AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್​ನಿಂದ ಬೆನ್ ಸ್ಟೋಕ್ಸ್ ಬಿಗ್ ಬ್ರೇಕ್

Ben Stokes: ಇಂಗ್ಲೆಂಡ್ ತಂಡದ ಸ್ಟಾರ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ ಈ ಬಾರಿಯ ಐಪಿಎಲ್​ಗೆ ಹೆಸರು ನೋಂದಾಯಿಸಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಅವರ ಗಾಯದ ಸಮಸ್ಯೆ ಎಂದು ತಿಳಿದು ಬಂದಿದೆ. ಏಕೆಂದರೆ ಇದೀಗ ನ್ಯೂಝಿಲೆಂಡ್ ವಿರುದ್ಧದ ಸರಣಿಯ ಮುಕ್ತಾಯದ ಬೆನ್ನಲ್ಲೇ ಸ್ಟೋಕ್ಸ್ ಶಸ್ತ್ರಚಿಕಿತ್ಸೆಗಾಗಿ ದೀರ್ಘಾವಧಿಯ ವಿಶ್ರಾಂತಿ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 24, 2024 | 7:53 AM

Share
ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮೂರು ತಿಂಗಳುಗಳ ಕಾಲ ಕ್ರಿಕೆಟ್ ಅಂಗಳದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹ್ಯಾಮಿಲ್ಟನ್‌ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದ ಸ್ಟೋಕ್ಸ್ ಇದೀಗ ಸಂಪೂರ್ಣ ವಿಶ್ರಾಂತಿ ಪಡೆದು ಚಿಕಿತ್ಸೆಗೆ ಒಳಗಾಗಲು ನಿರ್ಧರಿಸಿದ್ದಾರೆ.

ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮೂರು ತಿಂಗಳುಗಳ ಕಾಲ ಕ್ರಿಕೆಟ್ ಅಂಗಳದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹ್ಯಾಮಿಲ್ಟನ್‌ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದ ಸ್ಟೋಕ್ಸ್ ಇದೀಗ ಸಂಪೂರ್ಣ ವಿಶ್ರಾಂತಿ ಪಡೆದು ಚಿಕಿತ್ಸೆಗೆ ಒಳಗಾಗಲು ನಿರ್ಧರಿಸಿದ್ದಾರೆ.

1 / 6
ಇದೇ ಕಾರಣದಿಂದಾಗಿ ಬೆನ್ ಸ್ಟೋಕ್ಸ್ ಅವರನ್ನು ಮುಂಬರುವ ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾಗಿಲ್ಲ. ಅವರ ಬದಲಿಗೆ ಯುವ ಆಲ್​ರೌಂಡರ್ ಜೇಕಬ್ ಬೆಥೆಲ್​ಗೆ ಸ್ಥಾನ ನೀಡಲಾಗಿದೆ. ಇದಕ್ಕೂ ಮುನ್ನ 2023ರ ಏಕದಿನ ವಿಶ್ವಕಪ್ ವೇಳೆಯೂ ಗಾಯದಿಂದ ಬಳಲಿದ್ದ ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಇದೇ ಕಾರಣದಿಂದಾಗಿ ಬೆನ್ ಸ್ಟೋಕ್ಸ್ ಅವರನ್ನು ಮುಂಬರುವ ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾಗಿಲ್ಲ. ಅವರ ಬದಲಿಗೆ ಯುವ ಆಲ್​ರೌಂಡರ್ ಜೇಕಬ್ ಬೆಥೆಲ್​ಗೆ ಸ್ಥಾನ ನೀಡಲಾಗಿದೆ. ಇದಕ್ಕೂ ಮುನ್ನ 2023ರ ಏಕದಿನ ವಿಶ್ವಕಪ್ ವೇಳೆಯೂ ಗಾಯದಿಂದ ಬಳಲಿದ್ದ ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

2 / 6
ಆದರೀಗ ಮತ್ತೆ ಮಂಡಿರಜ್ಜು ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿ ದೀರ್ಘಾವಧಿಯ ಬ್ರೇಕ್ ತೆಗೆದುಕೊಳ್ಳಲು ಬೆನ್ ಸ್ಟೋಕ್ಸ್ ನಿರ್ಧರಿಸಿದ್ದಾರೆ. ಹೀಗಾಗಿ ಭಾರತದ ವಿರುದ್ಧದ ಏಕದಿನ ಸರಣಿಯಲ್ಲಿ ಬೆನ್ ಸ್ಟೋಕ್ಸ್ ಕಾಣಿಸಿಕೊಳ್ಳುವುದಿಲ್ಲ.

ಆದರೀಗ ಮತ್ತೆ ಮಂಡಿರಜ್ಜು ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿ ದೀರ್ಘಾವಧಿಯ ಬ್ರೇಕ್ ತೆಗೆದುಕೊಳ್ಳಲು ಬೆನ್ ಸ್ಟೋಕ್ಸ್ ನಿರ್ಧರಿಸಿದ್ದಾರೆ. ಹೀಗಾಗಿ ಭಾರತದ ವಿರುದ್ಧದ ಏಕದಿನ ಸರಣಿಯಲ್ಲಿ ಬೆನ್ ಸ್ಟೋಕ್ಸ್ ಕಾಣಿಸಿಕೊಳ್ಳುವುದಿಲ್ಲ.

3 / 6
ಹಾಗೆಯೇ ಈ ಬಾರಿಯ ಐಪಿಎಲ್​ಗೂ ಬೆನ್ ಸ್ಟೋಕ್ಸ್ ಹೆಸರು ನೀಡಿರಲಿಲ್ಲ. ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲೂ ಸ್ಟೋಕ್ಸ್ ಅಬ್ಬರವನ್ನು ಕಣ್ತುಂಬಿಕೊಳ್ಳಲಾಗುವುದಿಲ್ಲ. ಸದ್ಯ ಗಾಯದ ಸಮಸ್ಯೆಯ ಕಾರಣ ವಿಶ್ರಾಂತಿಯಲ್ಲಿರುವ ಸ್ಟೋಕ್ಸ್ ಶೀಘ್ರದಲ್ಲೇ ಮತ್ತೊಮ್ಮೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

ಹಾಗೆಯೇ ಈ ಬಾರಿಯ ಐಪಿಎಲ್​ಗೂ ಬೆನ್ ಸ್ಟೋಕ್ಸ್ ಹೆಸರು ನೀಡಿರಲಿಲ್ಲ. ಹೀಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲೂ ಸ್ಟೋಕ್ಸ್ ಅಬ್ಬರವನ್ನು ಕಣ್ತುಂಬಿಕೊಳ್ಳಲಾಗುವುದಿಲ್ಲ. ಸದ್ಯ ಗಾಯದ ಸಮಸ್ಯೆಯ ಕಾರಣ ವಿಶ್ರಾಂತಿಯಲ್ಲಿರುವ ಸ್ಟೋಕ್ಸ್ ಶೀಘ್ರದಲ್ಲೇ ಮತ್ತೊಮ್ಮೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

4 / 6
ಈ ಸರ್ಜರಿ ಬಳಿಕ ವಿಶ್ರಾಂತಿ ಮುಂದುವರೆಸಲಿರುವ ಬೆನ್ ಸ್ಟೋಕ್ಸ್ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಅಥವಾ ಜೂನ್​ನಲ್ಲಿ ನಡೆಯಲಿರುವ ಭಾರತದ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಅದುವರೆಗೆ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕರಾಗಿ ಓಲೀ ಪೋಪ್ ಕಾಣಿಸಿಕೊಳ್ಳಲಿದ್ದಾರೆ.

ಈ ಸರ್ಜರಿ ಬಳಿಕ ವಿಶ್ರಾಂತಿ ಮುಂದುವರೆಸಲಿರುವ ಬೆನ್ ಸ್ಟೋಕ್ಸ್ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಅಥವಾ ಜೂನ್​ನಲ್ಲಿ ನಡೆಯಲಿರುವ ಭಾರತದ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಅದುವರೆಗೆ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕರಾಗಿ ಓಲೀ ಪೋಪ್ ಕಾಣಿಸಿಕೊಳ್ಳಲಿದ್ದಾರೆ.

5 / 6
ಚಾಂಪಿಯನ್ಸ್​ ಟ್ರೋಫಿಗೆ ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್‌ ಬೆಥೆಲ್‌, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್​ಸ್ಟೋನ್, ಆದಿಲ್ ರಶೀದ್, ಜೋ ರೂಟ್ , ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

ಚಾಂಪಿಯನ್ಸ್​ ಟ್ರೋಫಿಗೆ ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್‌ ಬೆಥೆಲ್‌, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್​ಸ್ಟೋನ್, ಆದಿಲ್ ರಶೀದ್, ಜೋ ರೂಟ್ , ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ