AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಕೋಚ್ ಬದಲಾವಣೆ ಸೂಚನೆ ನೀಡಿದ ಬಿಸಿಸಿಐ: ವರದಿ

ನ್ಯೂಝಿಲೆಂಡ್ ವಿರುದ್ಧದ 3-0 ಅಂತರದ ಹೀನಾಯ ಸೋಲಿನಿಂದ ಮುಜುಗರಕ್ಕೆ ಒಳಗಾಗಿರುವ ಬಿಸಿಸಿಐ ಕೆಲ ದಿನಗಳ ಹಿಂದೆಯಷ್ಟೇ ಕೋಚ್ ಗೌತಮ್ ಗಂಭೀರ್ ಅವರನ್ನು ಪರಿಶೀಲನಾ ಸಭೆಗೆ ಆಹ್ವಾನಿಸಿತ್ತು. ಈ ಸಭೆಯಲ್ಲಿ ಗಂಭೀರ್ ಅವರಿಗೆ ಕ್ಲಾಸ್ ತೆಗೆದುಕೊಂಡಿರುವ ಬಿಸಿಸಿಐ ಅಧಿಕಾರಿಗಳು, ಮುಂಬರುವ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ಮೂಡಿಬರಬೇಕೆಂದು ಖಡಕ್ ಸೂಚನೆ ನೀಡಿದೆ.

ಝಾಹಿರ್ ಯೂಸುಫ್
|

Updated on:Nov 09, 2024 | 2:35 PM

Share
ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧ ಹೀನಾಯ ಸೋಲನುಭವಿಸಿದ ಬೆನ್ನಲ್ಲೇ ಬಿಸಿಸಿಐ ಎಚ್ಚೆತ್ತುಕೊಂಡಿದೆ. ಅದರಲ್ಲೂ ಗೌತಮ್ ಗಂಭೀರ್ ಅವರ ಕಾರ್ಯ ವೈಖರಿ ಬಗ್ಗೆ ಬಿಸಿಸಿಐ ಅಸಮಾಧಾನ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ. ಹೀಗಾಗಿಯೇ ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಗಂಭೀರ್ ಪಾಲಿಗೆ ಅಗ್ನಿ ಪರೀಕ್ಷೆ. ಈ ಪರೀಕ್ಷೆಯಲ್ಲಿ ಟೀಮ್ ಇಂಡಿಯಾ ವಿಫಲವಾದರೆ ಗಂಭೀರ್ ತಲೆದಂಡವಾಗುವುದು ಖಚಿತ ಎನ್ನಲಾಗುತ್ತಿದೆ.

ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧ ಹೀನಾಯ ಸೋಲನುಭವಿಸಿದ ಬೆನ್ನಲ್ಲೇ ಬಿಸಿಸಿಐ ಎಚ್ಚೆತ್ತುಕೊಂಡಿದೆ. ಅದರಲ್ಲೂ ಗೌತಮ್ ಗಂಭೀರ್ ಅವರ ಕಾರ್ಯ ವೈಖರಿ ಬಗ್ಗೆ ಬಿಸಿಸಿಐ ಅಸಮಾಧಾನ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ. ಹೀಗಾಗಿಯೇ ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಗಂಭೀರ್ ಪಾಲಿಗೆ ಅಗ್ನಿ ಪರೀಕ್ಷೆ. ಈ ಪರೀಕ್ಷೆಯಲ್ಲಿ ಟೀಮ್ ಇಂಡಿಯಾ ವಿಫಲವಾದರೆ ಗಂಭೀರ್ ತಲೆದಂಡವಾಗುವುದು ಖಚಿತ ಎನ್ನಲಾಗುತ್ತಿದೆ.

1 / 5
ಕೆಲ ವರದಿಗಳ ಮಾಹಿತಿ ಪ್ರಕಾರ, ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯವಾಗಿ ಸೋತರೆ, ಭಾರತ ತಂಡದ ಕೋಚ್ ಬದಲಾಗುವುದು ಖಚಿತ. ಅಲ್ಲದೆ ಟೆಸ್ಟ್ ಹಾಗೂ ಏಕದಿನ/ಟಿ20 ತಂಡಗಳಿಗೆ ಪತ್ಯೇಕ ತರಬೇತುದಾರರನ್ನು ನೇಮಿಸಿಕೊಳ್ಳಲು ಬಿಸಿಸಿಐ ಚಿಂತಿಸಿದೆ.

ಕೆಲ ವರದಿಗಳ ಮಾಹಿತಿ ಪ್ರಕಾರ, ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯವಾಗಿ ಸೋತರೆ, ಭಾರತ ತಂಡದ ಕೋಚ್ ಬದಲಾಗುವುದು ಖಚಿತ. ಅಲ್ಲದೆ ಟೆಸ್ಟ್ ಹಾಗೂ ಏಕದಿನ/ಟಿ20 ತಂಡಗಳಿಗೆ ಪತ್ಯೇಕ ತರಬೇತುದಾರರನ್ನು ನೇಮಿಸಿಕೊಳ್ಳಲು ಬಿಸಿಸಿಐ ಚಿಂತಿಸಿದೆ.

2 / 5
ಅಂದರೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಸೋತರೆ ಗೌತಮ್ ಗಂಭೀರ್ ಅವರನ್ನು ಟೆಸ್ಟ್ ತಂಡದ ಕೋಚ್ ಸ್ಥಾನದಿಂದ ಕೆಳಗಿಳಿಸುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಮುಂಬರುವ ಚಾಂಪಿಯನ್ಸ್ ಟ್ರೋಫಿವರೆಗೆ ಅವರನ್ನು ಏಕದಿನ ತಂಡದ ಕೋಚ್ ಆಗಿ ಮುಂದುವರೆಸಬಹುದು.

ಅಂದರೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಸೋತರೆ ಗೌತಮ್ ಗಂಭೀರ್ ಅವರನ್ನು ಟೆಸ್ಟ್ ತಂಡದ ಕೋಚ್ ಸ್ಥಾನದಿಂದ ಕೆಳಗಿಳಿಸುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಮುಂಬರುವ ಚಾಂಪಿಯನ್ಸ್ ಟ್ರೋಫಿವರೆಗೆ ಅವರನ್ನು ಏಕದಿನ ತಂಡದ ಕೋಚ್ ಆಗಿ ಮುಂದುವರೆಸಬಹುದು.

3 / 5
ಒಂದು ವೇಳೆ ಚಾಂಪಿಯನ್ಸ್ ಟ್ರೋಫಿಯಲ್ಲೂ ಟೀಮ್ ಇಂಡಿಯಾ ಹೀನಾಯ ಪ್ರದರ್ಶನ ನೀಡಿದರೆ ಗೌತಮ್ ಗಂಭೀರ್ ಅವರಿಗೆ ಗೇಟ್ ಪಾಸ್ ಸಿಗಬಹುದು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಗಂಭೀರ್ ಪಾಲಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

ಒಂದು ವೇಳೆ ಚಾಂಪಿಯನ್ಸ್ ಟ್ರೋಫಿಯಲ್ಲೂ ಟೀಮ್ ಇಂಡಿಯಾ ಹೀನಾಯ ಪ್ರದರ್ಶನ ನೀಡಿದರೆ ಗೌತಮ್ ಗಂಭೀರ್ ಅವರಿಗೆ ಗೇಟ್ ಪಾಸ್ ಸಿಗಬಹುದು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ಗಂಭೀರ್ ಪಾಲಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

4 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಉಭಯ ತಂಡಗಳು 5 ಪಂದ್ಯಗಳನ್ನಾಡಲಿದ್ದು, ಇದರಲ್ಲಿ ಟೀಮ್ ಇಂಡಿಯಾ 4-0 ಅಂತರದಿಂದ ಗೆದ್ದರೆ ಮಾತ್ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೇರಬಹುದು. ಒಂದು ವೇಳೆ ಭಾರತ ತಂಡವು ಫೈನಲ್​ಗೇರಲು ವಿಫಲರಾದರೆ, ಗೌತಮ್ ಗಂಭೀರ್ ಅವರ ಕಾರ್ಯ ವೈಖರಿ ಬಗ್ಗೆ ಮತ್ತೆ ಪ್ರಶ್ನೆಗಳೇಳುವುದು ಖಚಿತ. ಹೀಗಾಗಿಯೇ ಭಾರತ ಟೆಸ್ಟ್ ತಂಡದ ಕೋಚ್ ಸ್ಥಾನ ಉಳಿಸಿಕೊಳ್ಳಲು ಗೌತಮ್ ಗಂಭೀರ್​ಗೆ ಆಸ್ಟ್ರೇಲಿಯಾದಲ್ಲಿ ಅಮೋಘ ಗೆಲುವು ಅನಿವಾರ್ಯ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಉಭಯ ತಂಡಗಳು 5 ಪಂದ್ಯಗಳನ್ನಾಡಲಿದ್ದು, ಇದರಲ್ಲಿ ಟೀಮ್ ಇಂಡಿಯಾ 4-0 ಅಂತರದಿಂದ ಗೆದ್ದರೆ ಮಾತ್ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೇರಬಹುದು. ಒಂದು ವೇಳೆ ಭಾರತ ತಂಡವು ಫೈನಲ್​ಗೇರಲು ವಿಫಲರಾದರೆ, ಗೌತಮ್ ಗಂಭೀರ್ ಅವರ ಕಾರ್ಯ ವೈಖರಿ ಬಗ್ಗೆ ಮತ್ತೆ ಪ್ರಶ್ನೆಗಳೇಳುವುದು ಖಚಿತ. ಹೀಗಾಗಿಯೇ ಭಾರತ ಟೆಸ್ಟ್ ತಂಡದ ಕೋಚ್ ಸ್ಥಾನ ಉಳಿಸಿಕೊಳ್ಳಲು ಗೌತಮ್ ಗಂಭೀರ್​ಗೆ ಆಸ್ಟ್ರೇಲಿಯಾದಲ್ಲಿ ಅಮೋಘ ಗೆಲುವು ಅನಿವಾರ್ಯ.

5 / 5

Published On - 1:24 pm, Sat, 9 November 24

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ