AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಟ್ಟುನಿಟ್ಟಿನ ಕ್ರಮ ಕೆಲಸ ಮಾಡಿದೆ’; ಕಿಶನ್- ಶ್ರೇಯಸ್ ವಿರುದ್ಧದ ಕ್ರಮದ ಬಗ್ಗೆ ಜಯ್ ಶಾ ಸ್ಪಷ್ಟನೆ

BCCI Secretary Jay Shah: ನಾವು ಸ್ವಲ್ಪ ಕಟ್ಟುನಿಟ್ಟಾಗಿದ್ದೇವೆ. ರವೀಂದ್ರ ಜಡೇಜಾ ಗಾಯಗೊಂಡಾಗ ಅವರಿಗೆ ಕರೆ ಮಾಡಿ ದೇಶೀಯ ಪಂದ್ಯಗಳನ್ನು ಆಡುವಂತೆ ಹೇಳಿದ್ದು ನಾನೇ. ಇದೀಗ ಗಾಯಾಳುವಾಗಿ ಹೊರಗಿರುವವರು ದೇಶಿಯ ಕ್ರಿಕೆಟ್‌ನಲ್ಲಿ ಫಿಟ್‌ನೆಸ್ ಸಾಬೀತುಪಡಿಸಿದ ನಂತರವೇ ಭಾರತ ತಂಡಕ್ಕೆ ಸೇರಿಕೊಳ್ಳುವುದು ಎಂದು ಜಯ್ ಶಾ ಹೇಳಿದ್ದಾರೆ.

ಪೃಥ್ವಿಶಂಕರ
|

Updated on: Aug 17, 2024 | 3:36 PM

Share
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳಾದ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಈ ಇಬ್ಬರು ಆಟಗಾರರ ವಿರುದ್ಧ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಇಂದು ಈ ಇಬ್ಬರೂ ಆಟಗಾರರು ದೇಶೀಯ ಕ್ರಿಕೆಟ್ ಆಡುತ್ತಿದ್ದಾರೆ ಎಂದು ಜಯ್ ಶಾ ಹೇಳಿಕೆ ನೀಡಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳಾದ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಈ ಇಬ್ಬರು ಆಟಗಾರರ ವಿರುದ್ಧ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಇಂದು ಈ ಇಬ್ಬರೂ ಆಟಗಾರರು ದೇಶೀಯ ಕ್ರಿಕೆಟ್ ಆಡುತ್ತಿದ್ದಾರೆ ಎಂದು ಜಯ್ ಶಾ ಹೇಳಿಕೆ ನೀಡಿದ್ದಾರೆ.

1 / 6
ವಾಸ್ತವವಾಗಿ ಈ ಇಬ್ಬರು ಕ್ರಿಕೆಟಿಗರು ದೇಶೀಯ ಕ್ರಿಕೆಟ್‌ಗಿಂತ ಐಪಿಎಲ್‌ಗೆ ಆದ್ಯತೆ ನೀಡಿದ ಕಾರಣ ಈ ವರ್ಷದ ಆರಂಭದಲ್ಲಿ ಬಿಸಿಸಿಐ ತನ್ನ ಕೇಂದ್ರ ಒಪ್ಪಂದದಿಂದ ಈ ಇಬ್ಬರನ್ನು ಕೈಬಿಟ್ಟಿತ್ತು. ಇದರ ಜೊತೆಗೆ ಈ ಇಬ್ಬರು ಟೀಂ ಇಂಡಿಯಾಕ್ಕೆ ಮರಳಬೇಕೆಂದರೆ, ದೇಶೀಯ ಕ್ರಿಕೆಟ್​ ಆಡಲೇಬೇಕು ಎಂಬ ಎಚ್ಚರಿಕೆ ಕೂಡ ನೀಡಿತ್ತು.

ವಾಸ್ತವವಾಗಿ ಈ ಇಬ್ಬರು ಕ್ರಿಕೆಟಿಗರು ದೇಶೀಯ ಕ್ರಿಕೆಟ್‌ಗಿಂತ ಐಪಿಎಲ್‌ಗೆ ಆದ್ಯತೆ ನೀಡಿದ ಕಾರಣ ಈ ವರ್ಷದ ಆರಂಭದಲ್ಲಿ ಬಿಸಿಸಿಐ ತನ್ನ ಕೇಂದ್ರ ಒಪ್ಪಂದದಿಂದ ಈ ಇಬ್ಬರನ್ನು ಕೈಬಿಟ್ಟಿತ್ತು. ಇದರ ಜೊತೆಗೆ ಈ ಇಬ್ಬರು ಟೀಂ ಇಂಡಿಯಾಕ್ಕೆ ಮರಳಬೇಕೆಂದರೆ, ದೇಶೀಯ ಕ್ರಿಕೆಟ್​ ಆಡಲೇಬೇಕು ಎಂಬ ಎಚ್ಚರಿಕೆ ಕೂಡ ನೀಡಿತ್ತು.

2 / 6
ಕೆಟ್ಟ ಮೇಲೆ ಬುದ್ಧಿ ಬಂತು ಎಂಬ ಗಾದೆಯಂತೆ ಇದೀಗ ಈ ಇಬ್ಬರು ಆಟಗಾರರು ದೇಶೀ ಕ್ರಿಕೆಟ್ ಆಡಲು ಸಜ್ಜಾಗಿದ್ದಾರೆ. ಪ್ರಸ್ತುತ ಬುಚ್ಚಿ ಬಾಬು ಪಂದ್ಯಾವಳಿ ನಡೆಯುತ್ತಿದ್ದು, ಇದರಲ್ಲಿ ಜಾರ್ಖಂಡ್ ಪರ ಆಡುತ್ತಿರುವ ಇಶಾನ್ ಕಿಶನ್ ಆಡಿದ ಮೊದಲ ಪಂದ್ಯದಲ್ಲೇ ಮಧ್ಯಪ್ರದೇಶ ವಿರುದ್ಧ ಶತಕ ಸಿಡಿಸಿ ಮಿಂಚಿದ್ದಾರೆ.

ಕೆಟ್ಟ ಮೇಲೆ ಬುದ್ಧಿ ಬಂತು ಎಂಬ ಗಾದೆಯಂತೆ ಇದೀಗ ಈ ಇಬ್ಬರು ಆಟಗಾರರು ದೇಶೀ ಕ್ರಿಕೆಟ್ ಆಡಲು ಸಜ್ಜಾಗಿದ್ದಾರೆ. ಪ್ರಸ್ತುತ ಬುಚ್ಚಿ ಬಾಬು ಪಂದ್ಯಾವಳಿ ನಡೆಯುತ್ತಿದ್ದು, ಇದರಲ್ಲಿ ಜಾರ್ಖಂಡ್ ಪರ ಆಡುತ್ತಿರುವ ಇಶಾನ್ ಕಿಶನ್ ಆಡಿದ ಮೊದಲ ಪಂದ್ಯದಲ್ಲೇ ಮಧ್ಯಪ್ರದೇಶ ವಿರುದ್ಧ ಶತಕ ಸಿಡಿಸಿ ಮಿಂಚಿದ್ದಾರೆ.

3 / 6
ಇನ್ನು ಗೌತಮ್ ಗಂಭೀರ್ ತಂಡದ ಮುಖ್ಯ ಕೋಚ್ ಆದ ಬಳಿಕ ಟೀಂ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶ್ವಿಯಾಗಿರುವ ಶ್ರೇಯಸ್ ಅಯ್ಯರ್ ಸೆಪ್ಟೆಂಬರ್ 5 ರಿಂದ ಪ್ರಾರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಈ ದೇಶೀ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಗಮನಾರ್ಹ ಪ್ರದರ್ಶನ ನೀಡದಿದ್ದರೆ, ಅವರನ್ನು ಬಾಂಗ್ಲಾದೇಶ ವಿರುದ್ಧದ ಸರಣಿಯಿಂದ ಕೈಬಿಡುವ ಸಾಧ್ಯತೆಗಳಿವೆ.

ಇನ್ನು ಗೌತಮ್ ಗಂಭೀರ್ ತಂಡದ ಮುಖ್ಯ ಕೋಚ್ ಆದ ಬಳಿಕ ಟೀಂ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶ್ವಿಯಾಗಿರುವ ಶ್ರೇಯಸ್ ಅಯ್ಯರ್ ಸೆಪ್ಟೆಂಬರ್ 5 ರಿಂದ ಪ್ರಾರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಈ ದೇಶೀ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಗಮನಾರ್ಹ ಪ್ರದರ್ಶನ ನೀಡದಿದ್ದರೆ, ಅವರನ್ನು ಬಾಂಗ್ಲಾದೇಶ ವಿರುದ್ಧದ ಸರಣಿಯಿಂದ ಕೈಬಿಡುವ ಸಾಧ್ಯತೆಗಳಿವೆ.

4 / 6
ಈ ಇಬ್ಬರ ವಿರುದ್ಧ ತೆಗೆದುಕೊಂಡ ಕ್ರಮದ ಬಗ್ಗೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ‘ನಾವು ಸ್ವಲ್ಪ ಕಟ್ಟುನಿಟ್ಟಾಗಿದ್ದೇವೆ. ರವೀಂದ್ರ ಜಡೇಜಾ ಗಾಯಗೊಂಡಾಗ ಅವರಿಗೆ ಕರೆ ಮಾಡಿ ದೇಶೀಯ ಪಂದ್ಯಗಳನ್ನು ಆಡುವಂತೆ ಹೇಳಿದ್ದು ನಾನೇ. ಇದೀಗ ಗಾಯಾಳುವಾಗಿ ಹೊರಗಿರುವವರು ದೇಶಿಯ ಕ್ರಿಕೆಟ್‌ನಲ್ಲಿ ಫಿಟ್‌ನೆಸ್ ಸಾಬೀತುಪಡಿಸಿದ ನಂತರವೇ ಭಾರತ ತಂಡಕ್ಕೆ ಸೇರಿಕೊಳ್ಳುವುದು ಎಂದು ಜಯ್ ಶಾ ಹೇಳಿದ್ದಾರೆ.

ಈ ಇಬ್ಬರ ವಿರುದ್ಧ ತೆಗೆದುಕೊಂಡ ಕ್ರಮದ ಬಗ್ಗೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ‘ನಾವು ಸ್ವಲ್ಪ ಕಟ್ಟುನಿಟ್ಟಾಗಿದ್ದೇವೆ. ರವೀಂದ್ರ ಜಡೇಜಾ ಗಾಯಗೊಂಡಾಗ ಅವರಿಗೆ ಕರೆ ಮಾಡಿ ದೇಶೀಯ ಪಂದ್ಯಗಳನ್ನು ಆಡುವಂತೆ ಹೇಳಿದ್ದು ನಾನೇ. ಇದೀಗ ಗಾಯಾಳುವಾಗಿ ಹೊರಗಿರುವವರು ದೇಶಿಯ ಕ್ರಿಕೆಟ್‌ನಲ್ಲಿ ಫಿಟ್‌ನೆಸ್ ಸಾಬೀತುಪಡಿಸಿದ ನಂತರವೇ ಭಾರತ ತಂಡಕ್ಕೆ ಸೇರಿಕೊಳ್ಳುವುದು ಎಂದು ಜಯ್ ಶಾ ಹೇಳಿದ್ದಾರೆ.

5 / 6
ಆದರೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ಕೆಲಸದ ಹೊರೆ ನಿರ್ವಹಣೆಯ ಅಡಿಯಲ್ಲಿ ವಿಶ್ರಾಂತಿಗೆ ಅವಕಾಶ ನೀಡಲಾಗಿದೆ ಎಂದು ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಲಾಗಿದೆ. ಟೀಂ ಇಂಡಿಯಾ ಒಂದು ತಿಂಗಳ ನಂತರ ತನ್ನ ಮುಂದಿನ ಪಂದ್ಯವನ್ನು ಆಡಲಿದೆ. ಬಾಂಗ್ಲಾದೇಶ ವಿರುದ್ಧ ಸೆಪ್ಟೆಂಬರ್ 19 ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.

ಆದರೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ಕೆಲಸದ ಹೊರೆ ನಿರ್ವಹಣೆಯ ಅಡಿಯಲ್ಲಿ ವಿಶ್ರಾಂತಿಗೆ ಅವಕಾಶ ನೀಡಲಾಗಿದೆ ಎಂದು ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಲಾಗಿದೆ. ಟೀಂ ಇಂಡಿಯಾ ಒಂದು ತಿಂಗಳ ನಂತರ ತನ್ನ ಮುಂದಿನ ಪಂದ್ಯವನ್ನು ಆಡಲಿದೆ. ಬಾಂಗ್ಲಾದೇಶ ವಿರುದ್ಧ ಸೆಪ್ಟೆಂಬರ್ 19 ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.

6 / 6
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ