AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್ ಆತಿಥ್ಯ ತಿರಸ್ಕರಿಸಿದ ಬಿಸಿಸಿಐ..!

Women's T20 World Cup 2024: ಅಕ್ಟೋಬರ್‌ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸಲು ಬಿಸಿಸಿಐ ನಿರಾಕರಿಸಿದೆ ಎಂದು ಜಯ್ ಶಾ ಖಚಿತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈ ನಿರಾಕರಣೆ ಜಯ್ ಶಾ ಕಾರಣವನ್ನೂ ನೀಡಿದ್ದು, ಭಾರತದಲ್ಲಿ ಪ್ರಸ್ತುತ ಮಾನ್ಸೂನ್‌ ನಡೆಯುತ್ತಿದೆ. ಹೀಗಾಗಿ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ ಎಂದು ಜಯ್​ ಶಾ ಹೇಳಿದ್ದಾರೆ.

ಪೃಥ್ವಿಶಂಕರ
|

Updated on: Aug 15, 2024 | 6:28 PM

Share
ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಸಾರಥ್ಯದಲ್ಲಿ ಪುರುಷರ ಟಿ20 ವಿಶ್ವಕಪ್‌ ಯಶಸ್ವಿಯಾಗಿ ಮುಗಿದಿದೆ. ಇದೀಗ ಮಹಿಳೆಯರ ಟಿ20 ವಿಶ್ವಕಪ್ ಸರದಿ. ಈ ಬಾರಿಯ ಮಹಿಳೆಯರ ಟಿ20 ವಿಶ್ವಕಪ್​ಗೆ ಬಾಂಗ್ಲಾದೇಶ ಆತಿಥ್ಯವಹಿಸುವ ಹಕ್ಕನ್ನು ಪಡೆದುಕೊಂಡಿದೆ. ಆದರೆ ಬಾಂಗ್ಲಾದೇಶದಲ್ಲಿ ಎದ್ದಿರುವ ಅಶಾಂತಿಯಿಂದಾಗಿ ಈ ಐಸಿಸಿ ಟೂರ್ನಿ ಬೇರೆಡೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಸಾರಥ್ಯದಲ್ಲಿ ಪುರುಷರ ಟಿ20 ವಿಶ್ವಕಪ್‌ ಯಶಸ್ವಿಯಾಗಿ ಮುಗಿದಿದೆ. ಇದೀಗ ಮಹಿಳೆಯರ ಟಿ20 ವಿಶ್ವಕಪ್ ಸರದಿ. ಈ ಬಾರಿಯ ಮಹಿಳೆಯರ ಟಿ20 ವಿಶ್ವಕಪ್​ಗೆ ಬಾಂಗ್ಲಾದೇಶ ಆತಿಥ್ಯವಹಿಸುವ ಹಕ್ಕನ್ನು ಪಡೆದುಕೊಂಡಿದೆ. ಆದರೆ ಬಾಂಗ್ಲಾದೇಶದಲ್ಲಿ ಎದ್ದಿರುವ ಅಶಾಂತಿಯಿಂದಾಗಿ ಈ ಐಸಿಸಿ ಟೂರ್ನಿ ಬೇರೆಡೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

1 / 5
ಇದಕ್ಕೆ ಪೂರಕವಾಗಿ ಸಧ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಬಾಂಗ್ಲಾದೇಶದ ಬದಲು ಭಾರತ, ಶ್ರೀಲಂಕಾ ಹಾಗೂ ಯುಎಇಯಲ್ಲಿ ಟಿ20 ವಿಶ್ವಕಪ್ ಆಯೋಜಿಸಲು ಐಸಿಸಿ ತಯಾರಿ ನಡೆಸುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಐಸಿಸಿಯ ಈ ನಡೆಗೆ ಬಿಸಿಸಿಐ ಒಲ್ಲೆ ಎಂದಿದೆ. ಅಂದರೆ 20204 ರ ಮಹಿಳಾ ಟಿ20 ವಿಶ್ವಕಪ್ ಆತಿಥ್ಯವಹಿಸಿಕೊಳ್ಳಲು ಬಿಸಿಸಿಐ ನಿರಾಕರಿಸಿದೆ.

ಇದಕ್ಕೆ ಪೂರಕವಾಗಿ ಸಧ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಬಾಂಗ್ಲಾದೇಶದ ಬದಲು ಭಾರತ, ಶ್ರೀಲಂಕಾ ಹಾಗೂ ಯುಎಇಯಲ್ಲಿ ಟಿ20 ವಿಶ್ವಕಪ್ ಆಯೋಜಿಸಲು ಐಸಿಸಿ ತಯಾರಿ ನಡೆಸುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಐಸಿಸಿಯ ಈ ನಡೆಗೆ ಬಿಸಿಸಿಐ ಒಲ್ಲೆ ಎಂದಿದೆ. ಅಂದರೆ 20204 ರ ಮಹಿಳಾ ಟಿ20 ವಿಶ್ವಕಪ್ ಆತಿಥ್ಯವಹಿಸಿಕೊಳ್ಳಲು ಬಿಸಿಸಿಐ ನಿರಾಕರಿಸಿದೆ.

2 / 5
ಅಕ್ಟೋಬರ್‌ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸಲು ಬಿಸಿಸಿಐ ನಿರಾಕರಿಸಿದೆ ಎಂದು ಜಯ್ ಶಾ ಖಚಿತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈ ನಿರಾಕರಣೆ ಜಯ್ ಶಾ ಕಾರಣವನ್ನೂ ನೀಡಿದ್ದು, ಭಾರತದಲ್ಲಿ ಪ್ರಸ್ತುತ ಮಾನ್ಸೂನ್‌ ನಡೆಯುತ್ತಿದೆ. ಹೀಗಾಗಿ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ.

ಅಕ್ಟೋಬರ್‌ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸಲು ಬಿಸಿಸಿಐ ನಿರಾಕರಿಸಿದೆ ಎಂದು ಜಯ್ ಶಾ ಖಚಿತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈ ನಿರಾಕರಣೆ ಜಯ್ ಶಾ ಕಾರಣವನ್ನೂ ನೀಡಿದ್ದು, ಭಾರತದಲ್ಲಿ ಪ್ರಸ್ತುತ ಮಾನ್ಸೂನ್‌ ನಡೆಯುತ್ತಿದೆ. ಹೀಗಾಗಿ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ.

3 / 5
ಇದಲ್ಲದೆ ಮುಂದಿನ ಆವೃತ್ತಿಯ ಟಿ20 ವಿಶ್ವಕಪ್​ಗೆ ಭಾರತ ಆತಿಥ್ಯವಹಿಸುತ್ತಿದೆ. ಹೀಗಾಗಿ ನಾವು ವಿಶ್ವಕಪ್‌ಗಳನ್ನು ನಿರಂತರವಾಗಿ ಆಯೋಜಿಸಲು ಬಯಸುತ್ತೇವೆ ಎಂಬುದಕ್ಕೆ ಯಾವುದೇ ರೀತಿಯ ಸೂಚನೆ ನೀಡಲು ನಾನು ಬಯಸುವುದಿಲ್ಲ ಎಂದಿದ್ದಾರೆ.

ಇದಲ್ಲದೆ ಮುಂದಿನ ಆವೃತ್ತಿಯ ಟಿ20 ವಿಶ್ವಕಪ್​ಗೆ ಭಾರತ ಆತಿಥ್ಯವಹಿಸುತ್ತಿದೆ. ಹೀಗಾಗಿ ನಾವು ವಿಶ್ವಕಪ್‌ಗಳನ್ನು ನಿರಂತರವಾಗಿ ಆಯೋಜಿಸಲು ಬಯಸುತ್ತೇವೆ ಎಂಬುದಕ್ಕೆ ಯಾವುದೇ ರೀತಿಯ ಸೂಚನೆ ನೀಡಲು ನಾನು ಬಯಸುವುದಿಲ್ಲ ಎಂದಿದ್ದಾರೆ.

4 / 5
ಇನ್ನು ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮುಂಬರುವ ಟೆಸ್ಟ್ ಸರಣಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಜಯ್​ ಶಾ, ನಾವು ಇದಕ್ಕೆ ಸಂಬಂಧಿಸಿದಂತೆ ಇನ್ನು ಬಾಂಗ್ಲಾದೇಶದ ಅಧಿಕಾರಿಗಳೊಂದಿಗೆ ಮಾತನಾಡಿಲ್ಲ. ಅಲ್ಲಿ ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡಿದೆ. ಅವರು ನಮ್ಮನ್ನು ಸಂಪರ್ಕಿಸಬಹುದು ಅಥವಾ ನಾನು ಅವರನ್ನು ಸಂಪರ್ಕಿಸಿ ಈ ಬಗ್ಗೆ ನಿರ್ಧರಿಸುತ್ತೇವೆ. ಬಾಂಗ್ಲಾದೇಶ ಸರಣಿ ನಮಗೆ ಬಹಳ ಮುಖ್ಯವಾಗಿದೆ ಎಂದು ಜಯ್​ ಶಾ ಹೇಳಿದ್ದಾರೆ.

ಇನ್ನು ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮುಂಬರುವ ಟೆಸ್ಟ್ ಸರಣಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಜಯ್​ ಶಾ, ನಾವು ಇದಕ್ಕೆ ಸಂಬಂಧಿಸಿದಂತೆ ಇನ್ನು ಬಾಂಗ್ಲಾದೇಶದ ಅಧಿಕಾರಿಗಳೊಂದಿಗೆ ಮಾತನಾಡಿಲ್ಲ. ಅಲ್ಲಿ ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡಿದೆ. ಅವರು ನಮ್ಮನ್ನು ಸಂಪರ್ಕಿಸಬಹುದು ಅಥವಾ ನಾನು ಅವರನ್ನು ಸಂಪರ್ಕಿಸಿ ಈ ಬಗ್ಗೆ ನಿರ್ಧರಿಸುತ್ತೇವೆ. ಬಾಂಗ್ಲಾದೇಶ ಸರಣಿ ನಮಗೆ ಬಹಳ ಮುಖ್ಯವಾಗಿದೆ ಎಂದು ಜಯ್​ ಶಾ ಹೇಳಿದ್ದಾರೆ.

5 / 5
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ