಯಸುವುದಿಲ್ಲ ಎಂದಿದ್ದಾರೆ.

4 / 5
ಇನ್ನು ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮುಂಬರುವ ಟೆಸ್ಟ್ ಸರಣಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಜಯ್​ ಶಾ, ನಾವು ಇದಕ್ಕೆ ಸಂಬಂಧಿಸಿದಂತೆ ಇನ್ನು ಬಾಂಗ್ಲಾದೇಶದ ಅಧಿಕಾರಿಗಳೊಂದಿಗೆ ಮಾತನಾಡಿಲ್ಲ. ಅಲ್ಲಿ ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡಿದೆ. ಅವರು ನಮ್ಮನ್ನು ಸಂಪರ್ಕಿಸಬಹುದು ಅಥವಾ ನಾನು ಅವರನ್ನು ಸಂಪರ್ಕಿಸಿ ಈ ಬಗ್ಗೆ ನಿರ್ಧರಿಸುತ್ತೇವೆ. ಬಾಂಗ್ಲಾದೇಶ ಸರಣಿ ನಮಗೆ ಬಹಳ ಮುಖ್ಯವಾಗಿದೆ ಎಂದು ಜಯ್​ ಶಾ ಹೇಳಿದ್ದಾರೆ.

ಇನ್ನು ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮುಂಬರುವ ಟೆಸ್ಟ್ ಸರಣಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಜಯ್​ ಶಾ, ನಾವು ಇದಕ್ಕೆ ಸಂಬಂಧಿಸಿದಂತೆ ಇನ್ನು ಬಾಂಗ್ಲಾದೇಶದ ಅಧಿಕಾರಿಗಳೊಂದಿಗೆ ಮಾತನಾಡಿಲ್ಲ. ಅಲ್ಲಿ ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡಿದೆ. ಅವರು ನಮ್ಮನ್ನು ಸಂಪರ್ಕಿಸಬಹುದು ಅಥವಾ ನಾನು ಅವರನ್ನು ಸಂಪರ್ಕಿಸಿ ಈ ಬಗ್ಗೆ ನಿರ್ಧರಿಸುತ್ತೇವೆ. ಬಾಂಗ್ಲಾದೇಶ ಸರಣಿ ನಮಗೆ ಬಹಳ ಮುಖ್ಯವಾಗಿದೆ ಎಂದು ಜಯ್​ ಶಾ ಹೇಳಿದ್ದಾರೆ.

5 / 5
Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ